ಬೆಂಗಳೂರಿನಲ್ಲಿ ಆರ್ಸಿಬಿ ವಿಜಯಯಾತ್ರೆ: ಸಮಯ, ಎಲ್ಲಿಂದ-ಎಲ್ಲಿಗೆ? ಇಲ್ಲಿದೆ ಮಾಹಿತಿ
ಇಂದು ಬೆಂಗಳೂರಿನಲ್ಲಿ ಆರ್ಸಿಬಿ ವಿಜಯಯಾತ್ರೆ ನಡೆಯಲಿದೆ. ವಿಜಯಯಾತ್ರೆ ಮಾರ್ಗದ ಮಾಹಿತಿ ಇಲ್ಲಿದೆ.

18ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯಯಾತ್ರೆ ನಡೆಯಲಿದೆ. ಟ್ರೋಫಿ ಜೊತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರು ತಂಡದ ವಿಜಯಯಾತ್ರೆ ನಡೆಯಲಿದೆ. ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಈ ವೇಳೆ ಆರ್ಸಿಬಿ ಅಭಿಮಾನಿಗಳು ಟ್ರೋಫಿಯನ್ನು ಕಣ್ತುಂಬಿಕೊಳ್ಳಬಹುದು.
ಅಹಮ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ದ 6 ರನ್ ಗೆಲುವು ದಾಖಲಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ.
ಆರ್ಸಿಬಿ ಗೆಲುವು ದಾಖಲಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಭಾವುಕರಾಗಿದ್ದರೆ. ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ. ಇತ್ತ ಸಂಭ್ರಮ ಮುಗಿಲು ಮುಟ್ಟಿದೆ. ಇಡೀ ತಂಡ ಭಾವುಕಗೊಂಡಿತ್ತು.
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗು ಬಡಿದು ಕಪ್ ಮುಡುಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.