MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Yash Toxic Movie Live Updates
Toxic Movie Review
Karnataka Cabinet Reshuffle
KPSC Exam Scam
Karnataka BJP Padayatra
RSS vs Priyank Kharge
Onion Price Hike
FSSAI New Guidelines
Ajit Doval China Visit
Operation Sindoor 2025
  • Home
  • Sports
  • Cricket
  • ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ ರಾಬಿನ್ ಉತ್ತಪ್ಪ! ಇಬ್ಬರು ಪ್ರಮುಖ ಆಟಗಾರರಿಗೆ ಇಲ್ಲ ಸ್ಥಾನ

ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ ರಾಬಿನ್ ಉತ್ತಪ್ಪ! ಇಬ್ಬರು ಪ್ರಮುಖ ಆಟಗಾರರಿಗೆ ಇಲ್ಲ ಸ್ಥಾನ

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ಕ್ರಿಕೆಟ್‌ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಉತ್ತಪ್ಪ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ಮಾರಕ ವೇಗಿ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ.

2 Min read
Author : Naveen Kodase
Published : Jul 16 2026, 12:01 PM IST
Share this Photo Gallery
  • FB
  • TW
  • Linkdin
  • Whatsapp
16
ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡದ ಆರಂಭಿಕರಾಗಿ ದಾದಾ ಸಚಿನ್
Image Credit : our own

ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡದ ಆರಂಭಿಕರಾಗಿ ದಾದಾ- ಸಚಿನ್

ಕನ್ನಡದ ಕುವರ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ, ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಉತ್ತಪ್ಪ ಆಯ್ಕೆ ಮಾಡಿದ ತಂಡದಲ್ಲಿ ಇಬ್ಬರು ಪ್ರಮುಖ ಆಟಗಾರರನ್ನು ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ. ಹೌದು, ರಾಬಿನ್ ಉತ್ತಪ್ಪ ಇನ್‌ಸ್ಟಾಗ್ರಾಂನಲ್ಲಿ 'ಇದು ಅಥವಾ ಅದು' ಚಾಲೆಂಜ್‌ನಲ್ಲಿ ಪಾಲ್ಗೊಂಡು, ಭಾರತ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ್ದಾರೆ. ಈ ಪೈಕಿ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕ ಸಿಡಿಸಿರುವ ಏಕೈಕ ಬ್ಯಾಟರ್ ರೋಹಿತ್ ಶರ್ಮಾ ಅವರನ್ನು ಕೈಬಿಟ್ಟು, ಆರಂಭಿಕರಾಗಿ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಅವರನ್ನು ಆಯ್ಕೆ ಮಾಡಿದ್ದಾರೆ. ಸಚಿನ್ ಏಕದಿನ ಕ್ರಿಕೆಟ್‌ನಲ್ಲಿ 18,426 ರನ್ ಸಿಡಿಸಿದ್ದರೇ, ದಾದಾ 308 ಪಂದ್ಯಗಳನ್ನಾಡಿ 11,221 ರನ್ ಬಾರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮೂರನೇ ಕ್ರಮಾಂಕಕ್ಕೆ ಕೊಹ್ಲಿ ಫಿಕ್ಸ್
Image Credit : X

ಮೂರನೇ ಕ್ರಮಾಂಕಕ್ಕೆ ಕೊಹ್ಲಿ ಫಿಕ್ಸ್

ಇನ್ನು ಮೂರನೇ ಕ್ರಮಾಂಕದಲ್ಲಿ ಭಾರತದ ರನ್ ಮಷೀನ್ ವಿರಾಟ್‌ ಕೊಹ್ಲಿಗೆ ಮಣೆ ಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚ ಶತಕ(54) ಸಿಡಿಸಿದ ದಾಖಲೆ ಕೊಹ್ಲಿ ಹೆಸರಿನಲ್ಲಿದೆ. ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪರ ಎರಡನೇ ಗರಿಷ್ಠ ರನ್ ಸರದಾರರಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

Related Articles

Related image1
ಟಿ20 ಸೋಲಿನ ಕಹಿ ಮರೆತ ಭಾರತ; ಮೊದಲ ಏಕದಿನದಲ್ಲಿ ಇಂಗ್ಲೆಂಡ್‌ಗೆ ತಿರುಗೇಟು ಕೊಟ್ಟ ಟೀಂ ಇಂಡಿಯಾ
Related image2
Ind vs Eng 2nd ODI: ಇಂಗ್ಲೆಂಡ್ ಎದುರು ಏಕದಿನ ಸರಣಿ ಗೆಲ್ಲಲು ತುದಿಗಾಲಲ್ಲಿ ನಿಂತ ಟೀಂ ಇಂಡಿಯಾ!
36
ಧೋನಿಗೆ ನಾಯಕ ಪಟ್ಟ
Image Credit : ANI

ಧೋನಿಗೆ ನಾಯಕ ಪಟ್ಟ

ಇನ್ನು ಮಧ್ಯಮ ಕ್ರಮಾಂಕದಲ್ಲಿ ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ ಹಾಗೂ ಸುರೇಶ್ ರೈನಾಗೆ ಕ್ರಮವಾಗಿ 4-5-6ನೇ ಸ್ಥಾನ ನೀಡಿದ್ದಾರೆ. ಇನ್ನು ತಮ್ಮ ಸಾರ್ವಕಾಲಿಕ ಶ್ರೇಷ್ಠ ತಂಡದ ನಾಯಕರಾಗಿ ಧೋನಿಗೆ ಪಟ್ಟ ಕಟ್ಟಿದ್ದಾರೆ. ಧೋನಿ ನಾಯಕತ್ವದಲ್ಲೇ ಭಾರತ 2011ರ ಏಕದಿನ ವಿಶ್ವಕಪ್ ಗೆದ್ದು ಬೀಗಿತ್ತು.

46
ಬೌಲಿಂಗ್ ವಿಭಾಗ
Image Credit : Getty

ಬೌಲಿಂಗ್ ವಿಭಾಗ

ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಟ್ಟು ಕಪಿಲ್ ದೇವ್ ಹಾಗೂ ರವೀಂದ್ರ ಜಡೇಜಾಗೆ ಮಣೆ ಹಾಕಿದ್ದಾರೆ. ಇನ್ನು ತಜ್ಞ ಸ್ಪಿನ್ನರ್‌ ಆಗಿ ದಿಗ್ಗಜ ಲೆಗ್‌ಸ್ಪಿನ್ನರ್ ಅನಿಲ್ ಕುಂಬ್ಳೆಗೆ ಸ್ಥಾನ ನೀಡಿದ್ದಾರೆ. ಇನ್ನು ಸ್ಪೆಷಲಿಸ್ಟ್ ವೇಗಿಗಳಾಗಿ ಜಹೀರ್ ಖಾನ್ ಹಾಗೂ ಜಸ್ಪ್ರೀತ್ ಬುಮ್ರಾಗೆ ತಂಡದಲ್ಲಿ ಮಣೆ ಹಾಕಿದ್ದಾರೆ.

56
ಉತ್ತಪ್ಪ ಕನಸಿನ ತಂಡದಲ್ಲಿ ರೋಹಿತ್-ಶಮಿಗಿಲ್ಲ ಸ್ಥಾನ
Image Credit : Getty

ಉತ್ತಪ್ಪ ಕನಸಿನ ತಂಡದಲ್ಲಿ ರೋಹಿತ್-ಶಮಿಗಿಲ್ಲ ಸ್ಥಾನ

ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ತಂಡದ ಪೈಕಿ ರೋಹಿತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ಅವರನ್ನು ಕೈಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪರ ಮೂರನೇ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಭಾರತ ಕಂಡ ಅತ್ಯಂತ ಯಶಸ್ವಿ ಆರಂಭಿಕ ಬ್ಯಾಟರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಮೊಹಮ್ಮದ್ ಶಮಿ ಏಕದಿನ ಕ್ರಿಕೆಟ್‌ನಲ್ಲಿ ಇದುವರೆಗೂ 206 ವಿಕೆಟ್ ಕಬಳಿಸಿದ್ದು, ಸಕ್ರಿಯ ವೇಗದ ಬೌಲರ್‌ಗಳ ಪೈಕಿ ಭಾರತದ ಗರಿಷ್ಠ ವಿಕೆಟ್ ಸರದಾರ ಎನಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಐಸಿಸಿ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಭಾರತದ ವೇಗಿ ಎನ್ನುವ ಹೆಗ್ಗಳಿಕೆ ಶಮಿಗಿದೆ. ಹೀಗಿದ್ದೂ ಉತ್ತಪ್ಪ ಈ ಇಬ್ಬರನ್ನು ಕಡೆಗಣಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

66
ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡ ಹೀಗಿದೆ:
Image Credit : Getty

ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡ ಹೀಗಿದೆ:

ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ(ನಾಯಕ), ಸುರೇಶ್ ರೈನಾ, ಕಪಿಲ್ ದೇವ್, ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ, ಜಹೀರ್ ಖಾನ್, ಜಸ್ಪ್ರೀತ್ ಬುಮ್ರಾ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಸಚಿನ್ ತೆಂಡೂಲ್ಕರ್
ರೋಹಿತ್ ಶರ್ಮಾ

Latest Videos
Recommended Stories
Recommended image1
ದುಲೀಫ್‌ ಟ್ರೋಫಿ: ಸೆಮೀಸ್‌ ರೇಸ್‌ನಲ್ಲಿ ರೋಚಕ ತಿರುವು
Recommended image2
ಭಾರತದ ಬಿಗಿ ಹಿಡಿತದಲ್ಲಿ ಕೊಲಂಬೊ ಟೆಸ್ಟ್‌; ಫಾಲೋ ಆನ್ ಭೀತಿಯಲ್ಲಿ ಆತಿಥೇಯ ಶ್ರೀಲಂಕಾ
Recommended image3
'ಕ್ರಿಕೆಟಿಗರಿಗೆ Non-Veg ಟೀ..?' ಶಾಕಿಂಗ್ ವಿಚಾರ ರಿವೀಲ್ ಮಾಡಿದ ಬಾಂಬೆ ಹೈಕೋರ್ಟ್‌..!
Related Stories
Recommended image1
ಟಿ20 ಸೋಲಿನ ಕಹಿ ಮರೆತ ಭಾರತ; ಮೊದಲ ಏಕದಿನದಲ್ಲಿ ಇಂಗ್ಲೆಂಡ್‌ಗೆ ತಿರುಗೇಟು ಕೊಟ್ಟ ಟೀಂ ಇಂಡಿಯಾ
Recommended image2
Ind vs Eng 2nd ODI: ಇಂಗ್ಲೆಂಡ್ ಎದುರು ಏಕದಿನ ಸರಣಿ ಗೆಲ್ಲಲು ತುದಿಗಾಲಲ್ಲಿ ನಿಂತ ಟೀಂ ಇಂಡಿಯಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved