MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಯೋಚಿಸಿ ಮಾತಾಡಿ, ಕರ್ಮ ಬಿಡಲ್ಲ: ಬೆನ್‌ ಸ್ಟೋಕ್ಸ್‌ಗೆ ರವಿಚಂದ್ರನ್ ಅಶ್ವಿನ್‌ ಹೀಗಂದಿದ್ದೇಕೆ?

ಯೋಚಿಸಿ ಮಾತಾಡಿ, ಕರ್ಮ ಬಿಡಲ್ಲ: ಬೆನ್‌ ಸ್ಟೋಕ್ಸ್‌ಗೆ ರವಿಚಂದ್ರನ್ ಅಶ್ವಿನ್‌ ಹೀಗಂದಿದ್ದೇಕೆ?

ನವದೆಹಲಿ: ಆಂಡರ್‌ಸನ್-ತೆಂಡುಲ್ಕರ್ ಟೆಸ್ಟ್ ಸರಣಿ ಯಶಸ್ವಿಯಾಗಿ ಮುಕ್ತಾಯವಾದ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್‌ಗೆ ಕರ್ಮ ತಪ್ಪಿದ್ದಲ್ಲ ಎನ್ನುವುದನ್ನು ನೆನಪಿಸಿದ್ದಾರೆ. ಅಶ್ವಿನ್ ಹೀಗಂದಿದ್ದೇಕೆ? ನೋಡೋಣ ಬನ್ನಿ 

1 Min read
Naveen Kodase
Published : Aug 07 2025, 11:30 AM IST
Share this Photo Gallery
  • FB
  • TW
  • Linkdin
  • Whatsapp
17
Image Credit : X

ಆಟಗಾರನೊಬ್ಬ ಗಂಭೀರವಾಗಿ ಗಾಯಗೊಂಡಾಗ ಅವರ ಬದಲು ಮತ್ತೊಬ್ಬನನ್ನು ಆಡಿಸಲು ಐಸಿಸಿ ಅವಕಾಶ ನೀಡಬೇಕು ಎಂಬ ಭಾರತದ ಕೋಚ್‌ ಗೌತಮ್‌ ಗಂಭೀರ್‌ರ ಹೇಳಿಕೆಯನ್ನು ಹಾಸ್ಯಸ್ಪದ ಎಂದಿದ್ದ ಇಂಗ್ಲೆಂಡ್‌ ನಾಯಕ ಬೆನ್‌ ಸ್ಟೋಕ್ಸ್‌ಗೆ ಭಾರತದ ಮಾಜಿ ಸ್ಪಿನ್ನರ್‌ ಆರ್‌.ಅಶ್ವಿನ್‌ ತಿರುಗೇಟು ನೀಡಿದ್ದಾರೆ.

27
Image Credit : Getty

‘ಅಭಿಪ್ರಾಯ ಹೇಳಲು ಎಲ್ಲರಿಗೂ ಅವಕಾಶವಿದೆ. ಆದರೆ ಹಾಸ್ಯಾಸ್ಪದ ಎಂಬ ಪದ ಬಳಕೆ ಗೌರವಯುತವಲ್ಲ. ಮಾತನಾಡುವ ಮೊದಲು ಯೋಚಿಸಿ. ಕರ್ಮ ಯಾರನ್ನೂ ಬಿಡಲ್ಲ’ ಎಂದು ಅಶ್ವಿನ್ ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಾತನಾಡಿದ್ದಾರೆ.

Related Articles

Related image1
ತಮ್ಮ ಮೇಲೆ ಭಜ್ಜಿ ಹೊಟ್ಟೆಕಿಚ್ಚು ಪಟ್ಟಿದ್ರಾ? ಹರ್ಭಜನ್ ಸಿಂಗ್ ಬಗ್ಗೆ ಅಶ್ವಿನ್ ಹೇಳಿದ್ದೇನು?
Related image2
ಬುಮ್ರಾ ಇಲ್ಲದೇ ಇಂಗ್ಲೆಂಡ್‌ನಲ್ಲಿ 2 ಟೆಸ್ಟ್ ಗೆದ್ದ ಭಾರತ: ಅಚ್ಚರಿ ಅಭಿಪ್ರಾಯ ವ್ಯಕ್ತಪಡಿಸಿದ ಸಚಿನ್ ತೆಂಡುಲ್ಕರ್
37
Image Credit : Getty

ಸರಣಿಯ ಕೊನೆ ಪಂದ್ಯದಲ್ಲಿ ಕ್ರಿಸ್‌ ವೋಕ್ಸ್‌ ಗಾಯಗೊಂಡಿದ್ದರಿಂದ ಇಂಗ್ಲೆಂಡ್‌ಗೆ ಭಾರೀ ನಷ್ಟ ಎದುರಾಯಿತು. ಆಟಗಾರರನ್ನು ಬದಲಿಸಲು ಅವಕಾಶವಿದ್ದಿದ್ದರೆ ಇಂಗ್ಲೆಂಡ್‌ಗೆ ಹಿನ್ನಡೆ ಆಗುತ್ತಿರಲಿಲ್ಲ ಎಂದು ಅಶ್ವಿನ್‌ ಹೇಳಿದ್ದಾರೆ.

47
Image Credit : Getty

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದ ಮೊದಲ ದಿನವೇ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಬ್ಯಾಟಿಂಗ್‌ನಲ್ಲಿ ವೋಕ್ಸ್‌ ಬೌಲಿಂಗ್‌ನಲ್ಲಿ ರಿವರ್ಸ್‌ ಸ್ವೀಪ್ ಮಾಡುವ ವೇಳೆಯಲ್ಲಿ ಕಾಲ್ಬೆರಳಿನ ಗಾಯಕ್ಕೆ ಒಳಗಾಗಿದ್ದರು.

57
Image Credit : Getty

ಇದರ ಬೆನ್ನಲ್ಲೇ ಮಾತನಾಡಿದ್ದ ಟೀಂ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್, ಈ ರೀತಿಯಲ್ಲಿ ಆಟಗಾರರು ಗಾಯಗೊಂಡ ಸಂದರ್ಭದಲ್ಲಿ ಸಬ್‌ಸ್ಟಿಟ್ಯೀಷನ್ಸ್ ಅಗತ್ಯವಿದೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಇಂಗ್ಲೆಂಡ್ ನಾಯಕ ಗಂಭೀರ್ ಮಾತು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದರು.

67
Image Credit : Getty

ಆದರೆ ಓವಲ್‌ನಲ್ಲಿ ನಡೆದ ಕೊನೆಯ ಟೆಸ್ಟ್‌ನಲ್ಲಿ ಕ್ರಿಸ್ ವೋಕ್ಸ್ ಕ್ಷೇತ್ರರಕ್ಷಣೆ ಮಾಡುವ ವೇಳೆ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿದಿರಲಿಲ್ಲ.

77
Image Credit : Getty

ಇನ್ನು ಇಂಗ್ಲೆಂಡ್ ತನ್ನ ಕೊನೆಯ ಇನಿಂಗ್ಸ್‌ನಲ್ಲಿ ಕ್ರಿಸ್ ವೋಕ್ಸ್ ಭುಜದ ನೋವಿನ ಹೊರತಾಗಿಯೂ ಕೊನೆಯವರಾಗಿ ಬೆಲ್ಟ್ ಕಟ್ಟಿಕೊಂಡು ಒಂಟಿ ಕೈನಲ್ಲಿ ಮೈದಾನಕ್ಕಿಳಿದರು. ಹೀಗಿದ್ದೂ ಇಂಗ್ಲೆಂಡ್ ಎದುರು ಭಾರತ 6 ರನ್ ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಇಂಗ್ಲೆಂಡ್ ಕ್ರಿಕೆಟ್
ಟೆಸ್ಟ್ ಕ್ರಿಕೆಟ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved