MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಈತ ಭಾರತ ಏಕದಿನ ತಂಡದಲ್ಲಿ ಯಾಕಿದ್ದಾನೆ? ಗಾಯಕ್ವಾಡ್ ಬದಲಿಗೆ ಈ ಆಟಗಾರನಿಗೆ ಸ್ಥಾನ ನೀಡಿದ್ದಕ್ಕೆ ಕಿಡಿಕಾರಿದ ಮಾಜಿ ಕ್ರಿಕೆಟರ್!

ಈತ ಭಾರತ ಏಕದಿನ ತಂಡದಲ್ಲಿ ಯಾಕಿದ್ದಾನೆ? ಗಾಯಕ್ವಾಡ್ ಬದಲಿಗೆ ಈ ಆಟಗಾರನಿಗೆ ಸ್ಥಾನ ನೀಡಿದ್ದಕ್ಕೆ ಕಿಡಿಕಾರಿದ ಮಾಜಿ ಕ್ರಿಕೆಟರ್!

ಚೆನ್ನೈ: ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಅಜಿತ್‌ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೆಲವೊಂದು ಅಚ್ಚರಿ ತೀರ್ಮಾನ ತೆಗೆದುಕೊಂಡಿದೆ. ಈ ಪೈಕಿ ಋತುರಾಜ್ ಗಾಯಕ್ವಾಡ್ ಕೈಬಿಟ್ಟಿದ್ದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ ಹೊರಹಾಕಿದ್ದಾರೆ. 

2 Min read
Author : Naveen Kodase
Published : Jan 05 2026, 03:21 PM IST
Share this Photo Gallery
  • FB
  • TW
  • Linkdin
  • Whatsapp
110
ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ
Image Credit : Getty

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ

ಇದೇ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಗಿಲ್‌ ನಾಯಕರಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಇದರ ಜತೆಗೆ ರಿಷಭ್ ಪಂತ್, ಮೊಹಮ್ಮದ್ ಸಿರಾಜ್ ಕೂಡಾ ತಂಡ ಕೂಡಿಕೊಂಡಿದ್ದಾರೆ.

210
ಶಮಿ ಸೇರಿ ಹಲವರಿಗೆ ನಿರಾಸೆ
Image Credit : Getty

ಶಮಿ ಸೇರಿ ಹಲವರಿಗೆ ನಿರಾಸೆ

ಇನ್ನು ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಪುಣೆ ಮೂಲದ ಋತುರಾಜ್ ಗಾಯಕ್ವಾಡ್, ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‌ಗೆ ನಿರಾಸೆ ಎದುರಾಗಿದೆ.

Related Articles

Related image1
ಮೊಹಮ್ಮದ್ ಶಮಿ ಯಾಕೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿಲ್ಲ; ಕೊನೆಗೂ ಬಯಲಾಯ್ತು ಸತ್ಯ!
Related image2
'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!
310
ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ ಬದ್ರಿನಾಥ್
Image Credit : Getty

ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ ಬದ್ರಿನಾಥ್

ಇದೀಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಕಿವೀಸ್‌ ಸರಣಿಗೆ ಆಯ್ಕೆ ಮಾಡಿದ ತಂಡದ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದ್ರಿನಾಥ್ ಗಂಭೀರವಾದ ಸವಾಲು ಹಾಕಿದ್ದಾರೆ.

410
ಆಯ್ಕೆ ಸಮಿತಿ ಪ್ರಶ್ನಿಸಿದ ಮಾಜಿ ಕ್ರಿಕೆಟರ್
Image Credit : Getty

ಆಯ್ಕೆ ಸಮಿತಿ ಪ್ರಶ್ನಿಸಿದ ಮಾಜಿ ಕ್ರಿಕೆಟರ್

ಫಾರ್ಮ್‌ನಲ್ಲಿರುವ ಋತುರಾಜ್ ಗಾಯಕ್ವಾಡ್ ಅವರನ್ನು ಕೈಬಿಟ್ಟು ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದೇಕೆ ಎಂದು ಎಸ್‌ ಬದ್ರಿನಾಥ್ ಪ್ರಶ್ನಿಸಿದ್ದಾರೆ.

510
ಆಯ್ಕೆ ಸಮಿತಿ ಮೇಲೆ ಕಿಡಿಕಾರಿದ ಬದ್ರಿನಾಥ್
Image Credit : X/NKReddy07

ಆಯ್ಕೆ ಸಮಿತಿ ಮೇಲೆ ಕಿಡಿಕಾರಿದ ಬದ್ರಿನಾಥ್

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂಡದಲ್ಲಿ ಈಗಾಗಲೇ ತಜ್ಞ ಆಲ್ರೌಂಡರ್ ಇರುವಾಗ, ನಿತೀಶ್ ಕುಮಾರ್ ರೆಡ್ಡಿಯನ್ನು ಆಯ್ಕೆ ಸಮಿತಿ ಯಾವ ಕಾರಣಕ್ಕೆ ಆಯ್ಕೆ ಮಾಡಿದೆಯೋ ಗೊತ್ತಾಗುತ್ತಿಲ್ಲ. 

610
ಫಾರ್ಮ್‌ನಲ್ಲಿರುವ ಗಾಯಕ್ವಾಡ್ ಕೈಬಿಟ್ಟು ನಿತೀಶ್ ಆಯ್ಕೆ ಮಾಡಿದ್ದೇಕೆ?
Image Credit : X/NKReddy07

ಫಾರ್ಮ್‌ನಲ್ಲಿರುವ ಗಾಯಕ್ವಾಡ್ ಕೈಬಿಟ್ಟು ನಿತೀಶ್ ಆಯ್ಕೆ ಮಾಡಿದ್ದೇಕೆ?

ಫಾರ್ಮ್‌ನಲ್ಲಿರುವ ಗಾಯಕ್ವಾಡ್ ಅವರನ್ನು ಬಿಟ್ಟು ನಿತೀಶ್ ಕುಮಾರ್ ರೆಡ್ಡಿ ಆಯ್ಕೆ ಮಾಡಿದ್ದೇಕೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದು ಬದ್ರಿನಾಥ್ ಹೇಳಿದ್ದಾರೆ.

710
ಇಬ್ಬರು ಆಲ್ರೌಂಡರ್ ಇರುವಾಗ ನಿತೀಶ್ ಕುಮಾರ್ ಯಾಕೆ?
Image Credit : X/NKReddy07

ಇಬ್ಬರು ಆಲ್ರೌಂಡರ್ ಇರುವಾಗ ನಿತೀಶ್ ಕುಮಾರ್ ಯಾಕೆ?

ಸದ್ಯ ಈಗಾಗಲೇ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಹೀಗೆ ಇಬ್ಬರು ತಜ್ಞ ಆಲ್ರೌಂಡರ್‌ಗಳಿದ್ದಾರೆ. ಇದರ ಹೊರತಾಗಿ ಮತ್ತೋರ್ವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಆತ ಏಕದಿನ ತಂಡದಲ್ಲಿ ಯಾಕಿದ್ದಾನೆ ಎನ್ನುವುದು ನನಗಂತೂ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

810
ನಿತೀಶ್ ಕುಮಾರ್ ರೆಡ್ಡಿ ಮೇಲೆ ಬದ್ರಿನಾಥ್ ಟೀಕೆ
Image Credit : X/BCCI

ನಿತೀಶ್ ಕುಮಾರ್ ರೆಡ್ಡಿ ಮೇಲೆ ಬದ್ರಿನಾಥ್ ಟೀಕೆ

ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಲ್ರೌಂಡರ್ ಎಂದು ಆಯ್ಕೆ ಮಾಡಲಾಗಿದೆ ಎನ್ನುತ್ತಾರೆ. ಆದರೆ ಆತನ ಎಸೆತಗಳನ್ನು ಬ್ಯಾಟರ್‌ಗಳು ಮೂಲೆ ಮೂಲೆಗೆ ಬೌಂಡರಿ ಚಚ್ಚುತ್ತಿದ್ದಾರೆ. ಹೀಗಿರುವಾಗ ಋತುರಾಜ್ ಗಾಯಕ್ವಾಡ್ ಕೈಬಿಟ್ಟು ನಿತೀಶ್ ಕುಮಾರ್ ರೆಡ್ಡಿ ಆಯ್ಕೆ ಮಾಡಿದ್ದು ನಿಜಕ್ಕೂ ಅನ್ಯಾಯವೇ ಸರಿ ಎಂದು ಬದ್ರಿನಾಥ್ ಹೇಳಿದ್ದಾರೆ.

910
ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಗಾಯಕ್ವಾಡ್‌ಗಿಲ್ಲ ಸ್ಥಾನ
Image Credit : X/BCCI

ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಗಾಯಕ್ವಾಡ್‌ಗಿಲ್ಲ ಸ್ಥಾನ

ಋತುರಾಜ್ ಗಾಯಕ್ವಾಡ್ ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಕೇವಲ 83 ಎಸೆತಗಳಲ್ಲಿ 105 ರನ್ ಸಿಡಿಸಿದ್ದರು. ದೇಶಿ ಕ್ರಿಕೆಟ್‌ನಲ್ಲೂ ಗಾಯಕ್ವಾಡ್ ಮಿಂಚುತ್ತಿದ್ದಾರೆ. ಹೀಗಿದ್ದೂ ಕಿವೀಸ್ ಎದುರಿನ ಏಕದಿನ ಸರಣಿಯಲ್ಲಿ ಋತುರಾಜ್‌ಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

1010
ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ
Image Credit : X/BCCI

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜನವರಿ 11ರಂದು ಬರೋಡದಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಜನವರಿ 14ರಂದು ರಾಜ್‌ಕೋಟ್‌ನಲ್ಲಿ ಹಾಗೂ ಜನವರಿ 18ರಂದು ಇಂದೋರ್‌ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಬಿಸಿಸಿಐ
ಅಜಿತ್ ಅಗರ್ಕರ್

Latest Videos
Recommended Stories
Recommended image1
ಶತಕ ಚಚ್ಚಿ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ ಜೋ ರೂಟ್! ಇಂಗ್ಲೆಂಡ್ ಬ್ಯಾಟರ್ ಮುಂದಿನ ಟಾರ್ಗೆಟ್ ಸಚಿನ್ ರೆಕಾರ್ಡ್
Recommended image2
ಟಿ20 ವಿಶ್ವಕಪ್‌ನಲ್ಲಿ ಈತನೇ ಭಾರತದ ಎಕ್ಸ್‌ ಫ್ಯಾಕ್ಟರ್ ಎಂದ ಎಬಿ ಡಿವಿಲಿಯರ್ಸ್‌! ಆದ್ರೆ ಅದು ಅಭಿಷೇಕ್, ಬುಮ್ರಾ ಅಲ್ಲ
Recommended image3
ಮೊಹಮ್ಮದ್ ಶಮಿ ಯಾಕೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿಲ್ಲ; ಕೊನೆಗೂ ಬಯಲಾಯ್ತು ಸತ್ಯ!
Related Stories
Recommended image1
ಮೊಹಮ್ಮದ್ ಶಮಿ ಯಾಕೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿಲ್ಲ; ಕೊನೆಗೂ ಬಯಲಾಯ್ತು ಸತ್ಯ!
Recommended image2
'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved