MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಪ್ಲೇ ಆಫ್‌ ಮ್ಯಾಚ್‌ನಲ್ಲಿ ಸಪ್ರೈಸ್‌ಗೆ ರೆಡಿಯಾಗಿ: ಜಿತೇಶ್ ಶರ್ಮಾ ಹೀಗಂದಿದ್ದೇಕೆ?

ಪ್ಲೇ ಆಫ್‌ ಮ್ಯಾಚ್‌ನಲ್ಲಿ ಸಪ್ರೈಸ್‌ಗೆ ರೆಡಿಯಾಗಿ: ಜಿತೇಶ್ ಶರ್ಮಾ ಹೀಗಂದಿದ್ದೇಕೆ?

ಲಖನೌ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಪ್ಲೇ ಆಫ್‌ಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಆರ್‌ಸಿಬಿ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

1 Min read
Naveen Kodase
Published : May 28 2025, 04:54 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : ANI

ಐಪಿಎಲ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು 6 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ತಂಡವು ಕ್ವಾಲಿಫೈಯರ್ 1 ಗೆ ಅರ್ಹತೆ ಪಡೆದುಕೊಂಡಿದೆ.

26
Image Credit : ANI

ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಪ್ 2 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆತ್ಮವಿಶ್ವಾಸದಿಂದ ಬೀಗುತ್ತಿದೆ. ಹೀಗಿರುವಾಗಲೇ ಆರ್‌ಸಿಬಿ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

36
Image Credit : X/prashant

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಿಮ್ ಡೇವಿಡ್, ಜೋಶ್ ಹೇಜಲ್‌ವುಡ್ ಅವರಂತಹ ಮ್ಯಾಚ್ ವಿನ್ನಿಂಗ್ ಆಟಗಾರರಲಿಲ್ಲದೇ ಕಣಕ್ಕಿಳಿದಿತ್ತು. ಹೀಗಿದ್ದೂ ಆರ್‌ಸಿಬಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿತ್ತು.

46
Image Credit : ANI

ಇನ್ನು ಲಖನೌ ಎದುರಿನ ಟಾಸ್ ವೇಳೆ ಮಾತನಾಡಿದ ಜಿತೇಶ್ ಶರ್ಮಾ, ನನ್ನ ಪ್ರಕಾರ, ಮುಂದಿನ ಮ್ಯಾಚ್‌ನಲ್ಲಿ ಎಲ್ಲರಿಗೂ ಅಚ್ಚರಿ ಕಾದಿದೆ. ಜೋಶ್ ಹೇಜಲ್‌ವುಡ್ ಹಾಗೂ ಟಿಮ್ ಡೇವಿಡ್ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಜಿತೇಶ್ ಹೇಳಿದ್ದಾರೆ.

56
Image Credit : ANI

ಜೋಶ್ ಹೇಜಲ್‌ವುಡ್ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಬೌಲಿಂಗ್ ವಿಭಾಗ ಕೊಂಚ ಮಂಕಾದಂತೆ ಕಂಡುಬರುತ್ತಿದ್ದು, ಕಳೆದೆರಡು ಪಂದ್ಯದಲ್ಲೂ ಆರ್‌ಸಿಬಿ ಬೌಲರ್‌ಗಳು 200+ ರನ್ ಬಿಟ್ಟುಕೊಟ್ಟಿದ್ದರು. ಹೇಜಲ್‌ವುಡ್ ಆರ್‌ಸಿಬಿ ತಂಡ ಕೂಡಿಕೊಂಡರೇ ಮತ್ತಷ್ಟು ಬಲ ಬರಲಿದೆ.

66
Image Credit : ANI

ಆರ್‌ಸಿಬಿ ತಂಡವು ಮೇ 29ರಂದು ನಡೆಯಲಿರುವ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಯಿಸುವ ತಂಡವು ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೂ ಫೈನಲ್ ಪ್ರವೇಶಿಸಲು ಮತ್ತೊಂದು ಅವಕಾಶ ಸಿಗಲಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಆರ್‌ಸಿಬಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved