MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • IPL 2022: ಹರಾಜಿಗೂ ಮುನ್ನ CSK ಈ ನಾಲ್ವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಬಹುದು..!

IPL 2022: ಹರಾಜಿಗೂ ಮುನ್ನ CSK ಈ ನಾಲ್ವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಬಹುದು..!

ಬೆಂಗಳೂರು: ಐಪಿಎಲ್ (IPL) ಇತಿಹಾಸದಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರಿದ ತಂಡವೆಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್‌ (Chennai Super Kings). ಮಹೇಂದ್ರ ಸಿಂಗ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 4 ಬಾರಿ ಐಪಿಎಲ್ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2022ರ ಐಪಿಎಲ್‌ ಟೂರ್ನಿಗೆ ಮತ್ತೆರಡು ಹೊಸ ತಂಡಗಳು ಸೇರ್ಪಡೆಯಾಗಿದ್ದು, 15ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಮೆಗಾ ಹರಾಜು ನಡೆಯಲಿದೆ. ಮೆಗಾ ಹರಾಜಿಗೂ (Mega Auction) ಮುನ್ನ ಈಗಿರುವ 8 ಫ್ರಾಂಚೈಸಿಗಳಿಗೆ ನಾಲ್ವರು ಆಟಗಾರರನ್ನು ರೀಟೈನ್ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಚೆನ್ನೈ ಮೂಲದ ಫ್ರಾಂಚೈಸಿ ಧೋನಿ ಸೇರಿದಂತೆ ಈ ನಾಲ್ವರು ಆಟಗಾರರು ಹರಾಜಿಗೂ ಮುನ್ನ ರೀಟೈನ್ ಮಾಡಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ. ಅಷ್ಟಕ್ಕೂ ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.'

2 Min read
Author : Suvarna News | Asianet News
Published : Nov 06 2021, 06:25 PM IST
Share this Photo Gallery
  • FB
  • TW
  • Linkdin
  • Whatsapp
18

1. ಮಹೇಂದ್ರ ಸಿಂಗ್ ಧೋನಿ:
ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಧಾರಸ್ತಂಭ ಎನಿಸಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಅವರನ್ನು ಸಿಎಸ್‌ಕೆ (CSK) ಫ್ರಾಂಚೈಸಿ ಮೊದಲ ಆಧ್ಯತೆಯ ಮೇರೆಗೆ ತಂಡದಲ್ಲೇ ಉಳಿಸಿಕೊಳ್ಳಲಿದೆ. ಸಿಎಸ್‌ಕೆ ಯಶಸ್ಸಿನ ಹಿಂದೆ ಧೋನಿ ಪಾತ್ರವನ್ನು ಯಾರೂ ಮರೆಯುವಂತಿಲ್ಲ.

(photo source- iplt20.com)

28

ಧೋನಿಗೆ 40 ವರ್ಷವಾಗಿದ್ದರೂ ಸಹಾ ಇಂದಿಗೂ ನಾಯಕನಾಗಿ ಅವರ ತಂತ್ರಗಾರಿಕೆ ಎಂತಹವರಲ್ಲೂ ಬೆರಗು ಹುಟ್ಟಿಸುತ್ತದೆ. ಈಗಾಗಲೇ ಧೋನಿ ಚೆನ್ನೈನಲ್ಲಿ ಸಿಎಸ್‌ಕೆ ಪರ ಕೊನೆಯ ಪಂದ್ಯವನ್ನಾಡಲು ಇಚ್ಛಿಸಿದ್ದು, ಬಹುತೇಕ ಧೋನಿಯನ್ನು ಸಿಎಸ್‌ಕೆ ಫ್ರಾಂಚೈಸಿ ತನ್ನ ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚು.
(photo source- iplt20.com)

38

2. ರವೀಂದ್ರ ಜಡೇಜಾ:
ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಯಾವುದೇ ತಂಡದಲ್ಲಿದ್ದರೂ ಸಹಾ ಅವರೊಬ್ಬ ಸಂಪತ್ತು ಎಂದರೆ ಅತಿಶಯೋಕಿಯಾಗಲಾರದು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಅಬ್ಬರಿಸುವ ಜಡ್ಡುವನ್ನು ಸಿಎಸ್‌ಕೆ ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳುವ ಸಾಧ್ಯೆತೆ ಹೆಚ್ಚು.

48

ಟಿ20 ಕ್ರಿಕೆಟ್‌ಗೆ ಹೇಳಿ ಮಾಡಿಸಿದ ಆಟಗಾರ ಎನಿಸಿರುವ ರವೀಂದ್ರ ಜಡೇಜಾ 200 ಐಪಿಎಲ್ ಹಾಗೂ ಭಾರತ ಪರ 52 ಟಿ20 ಪಂದ್ಯಗಳನ್ನಾಡಿದ್ದಾರೆ. ಪರಿಸ್ಥಿತಿಗನುಗುಣವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡುವುದು ಜಡೇಜಾ ಸ್ಪೆಷಾಲಿಟಿ.

58
सबसे ज्यादा चौके

सबसे ज्यादा चौके

3. ಋತುರಾಜ್ ಗಾಯಕ್ವಾಡ್‌
ಸಿಎಸ್‌ಕೆ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಮೂಲದ ಋತುರಾಜ್ ಗಾಯಕ್ವಾಡ್ (Ruturaj Gaikwad) ಅವರನ್ನು ಸಿಎಸ್‌ಕೆ ಫ್ರಾಂಚೈಸಿ ರೀಟೈನ್ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಆರಂಭಿಕನಾಗಿ ಸಿಎಸ್‌ಕೆ ತಂಡಕ್ಕೆ ಅತ್ಯುತ್ತಮ ಆರಂಭ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು.

68

ಚೆನ್ನೈ ಸೂಪರ್ ಕಿಂಗ್ಸ್‌ ಪರ 2021ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ 16 ಇನಿಂಗ್ಸ್‌ಗಳನ್ನಾಡಿ 45.36ರ ಸರಾಸರಿಯಲ್ಲಿ 635 ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ಗೆಲ್ಲುವಲ್ಲಿ ಗಾಯಕ್ವಾಡ್ ಯಶಸ್ವಿಯಾಗಿದ್ದರು. 
(photo source- iplt20.com)

78

4. ಫಾಫ್ ಡು ಪ್ಲೆಸಿಸ್:
ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ನಾಲ್ಕನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ಫಾಫ್ ಡು ಪ್ಲೆಸಿಸ್‌ (Faf du Plessis) ಪಾತ್ರವನ್ನು ಮರೆಯುವಂತಿಲ್ಲ. ಬಹುತೇಕ ಪಂದ್ಯಗಳಲ್ಲಿ ಗಾಯಕ್ವಾಡ್‌ ಜತೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ಡು ಪ್ಲೆಸಿಸ್ ಯಶಸ್ವಿಯಾಗಿದ್ದಾರೆ. 
 

88

ಟೂರ್ನಿಯುದ್ದಕ್ಕೂ ಗಾಯಕ್ವಾಡ್‌ಗೆ ಸಮಸಾಟಿಯಾಗಿ ಫಾಫ್ ಡು ಪ್ಲೆಸಿಸ್ ರನ್‌ ಗಳಿಸಿದ್ದಾರೆ. ಇನ್ನು ಕೋಲ್ಕತ ನೈಟ್‌ ರೈಡರ್ಸ್ ವಿರುದ್ದದ ಫೈನಲ್ ಪಂದ್ಯದಲ್ಲಿ ಆಕರ್ಷಕ 86 ರನ್‌ ಬಾರಿಸುವ ಮೂಲಕ ತಂಡ 4ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಡು ಪ್ಲೆಸಿಸ್ ಅವರನ್ನು ಸಿಎಸ್‌ಕೆ ಫ್ರಾಂಚೈಸಿ ತನ್ನಲ್ಲೇ ಉಳಿಸಿಕೊಂಡರೆ ಅಚ್ಚರಿ ಪಡುವಂತಿಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಐಪಿಎಲ್
ಚೆನ್ನೈ ಸೂಪರ್ ಕಿಂಗ್ಸ್
ಎಂ.ಎಸ್. ಧೋನಿ
ರವೀಂದ್ರ ಜಡೇಜಾ

Latest Videos
Recommended Stories
Recommended image1
T20 World Cup 2026: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಮ್ಯಾಚ್ ರದ್ದಾದ್ರೆ ಯಾರಿಗೆ ಸಿಗುತ್ತೆ ಫೈನಲ್ ಟಿಕೆಟ್? ಐಸಿಸಿ ನಿಯಮವೇನು?
Recommended image2
ವಾಂಖೆಡೆಯಲ್ಲಿ ಭಾರತ-ಇಂಗ್ಲೆಂಡ್ ಬಿಗ್ ಫೈಟ್! ಹೆಡ್-ಟು-ಹೆಡ್ ರೆಕಾರ್ಡ್ಸ್ ಹೀಗಿದೆ ನೋಡಿ!
Recommended image3
ಭಾರತವನ್ನು ಗೆಲ್ಲಿಸಿದ ಸಂಜು ಸ್ಯಾಮ್ಸನ್ ಮೇಲೆಯೇ ಜನಾಂಗೀಯ ನಿಂದನೆ! ಛೇ ಇದೆಂಥಾ ಅವಮಾನ! ಕಾಂಗ್ರೆಸ್ ದೂರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved