MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಚೆನ್ನೈ ಸೂಪರ್ ಕಿಂಗ್ಸ್ ಮೇಲೆ ಗಂಭೀರ ಆರೋಪ ಮಾಡಿದ ರವಿಚಂದ್ರನ್ ಅಶ್ವಿನ್! ಮತ್ತೆ ಮೋಸ ಮಾಡಿತಾ ಸಿಎಸ್‌ಕೆ?

ಚೆನ್ನೈ ಸೂಪರ್ ಕಿಂಗ್ಸ್ ಮೇಲೆ ಗಂಭೀರ ಆರೋಪ ಮಾಡಿದ ರವಿಚಂದ್ರನ್ ಅಶ್ವಿನ್! ಮತ್ತೆ ಮೋಸ ಮಾಡಿತಾ ಸಿಎಸ್‌ಕೆ?

ಚೆನ್ನೈ: 18ನೇ ಆವತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಮಾಡಿದ ಒಂದು ಟ್ಯಾಕ್ಟಿಕ್ಸ್ ಕುರಿತಂತೆ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗಂಭೀರ ಆರೋಪ ಮಾಡಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

1 Min read
Author : Naveen Kodase
Published : Aug 18 2025, 12:57 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : ANI

5 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿತ್ತು. ಇದರ ಜತೆಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದು ತನ್ನ ಅಭಿಯಾನ ಮುಗಿಸಿತ್ತು.

28
Image Credit : ipl media

ಇನ್ನು ಮ್ಯಾಚ್‌ ಫಿಕ್ಸಿಂಗ್ ಸಂಬಂಧವಾಗಿ ಎರಡು ವರ್ಷಗಳ ಕಾಲ ಐಪಿಎಲ್‌ನಿಂದ ನಿಷೇಧಕ್ಕೆ ಗುರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್, ಇದೀಗ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲೂ ಮೋಸದಾಟವಾಡಿತಾ ಎನ್ನುವ ಅನುಮಾನ ಶುರುವಾಗಿದೆ. ಇದಕ್ಕೆ ಕಾರಣವಾಗಿದ್ದು ರವಿಚಂದ್ರನ್ ಅಶ್ವಿನ್ ಅವರ ಒಂದು ಹೇಳಿಕೆ

Related Articles

Related image1
ಐಪಿಎಲ್ ಕಾಮೆಂಟ್ರಿ ಪ್ಯಾನಲ್‌ನಿಂದ ಹೊರಬೀಳಲು ಭಾರತದ ಈ ಆಟಗಾರ ಕಾರಣ: ಹೊಸ ಬಾಂಬ್ ಸಿಡಿಸಿದ ಇರ್ಫಾನ್ ಪಠಾಣ್
Related image2
ಐಪಿಎಲ್ ಇತಿಹಾಸದಲ್ಲಿ ನಡೆದ ಟಾಪ್ 10 ಕಾಸ್ಟ್ಲಿ ಟ್ರೇಡಿಂಗ್‌ಗಳಿವು! ಈ ಪಟ್ಟಿಯಲ್ಲಿದೆ ಆರ್‌ಸಿಬಿ!
38
Image Credit : ANI

ದಕ್ಷಿಣ ಆಫ್ರಿಕಾ ಯುವ ಆಟಗಾರ ಡೆವಾಲ್ಡ್‌ ಬ್ರೆವಿಸ್‌ರನ್ನು ಬದಲಿ ಆಟಗಾರನಾಗಿ ಖರೀದಿಸಲು ಸಿಎಸ್‌ಕೆ ನಿಗದಿಗಿಂತ ಹೆಚ್ಚು ಹಣ ನೀಡಿದೆ ಎಂಬ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್‌ ಗಂಭೀರ ಹೇಳಿಕೆ ನೀಡಿದ್ದರು.

48
Image Credit : Getty

ಕಳೆದ ಐಪಿಎಲ್‌ನಲ್ಲಿ ಗುರ್ಜಪ್‌ನೀತ್ ಸಿಂಗ್‌ ಗಾಯಗೊಂಡು ಹೊರಬಿದ್ದಿದ್ದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ₹2.2 ಕೋಟಿ ನೀಡಿ ಡೆವಾಲ್ಡ್ ಬ್ರೆವಿಸ್‌ರನ್ನು ಖರೀದಿಸಿತ್ತು.

