MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Ganesh Chaturthi Special Trains
2027 Lucky Zodiac Signs
Brics Summit 2026
Bengaluru Tunnel Road Business Corridor
ED Raid on Satish Jarkiholi
Karnataka Guarantee Schemes
Bengaluru Economy by 2037
Karnataka Apex Bank Election
BJP Padayatra
Prajwal Revanna Case
Duleep Trophy Final
Bengaluru-Mangaluru Vande Bharat
  • Home
  • Sports
  • Cricket
  • ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ; ಕಿವೀಸ್ ಎದುರಿನ ಪಂದ್ಯದಲ್ಲಿ ಒಂದು ಮಹತ್ವದ ಬದಲಾವಣೆ?

ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ; ಕಿವೀಸ್ ಎದುರಿನ ಪಂದ್ಯದಲ್ಲಿ ಒಂದು ಮಹತ್ವದ ಬದಲಾವಣೆ?

ಗುವಾಹಟಿ: ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಇಂದು ಗುವಾಹಟಿಯಲ್ಲಿ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸರಣಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಟೀಂ ಇಂಡಿಯಾದಲ್ಲಿ ಒಂದು ಮೇಜರ್ ಚೇಂಜ್ ಆಗುವ ಸಾಧ್ಯತೆಯಿದೆ. 

1 Min read
Author : Naveen Kodase
Published : Jan 25 2026, 11:57 AM IST
Share this Photo Gallery
  • FB
  • TW
  • Linkdin
  • Whatsapp
16
3ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ
Image Credit : X

3ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ

ನ್ಯೂಜಿಲೆಂಡ್‌ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಗೆಲುವು ದಾಖಲಿಸಿದ್ದ ಭಾರತ, ಭಾನುವಾರ ಇಲ್ಲಿ ನಡೆಯಲಿರುವ 3ನೇ ಟಿ20 ಪಂದ್ಯದಲ್ಲೂ ಜಯ ಸಾಧಿಸಿ 5 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಒತ್ತಡದಲ್ಲಿ ಸಂಜು ಸ್ಯಾಮ್ಸನ್
Image Credit : Social Media

ಒತ್ತಡದಲ್ಲಿ ಸಂಜು ಸ್ಯಾಮ್ಸನ್

ನಾಯಕ ಸೂರ್ಯಕುಮಾರ್‌, ಇಶಾನ್‌ ಕಿಶನ್‌ ಲಯ ಕಂಡುಕೊಂಡಿರುವುದು ತಂಡದ ಬ್ಯಾಟಿಂಗ್‌ ಬಲ ಹೆಚ್ಚಿಸಿದ್ದು, ಸಂಜು ಸ್ಯಾಮ್ಸನ್‌ ಸ್ಥಿರ ಆಟ ಪ್ರದರ್ಶಿಸಬೇಕಾದ ಒತ್ತಡದಲ್ಲಿದ್ದಾರೆ.

Related Articles

Related image1
ಟಿ20 ವಿಶ್ವಕಪ್ 2026ರಲ್ಲಿ ಬಿಗ್ ಟ್ವಿಸ್ಟ್: ಪಾಕ್ ಬಾಯ್ಕಾಟ್ ಮಾಡಿದ್ರೆ ಈ ತಂಡಕ್ಕೆ ಚಾನ್ಸ್!
Related image2
ರೋಹಿತ್, ಜಡೇಜಾ ಅಲ್ಲ! ಟೀಂ ಇಂಡಿಯಾ ಸರಣಿ ಸೋಲಿಗೆ ಈ ಇಬ್ಬರೇ ಕಾರಣ! ನೀವೇನಂತೀರಾ?
36
ದೊಡ್ಡ ಮೊತ್ತ ಕಲೆಹಾಕಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್‌ಗೆ
Image Credit : X

ದೊಡ್ಡ ಮೊತ್ತ ಕಲೆಹಾಕಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್‌ಗೆ

ಕಳೆದ ಪಂದ್ಯದಲ್ಲಿ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಡೆಸಿರುವುದರಿಂದ ಇದೀಗ ಸಂಜು ಸ್ಯಾಮ್ಸನ್, ದೊಡ್ಡ ಮೊತ್ತ ಕಲೆಹಾಕಲೇಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ಗೂ ಮುನ್ನ ಸಂಜು ಲಯಕ್ಕೆ ಮರಳಬೇಕಿದೆ.

46
ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಳ್ಳುವ ಸಾಧ್ಯತೆ
Image Credit : AFP

ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಳ್ಳುವ ಸಾಧ್ಯತೆ

ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಜಸ್‌ಪ್ರೀತ್‌ ಬುಮ್ರಾ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಆಲ್ರೌಂಡರ್ ಜೇಮ್ಸ್‌ ನೀಶಮ್‌ ಕಿವೀಸ್‌ ತಂಡ ಕೂಡಿಕೊಂಡಿದ್ದು, ಇಂದು ಕಣಕ್ಕಿಳಿಯಬಹುದು. ಇಲ್ಲಿನ ಪಿಚ್‌ ಬ್ಯಾಟಿಂಗ್‌ ಸ್ನೇಹಿ ಎನಿಸಿದ್ದು, ದೊಡ್ಡ ಸ್ಕೋರ್‌ ನಿರೀಕ್ಷಿಸಬಹುದಾಗಿದೆ.

56
ಸರಣಿ ಗೆಲ್ಲುವ ವಿಶ್ವಾಸದಲ್ಲಿ ಟೀಂ ಇಂಡಿಯಾ
Image Credit : AFP

ಸರಣಿ ಗೆಲ್ಲುವ ವಿಶ್ವಾಸದಲ್ಲಿ ಟೀಂ ಇಂಡಿಯಾ

ಭಾರತ ತಂಡವು ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಇದೀಗ ಇನ್ನೂ ಎರಡು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇಂದಿನ ಪಂದ್ಯ ಗೆದ್ದರೇ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ಲೆಕ್ಕಾಚಾರದಲ್ಲಿದೆ ಭಾರತ.

66
ನೇರ ಪ್ರಸಾರದ ವಿವರ
Image Credit : AFP

ನೇರ ಪ್ರಸಾರದ ವಿವರ

ಇನ್ನು ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಪಂದ್ಯವು ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ನ್ಯೂಜಿಲೆಂಡ್
ಸಂಜು ಸ್ಯಾಮ್ಸನ್

Latest Videos
Recommended Stories
Recommended image1
Cricket: ಭಾರತ-ಅಫ್ಘಾನಿಸ್ತಾನ್ 1ನೇ ಟಿ20 ಪಂದ್ಯ ರದ್ದು?: ಆ ಒಂದು ಪತ್ರದ ಗೊಂದಲ, ಬಿಬಿಸಿಐ ಕೊಟ್ಟ ಸ್ಪಷ್ಟನೆ ಏನು?
Recommended image2
ಫೈನಲ್ ಮ್ಯಾಚ್‌ ಡ್ರಾ ಆದರೂ ದುಲಿಪ್ ಟ್ರೋಫಿ ಎತ್ತಿಹಿಡಿದ ಕಿಶನ್; ಗೆದ್ದ ತಂಡಕ್ಕೆ ಸಿಕ್ಕಿದ್ದು ಎಷ್ಟು ಕೋಟಿ?
Recommended image3
CSK ತಂಡದ ಫ್ಲೆಮಿಂಗ್ ಜಾಗಕ್ಕೆ ಭಾರತದ ಮಾಜಿ ಕ್ರಿಕೆಟರ್, ಕಠಿಣ ಷರತ್ತು ವಿಧಿಸಿದ ಧೋನಿ
Related Stories
Recommended image1
ಟಿ20 ವಿಶ್ವಕಪ್ 2026ರಲ್ಲಿ ಬಿಗ್ ಟ್ವಿಸ್ಟ್: ಪಾಕ್ ಬಾಯ್ಕಾಟ್ ಮಾಡಿದ್ರೆ ಈ ತಂಡಕ್ಕೆ ಚಾನ್ಸ್!
Recommended image2
ರೋಹಿತ್, ಜಡೇಜಾ ಅಲ್ಲ! ಟೀಂ ಇಂಡಿಯಾ ಸರಣಿ ಸೋಲಿಗೆ ಈ ಇಬ್ಬರೇ ಕಾರಣ! ನೀವೇನಂತೀರಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved