MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • Probable 11 ರಿಂಕು ಬೆನ್ನಲ್ಲೇ ಮತ್ತೊಬ್ಬ ಫಿನೀಶರ್ ಔಟ್, ಭಾರತ ವಿಂಡೀಸ್ ಪಂದ್ಯಕ್ಕೆ ಕುಲ್ದೀಪ್ ವಾಪಸ್

Probable 11 ರಿಂಕು ಬೆನ್ನಲ್ಲೇ ಮತ್ತೊಬ್ಬ ಫಿನೀಶರ್ ಔಟ್, ಭಾರತ ವಿಂಡೀಸ್ ಪಂದ್ಯಕ್ಕೆ ಕುಲ್ದೀಪ್ ವಾಪಸ್

Probable 11 ರಿಂಕು ಬೆನ್ನಲ್ಲೇ ಮತ್ತೊಬ್ಬ ಫಿನೀಶರ್ ಔಟ್, ಭಾರತ ವಿಂಡೀಸ್ ಪಂದ್ಯಕ್ಕೆ ಕುಲ್ದೀಪ್ ವಾಪಸ್ ಸಾಧ್ಯತೆ ಇದೆ. ಕ್ವಾರ್ಟರ್‌ಫೈನಲ್ ಸ್ವರೂಪ ಪಡೆದುಕೊಂಡಿರುವ ಈ ಪಂದ್ಯದಲ್ಲಿ ಭಾರತದ ಸಂಭಾವ್ಯ ಪ್ಲೇಯಿಂಗ್ 11 

2 Min read
Author : Chethan Kumar
Published : Feb 28 2026, 05:30 PM IST
Share this Photo Gallery
  • FB
  • TW
  • Linkdin
  • Whatsapp
15
ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್
Image Credit : Getty

ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹೋರಾಟ ಕಠಿಣವಾಗುತ್ತಿದೆ. ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಸೆಮಿಫೈನಲ್ ಆಸೆ ಜೀವಂತವಾಗಿರಿಸಿದೆ. ಇದೀಗ ವೆಸ್ಟ್ ಇಂಡೀಸ್ ಸವಾಲು. ಮಾರ್ಚ್ 1 ರಂದು ಭಾರತ ಹಾಗೂ ವೆಸ್ಟ್ ಇಂಡೀಸ್ ಹೋರಾಟ ನಡೆಸಲಿದೆ. ಇದು ಕ್ವಾರ್ಟರ್‌ಫೈನಲ್ ಸ್ವರೂಪ ಪಡೆದುಕೊಂಡಿದೆ. ಕಾರಣ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಸೋತ ತಂಡ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬೀಳಲಿದೆ.

25
ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆ ಸಾಧ್ಯತೆ
Image Credit : ANI

ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆ ಸಾಧ್ಯತೆ

ದಕ್ಷಿಣ ಆಫ್ರಿಕಾ ವಿರುದ್ಧ ಸೋತರೂ, ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಭಾರತ ಕಮ್‌ಬ್ಯಾಕ್ ಮಾಡಿತ್ತು. ಆದರೆ, ವೆಸ್ಟ್ ಇಂಡೀಸ್‌ನಂತಹ ಬಲಿಷ್ಠ ತಂಡದ ವಿರುದ್ಧ ಆಡುವಾಗ, ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೆಲವು ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ.

Related Articles

Related image1
ಟಿ20 ವಿಶ್ವಕಪ್: ಶಿವಂ ದುಬೆ ಮಹಾ ಎಡವಟ್ಟು, ಗೆದ್ದರೂ ಭಾರತಕ್ಕೆ ನೆಮ್ಮದಿಯಿಲ್ಲ!
Related image2
ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡಿಯೋದೇ ಡೌಟ್! ಪಾಕ್ ಸೋಲಿನಿಂದ ತಲೆಕೆಳಗಾದ ಲೆಕ್ಕಾಚಾರ
35
ದುಬೆಗೆ ರೆಸ್ಟ್, ಕುಲ್ದೀಪ್ ಯಾದವ್
Image Credit : AFP

ದುಬೆಗೆ ರೆಸ್ಟ್, ಕುಲ್ದೀಪ್ ಯಾದವ್

ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ತಲೆನೋವಾಗಿರೋದು ಆರನೇ ಬೌಲರ್‌ನ ಪ್ರದರ್ಶನ. ಕಳೆದ ಮೂರು ಮ್ಯಾಚ್‌ಗಳಲ್ಲಿ ಆರನೇ ಬೌಲರ್ ಆಗಿ ಆಡಿದ್ದ ಶಿವಂ ದುಬೆ ಸಿಕ್ಕಾಪಟ್ಟೆ ರನ್ ಬಿಟ್ಟುಕೊಟ್ಟಿದ್ದರು. ವೆಸ್ಟ್ ಇಂಡೀಸ್‌ನ ಪವರ್‌ಫುಲ್ ಬ್ಯಾಟಿಂಗ್ ಲೈನ್-ಅಪ್ ಮುಂದೆ ದುಬೆಗೆ ಬೌಲಿಂಗ್ ಕೊಟ್ಟರೆ ಅದು ದುಬಾರಿಯಾಗುವ ಸಾಧ್ಯತೆ ಹೆಚ್ಚು. ಹೀಗಾಗಿ, ದುಬೆ ಬದಲು ಸ್ಪೆಷಲಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

45
ಏಳನೇ ಕ್ರಮಾಂಕ ಸಸ್ಪೆನ್ಸ್
Image Credit : ANI

ಏಳನೇ ಕ್ರಮಾಂಕ ಸಸ್ಪೆನ್ಸ್

ಈಡನ್ ಗಾರ್ಡನ್ಸ್ ಪಿಚ್‌ನಲ್ಲಿ ಕುಲದೀಪ್ ಅವರ ಸ್ಪಿನ್ ಭಾರತಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಅಂತ ನಿರೀಕ್ಷಿಸಲಾಗಿದೆ. ಆದರೆ, ದುಬೆ ಬದಲು ಕುಲದೀಪ್ ಬಂದರೆ ತಂಡದ ಬ್ಯಾಟಿಂಗ್ ಬಲ ಸ್ವಲ್ಪ ಕಡಿಮೆ ಆಗುತ್ತೆ. ಏಳನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಆಡುತ್ತಾರೆ, ಅವರ ನಂತರ ಬ್ಯಾಟಿಂಗ್ ಲೈನ್-ಅಪ್ ದುರ್ಬಲವಾಗುತ್ತೆ. ಈ ಕಾರಣಕ್ಕೆ, ದುಬೆ ಬದಲು ವಾಷಿಂಗ್ಟನ್ ಸುಂದರ್‌ಗೆ ಚಾನ್ಸ್ ಕೊಡ್ತಾರಾ ಅಂತಾನೂ ಫ್ಯಾನ್ಸ್ ಕಾಯ್ತಿದ್ದಾರೆ.

55
ಬ್ಯಾಟಿಂಗ್ ಬಲ
Image Credit : ANI

ಬ್ಯಾಟಿಂಗ್ ಬಲ

ಬ್ಯಾಟಿಂಗ್ ವಿಚಾರಕ್ಕೆ ಬಂದರೆ, ಜಿಂಬಾಬ್ವೆ ವಿರುದ್ಧ ಮಾಡಿದ ಬದಲಾವಣೆಗಳು ಭಾರತಕ್ಕೆ ಲಾಭ ತಂದುಕೊಟ್ಟಿದ್ದವು. ಹೀಗಾಗಿ, ವಿಂಡೀಸ್ ವಿರುದ್ಧವೂ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಜೋಡಿಯೇ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬಂದರೆ, ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನದಲ್ಲಿ ಆಡಲಿದ್ದಾರೆ. ನಂತರ ಹಾರ್ದಿಕ್ ಪಾಂಡ್ಯ ಮತ್ತು ತಿಲಕ್ ವರ್ಮಾ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಗ್ರೂಪ್ 1ರಿಂದ ದಕ್ಷಿಣ ಆಫ್ರಿಕಾ ಮತ್ತು ಗ್ರೂಪ್ 2ರಿಂದ ಇಂಗ್ಲೆಂಡ್ ಸೆಮಿಫೈನಲ್ ತಲುಪಿವೆ. ನಾಳಿನ ಪಂದ್ಯ ಗೆದ್ದರೆ ಭಾರತಕ್ಕೂ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಬ್ಯಾಟಿಂಗ್‌ಗೆ ಸ್ವರ್ಗವಾಗಿರುವ ಕೋಲ್ಕತ್ತಾ ಪಿಚ್‌ನಲ್ಲಿ ಅಭಿಮಾನಿಗಳು ಭರ್ಜರಿ ರನ್ ಮಳೆ ನಿರೀಕ್ಷಿಸಬಹುದು.

ಬ್ಯಾಟಿಂಗ್ ಬಲ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಟೀಮ್ ಇಂಡಿಯಾ
ಕ್ರಿಕೆಟ್
ವಿಶ್ವಕಪ್

Latest Videos
Recommended Stories
Recommended image1
ವನೀಝಾ ಜೊತೆ 4ನೇ ಮದುವೆಗೆ ಸಜ್ಜಾದ್ರಾ ಸಾನಿಯಾ ಮಿರ್ಜಾ ಮಾಜಿ ಪತಿ ಮಲ್ಲಿಕ್? ಯಾರೀಕೆ?
Recommended image2
ಭ್ರಮನಿರಸನಗೊಂಡ ಕರ್ನಾಟಕ, ರಣಜಿ ಕಿರೀಟ ಗೆದ್ದು ಭಾರತದ ಹೊಸ ಕ್ರಿಕೆಟ್ ರಾಜನಾದ ಜಮ್ಮು-ಕಾಶ್ಮೀರ!
Recommended image3
ಸ್ಮೃತಿ ಮಂಧನಾ ಜತೆ ಬ್ರೇಕ್‌ಅಪ್; ಪಲಾಶ್ ಮುಚ್ಚಲ್ ಒಳ್ಳೆಯ ವ್ಯಕ್ತಿ ಎಂದ ಬಾಲಿವುಡ್ ನಟಿ!
Related Stories
Recommended image1
ಟಿ20 ವಿಶ್ವಕಪ್: ಶಿವಂ ದುಬೆ ಮಹಾ ಎಡವಟ್ಟು, ಗೆದ್ದರೂ ಭಾರತಕ್ಕೆ ನೆಮ್ಮದಿಯಿಲ್ಲ!
Recommended image2
ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡಿಯೋದೇ ಡೌಟ್! ಪಾಕ್ ಸೋಲಿನಿಂದ ತಲೆಕೆಳಗಾದ ಲೆಕ್ಕಾಚಾರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved