MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
Darshan Renukaswamy Case
Farm Chemicals Under Scanner
Kanteerava Stadium Renovation
Karnataka Electoral Roll
Bengaluru Land Scam
  • Home
  • Sports
  • Cricket
  • Wriddhiman Saha: ದಾದಾ, ದ್ರಾವಿಡ್‌ ಮೇಲೆ ಗಂಭೀರವಾಗಿ ಆರೋಪಿಸಿದ ವೃದ್ದಿಮಾನ್ ಸಾಹ..!

Wriddhiman Saha: ದಾದಾ, ದ್ರಾವಿಡ್‌ ಮೇಲೆ ಗಂಭೀರವಾಗಿ ಆರೋಪಿಸಿದ ವೃದ್ದಿಮಾನ್ ಸಾಹ..!

ಕೋಲ್ಕತಾ: ಟೀಂ ಇಂಡಿಯಾ (Team India) ಅನುಭವಿ ವಿಕೆಟ್ ಕೀಪರ್‌ ಬ್ಯಾಟರ್‌ ವೃದ್ದಿಮಾನ್ ಸಾಹ (Wriddhiman Saha) ಅವರನ್ನು ಮುಂಬರುವ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿಗೆ ತಂಡದಿಂದ ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಸಾಹ ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಹಾಗೂ ಟೀಂ ಇಂಡಿಯಾ ಕೋಚ್‌ ರಾಹುಲ್ ದ್ರಾವಿಡ್ (Rahul Dravid) ಅವರ ದ್ವಿಮುಖ ನೀತಿಯ ಬಗ್ಗೆ ಕಿಡಿಕಾರಿದ್ದಾರೆ.

2 Min read
Author : Suvarna News
| Updated : Feb 20 2022, 04:58 PM IST
Share this Photo Gallery
  • FB
  • TW
  • Linkdin
  • Whatsapp
18

ಶ್ರೀಲಂಕಾ ವಿರುದ್ದ ತವರಿನಲ್ಲಿ ಮಾರ್ಚ್‌ ತಿಂಗಳಿನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಪ್ರಮುಖ ನಾಲ್ವರು ಆಟಗಾರರು ವಿಫಲರಾಗಿದ್ದಾರೆ. ಈ ಪೈಕಿ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಕೂಡಾ ಒಬ್ಬರೆನಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28

ಚೇತನ್ ಶರ್ಮಾ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಲಂಕಾ ಎದುರಿನ ಸೀಮಿತ ಓವರ್‌ಗಳ ಸರಣಿ ಹಾಗೂ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಶನಿವಾರ(ಫೆ.20) ಆಯ್ಕೆ ಮಾಡಿದ್ದು, 37 ವರ್ಷದ ಸಾಹ ಅವರನ್ನು ತಂಡದಿಂದ ಹೊರಗಿಡಲಾಗಿದೆ.

38

ಇದರ ಬೆನ್ನಲ್ಲೇ ವೃದ್ದಿಮಾನ್ ಸಾಹ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ವಿರುದ್ದ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಸಾಹ ಅವರನ್ನು ತಂಡದಿಂದ ಹೊರಗಿಡಲು ಅವರ ವಯಸ್ಸು ಕೂಡಾ ಒಂದು ಕಾರಣವೆಂದು ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಹೇಳಿದ್ದಾರೆ.

48

ಆದರೆ ಸಾಹ ಈ ಮಾತನ್ನು ಒಪ್ಪಲು ತಯಾರಿಲ್ಲ. ಕಳೆದ ನವೆಂಬರ್‌ನಲ್ಲಿ ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ನಾನು ಕತ್ತು ನೋವಿದ್ದರೂ ಸಹ, ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ದಿಟ್ಟ 61 ರನ್ ಬಾರಿಸಿದ್ದೆ, ಆಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿಮ್ಮ ಸ್ಥಾನ ಭದ್ರವಾಗಿದೆ ಎಂದಿದ್ದರು. ಆದರೀಗ ವಾಸ್ತವ ಬದಲಾಗಿದೆ ಎಂದು ಸಾಹ ಆರೋಪಿಸಿದ್ದಾರೆ 
 

58

ನಾನು ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ದ 61 ರನ್ ಬಾರಿಸಿದ್ದಾಗ, ದಾದಾ ನನಗೆ ವಾಟ್ಸ್‌ಆಪ್ ಮೂಲಕ ಅಭಿನಂದನೆ ಸಲ್ಲಿಸಿದ್ದರು. ಈ ವೇಳೆ ಎಲ್ಲಿಯವರೆಗೂ ನಾನು ಬಿಸಿಸಿಐ ಅಧ್ಯಕ್ಷನಾಗಿರುತ್ತೇನೋ, ಅಲ್ಲಿಯವರೆಗೂ ನೀವು ತಂಡದಲ್ಲಿ ಇರುತ್ತೀರ. ಈ ಮೆಸೇಜ್ ನನ್ನ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿತ್ತು. ನನಗೆ ಈಗಲೂ ಅರ್ಥವಾಗುತ್ತಿಲ್ಲ, ಇಷ್ಟು ಬೇಗ ಪರಿಸ್ಥಿತಿ ಬದಲಾಯಿತಾ ಎಂದು 'ದ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

68

ಇದೆಲ್ಲದರ ಹೊರತಾಗಿಯೂ, ಲಂಕಾ ಎದುರಿನ ಸರಣಿಗೆ ಆಯ್ಕೆ ಸಮಿತಿಯು ತಮ್ಮನ್ನು ಹೊರಗಿಟ್ಟಿರುವ ಬಗ್ಗೆ ತೀರಾ ಅಚ್ಚರಿಯನ್ನು ಸಾಹ ವ್ಯಕ್ತಪಡಿಸಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯಲ್ಲಿಯೇ ರಾಹುಲ್ ದ್ರಾವಿಡ್ ಈ ವಿಚಾರವನ್ನು ತಿಳಿಸಿದ್ದರು. ಆದರೂ ಸಹಾ ನಾನು ಇನ್ನಷ್ಟು ದಿನಗಳ ಕಾಲ ತಂಡದಲ್ಲಿ ಮುಂದುವರೆಯುವ ವಿಶ್ವಾಸವಿತ್ತು. ಆದರೆ ಭಾರತ ತಂಡದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿಯು ಯುವ ವಿಕೆಟ್ ಕೀಪರ್‌ಗಳತ್ತ ಆಯ್ಕೆ ಸಮಿತಿಯು ಚಿತ್ತ ನೆಟ್ಟಿದೆ ಎಂದು ದ್ರಾವಿಡ್ ತಮಗೆ ತಿಳಿಸಿದ್ದರು ಎಂದಿದ್ದಾರೆ.

78

ರಾಹುಲ್ ದ್ರಾವಿಡ್ ಸರ್ ತಮ್ಮ ಬಳಿ ಬಂದು, ಈ ವಿಚಾರವನ್ನು ಹೇಗೆ ಪ್ರಸ್ತಾಪಿಸಬೇಕು ಎಂದು ನನಗೆ ತಿಳಿಯುತ್ತಿಲ್ಲ. ಆಯ್ಕೆ ಸಮಿತಿಯ ಕೆಲವರು ಹಾಗೂ ಟೀಂ ಮ್ಯಾನೇಜ್‌ಮೆಂಟ್ ಬೇರೆ ವಿಕೆಟ್‌ ಕೀಪರ್‌ಗಳನ್ನು ಆಯ್ಕೆ ಮಾಡುವ ಕುರಿತಂತೆ ಚಿಂತನೆ ನಡೆಸುತ್ತಿದೆ. ನಿಮ್ಮ ವಯಸ್ಸು ಹಾಗೂ ಪ್ರದರ್ಶನ ಮಾತ್ರ ಕಾರಣವಲ್ಲ, ಅವರೆಲ್ಲರೂ ಯುವ ಪ್ರತಿಭಾನ್ವಿತ ಆಟಗಾರರನ್ನು ತಂಡದೊಳಗೆ ಸೇರಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಇನ್ನು ಮುಂದೆ ನೀವು ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ದ್ರಾವಿಡ್ ತಮಗೆ ಹೇಳಿದ್ದಾಗಿ ಸಾಹ ಸ್ಪೋರ್ಟ್ಸ್‌ಸ್ಟಾರ್‌ಗೆ ತಿಳಿಸಿದ್ದಾರೆ.

88

ರಿಷಭ್ ಪಂತ್‌ಗೆ ಬ್ಯಾಕ್ ಅಪ್‌ ಆಗಿ ಕೆ.ಎಸ್‌. ಭರತ್ ಅವರನ್ನು ಬೆಳೆಸುತ್ತಿರುವುದಾಗಿ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ವೃದ್ದಿಮಾನ್ ಸಾಹ ಅವರ ಟೆಸ್ಟ್ ವೃತ್ತಿಜೀವನ ಬಹುತೇಕ ಅಂತ್ಯವಾದಂತೆ ಆಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಸೌರವ್ ಗಂಗೂಲಿ
ಟೀಮ್ ಇಂಡಿಯಾ
ರಾಹುಲ್ ದ್ರಾವಿಡ್

Latest Videos
Recommended Stories
Recommended image1
'Gen Z' ಮನಸ್ಸಿನಲ್ಲಿ ಯಾರಿಗೆ ಜಾಗ ; ಬಿಜೆಪಿಗೋ, ಕಾಂಗ್ರೆಸ್‌ಗೋ? ಇಲ್ಲಿದೆ ಅಸಲಿ ಲೆಕ್ಕಾಚಾರ!
Recommended image2
Cricket: ಸ್ಟೇಡಿಯಂನಲ್ಲಿ ನೀವು ಹೇಳಿದ ಹಾಗೆ ಆಡ್ಲಿಕ್ಕೆ ಆಗಲ್ಲ! ಅಪ್ಪನಿಗೇ ಎದುರು ಮಾತನಾಡಿದ ದಿಗ್ಗಜ ಕ್ರಿಕೆಟಿಗನ ಪುತ್ರ!
Recommended image3
ಮುಂಬೈ ಇಂಡಿಯನ್ಸ್ ತಂಡದಿಂದ ಮಹತ್ವದ ನಡೆ, ವೈಭವ್‌ನ ಸ್ಟಾರ್ ಮಾಡಿದ ಜುಬಿನ್‌ಗೆ ಪ್ರಮುಖ ಹುದ್ದೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved