ಇಂಡೋ-ಲಂಕಾ ಸೀಮಿತ ಓವರ್ಗಳ ಸರಣಿಯ ವೇಳಾಪಟ್ಟಿ ಪ್ರಕಟ..!
ನವದೆಹಲಿ: ಬಹುನಿರೀಕ್ಷಿತ ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್ಗಳ ಸರಣಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಭಾರತದ ಮತ್ತೊಂದು ತಂಡ ಶ್ರೀಲಂಕಾದಲ್ಲಿ ಸೀಮಿತ ಓವರ್ಗಳ ಸರಣಿಯನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಪ್ರಕಟಗೊಂಡಿದೆ.

<p>ಜುಲೈ ತಿಂಗಳಿನಲ್ಲಿ ಭಾರತ ಸೀಮಿತ ಓವರ್ಗಳ ಕ್ರಿಕೆಟ್ ತಂಡ ಶ್ರೀಲಂಕಾ ಎದುರು ಏಕದಿನ ಹಾಗೂ ಟಿ20 ಸರಣಿಯನ್ನು ಆಡಲಿದೆ</p>
ಜುಲೈ ತಿಂಗಳಿನಲ್ಲಿ ಭಾರತ ಸೀಮಿತ ಓವರ್ಗಳ ಕ್ರಿಕೆಟ್ ತಂಡ ಶ್ರೀಲಂಕಾ ಎದುರು ಏಕದಿನ ಹಾಗೂ ಟಿ20 ಸರಣಿಯನ್ನು ಆಡಲಿದೆ
<p>ಭಾರತ ತಂಡ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.</p>
ಭಾರತ ತಂಡ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.
<p>ಜುಲೈ 13ರಿಂದ ಜುಲೈ 25ರ ವರೆಗೂ ಸರಣಿ ನಡೆಯಲಿದೆ ಎಂದು ಪಂದ್ಯಗಳ ಪ್ರಸಾರ ಹಕ್ಕು ಹೊಂದಿರುವ ಸೋನಿ ಸಂಸ್ಥೆ ಸೋಮವಾರ ತಿಳಿಸಿದೆ.</p>
ಜುಲೈ 13ರಿಂದ ಜುಲೈ 25ರ ವರೆಗೂ ಸರಣಿ ನಡೆಯಲಿದೆ ಎಂದು ಪಂದ್ಯಗಳ ಪ್ರಸಾರ ಹಕ್ಕು ಹೊಂದಿರುವ ಸೋನಿ ಸಂಸ್ಥೆ ಸೋಮವಾರ ತಿಳಿಸಿದೆ.
<p>ಜುಲೈ 13, 16 ಹಾಗೂ 18ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಜುಲೈ 21, 23 ಹಾಗೂ 25ರಂದು ಟಿ20 ಪಂದ್ಯಗಳು ನಡೆಯಲಿವೆ. <br /> </p>
ಜುಲೈ 13, 16 ಹಾಗೂ 18ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಜುಲೈ 21, 23 ಹಾಗೂ 25ರಂದು ಟಿ20 ಪಂದ್ಯಗಳು ನಡೆಯಲಿವೆ.
<p>ವಿರಾಟ್ ಕೊಹ್ಲಿ ನೇತೃತ್ವದ ತಂಡ ಇಂಗ್ಲೆಂಡ್ನಲ್ಲಿ ಟೆಸ್ಟ್ ಆಡುತ್ತಿರುವ ವೇಳೆಯೇ ಲಂಕಾದಲ್ಲಿ ಸೀಮಿತ ಓವರ್ ಸರಣಿ ನಡೆಯಲಿರುವ ಕಾರಣ, ತಂಡಕ್ಕೆ ಹೊಸ ನಾಯಕನ ನೇಮಕವಾಗಲಿದೆ. </p>
ವಿರಾಟ್ ಕೊಹ್ಲಿ ನೇತೃತ್ವದ ತಂಡ ಇಂಗ್ಲೆಂಡ್ನಲ್ಲಿ ಟೆಸ್ಟ್ ಆಡುತ್ತಿರುವ ವೇಳೆಯೇ ಲಂಕಾದಲ್ಲಿ ಸೀಮಿತ ಓವರ್ ಸರಣಿ ನಡೆಯಲಿರುವ ಕಾರಣ, ತಂಡಕ್ಕೆ ಹೊಸ ನಾಯಕನ ನೇಮಕವಾಗಲಿದೆ.
<p>ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಅಯ್ಯರ್ ನಡುವೆ ಟೀಂ ಇಂಡಿಯಾ ನಾಯಕತ್ವದ ರೇಸ್ನಲ್ಲಿದ್ದಾರೆ.</p>
ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಅಯ್ಯರ್ ನಡುವೆ ಟೀಂ ಇಂಡಿಯಾ ನಾಯಕತ್ವದ ರೇಸ್ನಲ್ಲಿದ್ದಾರೆ.
<p>ಈ ಮೊದಲು ದೀಪಕ್ ಚಹಾರ್ ಲಂಕಾ ಸರಣಿಯಲ್ಲಿ ಶಿಖರ್ ಧವನ್ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದರು.</p>
ಈ ಮೊದಲು ದೀಪಕ್ ಚಹಾರ್ ಲಂಕಾ ಸರಣಿಯಲ್ಲಿ ಶಿಖರ್ ಧವನ್ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದರು.
<p>ಟೀಂ ಇಂಡಿಯಾ ಹೆಡ್ ಕೋಚ್ ರವಿಶಾಸ್ತ್ರಿ ಹಾಗೂ ಸಹಾಯಕ ಸಿಬ್ಬಂದಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ, ಲಂಕಾ ಪ್ರವಾಸಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.</p>
ಟೀಂ ಇಂಡಿಯಾ ಹೆಡ್ ಕೋಚ್ ರವಿಶಾಸ್ತ್ರಿ ಹಾಗೂ ಸಹಾಯಕ ಸಿಬ್ಬಂದಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ, ಲಂಕಾ ಪ್ರವಾಸಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.