58
Image Credit : ANI

ಈ ಬಗ್ಗೆ ಇತ್ತೀಚೆಗೆ ಮಾತನಾಡಿದ್ದ ಅಶ್ವಿನ್‌, ‘ಬ್ರೆವಿಸ್‌ರನ್ನು ಸೇರಿಸಿಕೊಳ್ಳಲು ಕೆಲ ತಂಡಗಳು ಪ್ರಯತ್ನಿಸುತ್ತಿದ್ದವು. ಹೀಗಾಗಿ ಅವರು ಮೂಲಬೆಲೆಗೆ ತಂಡಕ್ಕೆ ಬರಲು ಒಪ್ಪುವುದಿಲ್ಲ. ಅವರ ಏಜೆಂಟ್‌ ಜೊತೆ ಮಾತನಾಡಿ, ಹೆಚ್ಚಿನ ಮೊತ್ತಕ್ಕೆ ಡೀಲ್‌ ಮಾಡಬೇಕಾಗುತ್ತದೆ. ಸಿಎಸ್‌ಕೆ ಕೂಡಾ ಅದೇ ರೀತಿ ಮಾಡಿ ಬ್ರೆವಿಸ್‌ರನ್ನು ತಂಡಕ್ಕೆ ಸೇರಿಸಿಕೊಂಡಿದೆ’ ಎಂದಿದ್ದರು.

68
Image Credit : ANI

ರವಿಚಂದ್ರನ್ ಅಶ್ವಿನ್ ಅವರ ಈ ಹೇಳಿಕೆ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನವನ್ನೇ ಮೂಡಿಸಿತ್ತು.

78
Image Credit : ANI

ಐಪಿಎಲ್‌ ನಿಯಮ ಪ್ರಕಾರ, ಬದಲಿ ಆಟಗಾರನಿಗೆ ಮೂಲ ಆಟಗಾರನಿಗಿಂತ ಹೆಚ್ಚಿನ ಹಣ ಕೊಡುವಂತಿಲ್ಲ. ಇದೀಗ ಅಶ್ವಿನ್ ಅವರ ಮಾತು ಗಮನಿಸಿದ್ರೆ ಸಿಎಸ್‌ಕೆ ಮತ್ತೆ ಮೋಸ ಮಾಡಿತಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

88
Image Credit : X

ಇದೀಗ ರವಿಚಂದ್ರನ್ ಅಶ್ವಿನ್ ಅವರ ಹೇಳಿಕೆಯನ್ನು ಫ್ರಾಂಚೈಸಿಯು ಅಲ್ಲಗಳೆದಿದೆ. ಬ್ರೆವಿಸ್‌ರನ್ನು ನಿಯಮ ಪ್ರಕಾರವೇ ಖರೀದಿಸಲಾಗಿದೆ, ಹೆಚ್ಚುವರಿಯಾಗಿ ಯಾವುದೇ ಹಣ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಚೆನ್ನೈ ಸೂಪರ್ ಕಿಂಗ್ಸ್

Latest Videos
Recommended Stories
Recommended image1
ಇಂದಿನಿಂದ ಅಂಡರ್‌-19 ಏಕದಿನ ವಿಶ್ವಕಪ್‌ ಟೂರ್ನಿ; ವೈಭವ್‌ ಸೂರ್ಯವಂಶಿ ಮೇಲೆ ಇಡೀ ಕ್ರಿಕೆಟ್‌ ಜಗತ್ತಿನ ಕಣ್ಣು!
Recommended image2
ರಾಜ್ಯ ಸರ್ಕಾರ ಒಪ್ಪಿದ್ರೂ ಆರ್‌ಸಿಬಿ ಚಿನ್ನಸ್ವಾಮಿಯಲ್ಲಿ ಅಡೋದು ದೌಟ್! ಕಾರಣ ಏನಿರಬಹುದು?
Recommended image3
ಕೊಹ್ಲಿಗೆ ಗಿಫ್ಟ್ ನೀಡಲು 15 ಲಕ್ಷ ರೂ ಮೌಲ್ಯದ ಚಿನ್ನದ ಐಫೋನ್ ಕವರ್ ತಂದ ಅಭಿಮಾನಿ
Related Stories
Recommended image1
ಐಪಿಎಲ್ ಕಾಮೆಂಟ್ರಿ ಪ್ಯಾನಲ್‌ನಿಂದ ಹೊರಬೀಳಲು ಭಾರತದ ಈ ಆಟಗಾರ ಕಾರಣ: ಹೊಸ ಬಾಂಬ್ ಸಿಡಿಸಿದ ಇರ್ಫಾನ್ ಪಠಾಣ್
Recommended image2
ಐಪಿಎಲ್ ಇತಿಹಾಸದಲ್ಲಿ ನಡೆದ ಟಾಪ್ 10 ಕಾಸ್ಟ್ಲಿ ಟ್ರೇಡಿಂಗ್‌ಗಳಿವು! ಈ ಪಟ್ಟಿಯಲ್ಲಿದೆ ಆರ್‌ಸಿಬಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved