MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ

ಬೆಂಗಳೂರು: ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳು ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆ ಕಡೆ ಶಿಫ್ಟ್ ಆಗಲಿದೆ ಎನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ, ಆರ್‌ಸಿಬಿ ಫ್ರಾಂಚೈಸಿಯು ಇದೀಗ ಅಧಿಕೃತ ಅಪ್‌ಡೇಟ್ಸ್ ನೀಡಿದೆ. 

2 Min read
Author : Naveen Kodase
Published : Jan 16 2026, 04:13 PM IST
Share this Photo Gallery
  • FB
  • TW
  • Linkdin
  • Whatsapp
19
ಎಲ್ಲರ ಚಿತ್ತ ಆರ್‌ಸಿಬಿ ಮೇಲೆ
Image Credit : Getty

ಎಲ್ಲರ ಚಿತ್ತ ಆರ್‌ಸಿಬಿ ಮೇಲೆ

2026ರ ಐಪಿಎಲ್ ಟೂರ್ನಿ ಅರಂಭಕ್ಕೂ ಮುನ್ನ ಎಲ್ಲಾ ಅಭಿಮಾನಿಗಳ ಚಿತ್ತ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲಿದೆ. ಯಾಕೆಂದರೆ ಆರ್‌ಸಿಬಿ ತಂಡವು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಡಲು ಒಲವು ತೋರುತ್ತಿಲ್ಲ ಎಂದೆಲ್ಲಾ ವರದಿಯಾಗಿತ್ತು.

29
ಕಾಲ್ತುಳಿತದಲ್ಲಿ 11 ಮಂದಿ ಸಾವು
Image Credit : Google

ಕಾಲ್ತುಳಿತದಲ್ಲಿ 11 ಮಂದಿ ಸಾವು

ಕಳೆದ ಜೂನ್ 04ರಂದು ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಪಂದ್ಯಗಳು ನಡೆದಿಲ್ಲ.

Related Articles

Related image1
IPL 2026: RCB ಹೋಮ್‌ ಗ್ರೌಂಡ್‌ ಕುರಿತಾದ ಮಹತ್ವದ ಅಪ್‌ಡೇಟ್ಸ್‌; ಪುಣೆಯಲ್ಲ, ಈ 2 ಸ್ಟೇಡಿಯಂನಲ್ಲೇ ನಡೆಯುತ್ತೆ ಬೆಂಗಳೂರು ಮ್ಯಾಚ್!
Related image2
ರಾಜ್ಯ ಸರ್ಕಾರ ಒಪ್ಪಿದ್ರೂ ಆರ್‌ಸಿಬಿ ಚಿನ್ನಸ್ವಾಮಿಯಲ್ಲಿ ಅಡೋದು ದೌಟ್! ಕಾರಣ ಏನಿರಬಹುದು?
39
ಆರ್‌ಸಿಬಿ ಬೆಂಗಳೂರಲ್ಲಿ ಆಡಲು ಮನಸ್ಸು ಮಾಡುತ್ತಿಲ್ಲ ಎಂದು ವರದಿಯಾಗಿತ್ತು
Image Credit : RCB\Instagram

ಆರ್‌ಸಿಬಿ ಬೆಂಗಳೂರಲ್ಲಿ ಆಡಲು ಮನಸ್ಸು ಮಾಡುತ್ತಿಲ್ಲ ಎಂದು ವರದಿಯಾಗಿತ್ತು

ಒಂದು ವೇಳೆ ಕರ್ನಾಟಕ ರಾಜ್ಯ ಸರ್ಕಾರವೇ ಐಪಿಎಲ್ ಆಯೋಜಿಸಲು ಅನುಮತಿ ನೀಡಿದರೂ, ಆರ್‌ಸಿಬಿ ಫ್ರಾಂಚೈಸಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವನ್ನಾಡಲು ಮನಸ್ಸು ಮಾಡಿತ್ತಿಲ್ಲ ಎಂದು ವರದಿಯಾಗಿತ್ತು.

49
ಆರ್‌ಸಿಬಿ ಮ್ಯಾಚ್ ನವಿ ಮುಂಬೈ - ರಾಯ್ಪುರಗೆ ಶಿಫ್ಟ್‌ ಆಗುವ ಬಗ್ಗೆ ಗಾಳಿ ಸುದ್ದಿ
Image Credit : RCB\Instagram

ಆರ್‌ಸಿಬಿ ಮ್ಯಾಚ್ ನವಿ ಮುಂಬೈ - ರಾಯ್ಪುರಗೆ ಶಿಫ್ಟ್‌ ಆಗುವ ಬಗ್ಗೆ ಗಾಳಿ ಸುದ್ದಿ

ಇದೆಲ್ಲದರ ನಡುವೆ ಕೆಲ ದಿನಗಳ ಹಿಂದಷ್ಟೇ ನಡೆದ ಬೆಳವಣಿಗೆಯಲ್ಲಿ ಆರ್‌ಸಿಬಿ ತಂಡವು ನವಿ ಮುಂಬೈನ ಡಿವೈ ಪಾಟೀಲ್‌ ಸ್ಟೇಡಿಯಂನಲ್ಲಿ ಐದು ಹಾಗೂ ರಾಯ್ಪುರದಲ್ಲಿ ಎರಡು ಪಂದ್ಯಗಳನ್ನು ಆಡಲು ರೆಡಿಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದೆಲ್ಲಾ ವರದಿಯಾಗಿತ್ತು.

59
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 300-350 AI ಆಧಾರಿತ ಸಕ್ರಿಯ ಕ್ಯಾಮರಾಗಳನ್ನು ಅಳವಡಿಸುವ ಪ್ರಸ್ತಾವನೆ
Image Credit : Asianet News

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 300-350 AI ಆಧಾರಿತ ಸಕ್ರಿಯ ಕ್ಯಾಮರಾಗಳನ್ನು ಅಳವಡಿಸುವ ಪ್ರಸ್ತಾವನೆ

ಇದೀಗ ಈ ಎಲ್ಲಾ ಸುದ್ದಿಗಳ ನಡುವೆ ಆರ್‌ಸಿಬಿ ಫ್ರಾಂಚೈಸಿಯು ತನ್ನ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಗಳ ಸುರಕ್ಷತೆಯನ್ನು ಸುಧಾರಿಸಲು, ಪ್ರೇಕ್ಷಕರ ನಿರ್ವಹಣೆಯನ್ನು ಹೆಚ್ಚಿಸಲು ಆರ್‌ಸಿಬಿ ಫ್ರಾಂಚೈಸಿಯು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 300ರಿಂದ 350 AI ಆಧಾರಿತ ಸಕ್ರಿಯ ಕ್ಯಾಮರಾಗಳನ್ನು ಅಳವಡಿಸುವ ಪ್ರಸ್ತಾವನೆಯನ್ನು ಕೆಎಸ್‌ಸಿಎ ಮುಂದಿಟ್ಟಿದೆ.

69
ಸ್ಟೇಡಿಯಂನಲ್ಲಿ ಎಐ ಆಧಾರಿತ ಕ್ಯಾಮರ ಅಳವಡಿಸಲು ಚಿಂತನೆ
Image Credit : Asianet News

ಸ್ಟೇಡಿಯಂನಲ್ಲಿ ಎಐ ಆಧಾರಿತ ಕ್ಯಾಮರ ಅಳವಡಿಸಲು ಚಿಂತನೆ

ಆರ್‌ಸಿಬಿ ಪ್ರಕಾರ, ಪ್ರಸ್ತಾವಿತ AI ವ್ಯವಸ್ಥೆಯು, ಕಾಲ್ತುಳಿತದಂತಹ ಹಿಂಸೆ, ಜನಸಂದಣಿ ಮತ್ತು ಅನಧಿಕೃತ ಪ್ರವೇಶದಂತಹ ಘಟನೆಗಳನ್ನು ಪತ್ತೆಹಚ್ಚಲು ಈ ರಿಯಲ್ ಟೈಮ್ ವಿಡಿಯೋ ವಿಶ್ಲೇಷಣೆ ನೀಡಲು ಈ ಎಐ ಆಧಾರಿತ ಕ್ಯಾಮರಗಳು ನೆರವಾಗಲಿವೆ.

79
ಅಭಿಮಾನಿಗಳ ಸುರಕ್ಷತೆಗೆ ಮಾಸ್ಟರ್ ಪ್ಲಾನ್ ಮಾಡಿದ ಆರ್‌ಸಿಬಿ
Image Credit : RCB\Instagram

ಅಭಿಮಾನಿಗಳ ಸುರಕ್ಷತೆಗೆ ಮಾಸ್ಟರ್ ಪ್ಲಾನ್ ಮಾಡಿದ ಆರ್‌ಸಿಬಿ

ಈ ಸುಧಾರಿತ ಕಣ್ಗಾವಲು ಕ್ಯಾಮರ ವ್ಯವಸ್ಥೆಯು ಕೆಎಸ್‌ಸಿಎ ಮತ್ತು ಪೊಲೀಸ್ ಅಧಿಕಾರಿಗಳಿಗೆ ಜನಸಂದಣಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಶಿಸ್ತುಬದ್ದ ಸರತಿ ಸಾಲಿನಲ್ಲಿ ನಿಲ್ಲುವುದನ್ನು ಖಚಿತಪಡಿಸಿಕೊಳ್ಳಲು ಒಟ್ಟಾರೆ ಅಭಿಮಾನಿಗಳ ಸುರಕ್ಷತೆಯನ್ನು ಗಮರ್ನಾಹವಾಗಿ ಹೆಚ್ಚಿಸಲು ನೆರವಾಗಲಿದ ಎಂದು ಆರ್‌ಸಿಬಿ ಫ್ರಾಂಚೈಸಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

89
4.5 ಕೋಟಿ ರುಪಾಯಿ ವೆಚ್ಚದ ಯೋಜನೆಗೆ ಮುಂದಾದ ಆರ್‌ಸಿಬಿ
Image Credit : ANI

4.5 ಕೋಟಿ ರುಪಾಯಿ ವೆಚ್ಚದ ಯೋಜನೆಗೆ ಮುಂದಾದ ಆರ್‌ಸಿಬಿ

'ಸುಮಾರು 4.5 ಕೋಟಿ ರುಪಾಯಿ ವೆಚ್ಚದ ಈ ಯೋಜನೆಯನ್ನು ಆರ್‌ಸಿಬಿ ಕೇರ್ಸ್‌ ಮೂಲಕ ಭರಿಸಲು ಆರ್‌ಸಿಬಿ ಫ್ರಾಂಚೈಸಿಯು ಬದ್ದವಾಗಿರುವುದಾಗಿ ತಿಳಿಸಿದೆ. ಆರ್‌ಸಿಬಿ ಫ್ರಾಂಚೈಸಿಯು ಈಗಾಗಲೇ ಭಾರತದಾದ್ಯಂತ ಹಲವಾರು ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟವಾಗಿ ಕೆಲಸ ಮಾಡಿರುವ ತಂತ್ರಜ್ಞಾನ ಸಂಸ್ಥೆಯಾದ ಸ್ಟಾಕ್ ಜತೆ ಆರ್‌ಸಿಬಿ ಫ್ರಾಂಚೈಸಿಯು ಪಾಲುದಾರಿಕೆ ಹೊಂದಿದೆ.

99
ಬೆಂಗಳೂರಿನಲ್ಲೇ ಆರ್‌ಸಿಬಿ ಮ್ಯಾಚ್?
Image Credit : RCB Instagram

ಬೆಂಗಳೂರಿನಲ್ಲೇ ಆರ್‌ಸಿಬಿ ಮ್ಯಾಚ್?

ಆರ್‌ಸಿಬಿ ತನ್ನ ಹೋಮ್‌ ಗ್ರೌಂಡ್ ಬೇರೆಡೆಗೆ ಶಿಫ್ಟ್ ಮಾಡಲಿದೆ ಎಂದು ಗಾಳಿ ಸುದ್ದಿ ಜೋರಾಗಿರುವ ಬೆನ್ನಲ್ಲೇ ಆರ್‌ಸಿಬಿ ಫ್ರಾಂಚೈಸಿಯ ಈ ನಡೆ, ಪರೋಕ್ಷವಾಗಿ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲೇ ಆಯೋಜಿಸಲು ಆರ್‌ಸಿಬಿ ಫ್ರಾಂಚೈಸಿ ಒಲವು ತೋರಿದಂತೆ ಕಂಡು ಬರುತ್ತಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಆರ್‌ಸಿಬಿ

Latest Videos
Recommended Stories
Recommended image1
ರೋಹಿತ್ ಶರ್ಮಾ ಪದಚ್ಯುತಿ ರಹಸ್ಯ: ಗೌತಮ್ ಗಂಭೀರ್ ಕೈವಾಡದ ಶಂಕೆ ವ್ಯಕ್ತಪಡಿಸಿದ ಮಾಜಿ ಕ್ರಿಕೆಟರ್!
Recommended image2
'ಅವನ ವಿಷಯದಲ್ಲಿ ಮಾತ್ರ ಯಾಕೆ ಈ ತಾರತಮ್ಯ?' ಈ ಆಟಗಾರನನ್ನು ಕೈಬಿಟ್ಟಿದ್ದಕ್ಕೆ ಗಂಭೀರ್ ವಿರುದ್ಧ ಅಶ್ವಿನ್ ಕಿಡಿ!
Recommended image3
ಯಾರು ಈ ಅಂಡರ್-19 ನಾಯಕ ಆಯುಷ್ ಮ್ಹಾತ್ರೆ? ಈತ 18ನೇ ವಯಸ್ಸಿಗೆ ಕೋಟ್ಯಾಧಿಪತಿ!
Related Stories
Recommended image1
IPL 2026: RCB ಹೋಮ್‌ ಗ್ರೌಂಡ್‌ ಕುರಿತಾದ ಮಹತ್ವದ ಅಪ್‌ಡೇಟ್ಸ್‌; ಪುಣೆಯಲ್ಲ, ಈ 2 ಸ್ಟೇಡಿಯಂನಲ್ಲೇ ನಡೆಯುತ್ತೆ ಬೆಂಗಳೂರು ಮ್ಯಾಚ್!
Recommended image2
ರಾಜ್ಯ ಸರ್ಕಾರ ಒಪ್ಪಿದ್ರೂ ಆರ್‌ಸಿಬಿ ಚಿನ್ನಸ್ವಾಮಿಯಲ್ಲಿ ಅಡೋದು ದೌಟ್! ಕಾರಣ ಏನಿರಬಹುದು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved