MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಧೋನಿ-ಯುವಿ ಗೆಳೆತನ ಮುರಿದುಬೀಳಲು ಕಾರಣ ಏನು? ಈ ಇಬ್ಬರ ಸ್ನೇಹಕ್ಕೆ ಹುಳಿ ಹಿಂಡಿದ್ದು ಯಾರು?

ಧೋನಿ-ಯುವಿ ಗೆಳೆತನ ಮುರಿದುಬೀಳಲು ಕಾರಣ ಏನು? ಈ ಇಬ್ಬರ ಸ್ನೇಹಕ್ಕೆ ಹುಳಿ ಹಿಂಡಿದ್ದು ಯಾರು?

ಕ್ರಿಕೆಟ್‌ನಲ್ಲಿ ಜಿಗ್ರಿ ದೋಸ್ತ್ ಆಗಿದ್ದ ಮಹೇಂದ್ರ ಧೋನಿ ಮತ್ತು ಯುವರಾಜ್ ಸಿಂಗ್ ಒಂದು ಹಂತದಲ್ಲಿ ಬೇರೆಯಾದರು. ಇದಕ್ಕೆ ಕಾರಣವೇನೆಂದು ನೋಡೋಣ. 

2 Min read
Naveen Kodase
Published : Sep 20 2024, 06:14 PM IST
Share this Photo Gallery
  • FB
  • TW
  • Linkdin
  • Whatsapp
112

2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ಧೋನಿ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. 2025 ಅಥವಾ 2026 ರ ಐಪಿಎಲ್‌ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಎಂಬ ಮಾಹಿತಿ ಹೊರಬಿದ್ದಿದೆ. 

 

212

ಕ್ರಿಕೆಟ್‌ನಲ್ಲಿ ಉತ್ತುಂಗವನ್ನು ಮುಟ್ಟಿದವರು ಮಹೇಂದ್ರ ಸಿಂಗ್ ಧೋನಿ. ಉದ್ದನೆಯ ಕೂದಲನ್ನು ಇಟ್ಟುಕೊಂಡು ಸಾಮಾನ್ಯ ವಿಕೆಟ್ ಕೀಪರ್ ಆಗಿ ಭಾರತ ತಂಡಕ್ಕೆ ಸೇರಿದರು. ಆರಂಭದಲ್ಲಿ ಕೆಲವು ಪಂದ್ಯಗಳಲ್ಲಿ ಅವಕಾಶ ಸಿಗುತ್ತದೆಯೇ? ಸಿಗುವುದಿಲ್ಲವೇ? ಎಂಬ ಸ್ಥಿತಿಯಲ್ಲಿತ್ತು. ಅದರ ನಂತರ ಅದ್ಭುತವಾಗಿ ಆಟವಾಡಿ ತಾನು ಯಾರು ಎಂದು ಸಾಬೀತುಪಡಿಸಿ ಇಂದು ಜಗತ್ತೇ ಕೊಂಡಾಡುವ ಹೀರೋ ಆಗಿದ್ದಾರೆ.
 

312

ಕ್ರಿಕೆಟ್ ಮೇಲಿನ ಪ್ರೀತಿ, ಬುದ್ಧಿವಂತಿಕೆ, ಡಿಆರ್‌ಎಸ್ ತೆಗೆದುಕೊಳ್ಳುವ ವಿಧಾನ, ಆಟಗಾರರನ್ನು ನಿರ್ವಹಿಸುವ ವಿಧಾನ, ಫೀಲ್ಡಿಂಗ್ ಸೆಟಪ್, ಬೌಲರ್‌ಗಳ ಬದಲಾವಣೆ ಮುಂತಾದ ತನ್ನ ಕ್ರಿಕೆಟ್ ಕೌಶಲ್ಯದ ಮೂಲಕ ಭಾರತ ತಂಡಕ್ಕೆ ಏಕದಿನ ಕ್ರಿಕೆಟ್ ವಿಶ್ವಕಪ್, ಟಿ20 ವಿಶ್ವಕಪ್, ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ಧೋನಿ ಐಪಿಎಲ್‌ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 5 ಬಾರಿ ಟ್ರೋಫಿ ಗೆದ್ದುಕೊಟ್ಟಿದ್ದಾರೆ.

412

ಧೋನಿ ಮೈದಾನದಲ್ಲಿ ಬ್ಯಾಟ್ ಮಾಡಲು ನಿಂತಿದ್ದಾರೆ ಎಂದರೆ ಅವರಿಗೆ ಬೌಲ್ ಮಾಡಲು ಎದುರಾಳಿ ಬೌಲರ್‌ಗಳ ಎದೆಯಲ್ಲಿ ಢವಢವ ಗುಡುತ್ತಿತ್ತು. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲೂ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯನ್ ಲಾರಾ ಅವರನ್ನೇ ಬೆಚ್ಚಿಬೀಳಿಸಿದರು. 

512

ಇದು ಒಂದು ಕಡೆಯಾದರೆ, ಕ್ರಿಕೆಟ್‌ನಲ್ಲಿ ಧೋನಿಯವರ ಆಪ್ತ ಸ್ನೇಹಿತ ಯುವರಾಜ್ ಸಿಂಗ್. ಹಲವು ಪಂದ್ಯಗಳಲ್ಲಿ ಧೋನಿ ಮತ್ತು ಯುವರಾಜ್ ಸಿಂಗ್ ಜೊತೆಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಕಳೆದ 2011 ರ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಫೈನಲ್‌ನಲ್ಲಿ ಯುವಿ ಮತ್ತು ಧೋನಿ ಜೊತೆಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟರು.

612

2008 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಯುವರಾಜ್ ಸಿಂಗ್ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ ಬೈಕ್ ಬಹುಮಾನ ನೀಡಲಾಯಿತು. ಅದರಲ್ಲಿ ಯುವರಾಜ್ ಸಿಂಗ್ ಮತ್ತು ಧೋನಿ ಇಬ್ಬರೂ ಮೈದಾನದಲ್ಲಿ ಸುತ್ತಿದರು. ಧೋನಿ ಆ ಬೈಕ್ ಓಡಿಸಿದರು.

712

ಆ ಮಟ್ಟಿಗೆ ಇಬ್ಬರೂ ಫ್ರೆಂಡ್ಸ್ ಆಗಿದ್ದರು. ಆದರೆ ಕೆಲವು ಕಾರಣಗಳಿಂದ ಅವರಿಬ್ಬರ ನಡುವೆ ಮನಸ್ತಾಪ ಉಂಟಾಯಿತು. ಆಗಿನಿಂದ ಧೋನಿ ಹಾಗೂ ಯುವಿ ನಡುವಿನ ಬಾಂಧವ್ಯ ಅಷ್ಟಕಷ್ಟೇ ಎನ್ನುವಷ್ಟರ ಮಟ್ಟಿಗೆ ಬದಲಾಗಿ ಹೋಯಿತು.

812

2007ರಲ್ಲಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ, ಚೊಚ್ಚಲ ಟಿ20 ವಿಶ್ವಕಪ್ ಟ್ರೋಫಿ ಜಯಿಸಿತ್ತು. ಇದಾದ ಮರು ವರ್ಷವೇ ಅಂದರೆ 2008ರಲ್ಲಿ ಧೋನಿಯನ್ನು ಮೂರು ಮಾದರಿಯ ಭಾರತ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ಪಟ್ಟ ಕಟ್ಟಲಾಯಿತು.

912

ಇದು ಯುವಿ ಹಾಗೂ ಧೋನಿ ನಡುವೆ ಕೊಂಚ ವೈಮನಸ್ಸು ಮೂಡಲು ಕಾರಣವಾಯಿತು ಎಂದು ವರದಿಯಾಗಿವೆ. ಯಾಕೆಂದರೆ ಧೋನಿಗಿಂತ ಮೊದಲು ಯುವರಾಜ್ ಸಿಂಗ್ ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದರು. ಹೀಗಿದ್ದೂ ಯುವಿಯನ್ನು ಬಿಟ್ಟು ಧೋನಿಗೆ ಬಿಸಿಸಿಐ ನಾಯಕ ಪಟ್ಟ ಕಟ್ಟಿತು.

1012

ಇನ್ನು 2014ರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಯುವರಾಜ್ ಸಿಂಗ್, ಮಂದಗತಿಯಲ್ಲಿ ಬ್ಯಾಟಿಂಗ್ ನಡೆಸಿದರು. ಪರಿಣಾಮ ಲಂಕಾ ಎದುರು ಸೋತು ಭಾರತ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

1112

ಇದಾದ ಬಳಿಕ 2015ರ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಯುವರಾಜ್ ಸಿಂಗ್ ಸತತ ಶತಕ ಸಿಡಿಸಿದರೂ, ಅಂತಿಮ 15ರ ಆಟಗಾರರ ಪಟ್ಟಿಯಲ್ಲಿ ಧೋನಿ ನಾಯಕತ್ವದ ಟೀಂ ಇಂಡಿಯಾದಲ್ಲಿ ಯುವಿಗೆ ಸ್ಥಾನ ನೀಡಲಿಲ್ಲ. ಈ ಕಾರಣಕ್ಕಾಗಿಯೇ ಯುವಿ ಹಾಗೂ ಧೋನಿ ನಡುವೆ ಮನಸ್ತಾಪ ಇನ್ನಷ್ಟು ಹೆಚ್ಚಾಯಿತು ಎನ್ನಲಾಗುತ್ತಿದೆ.

1212

ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್, ಅವಕಾಶ ಸಿಕ್ಕಾಗಲೆಲ್ಲಾ ಧೋನಿ ಮೇಲೆ ಕಿಡಿಕಾರುತ್ತಲೇ ಬಂದಿದ್ದಾರೆ. ಆದರೆ ಧೋನಿ ಮಾತ್ರ ಇದುವರೆಗೂ ಯುವಿ ಹಾಗೂ ಯುವಿ ತಂದೆಯ ಟೀಕೆಗಳ ಬಗ್ಗೆ ತುಟಿಪಿಟಿಕ್ ಎಂದಿಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಎಂ.ಎಸ್. ಧೋನಿ
ಯುವರಾಜ್ ಸಿಂಗ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ರೆಡಿ; ಯಾವ ಐಪಿಎಲ್‌ ತಂಡದ ಆಟಗಾರರು ಎಷ್ಟಿದ್ದಾರೆ? ಯಾರದ್ದು ಸಿಂಹಪಾಲು?
Recommended image2
2025 ಭಾರತೀಯ ಕ್ರಿಕೆಟ್ ಪಾಲಿಗೆ ಮುಟ್ಟಿದ್ದೆಲ್ಲಾ ಚಿನ್ನ; ಇಲ್ಲಿವೆ ನೋಡಿ 5 ಅವಿಸ್ಮರಣೀಯ ಕ್ಷಣಗಳು!
Recommended image3
ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್‌ಗಳಿವರು! ಈ ಪಟ್ಟಿಯಲ್ಲಿದ್ದಾರೆ ಏಕೈಕ ಸಕ್ರಿಯ ಅಟಗಾರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved