MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಮುಗಿಯಿತಾ ಈ ನಾಲ್ಕು ಟೀಂ ಇಂಡಿಯಾ ಸ್ಟಾರ್ ಆಟಗಾರರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು..?

ಮುಗಿಯಿತಾ ಈ ನಾಲ್ಕು ಟೀಂ ಇಂಡಿಯಾ ಸ್ಟಾರ್ ಆಟಗಾರರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು..?

ಮುಂಬೈ: ಬಹುನಿರೀಕ್ಷಿತ 2023-24ನೇ ಸಾಲಿನ ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿ ಪ್ರಕಟವಾಗಿದ್ದು, ಅಚ್ಚರಿಯ ರೀತಿಯಲ್ಲಿ ನಾಲ್ವರು ಸ್ಟಾರ್ ಆಟಗಾರರನ್ನು ಬಿಸಿಸಿಐ ಕೈಬಿಟ್ಟಿದೆ. ಈ ಮೂಲಕ ಈ ನಾಲ್ವರ ಕ್ರಿಕೆಟಿಗರ ಅಂತಾರಾಷ್ಟ್ರೀಯ ವೃತ್ತಿಬದುಕು ಅಂತ್ಯವಾಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ. ಈ ಕುರಿತಾದ ಇಂಟ್ರೆಸ್ಟಿಂಗ್ ರಿಪೋರ್ಟ್ ಇಲ್ಲಿದೆ ನೋಡಿ. 

2 Min read
Author : Naveen Kodase
Published : Feb 29 2024, 12:36 PM IST
Share this Photo Gallery
  • FB
  • TW
  • Linkdin
  • Whatsapp
112

ಫೆಬ್ರವರಿ 28ರ ಬುಧವಾರ ಬಿಸಿಸಿಐ 30 ಆಟಗಾರರ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದೆ. ಈ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಅಕ್ಟೋಬರ್ 01, 2023ರಿಂದ ಸೆಪ್ಟೆಂಬರ್ 10, 2024ರ ಅವಧಿಯವರೆಗೆ ಇರಲಿದೆ.

212

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ A+ ಶ್ರೇಣಿ ಪಡೆದುಕೊಂಡಿದ್ದು, ವಾರ್ಷಿಕ 7 ಕೋಟಿ ರುಪಾಯಿ ಸಂಭಾವನೆ ಪಡೆದುಕೊಳ್ಳಲಿದ್ದಾರೆ.

312

ಇನ್ನು A ದರ್ಜೆಯಲ್ಲಿ ಕೆ ಎಲ್ ರಾಹುಲ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ಸ್ಥಾನ ಉಳಿಸಿಕೊಂಡಿದ್ದು, ಇದರ ಜತೆಗೆ ಶುಭ್‌ಮನ್ ಗಿಲ್ ಮುಂಬಡ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.(ವಾರ್ಷಿಕ 5 ಕೋಟಿ)

412

ಇನ್ನು ಕಳೆದ ಬಾರಿ A ಗ್ರೇಡ್‌ನಲ್ಲಿದ್ದ ರಿಷಭ್ ಪಂತ್, ಕುಲ್ದೀಪ್ ಯಾದವ್ ಇದೀಗ B ಗ್ರೇಡ್‌ಗೆ ಜಾರಿದ್ದಾರೆ. ಬಿ ಗ್ರೇಡ್‌ನಲ್ಲಿ 11 ಆಟಗಾರರು ಸ್ಥಾನ ಪಡೆದಿದ್ದು, ಯಶಸ್ವಿ ಜೈಸ್ವಾಲ್ 'ಬಿ' ಗ್ರೇಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.(ವಾರ್ಷಿಕ 3 ಕೋಟಿ)

512

ಇನ್ನು ಸಿ ಗ್ರೇಡ್‌ನಲ್ಲಿ ಸಂಜು ಸ್ಯಾಮ್ಸನ್, ರಜತ್ ಪಾಟೀದಾರ್, ರಿಂಕು ಸಿಂಗ್ ಹೀಗೆ 15 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಆಟಗಾರರೆಲ್ಲಾ ವಾರ್ಷಿಕ ಒಂದು ಕೋಟಿ ರುಪಾಯಿಗಳನ್ನು ಪಡೆದುಕೊಳ್ಳಲಿದ್ದಾರೆ.

612

ಇನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚನೆಗೂ ಬೆಲೆ ಕೊಡದೆ ರಣಜಿ ಪಂದ್ಯದಲ್ಲಿ ಆಡದ್ದಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‌ ಹಾಗೂ ಶ್ರೇಯಸ್ ಅಯ್ಯರ್‌ಗೆ ಬೆಲೆ ತೆರುವ ಕಾಲ ಬಂದಿದೆ.

712

ಇದೀಗ ಟೀಂ ಇಂಡಿಯಾದ ಈ ಇಬ್ಬರು ಸ್ಟಾರ್ ಆಟಗಾರರನ್ನು 2023-24ನೇ ಸಾಲಿನ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದು, ಈ ಇಬ್ಬರನ್ನು ಸೆಂಟ್ರಲ್ ಕಾಂಟ್ರ್ಯಾಕ್ಟ್‌ಗೆ ಪರಿಗಣಿಸಿಲ್ಲ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

812
Shreyas Iyer

Shreyas Iyer

ಕಳೆದ ಅಕ್ಟೋಬರ್‌ನಿಂದ ಶ್ರೇಯಸ್ ಅಯ್ಯರ್ 4 ಟೆಸ್ಟ್, 12 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದರೂ ಸಹಾ ಅವರನ್ನು ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಕೈಬಿಡಲಾಗಿದೆ. ಅಯ್ಯರ್ ಇಂಗ್ಲೆಂಡ್ ಎದುರು ಮೊದಲೆರಡು ಟೆಸ್ಟ್ ಪಂದ್ಯಗಳನ್ನಾಡಿದ್ದರು.

912

ಇದಾದ ಬಳಿಕ ಬೆನ್ನು ನೋವಿನ ಸಮಸ್ಯೆಯಿಂದಾಗಿ ಅಯ್ಯರ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಇದಾದ ಬಳಿಕ ಅವರು ಕ್ರಿಕೆಟ್ ಆಡಲು ಫಿಟ್ ಇದ್ದಾರೆ ಎಂದು ಎನ್‌ಸಿಎ ಫಿಸಿಯೋ ವರದಿ ನೀಡಿದ್ದರೂ ಬೆನ್ನು ನೋವಿನ ನೆಪ ಹೇಳಿ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಿಂದ ಹೊರಗುಳಿದಿದ್ದರು.

1012

ಇನ್ನು ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಕೂಡಾ ಕಳೆದ ಅಕ್ಟೋಬರ್‌ನಿಂದ ಟೀಂ ಇಂಡಿಯಾ ಪರ ಕೇವಲ 2 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಷ್ಟೇ ಆಡಿದ್ದರು.

1112

ದಾದ ಬಳಿಕ ಟೀಂ ಇಂಡಿಯಾ ಹೆಡ್‌ಕೋಚ್ ರಾಹುಲ್ ದ್ರಾವಿಡ್ ರಣಜಿ ಆಡಲು ಸೂಚನೆ ನೀಡಿದ್ದರೂ ಅದನ್ನು ಕಿಶನ್ ನಿರಾಕರಿಸಿದ್ದರು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದು ಬಿಸಿಸಿಐ ಅಸಮಾಧಾನಕ್ಕೆ ಕಾರಣವಾಗಿತ್ತು.

1212

ಇದಷ್ಟೇ ಅಲ್ಲದೇ ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಗುರುತಿಸಿಕೊಂಡಿದ್ದ ಚೇತೇಶ್ವರ್ ಪೂಜಾರ ಹಾಗೂ ಲೆಗ್‌ಸ್ಪಿನ್ನರ್ ಯುಜುವೇಂದ್ರ ಚಹಲ್ ಕೂಡಾ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದು, ಈ ನಾಲ್ವರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಅಂತ್ಯವಾಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಜಯ್ ಶಾ
ಶ್ರೇಯಸ್ ಅಯ್ಯರ್
ಟೀಮ್ ಇಂಡಿಯಾ
ಯುಜ್ವೇಂದ್ರ ಚಹಲ್
ಬಿಸಿಸಿಐ

Latest Videos
Recommended Stories
Recommended image1
Viral Video: ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ನಾಯಕನಿಂದ ಕರ್ನಾಟಕ ಪ್ಲೇಯರ್‌ಗೆ ಡಿಚ್ಚಿ!
Recommended image2
ಮಹಿಳೆ ಜೊತೆ ಫ್ಲರ್ಟ್‌ ಮಾಡಿದ Sania Mirza ಮಾಜಿ ಪತಿ; 3ನೇ ಮದುವೆ ಮುರಿದಿದ್ರೆ ಸಾಕು ಎಂದ ನೆಟ್ಟಿಗರು
Recommended image3
ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡಿಯೋದೇ ಡೌಟ್! ಪಾಕ್ ಸೋಲಿನಿಂದ ತಲೆಕೆಳಗಾದ ಲೆಕ್ಕಾಚಾರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved