MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
BJP Padayatra Ballari
ISRO Bengaluru
NHAI Toll Scam
Karnataka Agriculture
Horoscope Today
Bigg Boss Kannada 13
Reliance Ice Cream Business
September 2nd Daily Horoscope
Chikkamagaluru Gruhajyothi Yojana
PM Dhan Dhaanya Krishi Yojana
Vijayapura Road Development Project
Nepal Flood Compensation
Commercial LPG Cylinder Price
  • Home
  • Sports
  • Cricket
  • ಬಿಸಿಸಿಐ ಹೊಸ ಐಪಿಎಲ್ ರೂಲ್ಸ್‌ನಿಂದ ಧೋನಿ ಸೇರಿ ಈ ನಾಲ್ವರಿಗೆ ಭರ್ಜರಿ ಲಾಭ!

ಬಿಸಿಸಿಐ ಹೊಸ ಐಪಿಎಲ್ ರೂಲ್ಸ್‌ನಿಂದ ಧೋನಿ ಸೇರಿ ಈ ನಾಲ್ವರಿಗೆ ಭರ್ಜರಿ ಲಾಭ!

ಬೆಂಗಳೂರು: ಇತ್ತೀಚೆಗಷ್ಟೇ ಬಿಸಿಸಿಐ ಮುಂಬರುವ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಐಪಿಎಲ್ ರೀಟೈನ್ ರೂಲ್ಸ್ ಪ್ರಕಟಿಸಿದೆ. ಈ ಪೈಕಿ ಐಪಿಎಲ್‌ ಗವರ್ನಿಂಗ್ ಬಾಡಿ ಜಾರಿಗೆ ತಂದ ಒಂದು ರೂಲ್ಸ್, ಧೋನಿ ಸೇರಿದಂತೆ ಈ ನಾಲ್ಕು ಆಟಗಾರರಿಗೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

2 Min read
Author : Naveen Kodase
Published : Oct 01 2024, 05:27 PM IST
Share this Photo Gallery
  • FB
  • TW
  • Linkdin
  • Whatsapp
110

ಮುಂಬರುವ 2025ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ, ಒಂದು ಫ್ರಾಂಚೈಸಿಯು ಗರಿಷ್ಠ 6 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಈ ಪೈಕಿ ಐದು ರೀಟೈನ್ ಹಾಗೂ ಒಂದು ಆರ್‌ಟಿಎಂ ಕಾರ್ಡ್‌ ಬಳಸಲು ಫ್ರಾಂಚೈಸಿಗೆ ಅವಕಾಶ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210

ಇದಷ್ಟೇ ಅಲ್ಲದೇ ಆಟಗಾರರ ಖರೀದಿಗೆ (ಹರಾಜಿಗೂ ಮುನ್ನ ಹಾಗೂ ಹರಾಜಿನಲ್ಲಿ) ಫ್ರಾಂಚೈಸಿಗಳು ಗರಿಷ್ಠ 120 ಕೋಟಿ ರು. ವರೆಗೂ ಖರ್ಚು ಮಾಡಬಹುದಾಗಿದೆ. ಕಳೆದ ಆವೃತ್ತಿಗೆ ಹೋಲಿಸಿದರೆ 20 ಕೋಟಿ ರು. ಹೆಚ್ಚಳ ಮಾಡಲಾಗಿದೆ.

310
IPL Auction

IPL Auction

ಎಲ್ಲಾ 6 ಆಟಗಾರರನ್ನು ಹರಾಜಿಗೆ ಮುನ್ನವೇ ಉಳಿಸಿಕೊಳ್ಳಬಹುದು ಅಥವಾ ರೀಟೈನ್‌ ಹಾಗೂ ಆರ್‌ಟಿಎಂ ಕಾರ್ಡ್‌ ಬಳಕೆ ಮೂಲಕ ಉಳಿಸಿಕೊಳ್ಳಬಹುದು. ಆರ್‌ಟಿಎಂ ಕಾರ್ಡ್‌ಗಳನ್ನು ಬಳಸಿಯೇ ಎಲ್ಲಾ 6 ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆಯನ್ನೂ ಬಿಸಿಸಿಐ ನೀಡಿದೆ.

410

ಇನ್ನು ಇದೆಲ್ಲದರ ಜತೆಗೆ ಯಾವುದೇ ತಂಡ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದರೆ, ಅದರಲ್ಲಿ ಅಂ.ರಾ. ಕ್ರಿಕೆಟ್‌ ಆಡದ ಭಾರತೀಯ ಆಟಗಾರ (ಅನ್‌ಕ್ಯಾಪ್ಡ್‌) ಒಬ್ಬ ಇರಲೇಬೇಕು ಎನ್ನುವ ನಿಯಮ ಪರಿಚಯಿಸಲಾಗಿದೆ.

510

ಇನ್ನು ಅನ್‌ಕ್ಯಾಪ್ಡ್‌ ಆಟಗಾರರ ವಿಚಾರದಲ್ಲೂ ಬಿಸಿಸಿಐ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಬಿಸಿಸಿಐ ತೆಗೆದುಕೊಂಡ ಈ ತೀರ್ಮಾನವು ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ನಾಲ್ವರು ಆಟಗಾರರಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

610
ಏನಿದು ಅನ್‌ಕ್ಯಾಪ್ಡ್‌ ಹೊಸ ರೂಲ್ಸ್‌?

ಏನಿದು ಅನ್‌ಕ್ಯಾಪ್ಡ್‌ ಹೊಸ ರೂಲ್ಸ್‌?

ಒಂದು ವೇಳೆ ಭಾರತೀಯ ಕ್ರಿಕೆಟಿಗನೊಬ್ಬ ಕಳೆದ 5 ವರ್ಷಗಳಿಂದ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳದೇ ಹೋದರೇ ಅಂತಹ ಆಟಗಾರರನ್ನು ಅನ್‌ಕ್ಯಾಪ್ಡ್‌ ಆಟಗಾರ ಎಂದು ಪರಿಗಣಿಸುವ ರೂಲ್ಸ್‌ ಅನ್ನು ಬಿಸಿಸಿಐ ಮತ್ತೊಮ್ಮೆ ಜಾರಿಗೆ ತಂದಿದೆ. ಈ ರೂಲ್ಸ್‌ ಯಾರಿಗೆಲ್ಲಾ ಪ್ರಯೋಜನವಾಗಲಿದೆ ನೋಡೋಣ ಬನ್ನಿ
 

710
1. ಪೀಯೂಸ್ ಚಾವ್ಲಾ:

1. ಪೀಯೂಸ್ ಚಾವ್ಲಾ:

ಅನುಭವಿ ಲೆಗ್‌ಸ್ಪಿನ್ನರ್ ಪೀಯೂಸ್ ಚಾವ್ಲಾ 2012ರಲ್ಲಿ ಟೀಂ ಇಂಡಿಯಾ ಪರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಹೀಗಾಗಿ ಪೀಯೂಸ್ ಚಾವ್ಲಾಗೆ 4 ಕೋಟಿ ರುಪಾಯಿ ನೀಡಿ ಮುಂಬೈ ಇಂಡಿಯನ್ಸ್‌ ತಂಡವು ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ
 

810
2. ಮೋಹಿತ್ ಶರ್ಮಾ:

2. ಮೋಹಿತ್ ಶರ್ಮಾ:

ಅನುಭವಿ ವೇಗಿ ಮೋಹಿತ್ ಶರ್ಮಾ, 2015ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪ್ರತಿನಿಧಿಸಿದ್ದರು. ಹೀಗಾಗಿ ಗುಜರಾತ್ ಟೈಟಾನ್ಸ್‌ ಫ್ರಾಂಚೈಸಿಯು 4 ಕೋಟಿ ರುಪಾಯಿ ನೀಡಿ ಅನ್‌ಕ್ಯಾಪ್ಡ್‌ ರೂಲ್ಸ್‌ನಡಿ ಮೋಹಿತ್‌ರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚು.

910
3. ಸಂದೀಪ್ ಶರ್ಮಾ:

3. ಸಂದೀಪ್ ಶರ್ಮಾ:

ಮಧ್ಯಮ ವೇಗದ ಬೌಲರ್ ಸಂದೀಪ್ ಶರ್ಮಾ 2015ರಲ್ಲಿ ಭಾರತ ಪರ ಕೊನೆಯ ಬಾರಿಗೆ ಟಿ20 ಪಂದ್ಯವನ್ನಾಡಿದ್ದರು. ಅನುಭವಿ ಪವರ್‌ ಪ್ಲೇ ಹಾಗೂ ಡೆತ್ ಓವರ್‌ ಸ್ಪೆಷಲಿಸ್ಟ್ ಆಗಿರುವ ಸಂದೀಪ್ ಶರ್ಮಾ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 4 ಕೋಟಿ ಕೊಟ್ಟು ಅನ್‌ಕ್ಯಾಪ್ಡ್‌ ಆಟಗಾರನಾಗಿ ರೀಟೈನ್ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

1010
4. ಎಂ ಎಸ್ ಧೋನಿ:

4. ಎಂ ಎಸ್ ಧೋನಿ:

ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ ಎಸ್ ಧೋನಿ 2019 ಏಕದಿನ ವಿಶ್ವಕಪ್ ವೇಳೆ ಕೊನೆಯ ಬಾರಿಗೆ ಟೀಂ ಇಂಡಿಯಾ ಪ್ರತಿನಿಧಿಸಿದ್ದರು. ಹೀಗಾಗಿ ಧೋನಿ ಇದೀಗ ಅನ್‌ಕ್ಯಾಪ್ಡ್‌ ಆಟಗಾರನಾಗಲು ಅರ್ಹತೆ ಪಡೆದುಕೊಂಡಿದ್ದಾರೆ. ಮೊಣಕಾಲು ಗಾಯದ ಸಮಸ್ಯೆಯ ಹೊರತಾಗಿಯೂ ಧೋನಿ ಮತ್ತೊಂದು ಬಾರಿ ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಎಂ.ಎಸ್. ಧೋನಿ

Latest Videos
Recommended Stories
Recommended image1
ದುಲೀಪ್ ಟ್ರೋಫಿ ಮೂಲಕ ಬಿಸಿಸಿಐ ಸೆಲೆಕ್ಟರ್ಸ್‌ಗೆ ಮತ್ತೊಂದು ಖಡಕ್ ವಾರ್ನಿಂಗ್ ಕೊಟ್ಟ ಮೊಹಮ್ಮದ್ ಶಮಿ!
Recommended image2
CPL: ​ಕೊಹ್ಲಿ ದಾಖಲೆ ಸರಿಗಟ್ಟಿದ ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್! ಟಿ20 ಕ್ರಿಕೆಟ್‌ನಲ್ಲಿ ಈತನ ಆ ದಾಖಲೆ ಏನು?
Recommended image3
ಆಫ್ಘಾನಿಸ್ತಾನ ಎದುರಿನ ಟಿ20 ಸರಣಿಯಿಂದ 8 ಪ್ರಮುಖ ಆಟಗಾರರು ಔಟ್; ಈ ಸ್ಟಾರ್ ಆಟಗಾರನ ಕ್ರಿಕೆಟ್ ಬದುಕು ಅಂತ್ಯ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved