ಅಹಮದಾಬಾದಲ್ಲಿ ಚೇಂಜ್ ಆಯ್ತು ಭಾರತದ ಅದೃಷ್ಟ! ಕಪ್ ಗೆದ್ದು ಕಳಂಕ ತೊಳೆದ ಟೀಂ ಇಂಡಿಯಾ
ಅಹಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರ ಜತೆಗೆ ನರೇಂದ್ರ ಮೋದಿ ಸ್ಟೇಡಿಯಂಗೆ ಅಂಟಿದ ಕಳಂಕವನ್ನು ತೊಳೆದು ಹಾಕುವಲ್ಲಿ ಭಾರತ ತಂಡವು ಯಶಸ್ವಿಯಾಗಿದೆ.

ನರೇಂದ್ರ ಮೋದಿ ಸ್ಟೇಡಿಯಂ ಅಪವಾದದಿಂದ ಮುಕ್ತ
ಅಹಮದಾಬಾದ್ನಲ್ಲಿ ಭಾರತದ ಅದೃಷ್ಟ ಕೊನೆಗೂ ಬದಲಾಗಿದೆ. ಅಹಮದಾಬಾದ್ ಸ್ಟೇಡಿಯಂ ಐಸಿಸಿ ಟೂರ್ನಿಗಳಲ್ಲಿ ಭಾರತದ ಪಾಲಿಗೆ ಅದೃಷ್ಟದ ತಾಣವಲ್ಲ ಎನ್ನುವ ಅಪವಾದದಿಂದ ಪಾರಾಗಿದೆ.
2023ರಲ್ಲಿ ಆಘಾತಕಾರಿ ಸೋಲು ಕಂಡಿದ್ದ ಭಾರತ
ಹೌದು, ಭಾರತದಲ್ಲೇ ನಡೆದಿದ್ದ 2023ರ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಟ್ರೋಫಿ ಗೆಲ್ಲುವ ಫೇವರಿಟ್ ಎನಿಸಿತ್ತು. ಟೂರ್ನಿಯುದ್ದಕ್ಕೂ ಭಾರತ ಅಬ್ಬರಿಸಿದ್ದರೂ ಅಹಮದಾಬಾದ್ನಲ್ಲಿ ನಡೆದಿದ್ದ ಫೈನಲ್ನಲ್ಲಿ ಭಾರತ ಪರಾಭವಗೊಂಡಿತ್ತು.
ಸೂಪರ್-8ರಲ್ಲೂ ಸೋಲು ಕಂಡಿದ್ದ ಭಾರತ
ಇತ್ತೀಚೆಗೆ ಅಲ್ಲೇ ನಡೆದಿದ್ದ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೂ ಭಾರತ ಸೋತಿತ್ತು. ಇದರೊಂದಿಗೆ ಅಹಮದಾಬಾದ್ ಸ್ಟೇಡಿಯಂ ಭಾರತದ ಪಾಲಿಗೆ ಅದೃಷ್ಟ ತಾಣವಲ್ಲ ಎಂಬ ಆಪಾದನೆಗೆ ಗುರಿಯಾಗಿತ್ತು.
ಲಕ್ ಬದಲಿಸಿಕೊಂಡ ಟೀಂ ಇಂಡಿಯಾ
ಈ ನಡುವೆ, ಲಕ್ ಬದಲಾಗಲಿ ಎಂಬ ಕಾರಣಕ್ಕೆ 2023ರ ಏಕದಿನ ಫೈನಲ್ ವೇಳೆ ಉಳಿದುಕೊಂಡಿದ್ದ ಹೋಟೆಲ್ ಬದಲಿಸಿ ಈ ಬಾರಿ ಬೇರೊಂದು ಹೋಟೆಲ್ನಲ್ಲಿ ಭಾರತೀಯ ಆಟಗಾರರು ತಂಗಿದ್ದರು. ಸದ್ಯ ಭಾರತ ಚಾಂಪಿಯನ್ ಆಗಿ ತನ್ನ ಅದೃಷ್ಟವನ್ನು ತಾನೇ ಬದಲಾಯಿಸಿದೆ.
ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ
ಮಾರ್ಚ್ 08ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಬಲಿಷ್ಠ ನ್ಯೂಜಿಲೆಂಡ್ ಎದುರು 96 ರನ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಹಾಗೂ ಒಟ್ಟಾರೆ ಮೂರನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
2023ರ ಏಕದಿನ ವಿಶ್ವಕಪ್ ಸೋಲಿನ ನೋವು ಮರೆಸಿದ ಗೆಲುವು
ಇದರ ಜತೆಗೆ 2023ರಲ್ಲಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಅನುಭವಿಸಿದ್ದ ಸೋಲಿನ ನೋವನ್ನು ಮರೆಸುವಲ್ಲಿಯೂ ಈ ಗೆಲುವು ಯಶಸ್ವಿಯಾಗಿದೆ. ಇದಷ್ಟೇ ಅಲ್ಲದೇ ಸತತ ಎರಡು ಟಿ20 ವಿಶ್ವಕಪ್ ಗೆದ್ದ ಜಗತ್ತಿನ ಏಕೈಕ ತಂಡ ಎನ್ನುವ ಹೆಗ್ಗಳಿಕೆಗೂ ಭಾರತ ಪಾತ್ರವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

