MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಪಾಕಿಸ್ತಾನಕ್ಕೆ ತೀವ್ರ ಮುಖಭಂಗ, ಪಿಎಸ್ಎಲ್ ಟೂರ್ನಿ ಆತಿಥ್ಯವಹಿಸಲು ದುಬೈ ಹಿಂದೇಟು

ಪಾಕಿಸ್ತಾನಕ್ಕೆ ತೀವ್ರ ಮುಖಭಂಗ, ಪಿಎಸ್ಎಲ್ ಟೂರ್ನಿ ಆತಿಥ್ಯವಹಿಸಲು ದುಬೈ ಹಿಂದೇಟು

ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ದುಬೈನಲ್ಲಿ ಪಿಎಸ್‌ಎಲ್ ಟೂರ್ನಿ ಆಯೋಜಿಸಲು ನಿರ್ಧರಿಸಿದ್ದ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. ಕಾರಣ ದುಬೈ ಪಿಎಸ್ಎಲ್ ಟೂರ್ನಿ ಆಯೋಜನೆಗೆ ಹಿಂದೇಟು ಹಾಕಿದೆ

2 Min read
Author : Chethan Kumar
Published : May 09 2025, 07:23 PM IST
Share this Photo Gallery
  • FB
  • TW
  • Linkdin
  • Whatsapp
16

ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ಹೆಚ್ಚಾಗಿದೆ. ಆಪರೇಶನ್ ಸಿಂದೂರ್‌ಗೆ ಪ್ರತಿಯಾಗಿ ಪಾಕಿಸ್ತಾನ ಬರೋಬ್ಬರಿ 300 ರಿಂದ 400 ಟರ್ಕಿ ಡ್ರೋನ್ ಬಳಸಿ ಭಾರತದ ಮೇಲೆ ದಾಳಿ ಮಾಡಿದೆ. ಆದರೆ ಎಲ್ಲಾ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಕ್ಷಿಪಣಿ ದಾಳಿಗಳನ್ನು ಪಾಕಿಸ್ತಾನ ಮಾಡಿದೆ. ಆಟಗಾರರು, ಪ್ರೇಕ್ಷಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಟೂರ್ನಿ ಮುಂದೂಡಲಾಗಿದೆ. ಇತ್ತ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯನ್ನು ಸ್ಥಳಾಂತರಕ್ಕೆ ಪಾಕಿಸ್ತಾನ ಮುಂದಾಗಿದೆ. ಇದರ ಬೆನ್ನಲ್ಲೇ ಮುಖಭಂಗವಾಗಿದೆ.

26

ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯ ರಾವಲ್ಪಿಂಡಿ ಪಂದ್ಯಕ್ಕೂ ಮೊದಲು ಭಾರತದ ಡ್ರೋನ್ ಕ್ರೀಡಾಂಗಣಕ್ಕೆ ಬಡಿದಿತ್ತು. ಇಧರಿಂದ ಪಿಎಸ್ಎಲ್ ಪಂದ್ಯಕ್ಕೆ ಅಡ್ಡಿಯಾಗಿತ್ತು. ಯದ್ಧ ಬೀತಿ, ದಾಳಿ ಭೀತಿಯಿಂದ ಇದೀಗ ಪಾಕಿಸ್ತಾನ ಪಿಎಸ್ಎಲ್ ಟೂರ್ನಿಯನ್ನು ದುಬೈಗೆ ಸ್ಥಳಾಂತರಿಸಲು ಮುಂದಾಗಿದೆ. ಈ ಕುರಿತು ಯುಎಐ ಕ್ರಿಕೆಟ್ ಸಂಸ್ಥೆಯನ್ನು ಸಂಪರ್ಕಿಸಿ. ಆದರೆ ಈ ಬಾರಿ ಯಎಇ ಕೂಡ ಪಾಕಿಸ್ತಾನ ಜೊತೆಗೆ ನಿಲ್ಲಲು ತಯಾರಿಲ್ಲ.

Related Articles

Related image1
ಪಾಕ್ ಜೊತೆ ಸಂಘರ್ಷ: ಭಾರತದಲ್ಲಿ 8000 ಟ್ವಿಟರ್ ಖಾತೆಗಳಿಗೆ ನಿರ್ಬಂಧ
36

ಪಾಕಿಸ್ತಾನದಲ್ಲಿ ಇತ್ತೀಚೆಗೆ ಕ್ರಿಕೆಟ್ ಆಯೋಜನೆಯಾಾಗುತ್ತಿದೆ. ಇದಕ್ಕೂ ಮೊದಲು ದುಬೈ ನೆಲವೇ ಪಾಕಿಸ್ತಾನದ ತವರಾಗಿತ್ತು. ಪಿಎಸ್ಎಲ್ ಸೇರಿದಂತೆ ಎಲ್ಲಾ ಪಾಕಿಸ್ತಾನದ ಟೂರ್ನಿಗಳು ದುಬೈನಲ್ಲೇ ಆಯೋಜನೆಯಾಗಿತ್ತು. ಇನ್ನು ಎರಡು ಕೂಡು ಮುಸ್ಲಿಮ್ ರಾಷ್ಟ್ರಗಳು. ಆದರೂ ಈ ಬಾರಿ  ಪಿಎಸ್ಎಲ್ ಟೂರ್ನಿ ಆತಿಥ್ಯಕ್ಕೆ ಹಿಂದೇಟು ಹಾಕಿದೆ ಎಂದು ವರದಿಯಾಗಿದೆ. 

46

ಯುಎಐ ಕ್ರಿಕೆಟ್ ಸಂಸ್ಥೆಗೆ ಪಾಕಿಸ್ತಾನದ ಟೂರ್ನಿ ಆಯೋಜಿಸುವ ಕುರಿತು ಹಿಂದೇಟು ಹಾಕಲು ಪ್ರಮುಖ ಕಾರಣ ಭಾರತ. ಯುಎಐ ಭಾರತದ ಜೊತೆ ಉತ್ತಮ ಸಂಬಂಧ ಹೊಂದಿದೆ. ಇದಕ್ಕೂ ಮುಖ್ಯವಾಗಿ ಯುಎಐಗೆ ಪಾಕಿಸ್ತಾನದ ಪಿಎಸ್‌ಎಲ್‌ಗೆ ಆತಿಥ್ಯ ನೀಡಿ, ಭಾರತ, ಐಸಿಸಿ ಸೇರಿದಂತೆ ಇತರ ಪಂದ್ಯಗಳಿಂದ ದೂರ ಉಳಿಯುವ ಪರಿಸ್ಥಿತಿ ಎದುರಾಗುವ ಆತಂಕವಿದೆ. ಹೀಗಾಗಿ ಪಿಎಸ್‌ಎಲ್‌ನಿಂದ ದೂರ ಉಳಿಯಲು ಮುಂದಾಗಿದೆ.

56

ಸದ್ಯ ಯುದ್ಧದ ಭೀತಿಯಲ್ಲಿ ಭಾರತ ಹಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಜುಜುಬಿ ಮೊತ್ತ ಹಾಗೂ  ಪಾಕಿಸ್ತಾನಕ್ಕೆ ನೆರವು ನೀಡಿದರೆ ಭಾರತದ ಆಕ್ರೋಶಕ್ಕೆ ಕಾರಣವಾಗಲಿದೆ. ಭಾರತ ಆಕ್ರೋಶಗೊಂಡರೆ ಮುಂದಿನ ದಿನಗಳಲ್ಲಿ ಅರಬ್ ರಾಷ್ಟ್ರದಲ್ಲಿ ಒಂದೇ ಒಂದು ಐಸಿಸಿ ಪಂದ್ಯವೂ ನಡೆಯಲ್ಲ, ಇತ್ತ ಭಾರತ ತನ್ನ ಯಾವುದೇ ಪಂದ್ಯವನ್ನು ತಟಸ್ಥ ಸ್ಥಳವಾಗಿ ಆಡಲು ಯುಎಐ ಆಯ್ಕೆ ಮಾಡಲ್ಲ. ಇದು ದುಬೈ ಕ್ರಿಕೆಟ್ ಆದಾಯದ ಮೇಲೆ, ಕ್ರಿಕೆಟ್ ಅಸ್ತಿತ್ವದ ಮೇಲೆ ಭಾರಿ ಪರಿಣಾಮ ಬೀರಲಿದೆ.

66

ಪಾಕಿಸ್ತಾನವನ್ನು ಬೆಂಬಲಿಸಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯನ್ನೇ ನಿಯಂತ್ರಿಸುವ ಭಾರತದ ಆಕ್ರೋಶಕ್ಕೆ ತುತ್ತಾಗಲಿದೆ. ಇಷ್ಟೇ ಅಲ್ಲ ಯುಎಐ ಕ್ರಿಕೆಟ್ ಸಂಪೂರ್ಣ ನಶಿಸಿ ಹೋಗಲಿದೆ. ಹೀಗಾಗಿ ಯುಎಐ ಪಾಕಿಸ್ತಾನಕ್ಕೆ ಕ್ರಿಕೆಟ್ ವಿಚಾರದಲ್ಲಿ ಬೆಂಬಲ ನೀಡದಿರಲು ಮುಂದಾಗಿದೆ. 2021ರ ಭಾರತದ ಟಿ20 ವಿಶ್ವಕಪ್ ಟೂರ್ನಿಯನ್ನು ದುಬೈ ಆಯೋಜಿಸಿತ್ತು. ಇನ್ನು ಪಾಕಿಸ್ತಾನ ಆಯೋಜಿಸಿದ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಭಾರತದ ಪಂದ್ಯ ಹಾಗೂ ಫೈನಲ್ ಪಂದ್ಯವನ್ನು ದುಬೈ ಆಯೋಜಿಸಿತ್ತು.  ಪಾಕಿಸ್ತಾನಕ್ಕೆ ಬೆಂಬಲ ನೀಡಿದರೆ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ಯುಎಇನಿಂದ ದೂರ ಸರಿಯುವ ಆತಂಕ ಎದುರಿಸುತ್ತಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಆಪರೇಷನ್ ಸಿಂಧೂರ
ಕ್ರಿಕೆಟ್

Latest Videos
Recommended Stories
Recommended image1
ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ಎದುರು ಟೀಂ ಇಂಡಿಯಾ ಸೋತಿದ್ದು ಹೇಗೆ? ಇಲ್ಲಿವೆ ಆರು ಇಂಟ್ರೆಸ್ಟಿಂಗ್ ಕಾರಣಗಳು!
Recommended image2
ಸಂಜುನೇ ಬೆಸ್ಟ್; ಸೂರ್ಯಕುಮಾರ್ ಯಾದವ್ ವಾದದಲ್ಲಿ ಹುರುಳಿಲ್ಲ ಎಂದು ಮತ್ತೆ ಸಾಬೀತಾಯ್ತು!
Recommended image3
T20 World Cup 2026: ಭಾರತಕ್ಕೆ ಸೌತ್ ಆಫ್ರಿಕಾ ವಿರುದ್ಧ ಮೂರು ನಾಮ! ಟೀಂ ಇಂಡಿಯಾ ಎದುರು ಸೇಡು ತೀರಿಸಿಕೊಂಡ ಹರಿಣಗಳು!
Related Stories
Recommended image1
ಪಾಕ್ ಜೊತೆ ಸಂಘರ್ಷ: ಭಾರತದಲ್ಲಿ 8000 ಟ್ವಿಟರ್ ಖಾತೆಗಳಿಗೆ ನಿರ್ಬಂಧ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved