ಅಶ್ವಿನ್ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾಗೆ ಎಂಟ್ರಿಕೊಟ್ಟ ಕನ್ನಡಿಗ!
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಉಳಿದೆರಡು ಪಂದ್ಯಗಳಿಗೆ ಭಾರತ ತಂಡ ಪ್ರಕಟವಾಗಿದ್ದು, ಅಶ್ವಿನ್ ಅವರಿಂದ ತೆರವಾದ ಸ್ಥಾನಕ್ಕೆ ಕನ್ನಡಿಗ ತಂಡ ಕೂಡಿಕೊಂಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಈವರೆಗೆ 3 ಪಂದ್ಯಗಳು ಮುಗಿದಿವೆ. ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು. ಅದೇ ವೇಳೆ ಅಡಿಲೇಡ್ನಲ್ಲಿ ನಡೆದ 2ನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್ಗಳ ಅಂತರದಿಂದ ಸೋಲನುಭವಿಸಿತು. ಬ್ರಿಸ್ಬೇನ್ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.
ತನುಷ್ ಕೋಟ್ಯಾನ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್ನಲ್ಲಿ 26 ರಂದು ಆರಂಭವಾಗಲಿದೆ. ಈ ಮಧ್ಯೆ, ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ನಿನ್ನೆ ಪ್ರಕಟಿಸಲಾಗಿದೆ. ಭಾರತದ ಆಟಗಾರ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ಉಡುಪಿ ಮೂಲದ ಕನ್ನಡಿಗ ಯುವ ಆಟಗಾರ ತನುಷ್ ಕೋಟ್ಯಾನ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ತನುಷ್ ಕೋಟ್ಯಾನ್ ಬೌಲಿಂಗ್
ಅಶ್ವಿನ್ ಸ್ಥಾನದಲ್ಲಿ ಯಜುವೇಂದ್ರ ಚಾಹಲ್ ಅಥವಾ ಅಕ್ಷರ್ ಪಟೇಲ್ ಆಡಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಎಲ್ಲರಿಗೂ ಅಚ್ಚರಿ ಮೂಡಿಸುವಂತೆ ತನುಷ್ ಕೋಟ್ಯಾನ್ ಸ್ಥಾನ ಪಡೆದಿದ್ದಾರೆ. 26 ವರ್ಷದ ತನುಷ್ ಕೋಟ್ಯಾನ್ ರಣಜಿ ಟ್ರೋಫಿ ಮತ್ತು ದುಲೀಪ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. 2023-24 ರ ರಣಜಿ ಟ್ರೋಫಿಯಲ್ಲಿ ಅವರು ಮುಂಬೈ ತಂಡದ ಪರ ಆಡಿದ್ದರು ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ತನುಷ್ ಕೋಟ್ಯಾನ್ ಮೂಲತಃ ಉಡುಪಿ ಜಿಲ್ಲೆಯ ಪಾಂಗಳದವರು
ನವೆಂಬರ್ನಲ್ಲಿ ನಡೆದ ಆಸ್ಟ್ರೇಲಿಯಾ 'ಎ' ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆದಿದ್ದಲ್ಲದೆ 44 ರನ್ ಗಳಿಸಿದ್ದರು. ಬಲಗೈ ಸ್ಪಿನ್ ಬೌಲಿಂಗ್ ಮಾಡುವುದರ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವುದರಿಂದ ತನುಷ್ ಕೋಟ್ಯಾನ್ಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಉತ್ತಮವಾಗಿ ಆಡಿರುವ ಇವರು 33 ಪಂದ್ಯಗಳಲ್ಲಿ 25.70 ಸರಾಸರಿಯಲ್ಲಿ 101 ವಿಕೆಟ್ಗಳನ್ನು ಪಡೆದಿದ್ದಾರೆ. ಬ್ಯಾಟಿಂಗ್ನಲ್ಲಿ 41.21 ಸರಾಸರಿ ಹೊಂದಿದ್ದಾರೆ.
ಅಕ್ಷರ್ ಪಟೇಲ್ ಇದ್ದರೂ ಬಿಸಿಸಿಐ ಇವರನ್ನು ತಂಡಕ್ಕೆ ಸೇರಿಸಲು ಇದೇ ಕಾರಣ. ಈಗಾಗಲೇ ಭಾರತ ತಂಡದಲ್ಲಿ ಅಶ್ವಿನ್ ಸ್ಥಾನವನ್ನು ವಾಷಿಂಗ್ಟನ್ ಸುಂದರ್ ಪಡೆದಿದ್ದಾರೆ. ಜಡೇಜಾ ಕೂಡ ತಂಡದಲ್ಲಿದ್ದಾರೆ. ಈ ಇಬ್ಬರು ಗಾಯ ಅಥವಾ ಇತರೆ ಕಾರಣಗಳಿಂದ ಆಡಲು ಸಾಧ್ಯವಾಗದಿದ್ದರೆ ತನುಷ್ ಕೋಟ್ಯಾನ್ಗೆ ಪ್ಲೇಯಿಂಗ್ XIನಲ್ಲಿ ಸ್ಥಾನ ಸಿಗಲಿದೆ.
ಭಾರತ vs ಆಸ್ಟ್ರೇಲಿಯಾ ಟೆಸ್ಟ್
ಕೊನೆಯ 2 ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ರಿಷಭ್ ಪಂತ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕಲ್, ತನುಷ್ ಕೋಟ್ಯಾನ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.