MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ: ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್

ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ: ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್

ನವದೆಹಲಿ: 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಸಿಸಿಐ ಅಂತಿಮ ಡೆಡ್‌ಲೈನ್ ನೀಡಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ

1 Min read
Author : Naveen Kodase
Published : Jan 23 2026, 09:00 AM IST
Share this Photo Gallery
  • FB
  • TW
  • Linkdin
  • Whatsapp
16
ಆರ್‌ಸಿಬಿ ಐಪಿಎಲ್ ಭವಿಷ್ಯ ಸದ್ಯದಲ್ಲೇ ತೀರ್ಮಾನ
Image Credit : X/RCBTweets

ಆರ್‌ಸಿಬಿ ಐಪಿಎಲ್ ಭವಿಷ್ಯ ಸದ್ಯದಲ್ಲೇ ತೀರ್ಮಾನ

2026ರ ಐಪಿಎಲ್‌ನಲ್ಲಿ ತವರು ಮೈದಾನಗಳನ್ನು ಆಯ್ಕೆ ಮಾಡಲು ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳಿಗೆ ಬಿಸಿಸಿಐ ಜ.27ರ ಗಡುವು ನೀಡಿದೆ. ಇದರೊಂದಿಗೆ ಆರ್‌ಸಿಬಿಯು ಬೆಂಗಳೂರಿನಲ್ಲಿ ಆಡಲಿದೆಯೇ ಇಲ್ಲವೇ ಎಂಬುದು 3-4 ದಿನಗಳಲ್ಲೇ ಗೊತ್ತಾಗಬಹುದು.

26
ಐಪಿಎಲ್ ಆಯೋಜಿಸಲು ಕರ್ನಾಟಕ ಸರ್ಕಾರ ಷರತ್ತುಬದ್ದ ಅನುಮತಿ
Image Credit : Getty

ಐಪಿಎಲ್ ಆಯೋಜಿಸಲು ಕರ್ನಾಟಕ ಸರ್ಕಾರ ಷರತ್ತುಬದ್ದ ಅನುಮತಿ

ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ ಬೆಂಗಳೂರಿನಲ್ಲಿ ಆಡುವ ಬಗ್ಗೆ ಆರ್‌ಸಿಬಿ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Related Articles

Related image1
'ಹೌದು ಆರ್‌ಸಿಬಿ ಟೀಮ್‌ ಖರೀದಿಗೆ ದೊಡ್ಡ ಮೊತ್ತದ ಬಿಡ್‌ ಮಾಡಿದ್ದೇನೆ..' ಖಚಿತಪಡಿಸಿದ ಬಿಲಿಯನೇರ್‌!
Related image2
ಚಿನ್ನಸ್ವಾಮಿ ಸ್ಟೇಡಿಯಂಗೆ ಮರಳಲು ಒಪ್ಪುತ್ತಿಲ್ಲ ಆರ್‌ಸಿಬಿ! ತೆರೆಮರೆಯ ಸತ್ಯವೇನು?
36
ಆರ್‌ಸಿಬಿಗೆ ಬಿಸಿಸಿಐ ಡೆಡ್ ಲೈನ್
Image Credit : RCB Instagram

ಆರ್‌ಸಿಬಿಗೆ ಬಿಸಿಸಿಐ ಡೆಡ್ ಲೈನ್

ಈ ನಡುವೆ ಬಿಸಿಸಿಐ, ಆರ್‌ಸಿಬಿಗೆ ಕೆಲ ದಿನಗಳ ಗಡುವು ನೀಡಿದೆ. ಇದರ ಜೊತೆಗೆ, ಪಂದ್ಯಗಳನ್ನು ನಡೆಸಬೇಕಿದ್ದರೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಕರ್ನಾಟಕ ಸರ್ಕಾರದಿಂದ ಯಾವುದೇ ಷರತ್ತುಗಳಿಲ್ಲದ ರೀತಿ ಅನುಮತಿ ಪಡೆಯಬೇಕೆಂದೂ ಸೂಚಿಸಿದೆ.

46
ಚುನಾವಣಾ ಆಯೋಗದ ವೇಳಾಪಟ್ಟಿ ಬೆನ್ನಲ್ಲೇ ಐಪಿಎಲ್ ವೇಳಾಪಟ್ಟಿ
Image Credit : ANI

ಚುನಾವಣಾ ಆಯೋಗದ ವೇಳಾಪಟ್ಟಿ ಬೆನ್ನಲ್ಲೇ ಐಪಿಎಲ್ ವೇಳಾಪಟ್ಟಿ

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು, ‘ಮೂರು ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುವುದನ್ನು ಕಾಯುತ್ತಿದ್ದೇವೆ. ನಂತರ ಐಪಿಎಲ್‌ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ. ರಾಜಸ್ಥಾನ ತನ್ನ ಪಂದ್ಯಗಳನ್ನು ಪುಣೆಯಲ್ಲಿ ಆಯೋಜಿಸುವ ಸಾಧ್ಯತೆಯಿದೆ.

56
ಆರ್‌ಸಿಬಿ- ರಾಜಸ್ಥಾನ ರಾಯಲ್ಸ್‌ಗೆ ಡೆಡ್‌ಲೈನ್
Image Credit : IPL MEDIA

ಆರ್‌ಸಿಬಿ- ರಾಜಸ್ಥಾನ ರಾಯಲ್ಸ್‌ಗೆ ಡೆಡ್‌ಲೈನ್

ಆದರೆ ರಾಜಸ್ಥಾನ ಸರ್ಕಾರ ಆರ್‌ಆರ್‌ನ ಐಪಿಎಲ್ ಪಂದ್ಯಗಳನ್ನು ಜೈಪುರದಲ್ಲಿ ನಡೆಸಲು ಉತ್ಸುಕವಾಗಿದೆ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ರಾಜಸ್ಥಾನ ಮತ್ತು ಆರ್‌ಸಿಬಿ ಎರಡೂ ತಂಡಗಳಿಗೆ ಜ.27ರ ವರೆಗೆ ಸಮಯ ನೀಡಿದ್ದೇವೆ’ ಎಂದು ತಿಳಿಸಿದ್ದಾಗಿ ವರದಿಯಾಗಿದೆ.

66
ಆರ್‌ಸಿಬಿ ಮೇಲೆ ಎಲ್ಲರ ಕಣ್ಣು
Image Credit : Getty

ಆರ್‌ಸಿಬಿ ಮೇಲೆ ಎಲ್ಲರ ಕಣ್ಣು

ಈಗಾಗಲೇ ಕರ್ನಾಟಕ ಸರ್ಕಾರವು ಐಪಿಎಲ್ ಪಂದ್ಯಗಳನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರ ಜತೆಗೆ ಕೆಎಸ್‌ಸಿಎ ಕೂಡಾ ಐಪಿಎಲ್‌ ಆಯೋಜನೆಗೆ ಉತ್ಸುಕವಾಗಿದೆ. ಇದೀಗ ಆರ್‌ಸಿಬಿ ಫ್ರಾಂಚೈಸಿ ಅಂತಿಮ ತೀರ್ಮಾನ ಮಾಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಆರ್‌ಸಿಬಿ

Latest Videos
Recommended Stories
Recommended image1
ಬಾಬರ್‌, ರಿಜ್ವಾನ್‌, ಶಾಹಿನ್‌ ಸೇರಿದಂತೆ 12ಕ್ಕೂ ಅಧಿಕ ಪಾಕ್‌ ಕ್ರಿಕೆಟಿಗರಿಗೆ 100 ಕೋಟಿ ವಂಚಿಸಿ ಎಸ್ಕೇಪ್‌ ಆದ ಉದ್ಯಮಿ!
Recommended image2
'ಹೌದು ಆರ್‌ಸಿಬಿ ಟೀಮ್‌ ಖರೀದಿಗೆ ದೊಡ್ಡ ಮೊತ್ತದ ಬಿಡ್‌ ಮಾಡಿದ್ದೇನೆ..' ಖಚಿತಪಡಿಸಿದ ಬಿಲಿಯನೇರ್‌!
Recommended image3
ಬಾಂಗ್ಲಾದೇಶ ಅಧಿಕೃತವಾಗಿ ಟಿ20 ವಿಶ್ವಕಪ್ ಬಾಯ್ಕಾಟ್! ಭಾರತಕ್ಕೇನು ನಷ್ಟವಿಲ್ಲ
Related Stories
Recommended image1
'ಹೌದು ಆರ್‌ಸಿಬಿ ಟೀಮ್‌ ಖರೀದಿಗೆ ದೊಡ್ಡ ಮೊತ್ತದ ಬಿಡ್‌ ಮಾಡಿದ್ದೇನೆ..' ಖಚಿತಪಡಿಸಿದ ಬಿಲಿಯನೇರ್‌!
Recommended image2
ಚಿನ್ನಸ್ವಾಮಿ ಸ್ಟೇಡಿಯಂಗೆ ಮರಳಲು ಒಪ್ಪುತ್ತಿಲ್ಲ ಆರ್‌ಸಿಬಿ! ತೆರೆಮರೆಯ ಸತ್ಯವೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved