MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಟಿ20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್! ಆಸ್ಪತ್ರೆಗೆ ದಾಖಲಾದ ಸ್ಟಾರ್ ಕ್ರಿಕೆಟಿಗ

ಟಿ20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್! ಆಸ್ಪತ್ರೆಗೆ ದಾಖಲಾದ ಸ್ಟಾರ್ ಕ್ರಿಕೆಟಿಗ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲಿನ ನಂತರ ಟೀಂ ಇಂಡಿಯಾ ಟಿ20 ಸರಣಿಗೆ ಸಜ್ಜಾಗುತ್ತಿದೆ. ಆದರೆ ಇಂತಹ ಸಮಯದಲ್ಲಿ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

1 Min read
Naveen Kodase
Published : Oct 26 2025, 04:38 PM IST
Share this Photo Gallery
  • FB
  • TW
  • Linkdin
  • Whatsapp
16
ಶ್ರೇಯಸ್ ಅಯ್ಯರ್‌ಗೆ ಗಾಯ
Image Credit : https://www.cricbuzz.com/

ಶ್ರೇಯಸ್ ಅಯ್ಯರ್‌ಗೆ ಗಾಯ

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಪಕ್ಕೆಲುಬಿನ ಗಾಯದಿಂದಾಗಿ ಸದ್ಯ ಆಸ್ಟ್ರೇಲಿಯಾದ ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈದಾನಕ್ಕೆ ಮರಳಲು ಕೆಲವು ವಾರಗಳು ಬೇಕಾಗಬಹುದು.

26
ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ
Image Credit : Getty

ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಶ್ರೇಯಸ್ ಅಯ್ಯರ್ ಸದ್ಯ ಸಿಡ್ನಿಯ ಆಸ್ಪತ್ರೆಯಲ್ಲಿದ್ದಾರೆ. ಬಿಸಿಸಿಐ ಅವರ ಮೇಲ್ವಿಚಾರಣೆಗೆ ವಿಶೇಷ ವೈದ್ಯರನ್ನು ನೇಮಿಸಿದೆ. ಭಾರತಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬಹುದು.

Related Articles

Related image1
ಈಕೆ ಯಾವುದೇ ಹೀರೋಯಿನ್ ಅಲ್ಲ, ಟೀಂ ಇಂಡಿಯಾ ಕ್ಯಾಪ್ಟನ್ ಮುದ್ದಿನ ತಂಗಿ!
Related image2
ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಬ್ರೇಕ್ ಮಾಡಿದ ರೋಹಿತ್ ಶರ್ಮಾ!
36
ಗಾಯಕ್ಕೆ ಕಾರಣವೇನು?
Image Credit : X

ಗಾಯಕ್ಕೆ ಕಾರಣವೇನು?

ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಅಯ್ಯರ್ ಗಾಯಗೊಂಡರು. ಡೈವ್ ಮಾಡಿ ಅದ್ಭುತ ಕ್ಯಾಚ್ ಹಿಡಿದರೂ, ಪಕ್ಕೆಲುಬಿಗೆ ತೀವ್ರ ನೋವುಂಟಾಯಿತು. ಸದ್ಯ ಅವರು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ.

46
ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಚೇತರಿಸಿಕೊಳ್ಳುವ ಸಾಧ್ಯತೆ
Image Credit : @BCCI/X

ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಚೇತರಿಸಿಕೊಳ್ಳುವ ಸಾಧ್ಯತೆ

ಭಾರತ ತಂಡದ ಮುಂದಿನ ಏಕದಿನ ಪಂದ್ಯ ನವೆಂಬರ್ 30 ರಂದು ನಡೆಯಲಿದೆ. ಅಂದರೆ ಇನ್ನೂ ಒಂದು ತಿಂಗಳ ಸಮಯವಿದೆ. ಅಷ್ಟರಲ್ಲಿ ಅಯ್ಯರ್ ಫಿಟ್ ಆಗಿ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎಂದು ವೈದ್ಯರು ಅಂದಾಜಿಸಿದ್ದಾರೆ.

56
ಮತ್ತೊಬ್ಬ ಆಟಗಾರನಿಗೂ ಗಾಯ
Image Credit : X/BCCI

ಮತ್ತೊಬ್ಬ ಆಟಗಾರನಿಗೂ ಗಾಯ

ಆಸ್ಟ್ರೇಲಿಯಾ ಪ್ರವಾಸದಲ್ಲಿ ಮತ್ತೊಬ್ಬ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಕೂಡ ಗಾಯಗೊಂಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ತೊಡೆಯ ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಅವರ ಗಾಯ ಗಂಭೀರವಾಗಿಲ್ಲ, ಟಿ20 ಸರಣಿಗೆ ಲಭ್ಯವಿರಲಿದ್ದಾರೆ.

66
ಅಸ್ಟ್ರೇಲಿಯಾ ಎದುರಿನ ಟಿ20 ಸರಣಿಗೆ ಭಾರತ ತಂಡ:
Image Credit : Getty

ಅಸ್ಟ್ರೇಲಿಯಾ ಎದುರಿನ ಟಿ20 ಸರಣಿಗೆ ಭಾರತ ತಂಡ:

ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಆಸ್ಟ್ರೇಲಿಯಾ
ಶ್ರೇಯಸ್ ಅಯ್ಯರ್
ಬಿಸಿಸಿಐ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved