- Home
- Sports
- Cricket
- ಐಪಿಎಲ್ ಮಾತ್ರವಲ್ಲ ಇನ್ನು ಭಾರತದಲ್ಲೇ ಆಸ್ಟ್ರೇಲಿಯಾದ BBL, ಶೀಘ್ರದಲ್ಲೇ ಪ್ರಧಾನಿ ಮೋದಿ ಮಹತ್ವದ ಘೋಷಣೆ
ಐಪಿಎಲ್ ಮಾತ್ರವಲ್ಲ ಇನ್ನು ಭಾರತದಲ್ಲೇ ಆಸ್ಟ್ರೇಲಿಯಾದ BBL, ಶೀಘ್ರದಲ್ಲೇ ಪ್ರಧಾನಿ ಮೋದಿ ಮಹತ್ವದ ಘೋಷಣೆ
ಲೀಗ್ ಕ್ರಿಕೆಟ್ ಟೂರ್ನಿ ಕುರಿತು ಮಹತ್ವದ ಘೋಷಣೆ ಜುಲೈ 8 ರಂದು ಹೊರಬೀಳಲಿದೆ. ವಿಶೇಷ ಅಂದರೆ ಈ ಘೋಷಣೆ ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ. ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಕ್ರಿಕೆಟ್ ಲೀಗ್ ಟೂರ್ನಿ ಭಾರತದಲ್ಲಿ ನಡೆಯಲಿದೆ.

ಭಾರತದಲ್ಲಿ ಬಿಗ್ ಬ್ಯಾಶ್ ಲೀಗ್
ಭಾರತದ ಐಪಿಎಲ್ ಟೂರ್ನಿಯ ವಿಶ್ವದ ಅತ್ಯಂತ ಜನಪ್ರಿಯ ಹಾಗೂ ಪ್ರತಿಷ್ಠಿತ ಕ್ರಿಕೆಟ್ ಲೀಗ್ ಟೂರ್ನಿಯಾಗಿ ಹೊರಹೊಮ್ಮಿದೆ. ಇನ್ನು ಆಯಾ ದೇಶಗಳು ತಮ್ಮ ತಮ್ಮ ಲೀಗ್ ಟೂರ್ನಿ ಆಯೋಜಿಸುತ್ತಿದೆ. ಈ ಪೈಕಿ ಆಸ್ಟ್ರೇಲಿಯಾ ಬಿಗ್ ಬ್ಯಾಶ್ ಲೀಗ್ ಟೂರ್ನಿ ಪ್ರತಿ ವರ್ಷ ನಡೆಯುತ್ತಿದೆ. ವಿಶೇಷ ಅಂದರೆ ಮುಂದಿನ ಭಾರಿ ಬಿಗ್ ಬ್ಯಾಶ್ ಲೀಗ್ ಟೂರ್ನಿಯ ಕೆಲ ಪಂಗ್ಯ ಭಾರತದಲ್ಲಿ ಆಯೋಜನೆಗೊಳ್ಳುತ್ತಿದೆ.
ಮುಂದಿನ ವಾರ ಪ್ರಧಾನಿ ಮೋದಿ ಘೋಷಣೆ
ಜುಲೈ 8 ರಿಂದ 10 ವರೆಗೆ ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯಾ ಪ್ರವಾಸ ಮಾಡುತ್ತಿದ್ದಾರೆ. ಈ ವೇಳೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿದೆ. ಇದೇ ವೇಳೆ ಉಭಯ ರಾಷ್ಟ್ರಗಳ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಗೊಳಿಸಲು ಆಸ್ಟ್ರೇಲಿಯಾದ ಪ್ರತಿಷ್ಠಿತ ಬಿಗ್ ಬ್ಯಾಶ್ ಲೀಗ್ ಟೂರ್ನಿ ಭಾರತದಲ್ಲಿ ಆಯೋಜಿಸುವ ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಲಿದ್ದಾರೆ.
ಚೆನ್ನೈನಲ್ಲಿ ಬಿಬಿಎಲ್ ಉದ್ಘಾಟನಾ ಪಂದ್ಯ
ಚೆನ್ನೈ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯ ನಡೆಯಲಿದೆ. ಡಿಸೆಂಬರ್ 12ರಂದು ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಕುರಿತು ಈಗಾಗಲೇ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹಾಗೂ ಬಿಸಿಸಿಐ ಒಪ್ಪಂದ ಮಾಡಿಕೊಳ್ಳಲಾಗಿದೆ. ತಮಿಳುನಾಡು ಕ್ರಿಕೆಟ್ ಸಂಸ್ಥೆ ಬಿಬಿಎಲ್ ಉದ್ಘಾಟನಾ ಪಂದ್ಯದ ಆತಿಥ್ಯ ವಹಿಸಿದೆ.
ಮೋದಿ ಪ್ರವಾಸದಲ್ಲಿ ಹಲವು ಘೋಷಣೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಬಲವಾದ ಕ್ರಿಕೆಟ್ ಕನೆಕ್ಷನ್ ಇದೆ. ಇದೇ ಕ್ರಿಕೆಟ್ ಮೂಲಕ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಳಿಸಲು ಭಾರತ ಹಾಗೂ ಆಸ್ಟೇಲಿಯಾದ ನಾಯಕರು ಮುಂದಾಗಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಆಸ್ಟ್ರೇಲಿಯಾ ತಿಂಗಳಲ್ಲಿ ಫಿಲ್ ರಿಗ್ಬೈ, ಮಾರ್ಗೆಟ್ ಹಾರ್ಲೆ ಭಾರತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸೆಂಬರ್ನಲ್ಲಿ ಅದ್ಧೂರಿಯಾಗಿ ಟೂರ್ನಿ ನಡೆಯಲಿದೆ.
ಕೆಲ ಪಂದ್ಯಗಳು ಭಾರತದಲ್ಲಿ ಆಯೋಜನೆ
ಭಾರತ ಹಾಗೂ ಆಸ್ಟ್ರೇಲಿಯಾದ ನಡುವಿನ ಒಪ್ಪಂದ ಪ್ರಕಾರ ಬಿಗ್ ಬ್ಯಾಶ್ ಲೀಗ್ ಟೂರ್ನಿಯ ಕೆಲ ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಸದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲ ಕೆಲ ಪಂದ್ಯಗಳು ಮಾತ್ರ ಆಯೋಜಿಸಲಾಗುತ್ತದೆ. ಉದ್ಘಾಟನಾ ಪಂದ್ಯದಲ್ಲಿ ಪರ್ತ್ ಸ್ಕಾರ್ಚರ್ಸ್ ಹಾಗೂ ಮೆಲ್ಬೋರ್ನ್ ರೆನೆಗೇಡ್ಸ್ ಹೋರಾಟ ನಡೆಸಲಿದೆ.
ಪ್ರಯಾಣದ ಸಮಸ್ಯೆ
ಸಿಡ್ನಿಯಿಂದ ನೇರವಾಗಿ ಚೆನ್ನೈಗೆ ವಿಮಾನ ಸೌಲಭ್ಯವಿಲ್ಲ. ಹೀಗಾಗಿ ನವದೆಹಲಿ, ಮುಂಬೈಗೆ ಆಗಮಿಸಿ ಬಳಿಕ ಚೆನ್ನೈಗೆ ಪ್ರಯಾಣ ಬೆಳೆಸಬೇಕು. ಪರಿಣಾಮ ಒಂದೆರೆಡು ಪಂದ್ಯಕ್ಕಾಗಿ ಆಟಗಾರರು ಸರಿಸುಮಾರು 13 ಗಂಟೆಗಳ ಪ್ರಯಾಣ ಮಾಡಬೇಕು. ಇದರಿಂದ ಇನ್ನುಳಿದ ಪಂದ್ಯಗಳ ವೇಳಾಪಟ್ಟಿ ಮೇಲೂ ಹೊಡೆತ ಬೀಳಲಿದೆ. ಈ ಸವಾಲು ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗೆ ತಲೆನೋವಾಗಿ ಪರಿಣಮಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

