MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಬೆಂಗಳೂರಲ್ಲಿ ಮಳೆ ಎಷ್ಟೇ ಬರಲಿ, RCB vs CSK ಮ್ಯಾಚ್ ನಡೆಯುತ್ತೆ..! ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

ಬೆಂಗಳೂರಲ್ಲಿ ಮಳೆ ಎಷ್ಟೇ ಬರಲಿ, RCB vs CSK ಮ್ಯಾಚ್ ನಡೆಯುತ್ತೆ..! ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹೀಗಿದ್ದೂ ಕ್ರಿಕೆಟ್ ಅಭಿಮಾನಿಗಳಿಗೆ ಆತಂಕ ಬೇಡ. ಮ್ಯಾಚ್ ಖಂಡಿತ ನಡೆಯುತ್ತೆ. ಹೇಗೆ ಅಂತೀರಾ? ಈ ಸ್ಟೋರಿ ನೋಡಿ 

2 Min read
Naveen Kodase
Published : May 17 2024, 05:07 PM IST| Updated : May 17 2024, 06:43 PM IST
Share this Photo Gallery
  • FB
  • TW
  • Linkdin
  • Whatsapp
110

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟದತ್ತ ಧಾವಿಸಿದೆ. ಇದೀಗ ಲೀಗ್ ಹಂತದ ಅತ್ಯಂತ ಮಹತ್ವದ ಪಂದ್ಯದಲ್ಲಿ ಬದ್ದ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ.

210

ಹೌದು, ಮೇ 18ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯವು ಉಭಯ ತಂಡಗಳ ಪಾಲಿಗೆ ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ.

310

ಆರಂಭದಲ್ಲಿ ಸತತ ಸೋಲು ಕಂಡಿದ್ದ ಆರ್‌ಸಿಬಿ ತಂಡವು ಇದೀಗ ಸತತ 5 ಗೆಲುವುಗಳನ್ನು ದಾಖಲಿಸುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇದೀಗ ತವರಿನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಬಗ್ಗುಬಡಿದು ಪ್ಲೇ ಆಫ್‌ಗೇರುವ ಕನಸು ಕಾಣುತ್ತಿದೆ ಫಾಫ್ ಡು ಪ್ಲೆಸಿಸ್ ಪಡೆ.

410

ಇದೆಲ್ಲದರ ನಡುವೆ ಬೆಂಗಳೂರಿನಲ್ಲಿ ಶನಿವಾರ ಪಂದ್ಯ ನಡೆಯುವ ಸಮಯದಲ್ಲೇ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿರುವುದು ಆರ್‌ಸಿಬಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

510

ಒಂದು ವೇಳೆ ಪಂದ್ಯ ನಡೆಯದೇ, ಮಳೆಯಿಂದ ರದ್ದಾದರೇ, ಚೆನ್ನೈ ಹಾಗೂ ಆರ್‌ಸಿಬಿ ತಂಡಗಳು ತಲಾ ಒಂದೊಂದು ಅಂಕ ಹಂಚಿಕೊಳ್ಳಲಿವೆ. ಆಗ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅನಾಯಾಸವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ. ಇದೇ ವೇಳೆ ಬೆಂಗಳೂರು ತಂಡದ ಹೋರಾಟ ಅಂತ್ಯವಾಗಲಿದೆ.

610

17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ಮಳೆಯಿಂದ ರದ್ದಾಗಿವೆ. ಆದರೆ ಕ್ರಿಕೆಟ್ ಅಭಿಮಾನಿಗಳಿಗೆ ಆತಂಕ ಬೇಡ. ಯಾಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಬ್‌ ಏರ್ ಸಿಸ್ಟಂ ಅಳವಡಿಸಲಾಗಿದೆ. ಎಷ್ಟೇ ಮಳೆ ಬಂದರೂ. ಮಳೆ ನಿಂತ ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭಿಸಲು ಸಾಧ್ಯವಾಗುತ್ತದೆ.

710

ಹೌದು, ಸುಮಾರು ಒಂದು ದಶಕದ ಹಿಂದೆಯೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಬ್‌ ಏರ್‌ ಸಿಸ್ಟಂ ಅಳವಡಿಸಿಕೊಂಡಿದೆ. ಇದು ಎಂತಹ ಮಳೆ ಬಂದರೂ, ಮಳೆ ನಿಂತ ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭ ಮಾಡುವಂತ ವಾತಾವರಣ ನಿರ್ಮಿಸಲಿದೆ.

810

ಜಗತ್ತಿನಲ್ಲೇ ಪ್ರಪ್ರಥಮವಾಗಿ ಸಬ್ ಸರ್ಫೇಸ್ ಏರೇಷನ್ ಮತ್ತು ವ್ಯಾಕ್ಯೂಂ ಪವರ್ಡ್‌ ಡ್ರೈನೇಜ್ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಹೆಗ್ಗಳಿಕೆ ಪಡೆದ ರಾಜ್ಯದ ಹೆಮ್ಮೆಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಇನ್ನು ಮುಂದೆ ವರುಣನ ಕಾಟ ಶಾಶ್ವತವಾಗಿ ಮರೆಯಾಗಿದೆ.

910

ಈ ಸಬ್‌ ಏರ್‌ ಸಿಸ್ಟಂನಲ್ಲಿ 200 HP ಮಷೀನ್ ಕೆಲಸ ಮಾಡುತ್ತದೆ. ಇದು ನಿಮಿಷಕ್ಕೆ ಮೈದಾನದಲ್ಲಿರುವ 10,000 ಲೀಟರ್‌ ನೀರನ್ನು ಇಂಗಿಸುವ ಕೆಲಸ ಮಾಡುತ್ತದೆ. ಎಷ್ಟೇ ದೊಡ್ಡ ಮಳೆ ಬಂದು ನಿಂತರೂ ಕೇವಲ 30ರಿಂದ 40 ನಿಮಿಷದೊಳಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆರಂಭಿಸಲು ಸಾಧ್ಯವಾಗಲಿದೆ.

1010

ಉಭಯ ತಂಡಗಳ ಪಾಲಿಗೆ ಡು ಆರ್ ಡೈ ಎನಿಸಿಕೊಂಡಿರುವ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗದಿರಲಿ ಹಾಗೆಯೇ ಈ ಪಂದ್ಯವನ್ನು ಗೆದ್ದು ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವಂತಾಗಲಿ ಎನ್ನುವುದು ಕ್ರಿಕೆಟ್ ಅಭಿಮಾನಿಗಳ ಹಾರೈಕೆಯಾಗಿದೆ

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಬೆಂಗಳೂರು
ಮಳೆ
ಎಂ ಚಿನ್ನಸ್ವಾಮಿ ಕ್ರೀಡಾಂಗಣ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved