ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!
ರಾಂಚಿ(ಸೆ.09): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಸೋಲನನ್ನುಭವಿಸಿರುವ ಟೀಂ ಇಂಡಿಯಾ, ಸರಣಿ ಗೆಲ್ಲುವ ಆಸೆ ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ಈ ಪಂದ್ಯವನ್ನು ಗೆಲ್ಲಲೇಬೇಕಾದರೆ ಈ ಪಂದ್ಯವನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಎರಡನೇ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ

1. ಶಿಖರ್ ಧವನ್:
ಟೀಂ ಇಂಡಿಯಾ ನಾಯಕ ಶಿಖರ್ ಧವನ್, ಮೊದಲ ಪಂದ್ಯದಲ್ಲಿ ಕೇವಲ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಧವನ್ ಉತ್ತಮ ಆರಂಭ ಒದಗಿಸಿಕೊಡಬೇಕಿದೆ.
2. ಶುಭ್ಮನ್ ಗಿಲ್:
ಬಲಗೈ ಬ್ಯಾಟರ್ ಶುಭ್ಮನ್ ಗಿಲ್ ಕೂಡಾ ಮೊದಲ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲವಾಗಿದ್ದರು. ಧವನ್ ಜತೆ ಗಿಲ್ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ.
3. ಋತುರಾಜ್ ಗಾಯಕ್ವಾಡ್:
ವಿರಾಟ್ ಕೊಹ್ಲಿಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಗಾಯಕ್ವಾಡ್, 42 ಎಸೆತಗಳಲ್ಲಿ ಕೇವಲ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ಗಾಯಕ್ವಾಡ್ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
4. ಶ್ರೇಯಸ್ ಅಯ್ಯರ್:
ಮುಂಬೈ ಮೂಲದ ಬ್ಯಾಟರ್ ಶ್ರೇಯಸ್ ಅಯ್ಯರ್, ಮೊದಲ ಪಂದ್ಯದಲ್ಲಿ ಕೇವಲ 37 ಎಸೆತಗಳಲ್ಲಿ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಈಗ ಅಯ್ಯರ್ ಮತ್ತೊಮ್ಮೆ ಮಿಂಚುವ ವಿಶ್ವಾಸವಿದೆ.
5. ಇಶಾನ್ ಕಿಶನ್:
ಎಡಗೈ ಸ್ಪೋಟಕ ಬ್ಯಾಟರ್, ಸಿಕ್ಕ ಅವಕಾಶವನ್ನು ಮೊದಲ ಪಂದ್ಯದಲ್ಲಿ ಉಪಯೋಗಿಸಿಕೊಳ್ಳಲು ವಿಫಲವಾಗಿದ್ದರು. ಹೀಗಿದ್ದೂ ಕಿಶನ್ಗೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.
6. ಸಂಜು ಸ್ಯಾಮ್ಸನ್:
ಮೊದಲ ಏಕದಿನ ಪಂದ್ಯದಲ್ಲಿ ಸಂಜು ಕೇವಲ 63 ಎಸೆತಗಳಲ್ಲಿ ಅಜೇಯ 86 ರನ್ ಸಿಡಿಸುವ ಮೂಲಕ ಮಿಂಚಿದ್ದರು. ಸಂಜು ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
7. ಶಾರ್ದೂಲ್ ಠಾಕೂರ್:
ಬಲಗೈ ಆಲ್ರೌಂಡರ್ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.
8. ಕುಲ್ದೀಪ್ ಯಾದವ್:
ಚೈನಾಮನ್ ಸ್ಪಿನ್ನರ್ ಖ್ಯಾತಿಯ ಕುಲ್ದೀಪ್ ಯಾದವ್, ಮೊದಲ ಪಂದ್ಯದಲ್ಲಿ ಶಿಸ್ತುಬದ್ದ ದಾಳಿಯ ಮೂಲಕ ಗಮನ ಸೆಳೆದಿದ್ದರು. ಎರಡನೇ ಪಂದ್ಯದಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ.
9. ರವಿ ಬಿಷ್ಣೋಯಿ:
ಯುವ ಲೆಗ್ ಸ್ಪಿನ್ನರ್ ಬಿಷ್ಣೋಯಿ ಮೊದಲ ಪಂದ್ಯದಲ್ಲಿ ದುಬಾರಿಯಾಗಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.
10. ಮೊಹಮ್ಮದ್ ಸಿರಾಜ್:
ಮೊದಲ ಏಕದಿನ ಪಂದ್ಯದಲ್ಲಿ 8 ಓವರ್ ಬೌಲಿಂಗ್ ಮಾಡಿ 49 ರನ್ ನೀಡಿದ್ದರು, ಆದರೆ ಯಾವುದೇ ವಿಕೆಟ್ ಕಬಳಿಸಲು ವಿಫಲವಾಗಿದ್ದರು. ಎರಡನೇ ಪಂದ್ಯದಲ್ಲಿ ಮಿಂಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
11. ಆವೇಶ್ ಖಾನ್:
ಬಲಗೈ ವೇಗದ ಬೌಲರ್ ಆವೇಶ್ ಖಾನ್, ಕೂಡಾ ಮೊದಲ ಪಂದ್ಯದಲ್ಲಿ ವಿಕೆಟ್ ಕಬಳಿಸಲು ವಿಫಲವಾಗಿದ್ದರು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಫಾರ್ಮ್ಗೆ ಮರಳಲು ಹಾತೊರೆಯುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.