MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • KSCA ಚುನಾವಣೆಗೂ ಮೊದಲೇ ಗೆದ್ದುಬೀಗಿದ ವೆಂಕಟೇಶ್ ಪ್ರಸಾದ್; ಅವಿರೋಧ ಅಧ್ಯಕ್ಷರಾಗಿ ಆಯ್ಕೆ!

KSCA ಚುನಾವಣೆಗೂ ಮೊದಲೇ ಗೆದ್ದುಬೀಗಿದ ವೆಂಕಟೇಶ್ ಪ್ರಸಾದ್; ಅವಿರೋಧ ಅಧ್ಯಕ್ಷರಾಗಿ ಆಯ್ಕೆ!

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. 

1 Min read
Naveen Kodase
Published : Nov 25 2025, 09:18 AM IST
Share this Photo Gallery
  • FB
  • TW
  • Linkdin
  • Whatsapp
17
ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆ
Image Credit : stockPhoto

ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆ

ಪ್ರತಿಷ್ಠಿತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಯು ಹಲವು ಕಸರತ್ತುಗಳ ಬಳಿಕ ಮುಂಬರುವ ಡಿಸೆಂಬರ್ 07ಕ್ಕೆ ನಿಗಧಿಯಾಗಿದೆ. ಹೀಗಿರುವಾಗಲೇ ಅಧ್ಯಕ್ಷರಾಗಿ ಟೀಂ ಇಂಡಿಯಾ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

27
ಬ್ರಿಜೇಶ್ ಪಟೇಲ್ ಬಣದಿಂದ ಶಾಂತಕುಮಾರ್ ಸ್ಪರ್ಧೆ
Image Credit : Asianet News

ಬ್ರಿಜೇಶ್ ಪಟೇಲ್ ಬಣದಿಂದ ಶಾಂತಕುಮಾರ್ ಸ್ಪರ್ಧೆ

ಈ ಬಾರಿಯ ಕೆಎಸ್‌ಸಿಎ ಚುನಾವಣೆಯಲ್ಲಿ ಬ್ರಿಜೇಶ್ ಪಟೇಲ್ ಅವರ ಬಣದಿಂದ ಅಧ್ಯಕ್ಷ ಸ್ಥಾನಕ್ಕಾಗಿ ಕೆ ಎನ್ ಶಾಂತಕುಮಾರ್ ಸ್ಪರ್ಧಿಸಿದ್ದರು.

Related Articles

Related image1
KSCA Elections 2025: ಬ್ರಿಜೇಶ್ ಪಟೇಲ್ ಕಪಿಮುಷ್ಠಿಯಲ್ಲಿ ಕೆಎಸ್‌ಸಿಎ: ವೆಂಕಟೇಶ್ ಪ್ರಸಾದ್ ಕಿಡಿ!
Related image2
KSCA ನಿಷ್ಕ್ರಿಯ, ಶೀಘ್ರ ಚುನಾವಣೆ ಘೋಷಿಸಿ: ವೆಂಕಟೇಶ್ ಪ್ರಸಾದ್
37
ಗೇಮ್ ಚೇಂಜರ್ ಬಣದಿಂದ ವೆಂಕಿ ಸ್ಪರ್ಧೆ
Image Credit : our own

ಗೇಮ್ ಚೇಂಜರ್ ಬಣದಿಂದ ವೆಂಕಿ ಸ್ಪರ್ಧೆ

ಇನ್ನೊಂದೆಡೆ ಗೇಮ್‌ ಚೇಂಜರ್ ಬಣದಿಂದ ಅಧ್ಯಕ್ಷ ಸ್ಥಾನಕ್ಕಾಗಿ ವೆಂಕಟೇಶ್ ಪ್ರಸಾದ್ ಸ್ಪರ್ಧಿಸಿದ್ದರು.

47
ಗೇಮ್‌ ಚೇಂಜರ್ ಬಣಕ್ಕೆ ದಿಗ್ಗಜರ ಬೆಂಬಲ
Image Credit : Asianet News

ಗೇಮ್‌ ಚೇಂಜರ್ ಬಣಕ್ಕೆ ದಿಗ್ಗಜರ ಬೆಂಬಲ

ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್‌ ಚೇಂಜರ್ ಬಣಕ್ಕೆ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಸೇರಿದಂತೆ ಹಲವು ದಿಗ್ಗಜರು ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದರು.

57
ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ತಿರಸ್ಕೃತ
Image Credit : Asianet News

ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ತಿರಸ್ಕೃತ

ಇದೆಲ್ಲದರ ನಡುವೆ ಬ್ರಿಜೇಶ್ ಪಟೇಲ್ ಬೆಂಬಲಿತ ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ಅವರ ನಾಮಪತ್ರ ತಾಂತ್ರಿಕವಾಗಿ ತಿರಸ್ಕೃತಗೊಂಡಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಹೀಗಾಗಿ ವೆಂಕಟೇಶ ಪ್ರಸಾದ್ ಕೆಎಸ್‌ಸಿಎ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

67
ಕೆ ಎನ್ ಶಾಂತಕುಮಾರ್ ನಾಮಪತ್ರ ಅಸಿಂಧು
Image Credit : Asianet News

ಕೆ ಎನ್ ಶಾಂತಕುಮಾರ್ ನಾಮಪತ್ರ ಅಸಿಂಧು

ನವೆಂಬರ್ 24ರ ನಾಮಪತ್ರ ಪರಿಶೀಲನೆ ವೇಳೆ, ಶಾಂತಕುಮಾರ್ ಅವರ ಕೆಎಸ್‌ಸಿಎ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಯಾವುದೋ ಒಂದು ಶುಲ್ಕ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಅವರ ನಾಮಪತ್ರವನ್ನು ಅಸಿಂಧುಗೊಳಿಸಲಾಗಿದೆ ಎಂದು ವರದಿಯಾಗಿದೆ.

77
ಡಿಸೆಂಬರ್ 07ಕ್ಕೆ ಕೆಎಸ್‌ಸಿಎ ಚುನಾವಣೆ
Image Credit : our own

ಡಿಸೆಂಬರ್ 07ಕ್ಕೆ ಕೆಎಸ್‌ಸಿಎ ಚುನಾವಣೆ

ಸದ್ಯ ಕೆಎಸ್‌ಸಿಎ ಅಧ್ಯಕ್ಷ ಸ್ಥಾನ ಅಂತಿಮವಾಗಿದ್ದರು, ಇನ್ನುಳಿದ ಹುದ್ದೆಗಳಿಗಾಗಿ ಈ ಮೊದಲೇ ನಿಗದಿಯಾದಂತೆ ಮುಂಬರುವ ಡಿಸೆಂಬರ್ 07ರಂದು ಯಥಾಪ್ರಕಾರ ಚುನಾವಣೆ ನಡೆಯಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಕರ್ನಾಟಕ ಕ್ರಿಕೆಟ್
ಬೆಂಗಳೂರು

Latest Videos
Recommended Stories
Recommended image1
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
Recommended image2
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!
Recommended image3
ಕೆಎಸ್‌ಸಿಎ ಚುನಾವಣಾ ಅಖಾಡಕ್ಕೆ ಮಲೆನಾಡಿನ ಕ್ರಿಕೆಟಿಗ ನಾಗೇಂದ್ರ ಪಂಡಿತ್!
Related Stories
Recommended image1
KSCA Elections 2025: ಬ್ರಿಜೇಶ್ ಪಟೇಲ್ ಕಪಿಮುಷ್ಠಿಯಲ್ಲಿ ಕೆಎಸ್‌ಸಿಎ: ವೆಂಕಟೇಶ್ ಪ್ರಸಾದ್ ಕಿಡಿ!
Recommended image2
KSCA ನಿಷ್ಕ್ರಿಯ, ಶೀಘ್ರ ಚುನಾವಣೆ ಘೋಷಿಸಿ: ವೆಂಕಟೇಶ್ ಪ್ರಸಾದ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved