MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • 'ಹೇಗಾದರೂ ಮಾಡಿ ಪಾಕಿಸ್ತಾನ ಎದುರು ಈತನಿಗೆ ಚಾನ್ಸ್ ಕೊಡಿ': ಇರ್ಫಾನ್ ಪಠಾಣ್ ಹೀಗೆ ಹೇಳಿದ್ದು ಯಾರಿಗೆ?

'ಹೇಗಾದರೂ ಮಾಡಿ ಪಾಕಿಸ್ತಾನ ಎದುರು ಈತನಿಗೆ ಚಾನ್ಸ್ ಕೊಡಿ': ಇರ್ಫಾನ್ ಪಠಾಣ್ ಹೀಗೆ ಹೇಳಿದ್ದು ಯಾರಿಗೆ?

ದುಬೈ: ಏಷ್ಯಾಕಪ್ ಟೂರ್ನಿಯ ಸೂಪರ್-4 ಪಂದ್ಯದಲ್ಲಿಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಈ ಆಟಗಾರನಿಗೆ ಛಾನ್ಸ್ ಕೊಡಿ ಎಂದು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಮನವಿ ಮಾಡಿಕೊಂಡಿದ್ದಾರೆ. 

1 Min read
Author : Naveen Kodase
Published : Sep 21 2025, 05:41 PM IST
Share this Photo Gallery
  • FB
  • TW
  • Linkdin
  • Whatsapp
18
ಇಂದು ಇಂಡೋ ಪಾಕ್ ಫೈಟ್
Image Credit : Getty

ಇಂದು ಇಂಡೋ-ಪಾಕ್ ಫೈಟ್

ಏಷ್ಯಾಕಪ್ ಟೂರ್ನಿಯಲ್ಲಿಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದು 8 ಗಂಟೆಯಿಂದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡಲಿವೆ.

28
ಗ್ರೂಪ್ ಹಂತದಲ್ಲಿ ಭಾರತ ಎದುರು ಪಾಕ್‌ಗೆ ಸೋಲು
Image Credit : ANI

ಗ್ರೂಪ್ ಹಂತದಲ್ಲಿ ಭಾರತ ಎದುರು ಪಾಕ್‌ಗೆ ಸೋಲು

ಈ ಮೊದಲು ಸೆಪ್ಟೆಂಬರ್ 14ರಂದು ಗ್ರೂಪ್ ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲೇ ಮುಖಾಮುಖಿಯಾಗಿದ್ದವು. ಆಗ ಪಾಕಿಸ್ತಾನವನ್ನು ಭಾರತ ಅನಾಯಾಸವಾಗಿ ಸೋಲಿಸಿತ್ತು.

Related Articles

Related image1
ಏಷ್ಯಾಕಪ್ ಆಡುತ್ತಿರುವವರ ಪೈಕಿ ಅತಿಹೆಚ್ಚು ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಹೊಂದಿರುವ ಟಾಪ್ 5 ಆಟಗಾರರಿವರು!
Related image2
ಏಷ್ಯಾಕಪ್ ವಿವಾದ: ಪಾಕಿಸ್ತಾನ ಕ್ರಿಕೆಟ್‌ ವಿರುದ್ಧ ಕ್ರಮಕ್ಕೆ ಮುಂದಾದ ಐಸಿಸಿ!
38
ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ
Image Credit : Getty

ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ

ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಇಂದು ನಡೆಯಲಿರುವ ಪಂದ್ಯವು ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಆದರೆ ಇಂದಿನ ಪಂದ್ಯದಲ್ಲಿ ಭಾರತ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

48
ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದ ಭಾರತ
Image Credit : Getty

ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದ ಭಾರತ

ಒಮಾನ್ ಎದುರು ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ಬುಮ್ರಾ, ವರುಣ್ ಚಕ್ರವರ್ತಿಗೆ ವಿಶ್ರಾಂತಿ ನೀಡಿ, ಹರ್ಷಿತ್ ರಾಣಾ ಹಾಗೂ ಅರ್ಶದೀಪ್‌ ಸಿಂಗ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಇಂದು ಬುಮ್ರಾ ಹಾಗೂ ವರುಣ್ ಚಕ್ರವರ್ತಿ ಕಮ್‌ಬ್ಯಾಕ್ ಮಾಡುವ ಸಾಧ್ಯತೆಯಿದೆ.

58
ಇರ್ಫಾನ್ ಪಠಾಣ್ ವಿಶೇಷ ಮನವಿ
Image Credit : Getty

ಇರ್ಫಾನ್ ಪಠಾಣ್ ವಿಶೇಷ ಮನವಿ

ಇನ್ನು ಇದೆಲ್ಲದರ ನಡುವೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಪಾಕಿಸ್ತಾನ ಎದುರು ಇಂದು ನಡೆಯಲಿರುವ ಪಂದ್ಯದಲ್ಲಿ ಹೇಗಾದರೂ ಮಾಡಿ ಆಡುವ ಹನ್ನೊಂದರ ಬಳಗದಲ್ಲಿ ಅರ್ಶದೀಪ್ ಸಿಂಗ್‌ಗೆ ಸ್ಥಾನ ನೀಡಿ ಎಂದು ಟೀಮ್ ಮ್ಯಾನೇಜ್‌ಮೆಂಟ್ ಬಳಿ ಮನವಿ ಮಾಡಿಕೊಂಡಿದ್ದಾರೆ.

68
ಅರ್ಶದೀಪ್-ಬುಮ್ರಾ ಒಟ್ಟಿಗೆ ಆಡಬೇಕು
Image Credit : Getty

ಅರ್ಶದೀಪ್-ಬುಮ್ರಾ ಒಟ್ಟಿಗೆ ಆಡಬೇಕು

ನಾನು ಏಷ್ಯಾಕಪ್ ಆರಂಭದಿಂದಲೂ ಹೇಳುತ್ತಲೇ ಬಂದಿದ್ದೇನೆ. ಅರ್ಶದೀಪ್ ಸಿಂಗ್ ಅವರನ್ನು ಬುಮ್ರಾ ಜತೆಗೆ ಆಡಿಸಬೇಕು.

78
ಎರಡು ತಜ್ಞ ವೇಗಿಗಳ ಅಗತ್ಯವಿದೆ
Image Credit : Getty

ಎರಡು ತಜ್ಞ ವೇಗಿಗಳ ಅಗತ್ಯವಿದೆ

ಯಾಕೆಂದರೆ ಕೆಲವೊಮ್ಮೆ ಎರಡು ತಜ್ಞ ವೇಗದ ಬೌಲರ್‌ಗಳು ಬಳಸಬೇಕಾದ ಸಂದರ್ಭ ಬಂದು ಬಿಡುತ್ತದೆ. ಚೆಂಡು ಹಿಡಿತಕ್ಕೆ ಸಿಗದಿದ್ದಾಗ ಹಾರ್ದಿಕ್ ಪಾಂಡ್ಯ ಅಥವಾ ಶಿವಂ ದುಬೆ ಅವರಿಂದ ಓವರ್‌ನಲ್ಲಿ ಆರು ಯಾರ್ಕರ್‌ ಬಾಲ್ ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.

88
100 ವಿಕೆಟ್‌ ಕಬಳಿಸಿದ ವೇಗಿ
Image Credit : ANI

100 ವಿಕೆಟ್‌ ಕಬಳಿಸಿದ ವೇಗಿ

ಏಷ್ಯಾಕಪ್ ಟೂರ್ನಿಯಲ್ಲಿ ಓಮಾನ್ ಎದುರು ಕಣಕ್ಕಿಳಿದಿದ್ದ ಅರ್ಶದೀಪ್ ಸಿಂಗ್ ಕೇವಲ ಒಂದು ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಬಿಸಿಸಿಐ
ಪಾಕಿಸ್ತಾನ

Latest Videos
Recommended Stories
Recommended image1
ಮತ್ತೆ ಇಂಡೋ-ಪಾಕ್ ಪಂದ್ಯ, ಐಸಿಸಿ ಟಿ20 ವಿಶ್ವಕಪ್ ಮಹಿಳಾ ಟೂರ್ನಿ ವೇಳಾಪಟ್ಟಿ ಪ್ರಕಟ
Recommended image2
ಅ-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿಗೆ ದುಬಾರಿ ಕಾರು ಗಿಫ್ಟ್ ಕೊಟ್ಟ ಟಾಟಾ
Recommended image3
ಸಚಿನ್ ತೆಂಡೂಲ್ಕರ್‌ಗೆ ಮಾಡಿದ್ದ ಅನ್ಯಾಯ ಒಪ್ಪಿಕೊಂಡ ಅಂಪೈರ್ ಸ್ಟೀವ್ ಬಕ್ನರ್; 22 ವರ್ಷಗಳ ಬಳಿಕ ರಹಸ್ಯ ಬಹಿರಂಗ!
Related Stories
Recommended image1
ಏಷ್ಯಾಕಪ್ ಆಡುತ್ತಿರುವವರ ಪೈಕಿ ಅತಿಹೆಚ್ಚು ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಹೊಂದಿರುವ ಟಾಪ್ 5 ಆಟಗಾರರಿವರು!
Recommended image2
ಏಷ್ಯಾಕಪ್ ವಿವಾದ: ಪಾಕಿಸ್ತಾನ ಕ್ರಿಕೆಟ್‌ ವಿರುದ್ಧ ಕ್ರಮಕ್ಕೆ ಮುಂದಾದ ಐಸಿಸಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved