MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!

ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್ ಮಾಡಲು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಬಿಸಿಸಿಐ ಮೇಲೆ ಒತ್ತಡ ಹೇರುತ್ತಿದೆ. 

1 Min read
Author : Naveen Kodase
Published : Jan 07 2026, 12:18 PM IST
Share this Photo Gallery
  • FB
  • TW
  • Linkdin
  • Whatsapp
17
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ
Image Credit : Asianet News

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ

ಕಳೆದ ವರ್ಷದ ಆರ್‌ಸಿಬಿ ಚಾಂಪಿಯನ್ಸ್‌ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಸ್ಪರ್ಧಾತ್ಮಕ ಪಂದ್ಯಗಳು ನಡೆದಿಲ್ಲ.

27
ಬೆಂಗಳೂರಲ್ಲಿ ಐಪಿಎಲ್ ಆಯೋಜಿಸಲು ಕೆಎಸ್‌ಸಿಎ ಹರಸಾಹಸ
Image Credit : venkatesh prasad x

ಬೆಂಗಳೂರಲ್ಲಿ ಐಪಿಎಲ್ ಆಯೋಜಿಸಲು ಕೆಎಸ್‌ಸಿಎ ಹರಸಾಹಸ

ಇನ್ನು ಹೊಸದಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ನೇತೃತ್ವದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶತಾಯಗತಾಯ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ಹರಸಾಹಸ ಮಾಡುತ್ತಿದೆ.

Related Articles

Related image1
IPL 2026: ಆರ್‌ಸಿಬಿ ತಂಡದಲ್ಲಿರುವ 4 ಸ್ಟಾರ್ ವಿದೇಶಿ ಆಟಗಾರರಿವರು! ರೊಮ್ಯಾರಿಯೋ ಶಫರ್ಡ್‌ಗಿಲ್ಲ ಸ್ಥಾನ
Related image2
ಐಪಿಎಲ್ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳ ಆಯೋಜನೆಗೆ ಸಿದ್ಧತೆ ಶುರು
37
ಬಿಸಿಸಿಐ ಮೇಲೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಒತ್ತಡ
Image Credit : Getty

ಬಿಸಿಸಿಐ ಮೇಲೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಒತ್ತಡ

ಹೀಗಿರುವಾಗಲೇ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ನಡೆಯಬೇಕಿರುವ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್‌ ಮಾಡಲು ಬಿಸಿಸಿಐ ಮೇಲೆ ಒತ್ತಡ ಹೇರಿದೆ.

47
ಚಿನ್ನಸ್ವಾಮಿಯಿಂದ ಪುಣೆಗೆ ಮ್ಯಾಚ್ ಶಿಫ್ಟ್ ಮಾಡಲು ಒತ್ತಡ
Image Credit : MCA Social Media

ಚಿನ್ನಸ್ವಾಮಿಯಿಂದ ಪುಣೆಗೆ ಮ್ಯಾಚ್ ಶಿಫ್ಟ್ ಮಾಡಲು ಒತ್ತಡ

ಈ ಕುರಿತಂತೆ ತಮ್ಮ ಅಧಿಕೃತ 'ಎಕ್ಸ್ ಖಾತೆ'ಯಲ್ಲಿ ಪೋಸ್ಟ್ ಮಾಡಿದ್ದು, ಈಗಾಗಲೇ ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಈಗಾಗಲೇ ಪುಣೆ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ನೀಡಿದ್ದು, ಈ ಎರಡು ತಂಡಗಳ ಪೈಕಿ ಒಂದು ತಂಡಕ್ಕೆ ಆತಿಥ್ಯ ವಹಿಸಲು ಪುಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದೆ.

57
ಬಿಸಿಸಿಐ ಗುಣಗಾನ ಮಾಡಿರುವ ಎಂಸಿಎ
Image Credit : our own

ಬಿಸಿಸಿಐ ಗುಣಗಾನ ಮಾಡಿರುವ ಎಂಸಿಎ

ಈಗಾಗಲೇ ಬಿಸಿಸಿಐ, ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಗೆ ಮೊದಲಿನಿಂದಲೂ ಸಪೋರ್ಟ್ ಮಾಡುತ್ತಲೇ ಬಂದಿದ್ದು, ಐಪಿಎಲ್ ಆಯೋಜನೆಗೂ ಬಿಸಿಸಿಐ ಅನುಮತಿ ನೀಡುವ ವಿಶ್ವಾಸವಿದೆ. ಸ್ಟಾರ್ ಪ್ಲೇಯರ್‌ಗಳ ಆತಿಥ್ಯಕ್ಕೆ ಪುಣೆ ಸಜ್ಜಾಗಿದೆ ಎಂದು ಬರೆದುಕೊಂಡಿದೆ.

67
ಬೆಂಗಳೂರಿನಲ್ಲಿ ಐಪಿಎಲ್ ಸಾಧ್ಯವಾಗದಿದ್ರೆ ಪುಣೆಗೆ ಶಿಫ್ಟ್?
Image Credit : Getty

ಬೆಂಗಳೂರಿನಲ್ಲಿ ಐಪಿಎಲ್ ಸಾಧ್ಯವಾಗದಿದ್ರೆ ಪುಣೆಗೆ ಶಿಫ್ಟ್?

ಒಂದು ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯದ ಆಯೋಜನೆ ಸಾಧ್ಯವಾಗದಿದ್ರೆ, ಪುಣೆಯನ್ನು ಆರ್‌ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

77
ಮತ್ತೊಂದು ಟ್ರೋಫಿ ಮೇಲೆ ಆರ್‌ಸಿಬಿ ಕಣ್ಣು
Image Credit : RCB\Instagram

ಮತ್ತೊಂದು ಟ್ರೋಫಿ ಮೇಲೆ ಆರ್‌ಸಿಬಿ ಕಣ್ಣು

2026ನೇ ಸಾಲಿನ ಐಪಿಎಲ್ ಟೂರ್ನಿಗೆ ಮಾರ್ಚ್ 26ರಂದು ಚಾಲನೆ ಸಿಗಲಿದ್ದು, ಫೈನಲ್ ಪಂದ್ಯ ಮೇ 31ಕ್ಕೆ ನಿಗದಿಯಾಗಿದೆ. ಆರ್‌ಸಿಬಿ ತಂಡವು ಮತ್ತೊಮ್ಮೆ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಆರ್‌ಸಿಬಿ
ಮಹಾರಾಷ್ಟ್ರ

Latest Videos
Recommended Stories
Recommended image1
ಐಪಿಎಲ್‌ನಿಂದ ಹೊರಬಿದ್ದ ಮುಸ್ತಾಫಿಜುರ್‌ಗೆ ಒಂದು ರುಪಾಯಿ ಕೂಡ ಸಿಗಲ್ಲ! ಯಾಕೆ ಹೀಗೆ?
Recommended image2
ಬಾಂಗ್ಲಾದೇಶದ ರಿಕ್ವೆಸ್ಟ್‌ ರಿಜೆಕ್ಟ್‌; ಭಾರತದಲ್ಲಿ ಆಡಿ ಇಲ್ಲದಿದ್ದರೇ ಹೊರ ಹೋಗಿ ಐಸಿಸಿ ಖಡಕ್ ವಾರ್ನಿಂಗ್!
Recommended image3
ವಿಶ್ವಕಪ್‌ ಗೆದ್ದ ಭಾರತ ಮಹಿಳಾ ಅಂಧರ ಕ್ರಿಕೆಟ್‌ ತಂಡಕ್ಕೆ 5 ಕೋಟಿ ಬಹುಮಾನ ನೀಡಿದ ನೀತಾ ಅಂಬಾನಿ
Related Stories
Recommended image1
IPL 2026: ಆರ್‌ಸಿಬಿ ತಂಡದಲ್ಲಿರುವ 4 ಸ್ಟಾರ್ ವಿದೇಶಿ ಆಟಗಾರರಿವರು! ರೊಮ್ಯಾರಿಯೋ ಶಫರ್ಡ್‌ಗಿಲ್ಲ ಸ್ಥಾನ
Recommended image2
ಐಪಿಎಲ್ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳ ಆಯೋಜನೆಗೆ ಸಿದ್ಧತೆ ಶುರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved