MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • Ind vs WI: ಕೆ ಎಲ್ ರಾಹುಲ್ ಔಟ್, ಟೀಂ ಇಂಡಿಯಾಗೆ ಬಲಿಷ್ಠ ಆಟಗಾರ ಸೇರ್ಪಡೆ..!

Ind vs WI: ಕೆ ಎಲ್ ರಾಹುಲ್ ಔಟ್, ಟೀಂ ಇಂಡಿಯಾಗೆ ಬಲಿಷ್ಠ ಆಟಗಾರ ಸೇರ್ಪಡೆ..!

ತರೌಬ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಟಿ20 ಸವಾಲನ್ನು ಸ್ವೀಕರಿಸಲು ಸಜ್ಜಾಗಿದೆ. ಜುಲೈ 29ರಿಂದ ಆಗಸ್ಟ್ 07ರವರೆಗೆ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಕೆ ಎಲ್ ರಾಹುಲ್ ಭಾರತ ತಂಡದಿಂದ ಹೊರಬಿದ್ದಿರುವುದರಿಂದ ಹೊಸ ಆಟಗಾರ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 

1 Min read
Author : Naveen Kodase
Published : Jul 29 2022, 01:36 PM IST
Share this Photo Gallery
  • FB
  • TW
  • Linkdin
  • Whatsapp
16

ವೆಸ್ಟ್ ಇಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಕೆ ಎಲ್ ರಾಹುಲ್ ಸಂಪೂರ್ಣ ಫಿಟ್ನೆಸ್ ಸಾಬೀತು ಪಡಿಸದ ಹಿನ್ನೆಲೆಯಲ್ಲಿ ಕನ್ನಡದ ತಾರಾ ಆಟಗಾರರ ವಿಂಡೀಸ್ ಎದುರಿನ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಮೊದಲ ಟಿ20 ಪಂದ್ಯ ಆರಂಭಕ್ಕೂ ಮುನ್ನ ರಾಹುಲ್ ಬದಲಿಗೆ ಹೊಸ ಆಟಗಾರನನ್ನು ಬಿಸಿಸಿಐ ಹೆಸರಿಸಿದೆ.

26
Sanju Samson

Sanju Samson

ಹೌದು, ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯಲ್ಲಿ ಮಿಂಚಿನ ಪ್ರದರ್ಶನ ತೋರಿದ್ದ ಸಂಜು ಸ್ಯಾಮ್ಸನ್‌ಗೆ ಅದೃಷ್ಟ ಖುಲಾಯಿಸಿದ್ದು, ಇದೀಗ ಟಿ20 ಸರಣಿಗೆ ಟೀಂ ಇಂಡಿಯಾದೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೆ ಎಲ್ ರಾಹುಲ್ ಅವರ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಅವಕಾಶ ಕಲ್ಪಿಸಲಾಗಿದೆ.

36
sanju jassie gift

sanju jassie gift

ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಮೊದಲು ವಿಂಡೀಸ್ ಎದುರಿನ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಟಿ20 ಸರಣಿಯಿಂದ ಕೈಬಿಡಲಾಗಿತ್ತು. ಆದರೆ ಇದೀಗ ಸಂಜುಗೆ ಟಿ20 ಸರಣಿಗೆ ಆಯ್ಕೆ ಮಾಡಲಾಯಿತು.

46

ತೊಡೆ ಸಂದಿನ ಗಾಯಕ್ಕೆ ಒಳಗಾಗಿ ಜರ್ಮನಿಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಂಡು ವಾಪಾಸ್ಸಾಗಿದ್ದ ಕೆ ಎಲ್ ರಾಹುಲ್, ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಗೆ ತಂಡ ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದರು. ಆದರೆ ವಿಂಡೀಸ್ ಎದುರಿನ ಸರಣಿಗೂ ಮುನ್ನ ಮತ್ತೆ ಕೋವಿಡ್‌ಗೆ ತುತ್ತಾಗಿದ್ದರಿಂದ ಹೆಚ್ಚಿನ ವಿಶ್ರಾಂತಿಯ ಉದ್ದೇಶದಿಂದ ವಿಂಡೀಸ್ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

56

ಇನ್ನು ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದು ಅಬ್ಬರಿಸಲು ಸಂಜು ಎದುರು ನೋಡುತ್ತಿದ್ದಾರೆ.

66

ವಿಶ್ವಕಪ್‌ಗೆ ಸಿದ್ಧತೆ ನಡೆಸಲು ಭಾರತಕ್ಕೆ 16 ಪಂದ್ಯಗಳು (ವಿಂಡೀಸ್‌ ವಿರುದ್ಧ 5, ಏಷ್ಯಾಕಪ್‌ನಲ್ಲಿ 5-ಫೈನಲ್‌ ಪ್ರವೇಶಿಸಿದರೆ, ಆಸ್ಪ್ರೇಲಿಯಾ ವಿರುದ್ಧ 3, ದಕ್ಷಿಣ ಆಫ್ರಿಕಾ ವಿರುದ್ಧ 3) ಸಿಗಲಿವೆ. ಹೀಗಾಗಿ ಪ್ರತಿ ಪಂದ್ಯದಲ್ಲೂ ತನ್ನ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಬಲಿಷ್ಠ ತಂಡ ಕಟ್ಟುವತ್ತ ಟೀಂ ಇಂಡಿಯಾ ಚಿತ್ತ ನೆಟ್ಟಿದೆ. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಸಂಜು ಸ್ಯಾಮ್ಸನ್
ಕೆ. ಎಲ್. ರಾಹುಲ್

Latest Videos
Recommended Stories
Recommended image1
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
Recommended image2
ಟಿ20 ವಿಶ್ವಕಪ್‌ನಲ್ಲಿ ಈ 2 ತಂಡಗಳೇ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ! ಅಚ್ಚರಿ ಭವಿಷ್ಯ ನುಡಿದ ಪಾಕ್ ದಿಗ್ಗಜ ಕ್ರಿಕೆಟಿಗ
Recommended image3
Breaking: ಚಿನ್ನಸ್ವಾಮಿಗೆ ಐಪಿಎಲ್‌, ಬೆಂಗಳೂರಲ್ಲಿ ಐದು ಪಂದ್ಯ ಆಡಲು ಕೊನೆಗೂ ಒಪ್ಪಿದ RCB!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved