ಟ್ರೋಫಿ ಗೆಲ್ಲಲು ಕಾಯುತ್ತಿರುವ ಆರ್ಸಿಬಿಗೆ ಹೊಸ ಜೆರ್ಸಿ; ತಂಡದ ಬಗ್ಗೆ ವಿರಾಟ್ ಕೊಹ್ಲಿ ಮಾತು
ಆರ್ಸಿಬಿ ಹೊಸ ಜೆರ್ಸಿಯನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಡುಗಡೆ ಮಾಡಿತು. ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಸಂಗೀತ ಮತ್ತು ನೃತ್ಯ ಪ್ರದರ್ಶನಗಳು ನಡೆದವು, ಮತ್ತು ವಿರಾಟ್ ಕೊಹ್ಲಿ ರಜತ್ ಪಾಟಿದಾರ್ ಅವರನ್ನು ಹೊಗಳಿದರು.

ಕಳೆದ 17 ವರ್ಷಗಳಿಂದಲೂ ಟ್ರೋಫಿ ಗೆಲ್ಲಲು ಕಾಯುತ್ತಿರುವ ಆರ್ಸಿಬಿ ಈ ಬಾರಿ ಐಪಿಎಲ್ನಲ್ಲಿ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲಿದೆ. ಇದರ ಪೂರ್ವಭಾವಿಯಾಗಿ ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಆರ್ಸಿಬಿ ತನ್ನ ಹೊಸ ಜೆರ್ಸಿ ಬಿಡುಗಡೆಗೊಳಿಸಿತು.
ಸಂಜೆ 4 ಗಂಟೆಗೆ ಆರ್ಸಿಬಿ ತಂಡದ ಎಲ್ಲಾ ಆಟಗಾರರು ಅಭ್ಯಾಸ ಆರಂಭಿಸಿದರು. ಬಳಿಕ ಸಂಗೀತ ಕಾರ್ಯಕ್ರಮ ನೆರವೇರಿತು. ಖ್ಯಾತ ಗಾಯಕರಾದ ಅಲೋಕ್, ಸಂಜಿತ್ ಹೆಗ್ಡೆ, ಐಶ್ವರ್ಯಾ ರಂಗರಾಜನ್, ಹನುಮಾನ್ಕೈಂಡ್ ಸೇರಿದಂತೆ ಹಲವರು ಸಂಗೀತ ಪ್ರದರ್ಶನ ನೀಡಿದರು.
ಅಪ್ಪು, ಕನ್ನಡ ಕಲರವ : ಕಾರ್ಯಕ್ರಮದುದ್ದಕ್ಕೂ ಕ್ರೀಡಾಂಗಣದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ, ಹಾಡುಗಳೇ ಮೇಳೈಸಿದವು. ನೃತ್ಯಪಟುಗಳು ಕನ್ನಡದ ಧ್ವಜ ಹಿಡಿದು, ಕನ್ನಡ ಹಾಡು ಹಾಡುತ್ತಾ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು. ಅಪಾರ ಪ್ರಮಾಣದಲ್ಲಿ ನೆರೆದಿದ್ದ ಅಭಿಮಾನಿಗಳು ಆರ್ಸಿಬಿ...ಆರ್ಸಿಬಿ ಘೋಷಣೆ ಕೂಗಿ ತಮ್ಮ ನೆಚ್ಚಿನ ತಂಡವನ್ನು ಹುರಿದುಂಬಿಸಿದರು.
ರಜತ್ ದೀರ್ಘಕಾಲ ನಾಯಕ: ವಿರಾಟ್
ಸಮಾರಂಭದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ‘ರಜತ್ ಪಾಟೀದಾರ್ ಆರ್ಸಿಬಿಯ ದೀರ್ಘ ಕಾಲದ ನಾಯಕ’ ಎಂದರು. ರಜತ್ ಆರ್ಸಿಬಿಯನ್ನು ಮುನ್ನಡೆಸುವ ದೊಡ್ಡ ಹೊಣೆಗಾರಿಕೆ ಪಡೆದಿದ್ದಾರೆ. ಚಾಂಪಿಯನ್ ಎನಿಸಿಕೊಳ್ಳುವ ಎಲ್ಲಾ ಅರ್ಹತೆಗಳೂ ಅವರಲ್ಲಿವೆ ಎಂದರು.
ಈ ವೇಳೆ ರಜತ್ ಕೂಡಾ ಮಾತನಾಡಿದರು. ‘ಕೊಹ್ಲಿ, ಡಿ ವಿಲಿಯರ್ಸ್, ಕ್ರಿಸ್ ಗೇಲ್ರಂತಹ ದಿಗ್ಗಜರು ಆರ್ಸಿಬಿ ಪರ ಆಡಿದ್ದಾರೆ. ಅವರು ಆಡುವುದನ್ನು ನೋಡಿ ಬೆಳೆದಿದ್ದೇನೆ. ಈಗ ಅದೇ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿದ್ದು ದೊಡ್ಡ ಗೌರವ’ ಎಂದು ಹೇಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.