MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ರೋಹಿತ್ ಶರ್ಮಾ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ರೆ ಟೀಂ ಇಂಡಿಯಾ ಮುಂದಿನ ಕ್ಯಾಪ್ಟನ್ ಯಾರು?

ರೋಹಿತ್ ಶರ್ಮಾ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ರೆ ಟೀಂ ಇಂಡಿಯಾ ಮುಂದಿನ ಕ್ಯಾಪ್ಟನ್ ಯಾರು?

ಬೆಂಗಳೂರು: ದಶಕದ ಬಳಿಕ ಟೀಂ ಇಂಡಿಯಾ ಐಸಿಸಿ ಟ್ರೋಫಿ ಜಯಿಸಲಿದೆ ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ತವರಿನಲ್ಲೇ ಇತ್ತೀಚೆಗಷ್ಟೇ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 6 ವಿಕೆಟ್ ಸೋಲು ಅನುಭವಿಸಿದೆ.  ಮೂಲಕ ವಿಶ್ವಕಪ್ ಗೆಲ್ಲುವ ಕನಸು ನುಚ್ಚುನೂರಾಗಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮುಂದಿನ ನಾಯಕ ಯಾರು ಎನ್ನುವ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡತೊಡಗಿದೆ. ಇಲ್ಲಿದೆ ನೋಡಿ ಟೀಂ ಇಂಡಿಯಾ ಭವಿಷ್ಯದ ನಾಯಕ ಪ್ರಶ್ನೆಗೆ ಮೂರು ಆಯ್ಕೆಗಳು. 

2 Min read
Naveen Kodase
Published : Nov 27 2023, 12:16 PM IST| Updated : Nov 27 2023, 12:26 PM IST
Share this Photo Gallery
  • FB
  • TW
  • Linkdin
  • Whatsapp
19

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತವರಿನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ಫೈನಲ್‌ನಲ್ಲಿ ಆಸೀಸ್‌ಗೆ ಶರಣಾಗುವ ಮೂಲಕ ನಿರಾಸೆ ಅನುಭವಿಸಿದೆ.
 

29

ಇನ್ನು ಮುಂದಿನ ಏಕದಿನ ವಿಶ್ವಕಪ್ ಟೂರ್ನಿಗೆ ತಂಡ ಕಟ್ಟಲು ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಮುಂದಿನ ಏಕದಿನ ವಿಶ್ವಕಪ್ 2027ರಲ್ಲಿ ನಡೆಯಲಿದೆ. ಆಗ ರೋಹಿತ್ ಶರ್ಮಾ ವಯಸ್ಸು 40 ವರ್ಷಗಳಾಗಿರಲಿದೆ.

39

ಹೀಗಾಗಿ ಮುಂದಿನ ವಿಶ್ವಕಪ್ ವರೆಗೂ ರೋಹಿತ್ ಶರ್ಮಾ ಕ್ರಿಕೆಟ್ ಆಡುವುದು ಅನುಮಾನ ಎನಿಸಿದೆ. ಹೀಗಾಗಿ ಒಂದುವೇಳೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದರೆ, ಭಾರತದ ನಾಯಕರಾಗುವುದು ಯಾರು ಎನ್ನುವ ಪ್ರಶ್ನೆಗೆ ಇಲ್ಲಿವೆ ನೋಡಿ ಮೂರು ಆಯ್ಕೆಗಳು.
 

49
1. ಕೆ ಎಲ್ ರಾಹುಲ್:

1. ಕೆ ಎಲ್ ರಾಹುಲ್:

ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ ಸ್ಥಾನ ತುಂಬಬಲ್ಲ ನೆಚ್ಚಿನ ಆಟಗಾರರಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಮೊದಲ ಸ್ಥಾನದಲ್ಲಿ ಮುನ್ನುಗ್ಗುತ್ತಿದ್ದಾರೆ. ರಾಹುಲ್ ಈಗಾಗಲೇ ಹಂಗಾಮಿಯಾಗಿ ಮೂರು ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ.
 

59

ಈಗಾಗಲೇ ಐಪಿಎಲ್‌ನಲ್ಲಿಯೂ ನಾಯಕರಾಗಿ ಮುಂದುವರೆಯುತ್ತಿರುವ ರಾಹುಲ್, ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಬಿದ್ದಾಗ ಕೆ ಎಲ್ ರಾಹುಲ್ ಭಾರತ ತಂಡದ ಉಪನಾಯಕರಾಗಿ ನೇಮಕವಾಗಿದ್ದರು.

69
2. ಹಾರ್ದಿಕ್ ಪಾಂಡ್ಯ:

2. ಹಾರ್ದಿಕ್ ಪಾಂಡ್ಯ:

ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಭಾರತ ಏಕದಿನ ತಂಡದ ನಾಯಕರಾಗುವ ನಿಟ್ಟಿನಲ್ಲಿ ರಾಹುಲ್‌ಗೆ ಪ್ರಬಲ ಸ್ಪರ್ಧಿಯಾಗುವ ಸಾಧ್ಯತೆಯಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಂಡ್ಯ, ಟೀಂ ಇಂಡಿಯಾ ಉಪನಾಯಕರಾಗಿ ಸೈ ಎನಿಸಿಕೊಂಡಿದ್ದರು.
 

79

ಐಪಿಎಲ್‌ನಲ್ಲಿ ಮೊದಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ತಂಡವನ್ನು ನಾಯಕ ಪಟ್ಟಕ್ಕೇರಿಸಿದ್ದ ಪಾಂಡ್ಯ, ಟೀಂ ಇಂಡಿಯಾದ ಭವಿಷ್ಯದ ಸೀಮಿತ ಓವರ್‌ಗಳ ತಂಡದ ನಾಯಕ ಎಂದೇ ಬಿಂಬಿಸಲಾಗುತ್ತಿದೆ. ರೋಹಿತ್ ಸ್ಥಾನಕ್ಕೆ ಪಾಂಡ್ಯ ಬಂದರೂ ಅಚ್ಚರಿಯೇನಿಲ್ಲ.
 

89
3. ಶುಭ್‌ಮನ್ ಗಿಲ್‌:

3. ಶುಭ್‌ಮನ್ ಗಿಲ್‌:

ಟೀಂ ಇಂಡಿಯಾದ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಹೆಸರು ನೋಡಿದ ತಕ್ಷಣ ನಿಮಗೂ ಅಚ್ಚರಿಯಾಗಬಹುದು. ಆದರೆ ಗಿಲ್ ಈಗಾಗಲೇ ಮೂರು ಮಾದರಿಯ ಕ್ರಿಕೆಟ್‌ ತಂಡದಲ್ಲೂ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದು, ಇದೀಗ ಏಕದಿನ ನಾಯಕ ಸ್ಥಾನದ ಮೇಲೆ ಕೂಡಾ ಕಣ್ಣಿಟ್ಟಿದ್ದಾರೆ.
 

99

ಭಾರತ 'ಎ' ತಂಡವನ್ನು ನಾಯಕನಾಗಿ ಮುನ್ನಡೆಸಿದ ಅನುಭವವಿರುವ ಗಿಲ್, ಮುಂದಿನ ನಾಲ್ಕು ವರ್ಷದಲ್ಲಿ ಬರುವ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಗಿಲ್‌ಗೆ ನಾಯಕತ್ವ ಪಟ್ಟ ಕಟ್ಟಿದರು ಅಚ್ಚರಿಯಿಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಹಾರ್ದಿಕ್ ಪಾಂಡ್ಯ
ಕೆ. ಎಲ್. ರಾಹುಲ್
ರೋಹಿತ್ ಶರ್ಮಾ
ಶುಭಮನ್ ಗಿಲ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
Recommended image2
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!
Recommended image3
T20 ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಈ ಟೂರ್ನಿ ಆಡಲು ರೆಡಿಯಾದ ಶುಭ್‌ಮನ್ ಗಿಲ್! ಹೆಗಲಿಗೆ ಮಹತ್ವದ ಜವಾಬ್ದಾರಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved