MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ

ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ

ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ ನಡೆದಿದೆ. ಗಣಹೋಮ ಸೇರಿದಂತೆ ವಿಶೇಷ ಪೂಜೆ ಮಾಡಲಾಗಿದೆ. ಕ್ರೀಡಾಂಗಣ, ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೂಜೆ ಮಾಡಲಾಗಿದೆ. 

1 Min read
Author : Chethan Kumar
Published : Mar 25 2026, 11:22 AM IST
Share this Photo Gallery
  • FB
  • TW
  • Linkdin
  • Whatsapp
15
ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನ ಪೂಜೆ
Image Credit : Asianet News

ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನ ಪೂಜೆ

ಮಾರ್ಚ್ 28 ರಿಂದ ಐಪಿಎಲ್ ಟೂರ್ನಿ 2026ರ ಪಂದ್ಯಗಳು ಆರಂಭಗೊಳ್ಳುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡಯಲಿದೆ. ಮೊದಲ ಪಂದದಲ್ಲಿ ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೋರಾಟ ನಡೆಸಲಿದೆ. ಪಂದ್ಯ ಆರಂಭಕ್ಕೂ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಗೇಟ್‌ಗಳಿಗೆ ವಿಶೇಷ ಪೂಜೆ ಮಾಡಲಾಗಿದೆ.

25
ಗಣಹೋಮ ಮಾಡಿಸಿದ ಕೆಎಸ್‌ಸಿಎ
Image Credit : Asianet News

ಗಣಹೋಮ ಮಾಡಿಸಿದ ಕೆಎಸ್‌ಸಿಎ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗಣಹೋಮ ಸೇರಿದಂತೆ ವಿಶೇಷ ಪೂಜೆ ಮಾಡಲಾಗಿದೆ. ಕ್ರೀಡಾಂಗಣದ ಒಳಗಡೆ ಹಾಗೂ ಕ್ರೀಡಾಂಗಣ ಪ್ರಮುಖ ಗೇಟ್‌ಗಳಿಗೆ ಪೂಜೆ ಮಾಡಲಾಗಿದೆ. ಪಂಚ ಅರ್ಚಕರು ವಿಶೇಷ ಪೂಜೆ ನೆರವೇರಿಸಿದ್ದಾರೆ. ಶನಿವಾರದಿಂದ ಪಂದ್ಯಗಳು ಆರಂಭಗೊಳ್ಳುತ್ತಿರುವ ಕಾರಣ ಇಂದು (ಮಾ.25) ಪೂಜೆ ನಡೆದಿದೆ

Related Articles

Related image1
Breaking: 16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಆದಿತ್ಯ ಬಿರ್ಲಾ-ಟೈಮ್ಸ್‌ ಗ್ರೂಪ್‌ ಹೊಸ ಮಾಲೀಕರು!
Related image2
ರಾಜಸ್ಥಾನ ರಾಯಲ್ಸ್‌ ಮಾಜಿ ಆಟಗಾರ ಈಗ RCB ಹೊಸ ಬಾಸ್‌: ಯಾರು ಈ ಆರ್ಯಮಾನ್‌ ಬಿರ್ಲಾ?
35
ದುರ್ಘಟನೆಗಳು ನಡೆಯದಂತೆ ಪೂಜೆ
Image Credit : Asianet News

ದುರ್ಘಟನೆಗಳು ನಡೆಯದಂತೆ ಪೂಜೆ

2025ರ ಐಪಿಎಲ್ ಟೂರ್ನಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಕ್ರಿಕೆಟ್ ಇತಿಹಾಸದಲ್ಲೇ ಅತೀ ದೊಡ್ಡ ದುರ್ಘಟನೆ ನಡೆದಿತ್ತು. ಇದು ಬೆಂಗಳೂರು ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕಪ್ಪು ಚುಕ್ಕೆ ತಂದಿತ್ತು. ಹೀಗಾಗಿ ಟೂರ್ನಿ ಆರಂಭಕ್ಕೂ ಮುನ್ನವೇ ದುರ್ಘಟನೆಗಳು ನಡೆಯದಂತೆ, ಎಲ್ಲಾ ಪಂದ್ಯದಳು ಸೂಸೂತ್ರವಾಗಿ ಹಾಗೂ ಯಶಸ್ವಿಯಾಗಿ ನಡೆಯಲು ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಮಾಡಲಾಗಿದೆ.

45
ಕಾಲ್ತುಳಿತ ಬಳಿಕ ಮೊದಲ ಟೂರ್ನಿ
Image Credit : Asianet News

ಕಾಲ್ತುಳಿತ ಬಳಿಕ ಮೊದಲ ಟೂರ್ನಿ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಬಳಿಕ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಬಿಸಿಸಿಐ ಕಪ್ಪು ಪಟ್ಟಿಗೆ ಸೇರಿತ್ತು. ಬೆಂಗಳೂರಿನಲ್ಲಿ ಆಯೋಜನೆಗೊಳ್ಳಬೇಕಿದ್ದ ಪಂದ್ಯಗಳು ಕೈತಪ್ಪಿಹೋಗಿತ್ತು. ಈ ದುರ್ಘಟನೆ ಬಳಿಕ ವೆಂಕಟೇಶ್ ಪ್ರಸಾದ್ ನೇತೃತ್ವದ ಹೊಸ ಆಡಳಿತ ಮಂಡಳಿ ಮತ್ತೆ ಕ್ರಿಕೆಟ್ ತರುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ವಿಶೇಷ ಪೂಜೆ ಮೂಲಕ ಚಿನ್ನಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಲಾಗಿದೆ.

55
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಾರಿ ಭದ್ರತೆ
Image Credit : Getty

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಾರಿ ಭದ್ರತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿ ಪಂದ್ಯಗಳು ಆರಂಭಗೊಳ್ಳುವ ಹಿನ್ನಲೆಯಲ್ಲಿ ಭಾರಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಒಂದಡೆ ಅಭಿಮಾನಿಗಳ ನಿಯಂತ್ರಿಸುವುದರ ಜೊತೆ ಹಲವು ಹಂತದ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇನ್ನು ಪಂದ್ಯದ ದಿನ ಸಂಚಾರ ಮಾರ್ಗದಲ್ಲೂ ಕೆಲ ಬದಲಾವಣೆ ಮಾಡಲಾಗುತ್ತದೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಾರಿ ಭದ್ರತೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಆರ್‌ಸಿಬಿ
ಎಂ ಚಿನ್ನಸ್ವಾಮಿ ಕ್ರೀಡಾಂಗಣ
ಕಾಲ್ತುಳಿತ
ಬೆಂಗಳೂರು
ಕ್ರಿಕೆಟ್
Latest Videos
Recommended Stories
Recommended image1
15 ನಿಮಿಷದಲ್ಲಿ ಆರ್‌ಸಿಬಿ ಉದ್ಘಟನಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್, ಅಭಿಮಾನಿಗಳ ಆಕ್ರೋಶ
Recommended image2
ರಾಜಸ್ಥಾನ ರಾಯಲ್ಸ್‌ ಮಾಜಿ ಆಟಗಾರ ಈಗ RCB ಹೊಸ ಬಾಸ್‌: ಯಾರು ಈ ಆರ್ಯಮಾನ್‌ ಬಿರ್ಲಾ?
Recommended image3
Breaking: 16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಆದಿತ್ಯ ಬಿರ್ಲಾ-ಟೈಮ್ಸ್‌ ಗ್ರೂಪ್‌ ಹೊಸ ಮಾಲೀಕರು!
Related Stories
Recommended image1
Breaking: 16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಆದಿತ್ಯ ಬಿರ್ಲಾ-ಟೈಮ್ಸ್‌ ಗ್ರೂಪ್‌ ಹೊಸ ಮಾಲೀಕರು!
Recommended image2
ರಾಜಸ್ಥಾನ ರಾಯಲ್ಸ್‌ ಮಾಜಿ ಆಟಗಾರ ಈಗ RCB ಹೊಸ ಬಾಸ್‌: ಯಾರು ಈ ಆರ್ಯಮಾನ್‌ ಬಿರ್ಲಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved