MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ವಿರಾಟ್ ಕೊಹ್ಲಿಗೆ ರಕ್ತದಲ್ಲಿ ಬಿಡಿಸಿದ ಭಾವಚಿತ್ರ ಅರ್ಪಿಸಿದ ಚಿತ್ರಕಲಾ ಶಿಕ್ಷಕ

ವಿರಾಟ್ ಕೊಹ್ಲಿಗೆ ರಕ್ತದಲ್ಲಿ ಬಿಡಿಸಿದ ಭಾವಚಿತ್ರ ಅರ್ಪಿಸಿದ ಚಿತ್ರಕಲಾ ಶಿಕ್ಷಕ

ಬಾಗಲಕೋಟೆ (ಮೇ 20): ಬಾಗಲಕೋಟೆಯ ಚಿತ್ರಕಲಾ ಶಿಕ್ಷಕನೊಬ್ಬ ತನ್ನ ದೇಹದ ರಕ್ತ ಬಸಿದು, ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಭಾವಚಿತ್ರ ಬರೆದಿದ್ದಾನೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವಿನ ಮೂಲಕ ಐಪಿಎಲ್‌ 2024ರ ಋತುವಿನಲ್ಲಿ ಪ್ಲೇಆಪ್ ಹಂತವನ್ನು ತಲುಪಿದ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಚಿತ್ರಕಲಾ ಶಿಕ್ಷಕ ರಕ್ತದಿಂದ ಕೊಹ್ಲಿ ಭಾವಚಿತ್ರ ಬಿಡಿಸಿದ್ದಾನೆ.

1 Min read
Author : Sathish Kumar KH
Published : May 20 2024, 04:59 PM IST
Share this Photo Gallery
  • FB
  • TW
  • Linkdin
  • Whatsapp
16

ಆರ್‌ಸಿಬಿ ಸತತವಾಗಿ 6 ಪಂದ್ಯಗಳನ್ನು ಸೋತು ಐಪಿಎಲ್ ಟೂರ್ನಿಯಿಂದ ಹೊರಬೀಳುತ್ತದೆ ಎಂಬುದು ಖಚಿತವಾಗಿತ್ತು. ಇದಕ್ಕೆ ಬೆಂಗಳೂರಿನ ಜನತೆ ಇದೇನಾ ಆರ್‌ಸಿಬಿ ಹೊಸ ಅಧ್ಯಾಯ ಎಂದು ಭಾರಿ ಟೀಕೆ ಮಾಡಿ ತಂಡದ ಎಲ್ಲ ಸದಸ್ಯರಿಗೂ ಮಂಗಳಾರತಿ ಮಾಡಿದ್ದರು.

26

ಇದರ ಬೆನ್ನಲ್ಲಿಯೇ ಸತತವಾಗಿ 6 ಪಂದ್ಯಗಳನ್ನು ಗೆದ್ದ ಆರ್‌ಸಿಬಿ ತಂಡವು ಕಳೆದೆರಡು ದಿನಗಳ ಹಿಂದೆ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೂ ಭಾರಿ ಅಂತರದಲ್ಲಿ ಗೆದ್ದು ರೇಟಿಂಗ್ ಪಾಯಿಂಟ್ಸ್ ಮೂಲಕ ಪ್ಲೇ ಹಂತವನ್ನು ತಲುಪಿದೆ.

36

ಆರ್‌ಸಿಬಿ ಸತತವಾಗಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಿದ್ದ ಹಾಗೂ ಕಳೆದ ಹಲವು ವರ್ಷಗಳಿಂದ ಆರ್‌ಸಿಬಿ ಪರವಾಗಿ ಆಟವಾಡುತ್ತಿರುವ ವಿರಾರ್ ಕೊಹ್ಲಿ ಕೊಡುಗೆ ಅಗ್ರಗಣ್ಯವಾಗಿದೆ. ಹೀಗಾಗಿ, ಬಾಗಲಕೋಟೆ ಚಿತ್ರಕಲಾ ಶಿಕ್ಷಕನೊಬ್ಬ ತನ್ನ ದೇಹದ ರಕ್ತವನ್ನು ಬಸಿದು ವಿರಾಟ್ ಕೊಹ್ಲಿ ಅವರ ಭಾವಚಿತ್ರವನ್ನು ಬಿಡಿಸಿದ್ದಾನೆ.

46

ಶಿವಾನಂದ ನೀಲನ್ನವರ  ರಕ್ತದಲ್ಲಿ ವಿರಾಟ್ ಕೊಹ್ಲಿ ಭಾವಚಿತ್ರ ಬರೆದ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರನ್ನ ಬೆಳಗಲಿಯ ಚಿತ್ರಕಲಾ ಶಿಕ್ಷಕ  ಶಿವಾನಂದ ನೀಲನ್ನವರ ಅವರು ಸಿಎಸ್‌ಕೆ ಎದುರಿನ ಪಂದ್ಯವನ್ನು ಆರ್‌ಸಿಬಿ ಗೆದ್ದ ಬಳಿಕ ಕೊಹ್ಲಿ ಮೇಲಿನ ಅಭಿಮಾನ ತೋರಿಸಲು ರಕ್ತದಲ್ಲಿ ಚಿತ್ರ ಬರೆದಿದ್ದಾರೆ.

56

ಇನ್ನು ತಮ್ಮ ದೇಹದ ರಕ್ತದಿಂದ ಬಿಡಿಸಿರೋ ಚಿತ್ರಕಲೆಯನ್ನ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರಿಗೆ ತೋರಿಸಬೇಕೆಂಬ ಬಯಕೆಯನ್ನು ಹೊತ್ತಿದ್ದಾರೆ. ಆರ್‌ಸಿಬಿ ಪ್ಲೇ ಆಫ್ ಮ್ಯಾಚ್ ಆಡುವ ಕ್ರೀಡಾಂಗಣಕ್ಕೆ ರಕ್ತದಲ್ಲಿ ಬರೆದಿರುವ ವಿರಾಟ್ ಕೊಹ್ಲಿ ಅವರ ಭಾವಚಿತ್ರಕ್ಕೆ ಫ್ರೇಮ್ ಹಾಕಿಸಿ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ.

66

ಬಾಗಲಕೋಟೆ ಜಿಲ್ಲೆಯ ರನ್ನ ಬೆಳಗಲಿಯ ಎಸ್‌ಸಿಪಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಶಿವಾನಂದ ನೀಲನ್ನವರ ಮುಂದಿನ ಐಪಿಎಲ್ ಮ್ಯಾಚ್‌ಗೆ ಹೋಗಲು ಸಿದ್ಧತೆ ಮಾಡಿಕೊಂಡಿದ್ದು, ಕೊಹ್ಲಿ ಅವರಿಗೆ ಹೇಗೆ ತೋರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ವಿರಾಟ್ ಕೊಹ್ಲಿ

Latest Videos
Recommended Stories
Recommended image1
ಸಚಿನ್ ಅಂಜಲಿಯಂತೆ ಪುತ್ರ ಅರ್ಜುನ್ ಸಾನಿಯಾ ಜೋಡಿಯಲ್ಲಿದೆ ವಯಸ್ಸಿನ ಅಂತರ
Recommended image2
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಈ ಆಟಗಾರನನ್ನು ಕೈಬಿಡಿ ಎಂದು ಅಚ್ಚರಿ ಸಲಹೆ ಕೊಟ್ಟ ರವಿಶಾಸ್ತ್ರಿ!
Recommended image3
ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved