MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ದ್ರಾವಿಡ್‌ರನ್ನು ಕೇವಲ ಒಂದೇ ಸೀಸನ್ ಬಳಿಕ ರಾಜಸ್ಥಾನ ರಾಯಲ್ಸ್ ತಲೆದಂಡ ಮಾಡಿದ್ದೇಕೆ? ಕೊನೆಗೂ ಬಯಲಾಯ್ತು ತೆರೆ ಹಿಂದಿನ ಸತ್ಯ

ದ್ರಾವಿಡ್‌ರನ್ನು ಕೇವಲ ಒಂದೇ ಸೀಸನ್ ಬಳಿಕ ರಾಜಸ್ಥಾನ ರಾಯಲ್ಸ್ ತಲೆದಂಡ ಮಾಡಿದ್ದೇಕೆ? ಕೊನೆಗೂ ಬಯಲಾಯ್ತು ತೆರೆ ಹಿಂದಿನ ಸತ್ಯ

ಬೆಂಗಳೂರು: ರಾಜಸ್ಥಾನ ರಾಯಲ್ಸ್ ತಂಡದ ಹೆಡ್‌ಕೋಚ್ ರಾಹುಲ್ ದ್ರಾವಿಡ್ ತಮ್ಮ ಸ್ಥಾನಕ್ಕೆ ದಿಢೀರ್ ಎನ್ನುವಂತೆ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟಕ್ಕೂ ದ್ರಾವಿಡ್ ಕೇವಲ ಒಂದೇ ಸೀಸನ್ ಹೆಡ್‌ಕೋಚ್ ಬಳಿಕ ರಾಜೀನಾಮೆ ನೀಡಿದ್ದೇಕೆ? ತೆರೆಮರೆಯ ಸತ್ಯ ಏನು ನೋಡೋಣ ಬನ್ನಿ.

1 Min read
Author : Naveen Kodase
Published : Aug 31 2025, 04:13 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : X/BCCI

2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಮರು ವರ್ಷದಲ್ಲೇ ದ್ರಾವಿಡ್‌ಗೆ ನಿರಾಸೆ ಕೂಡಾ ಎದುರಾಯಿತು.

28
Image Credit : Asianet News

ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಮರು ವರ್ಷವೇ ರಾಹುಲ್ ದ್ರಾವಿಡ್, ರಾಜಸ್ಥಾನ ರಾಯಲ್ಸ್ ತಂಡದ ಹೆಡ್‌ಕೋಚ್ ಆಗಿ ನೇಮಕವಾದರು.

Related Articles

Related image1
ಐಪಿಎಲ್ ಟೂರ್ನಿಗೆ ವಿದಾಯ ಹೇಳಿದ ಆರ್ ಆಶ್ವಿನ್, ಟ್ರೇಡ್ ಮಾತುಕತೆ ನಡುವೆ ಶಾಕ್
Related image2
ದ್ರಾವಿಡ್ ರಾಜಸ್ಥಾನ ರಾಯಲ್ಸ್‌ನಿಂದ ಹೊರಬೀಳಲು ಸಂಜು ಸ್ಯಾಮ್ಸನ್ ಕಾರಣ? ಇಂಟ್ರೆಸ್ಟಿಂಗ್ ಡೀಟೈಲ್ಸ್
38
Image Credit : ANI

ಆದರೆ ದ್ರಾವಿಡ್ ಮಾರ್ಗದರ್ಶನದಲ್ಲಿ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು 14 ಪಂದ್ಯಗಳನ್ನಾಡಿ 10 ಸೋಲು 4 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದು ತನ್ನ ಅಭಿಯಾನ ಮುಗಿಸಿ ನಿರಾಸೆ ಅನುಭವಿಸಿತ್ತು.

48
Image Credit : ANI

ಇದೀಗ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 2026ರ ಐಪಿಎಲ್ ಟೂರ್ನಿಗೆ ಸಿದ್ದತೆ ಆರಂಭಿಸಿರುವ ಬೆನ್ನಲ್ಲೇ, ರಾಹುಲ್ ದ್ರಾವಿಡ್ ಅಚ್ಚರಿಯ ರೀತಿಯಲ್ಲಿ ತಮ್ಮ ಹೆಡ್‌ಕೋಚ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

58
Image Credit : Twitter

ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಹಾಗೂ ರಾಹುಲ್ ದ್ರಾವಿಡ್ ನಡುವೆ ಮನಸ್ತಾಪ ಏರ್ಪಟ್ಟಿದೆ ಎನ್ನುವಂತಹ ಮಾತುಗಳು ಕೇಳಿಬಂದಿದ್ದವು. ಆದರೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಒಂದು ಪೋಸ್ಟ್ ಎಲ್ಲಾ ಗಾಳಿಸುದ್ದಿಗಳಿಗೆ ತೆರೆ ಎಳೆದಿದೆ.

68
Image Credit : Twitter/Rajasthan Royals

ಹೌದು, ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು, ದ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್‌ಗೆ ಒಂದು ದೊಡ್ಡ ಪೋಸ್ಟ್ ನೀಡುವ ಆಫರ್ ಕೊಟ್ಟಿತ್ತು. ಆದರೆ ದ್ರಾವಿಡ್ ಆ ಆಫರ್ ಅನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

78
Image Credit : google

ಕಳೆದ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಕಾಲು ನೋವಿನ ಸಮಸ್ಯೆಯ ಹೊರತಾಗಿಯೂ ದ್ರಾವಿಡ್ ವೀಲ್ ಚೇರ್‌ನಲ್ಲಿ ಕುಳಿತುಕೊಂಡು ಆಟಗಾರರಿಗೆ ಕೋಚಿಂಗ್ ಮಾಡಿದ್ದರು. ಹೀಗಿದ್ದೂ ಇದೀಗ ದ್ರಾವಿಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ

88
Image Credit : Rajasthan Royals Twitter

ಇನ್ನು ಸಂಜು ಸ್ಯಾಮ್ಸನ್ ಕೂಡಾ ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಕಳೆದ ಬಾರಿ ಟೀಂ ಮ್ಯಾನೇಜ್‌ಮೆಂಟ್ ಜೋಸ್ ಬಟ್ಲರ್ ಅವರನ್ನು ರಿಲೀಸ್ ಮಾಡಿದ್ದು ಕ್ಯಾಪ್ಟನ್ ಸ್ಯಾಮ್ಸನ್ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ರಾಜಸ್ಥಾನ್ ರಾಯಲ್ಸ್
ಸಂಜು ಸ್ಯಾಮ್ಸನ್

Latest Videos
Recommended Stories
Recommended image1
ಅಂಡರ್ 19 ವಿಶ್ವಕಪ್ ಆಡಿ ಸೂಪರ್ ಸ್ಟಾರ್‌ಗಳಾದ ಟಾಪ್-7 ಆಟಗಾರರಿವರು!
Recommended image2
ಆಟಗಾರರಿಂದ ಪಂದ್ಯ ಬಹಿಷ್ಕಾರ, ಟಾಸ್‌ಗೆ ಬಂದಿದ್ದು ಮ್ಯಾಚ್ ರೆಫರಿ ಮಾತ್ರ! ಬಾಂಗ್ಲಾ ಕ್ರಿಕೆಟ್‌ನಲ್ಲಿ ಇದೆಂಥಾ ಅವಸ್ಥೆ?
Recommended image3
ವಿಜಯ್ ಹಜಾರೆ ಸೆಮಿಫೈನಲ್: ಒಂದಂಕಿ ಮೊತ್ತಕ್ಕೆ ಮಯಾಂಕ್, ಪಡಿಕ್ಕಲ್ ಔಟ್; ಮತ್ತೆ ಕರ್ನಾಟಕಕ್ಕೆ ಆಸರೆಯಾದ ಅನುಭವಿ ಕ್ರಿಕೆಟಿಗ!
Related Stories
Recommended image1
ಐಪಿಎಲ್ ಟೂರ್ನಿಗೆ ವಿದಾಯ ಹೇಳಿದ ಆರ್ ಆಶ್ವಿನ್, ಟ್ರೇಡ್ ಮಾತುಕತೆ ನಡುವೆ ಶಾಕ್
Recommended image2
ದ್ರಾವಿಡ್ ರಾಜಸ್ಥಾನ ರಾಯಲ್ಸ್‌ನಿಂದ ಹೊರಬೀಳಲು ಸಂಜು ಸ್ಯಾಮ್ಸನ್ ಕಾರಣ? ಇಂಟ್ರೆಸ್ಟಿಂಗ್ ಡೀಟೈಲ್ಸ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved