MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಗುಜರಾತ್ ಎದುರಿನ ಹೈವೋಲ್ಟೇಜ್‌ ಮ್ಯಾಚ್‌ಗೆ ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ? ಕನ್ನಡಿಗನಿಗಿಲ್ಲ ಸ್ಥಾನ!

ಗುಜರಾತ್ ಎದುರಿನ ಹೈವೋಲ್ಟೇಜ್‌ ಮ್ಯಾಚ್‌ಗೆ ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ? ಕನ್ನಡಿಗನಿಗಿಲ್ಲ ಸ್ಥಾನ!

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಆರ್‌ಸಿಬಿ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ರಿಪೋರ್ಟ್ ಇಲ್ಲಿದೆ ನೋಡಿ. 

1 Min read
Author : Naveen Kodase
Published : Apr 24 2026, 04:33 PM IST
Share this Photo Gallery
  • FB
  • TW
  • Linkdin
  • Whatsapp
16
ಲೀಗ್‌ ಹಂತದಲ್ಲಿ ಆರ್‌ಸಿಬಿಗೆ ತವರಿನಲ್ಲಿ ಕೊನೆಯ ಮ್ಯಾಚ್
Image Credit : stockphoto

ಲೀಗ್‌ ಹಂತದಲ್ಲಿ ಆರ್‌ಸಿಬಿಗೆ ತವರಿನಲ್ಲಿ ಕೊನೆಯ ಮ್ಯಾಚ್

ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಲೀಗ್ ಹಂತದಲ್ಲಿ ತವರಿನಲ್ಲಿ ಕೊನೆಯ ಬಾರಿಯ ಮ್ಯಾಚ್ ಆಡಲು ರೆಡಿಯಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿಂದು ಆರ್‌ಸಿಬಿಗೆ ಗುಜರಾತ್ ಟೈಟಾನ್ಸ್ ಸವಾಲೊಡ್ಡಲಿದೆ.

26
ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ
Image Credit : ANI

ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಹಾಗೂ ಎರಡು ಸೋಲುಗಳೊಂದಿಗೆ ಎಂಟು ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆದ್ದರೇ ಮತ್ತೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

Related Articles

Related image1
IPL 2026: ತವರಿನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ; ಬೆಂಗಳೂರಿಗಿಂದು ಗುಜರಾತ್ ಸವಾಲು
Related image2
IPL 2026: ನಿನ್ನೆ ನಡೆದ ಮುಂಬೈ ಇಂಡಿಯನ್ಸ್‌ - ಚೆನ್ನೈ ಸೂಪರ್ ಕಿಂಗ್ಸ್‌ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
36
ಡೆಲ್ಲಿ ಎದುರಿನ ಸೋಲಿನ ಬಳಿಕ ತಂಡದಲ್ಲಿ ಬದಲಾವಣೆ
Image Credit : ANI

ಡೆಲ್ಲಿ ಎದುರಿನ ಸೋಲಿನ ಬಳಿಕ ತಂಡದಲ್ಲಿ ಬದಲಾವಣೆ

ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ತವರಿನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಎದುರು ಆರು ವಿಕೆಟ್ ಅಂತರದ ಸೋಲು ಅನುಭವಿಸಿತ್ತು. ಇದೀಗ ತವರಿನಲ್ಲಿ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಹೀಗಾಗಿ ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

46
ವೆಂಕಿ, ಬೆಥಲ್‌ಗೆ ಸ್ಥಾನ?
Image Credit : Getty

ವೆಂಕಿ, ಬೆಥಲ್‌ಗೆ ಸ್ಥಾನ?

ಕೆಲವು ಮಾಧ್ಯಮಗಳ ವರದಿಯ ಪ್ರಕಾರ, ಡೆಲ್ಲಿ ಎದುರಿನ ಸೋಲಿನ ಬಳಿಕ ಆರ್‌ಸಿಬಿ ತಂಡದ ವೆಂಕಟೇಶ್ ಅಯ್ಯರ್ ಹಾಗೂ ಜೇಕಬ್ ಬೆಥಲ್ ನೆಟ್ಸ್‌ನಲ್ಲಿ ಸಾಕಷ್ಟು ಅಭ್ಯಾಸ ನಡೆಸುತ್ತಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

56
ಪಡಿಕ್ಕಲ್, ಶಫರ್ಡ್ ಔಟ್
Image Credit : ANI

ಪಡಿಕ್ಕಲ್, ಶಫರ್ಡ್ ಔಟ್

ವೆಂಕಟೇಶ್ ಅಯ್ಯರ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನು ಬೆಥೆಲ್ ಕೂಡಾ ರೆಡ್‌ ಹಾಟ್ ಫಾರ್ಮ್‌ನಲ್ಲಿದ್ದು, ಇವರಿಬ್ಬರ ಸೇರ್ಪಡೆ ತಂಡಕ್ಕೆ ಮತ್ತಷ್ಟು ಬಲ ತಂದುಕೊಡುವ ನಿರೀಕ್ಷೆಯಿದೆ. ಹೀಗಾದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ರೊಮ್ಯಾರಿಯೋ ಶೆಫರ್ಡ್ ತಮ್ಮ ಸ್ಥಾನ ಬಿಟ್ಟುಕೊಡಬೇಕಾಗಿ ಬರಬಹುದು.

66
ಗುಜರಾತ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ:
Image Credit : X/RCBTweets

ಗುಜರಾತ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ:

ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್/ ವೆಂಕಟೇಶ್ ಅಯ್ಯರ್, ರಜತ್ ಪಾಟೀದಾರ್(ನಾಯಕ), ಟಿಮ್ ಡೇವಿಡ್, ರೊಮ್ಯಾರಿಯೋ ಶೆಫರ್ಡ್/ಜೆಕಬ್ ಬೆಥೆಲ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಸುಯಾಶ್ ಶರ್ಮಾ, ರಸಿಕ್ ಸಲಂ ಧರ್

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಆರ್‌ಸಿಬಿ
ಕ್ರಿಕೆಟ್
ಐಪಿಎಲ್
ಗುಜರಾತ್ ಟೈಟನ್ಸ್

Latest Videos
Recommended Stories
Recommended image1
ಇವ್ರಂತೂ ಗೆಲ್ಲಲ್ಲ...! ಚೆನ್ನೈ ಎದುರಿನ ಮ್ಯಾಚ್ ಮುಗಿಯುವ ಮೊದಲೇ ಮೈದಾನ ತೊರೆದ ಮುಂಬೈ ಮಾಲೀಕ ಆಕಾಶ್ ಅಂಬಾನಿ! ವಿಡಿಯೋ ವೈರಲ್
Recommended image2
ತಮ್ಮ ಸ್ಪೋಟಕ ಬ್ಯಾಟಿಂಗ್ ಸೀಕ್ರೆಟ್ ಬಿಚ್ಚಿಟ್ಟ ವೈಭವ್ ಸೂರ್ಯವಂಶಿ! ಮ್ಯಾಚ್‌ಗೂ ಮುನ್ನ ಈತ ಮಾಡೋದೇನು ಗೊತ್ತಾ?
Recommended image3
ಅಮ್ಮನ ಚಿತೆಗೆ ಬೆಂಕಿ ಇಟ್ಟು, ಮರುದಿನವೇ ಚೆನ್ನೈ ಸೂಪರ್ ಕಿಂಗ್ಸ್‌ ಪರ ಬೌಲಿಂಗ್ ಮಾಡಿದ ಮುಕೇಶ್ ಚೌಧರಿ! ವಿಡಿಯೋ ವೈರಲ್
Related Stories
Recommended image1
IPL 2026: ತವರಿನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ; ಬೆಂಗಳೂರಿಗಿಂದು ಗುಜರಾತ್ ಸವಾಲು
Recommended image2
IPL 2026: ನಿನ್ನೆ ನಡೆದ ಮುಂಬೈ ಇಂಡಿಯನ್ಸ್‌ - ಚೆನ್ನೈ ಸೂಪರ್ ಕಿಂಗ್ಸ್‌ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved