MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • Virat Kohli's Kannada Flag Gesture: ಹಳದಿ-ಕೆಂಪು ಕನ್ನಡದ ಬಾವುಟ ಹಿಡಿದು ಆರ್‌ಸಿಬಿ ಗೆಲುವು ಸಂಭ್ರಮಿಸಿದ ವಿರಾಟ್ ಕೊಹ್ಲಿ!

Virat Kohli's Kannada Flag Gesture: ಹಳದಿ-ಕೆಂಪು ಕನ್ನಡದ ಬಾವುಟ ಹಿಡಿದು ಆರ್‌ಸಿಬಿ ಗೆಲುವು ಸಂಭ್ರಮಿಸಿದ ವಿರಾಟ್ ಕೊಹ್ಲಿ!

ಐಪಿಎಲ್ 2025 ಟ್ರೋಫಿ ಗೆದ್ದ ಆರ್‌ಸಿಬಿ ತಂಡ ಬೆಂಗಳೂರಿಗೆ ಆಗಮಿಸಿ ವಿಜಯೋತ್ಸವ ಆಚರಿಸಿದೆ. ವಿರಾಟ್ ಕೊಹ್ಲಿ ಕನ್ನಡದ ಬಾವುಟ ಹಿಡಿದು ಅಭಿಮಾನಿಗಳಿಗೆ ನಮನ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಂಡವನ್ನು ಬರಮಾಡಿಕೊಂಡರು.

1 Min read
Sathish Kumar KH
Published : Jun 04 2025, 03:54 PM IST| Updated : Jun 04 2025, 07:11 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರು (ಜೂ.04): ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ 2025ರ ಟ್ರೋಫಿ ಗೆಲುವಿನ ಬೆನ್ನಲ್ಲಿಯೇ ಈ ಸಲ ಕಪ್ ನಮ್ಮದು ಎಂಬ ಕನ್ನಡದ ವಾಕ್ಯವನ್ನು ಇಡೀ ವಿಶ್ವದ ಜನರ ಬಾಯಲ್ಲಿ ಹೇಳಿಸಿದ್ದರು. ಇದೀಗ ಆರ್‌ಸಿಬಿ ವಿಜಯೋತ್ಸವಕ್ಕೆ ಬಂದಿರುವ ವಿರಾಟ್ ಕೊಹ್ಲಿ ಕನ್ನಡದ ಹಳದಿ-ಕೆಂಪು ಬಾವುಟವನ್ನು ಹಿಡಿದು ಕನ್ನಡದ ಅಭಿಮಾನಿಗಳಿಗೆ ನಮನವನ್ನು ಅರ್ಪಿಸಿದರು.

25
Image Credit : Asianet News

ಗುಜರಾತಿನ ಅಹಮದಾಬಾದ್ ನಗರದಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ತಂಡವನ್ನು ಮಣಿಸಿ 18ನೇ ಸೀಸನ್‌ನ ಐಪಿಎಲ್ ಟ್ರೋಫಿಯನ್ನು ಜಯಿಸಿದ ನಂತರ ವಿರಾಟ್ ಕೊಹ್ಲಿ ಹಾದಿಯಾಗಿ ಎಲ್ಲರೀ ಈ ವಿಜಯೋತ್ಸವ ಸಂಭ್ರಮವನ್ನು ತವರೂರು ಬೆಂಗಳೂರಿನಲ್ಲಿ ಆಚರಣೆ ಮಾಡಬೇಕು ಎಂದು ತುದಿಗಾಲಲ್ಲಿ ಕಾಯುತ್ತಿದ್ದರು.

Related Articles

Related image1
ಆರ್‌ಸಿಬಿ ವಿಜಯೋತ್ಸವಕ್ಕೆ ಉಚಿತ ಪ್ರವೇಶವಿಲ್ಲ; ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಟಿಕೆಟೋ, ಪಾಸೋ..?
Related image2
ಆರ್‌ಸಿಬಿ ಗೆಲುವಿನಿಂದ ಇಡೀ ದೇಶ ಕನ್ನಡ ಮಾತಾಡಿತು, ಈ ಸಲ ಕಪ್ ನಮ್ದು
35
Image Credit : Asianet News

ಈ ಕ್ಷಣಕ್ಕಾಗಿ ನಿದ್ದೆಯೂ ಮಾಡದಂತೆ ಕಾತುರದಿಂದ ಕಾಯುತ್ತಿದ್ದ ಆರ್‌ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರಾಟ್ ಕೊಹ್ಲಿ ಅವರನ್ನು ಬರಮಾಡಿಕೊಂಡು ಅವರ ಕೈಗೆ ಆರ್‌ಸಿಬಿ ಹಾಗೂ ಕನ್ನಡದ ಬಾವುಟವನ್ನು ಕೊಟ್ಟು ಸ್ವಾಗತಿಸಿದರು.

45
Image Credit : Asianet News

ಈ ವೇಳೆ ವಿರಾಟ್ ಕೊಹ್ಲಿ ತಮ್ಮ ಕೈಯಲ್ಲಿ ಕನ್ನಡದ ಹಳದಿ-ಕೆಂಪು ಬಾವುಟವನ್ನು ಹಿಡಿದು ಬೀಸುತ್ತಾ ನಗುತ್ತಲೇ ಅಭಿಮಾನಿಗಳಿಗೆ ನಮನ ಅರ್ಪಿಸಿದರು. ಈ ಕ್ಷಣವನ್ನು ಕಣ್ತುಂಬಿಕೊಂಡ ಕನ್ನಡದ ಜನತೆ ಕರಾಡತನ ಜೋರಾಗಿತ್ತು.

55
Image Credit : Asianet News

ಇದೇ ವೇಳೆ ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮಾಜಿ ಆಟಗಾರ ದಿನೇಶ್ ಕಾರ್ತಿಕ್, ಹಾಲಿ ಆರ್‌ಸಿಬಿ ಆಟಗಾರರಾದ ಟಿಮ್ ಡೇವಿಡ್, ಕೃನಾಲ್ ಪಾಂಡ್ಯ ಸೇರಿದಂತೆ ಎಲ್ಲ ಆಟಗಾರರಿಗೆ ಹೂಗುಚ್ಛ ಕೊಟ್ಟು ಸ್ವಾಗತಿಸಿದರು.

Welcome Home Boys♥️🏆

18 ವರ್ಷಗಳ ಕನಸನ್ನು 18ನೇ ಐಪಿಎಲ್ ಆವೃತ್ತಿಯಲ್ಲಿ ನನಸು ಮಾಡಿ, ನಮ್ಮ ಹುಡುಗ್ರು ತವರಿನ ಅಂಗಳಕ್ಕೆ ವಾಪಸ್ಸಾಗಿದ್ದಾರೆ.

ಈ ಶುಭ ಸಂದರ್ಭದಲ್ಲಿ, ಇತಿಹಾಸ ಸೃಷ್ಟಿಸಿದ ಆರ್‌ಸಿಬಿ ತಂಡಕ್ಕೆ ಕರ್ನಾಟಕದ ಮಣ್ಣಿನಿಂದ ಪ್ರೀತಿಯ, ಭವ್ಯ ಸ್ವಾಗತ! 

Truly an honour to welcome you all to #NammaBengaluru!… pic.twitter.com/u3mnRjKp2O

— DK Shivakumar (@DKShivakumar) June 4, 2025

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ವಿರಾಟ್ ಕೊಹ್ಲಿ
ಆರ್‌ಸಿಬಿ
ಬೆಂಗಳೂರು
ಡಿ.ಕೆ. ಶಿವಕುಮಾರ್
ಎಂ ಚಿನ್ನಸ್ವಾಮಿ ಕ್ರೀಡಾಂಗಣ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved