MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • T20 World Cup Ind vs Pak ಪಂದ್ಯ ಆರಂಭಕ್ಕೂ ಮುನ್ನವೇ ಪಾಕ್‌ಗೆ ಟೀಂ ಇಂಡಿಯಾ ಹೆದರಿತ್ತು..!

T20 World Cup Ind vs Pak ಪಂದ್ಯ ಆರಂಭಕ್ಕೂ ಮುನ್ನವೇ ಪಾಕ್‌ಗೆ ಟೀಂ ಇಂಡಿಯಾ ಹೆದರಿತ್ತು..!

ಕರಾಚಿ: ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯ ಹೈವೋಲ್ಟೇಜ್ ಪಂದ್ಯವೆನಿಸಿದ್ದ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಕಾದಾಟದಲ್ಲಿ ಪಾಕಿಸ್ತಾನ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿತ್ತು. ಪಾಕ್‌ ವಿರುದ್ದದ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ (Team India), ಬಲಿಷ್ಠ ಪಾಕಿಸ್ತಾನ ತಂಡವನ್ನು ನೋಡಿ ಹೆದರಿತ್ತು ಎಂದು ಪಾಕ್ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ (Inzamam ul Haq) ಅಭಿಪ್ರಾಯಪಟ್ಟಿದ್ದಾರೆ. ಇದೀಗ ಕ್ರಿಕೆಟ್ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

2 Min read
Author : Suvarna News | Asianet News
Published : Nov 26 2021, 03:41 PM IST
Share this Photo Gallery
  • FB
  • TW
  • Linkdin
  • Whatsapp
18

ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡವು 10 ವಿಕೆಟ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿತ್ತು.

28

ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಶಾಹೀನ್ ಅಫ್ರಿದಿ ಮಾರಕ ದಾಳಿಗೆ ತತ್ತರಿಸಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್‌ ಬಾರಿಸಿತ್ತು. ಈ ಗುರಿಯನ್ನು ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಆಕರ್ಷಕ ಜತೆಯಾಟವಾಡುವ ತಂಡಕ್ಕೆ ಗೆಲುವು ತಂದುಕೊಟ್ಟಿತ್ತು.

38

ಈ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ತಂಡವು ಮೊದಲ ಬಾರಿಗೆ ಭಾರತದ ಎದುರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಆ ಗೆಲುವಿನ ಕುರಿತಂತೆ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್‌ ಪ್ರತಿಕ್ರಿಯಿಸಿದ್ದಾರೆ.

48

ನನ್ನ ಪ್ರಕಾರ ಪಂದ್ಯ ಆರಂಭಕ್ಕೆ ಮುನ್ನವೇ ಭಾರತೀಯರು ಹೆದರಿದ್ದರು ಎಂದೆನಿಸುತ್ತಿದೆ. ಅವರ ಬಾಡಿ ಲಾಂಗ್ವೆಜ್‌ ಸೂಕ್ಷ್ಮವಾಗಿ ಗಮನಿಸಿದ್ದರೇ ಅರ್ಥವಾಗುತ್ತಿತ್ತು. ಟಾಸ್ ವೇಳೆ ವಿರಾಟ್ ಕೊಹ್ಲಿ ಹಾಗೂ ಬಾಬರ್ ಅಜಂ ಅವರ ಬಾಡಿ ಲಾಂಗ್ವೇಜ್‌ ನೋಡಿದರೆ ಅರ್ಥವಾಗುತ್ತಿತ್ತು ಎಂದು ಇಂಜಮಾಮ್ ಹೇಳಿದ್ದಾರೆ

58

ಭಾರತೀಯರ ಬಾಡಿ ಲಾಂಗ್ವೇಜ್‌ಗಿಂತ ನಮ್ಮ ಹುಡುಗರ ಬಾಡಿ ಲಾಂಗ್ವೇಜ್‌ ಉತ್ತಮವಾಗಿತ್ತು. ಸ್ವತಃ ರೋಹಿತ್ ಶರ್ಮಾ ಒತ್ತಡಕ್ಕೆ ಒಳಗಾಗಿದ್ದರು. ಇದನ್ನು ಗಮನಿಸಿದರೇ ಇಡೀ ತಂಡವೇ ಒತ್ತಡಕ್ಕೆ ಒಳಗಾಗಿತ್ತು ಎನ್ನುವುದು ಅರ್ಥವಾಗುತ್ತದೆ ಎಂದು ಪಾಕ್ ಮಾಜಿ ನಾಯಕ ಅಭಿಪ್ರಾಯಪಟ್ಟಿದ್ದಾರೆ.

68

ಆರಂಭದಲ್ಲೇ ರೋಹಿತ್ ಶರ್ಮಾ ಹಾಗೂ ಕೆ.ಎಲ್‌. ರಾಹುಲ್ ವಿಕೆಟ್ ಪತನದ ಬಳಿಕ ಪಾಕಿಸ್ತಾನ ತಂಡವು ಭಾರತದ ಮೇಲೆ ಒತ್ತಡ ಹೇರುವ ಮೂಲಕ ಪಂದ್ಯದಲ್ಲಿ ಪ್ರಾಬಲ್ಯ ಮೆರೆಯಿತು. ಭಾರತದ ಒತ್ತಡದ ಪರಿಸ್ಥಿತಿ ಪಾಕಿಸ್ತಾನಕ್ಕೆ ಲಾಭವಾಯಿತು ಎಂದಿದ್ದಾರೆ.

78

ಕಳೆದ ಎರಡು-ಮೂರು ವರ್ಷಗಳಲ್ಲಿ ಟೀಂ ಇಂಡಿಯಾ ಪ್ರದರ್ಶನವನ್ನು ಗಮನಿಸಿದರೇ, ಭಾರತ ನಿಜಕ್ಕೂ ಒಳ್ಳೆಯ ತಂಡ. ಟೂರ್ನಿ ಆರಂಭಕ್ಕೂ ಮುನ್ನ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಭಾರತ ತನ್ನ ಸಾಮರ್ಥ್ಯಕ್ಕೆ ತಕ್ಕಂತಹ ಪ್ರದರ್ಶನ ನೀಡಲಿಲ್ಲ ಎಂದು ಇಂಜಮಾಮ್ ಹೇಳಿದ್ದಾರೆ.

88

ಪಾಕ್ ವಿರುದ್ದ ಸೋಲಿನ ಬಳಿಕ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಕೂಡಾ ಮುಗ್ಗರಿಸಿತ್ತು. ಇದಾದ ಬಳಿಕ ಭಾರತ ತಂಡವು ಸ್ಕಾಟ್ಲೆಂಡ್, ನಮೀಬಿಯಾ ಹಾಗೂ ಆಫ್ಘಾನಿಸ್ತಾನ ವಿರುದ್ದ ಗೆಲುವು ಸಾಧಿಸಿತಾದರೂ, ಸೆಮೀಸ್‌ಗೇರಲು ವಿಫಲವಾಗಿತ್ತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಇಂಗ್ಲೆಂಡ್ ಎದುರಿನ ಸೆಮಿಫೈನಲ್‌ನಿಂದ ಬ್ಯಾನ್ ಆಗ್ತಾರಾ ಸಂಜು ಸ್ಯಾಮ್ಸನ್? ಶುರುವಾಯ್ತು ಹೊಸ ಭೀತಿ!
Recommended image2
ರಿಂಕು ಸಿಂಗ್ ಇದ್ದರೂ ಸಂಜು ಸ್ಯಾಮ್ಸನ್‌ಗೆ ಚಾನ್ಸ್ ಕೊಟ್ಟಿದ್ದೇಕೆ? ಇಲ್ಲಿದೆ 4 ಇಂಟ್ರೆಸ್ಟಿಂಗ್ ಕಾರಣ
Recommended image3
T20 World Cup 2026: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಮ್ಯಾಚ್ ರದ್ದಾದ್ರೆ ಯಾರಿಗೆ ಸಿಗುತ್ತೆ ಫೈನಲ್ ಟಿಕೆಟ್? ಐಸಿಸಿ ನಿಯಮವೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved