MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಬೆಂಗಳೂರಲ್ಲಿ ಐಪಿಎಲ್ ಆಯೋಜನೆ ಆಗುತ್ತಾ? ಇಂದೇ ಅಂತಿಮ ನಿರ್ಧಾರ ಪ್ರಕಟ!

ಬೆಂಗಳೂರಲ್ಲಿ ಐಪಿಎಲ್ ಆಯೋಜನೆ ಆಗುತ್ತಾ? ಇಂದೇ ಅಂತಿಮ ನಿರ್ಧಾರ ಪ್ರಕಟ!

ಬೆಂಗಳೂರು: 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಲಿದೆಯೇ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ 

1 Min read
Author : Naveen Kodase
Published : Mar 13 2026, 10:51 AM IST
Share this Photo Gallery
  • FB
  • TW
  • Linkdin
  • Whatsapp
16
ಇಂದು ಅಧಿಕೃತ ತೀರ್ಮಾನ?
Image Credit : Gemini

ಇಂದು ಅಧಿಕೃತ ತೀರ್ಮಾನ?

2026ರ ಐಪಿಎಲ್‌ನ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆಯೇ ಇಲ್ಲವೇ ಎಂಬುದು ಶುಕ್ರವಾರ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ, ಪಂದ್ಯಗಳಿಗೆ ಹಸಿರು ನಿಶಾನೆ ತೋರುವುದು ಬಹುತೇಕ ಖಚಿತ ಎಂದು ಗೊತ್ತಾಗಿದೆ.

26
ಬಿಸಿಸಿಐ ನಿಯಮವೇನು?
Image Credit : Gemini AI

ಬಿಸಿಸಿಐ ನಿಯಮವೇನು?

ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ಸರ್ಕಾರ ಈಗ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ, ಯಾವುದೇ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಬೇಕಿದ್ದರೆ ಅಲ್ಲಿನ ರಾಜ್ಯ ಸರ್ಕಾರದ ಷರತ್ತು ರಹಿತ ಅನುಮತಿಯನ್ನು ಪಡೆದಿರಬೇಕು ಎಂಬುದು ಬಿಸಿಸಿಐ ನಿಯಮ.

Related Articles

Related image1
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೈಶಾಕ್! RCB ಮಾಜಿ ವೇಗಿ ಮದುವೆಗೆ ಬಂದು ಶುಭ ಹಾರೈಸಿದ ಕಿಚ್ಚ ಸುದೀಪ್
Related image2
IPL 2026 ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ, ಮಾ.28ಕ್ಕೆ ಹಾಲಿ ಚಾಂಪಿಯನ್‌ ಆರ್‌ಸಿಬಿಗೆ ಇವರೇ ಎದುರಾಳಿ!
36
ಷರತ್ತಿಲ್ಲದ ಅನುಮತಿ ಪತ್ರ ನೀಡುವುದಾಗಿ ಸರ್ಕಾರ ತಿಳಿಸಿದೆ
Image Credit : Getty

ಷರತ್ತಿಲ್ಲದ ಅನುಮತಿ ಪತ್ರ ನೀಡುವುದಾಗಿ ಸರ್ಕಾರ ತಿಳಿಸಿದೆ

ಹೀಗಾಗಿ ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ)ಗೆ ಷರತ್ತಿಲ್ಲದ ಅನುಮತಿ ಬೇಕಿದೆ. ಕ್ರೀಡಾಂಗಣದಲ್ಲಿ ಆಗಬೇಕಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದ ಬಳಿಕವೇ ಷರತ್ತಿಲ್ಲದ ಅನುಮತಿ ಪತ್ರ ನೀಡುವುದಾಗಿ ಸರ್ಕಾರ ತಿಳಿಸಿತ್ತು.

46
ಸರ್ಕಾರದ ನಿರ್ಧಾರವೇನು?
Image Credit : social media

ಸರ್ಕಾರದ ನಿರ್ಧಾರವೇನು?

ಸರ್ಕಾರ ನಿಯೋಜಿಸಿದ ತಜ್ಞರ ಸಮಿತಿಯು ಮಾ.13ರಂದು ಕ್ರೀಡಾಂಗಣದಲ್ಲಿ ಅಂತಿಮ ಸುತ್ತಿನ ಪರಿಶೀಲನೆ ನಡೆಸಿ, ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಅದನ್ನು ಅವಲೋಕಿಸಿ ಸರ್ಕಾರ ಅನುಮತಿ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

56
ಇಂದು ಸಂಜೆಯೊಳಗೆ ಅಧಿಕೃತ ತೀರ್ಮಾನ
Image Credit : Getty

ಇಂದು ಸಂಜೆಯೊಳಗೆ ಅಧಿಕೃತ ತೀರ್ಮಾನ

ಈ ಬಗ್ಗೆ ‘ಕನ್ನಡಪ್ರಭ’ ಪತ್ರಿಕೆಗೆ ಮಾಹಿತಿ ನೀಡಿರುವ ಕೆಎಸ್‌ಸಿಎ ಮಾಧ್ಯಮ ವಕ್ತಾರ ವಿನಯ್‌ ಮೃತ್ಯುಂಜಯ, ‘ತಜ್ಞರ ಸಮಿತಿ ಕ್ರೀಡಾಂಗಣದಲ್ಲಿ ಪರಿಶೀಲನೆ ನಡೆಸಲಿದೆ. ಅದರ ಬಳಿಕ ಸರ್ಕಾರದ ನಿರ್ಧಾರದ ಬಗ್ಗೆ ಸಂಜೆ ವೇಳೆ ನಾವು ಮಾಹಿತಿ ನೀಡಲಿದ್ದೇವೆ’ ಎಂದಿದ್ದಾರೆ.

66
ಆರ್‌ಸಿಬಿ-ಸನ್‌ರೈಸರ್ಸ್ ಹೈದರಾಬಾದ್ ನಡುವೆ ಹೈವೋಲ್ಟೇಜ್ ಮ್ಯಾಚ್
Image Credit : X/ Tanuj

ಆರ್‌ಸಿಬಿ-ಸನ್‌ರೈಸರ್ಸ್ ಹೈದರಾಬಾದ್ ನಡುವೆ ಹೈವೋಲ್ಟೇಜ್ ಮ್ಯಾಚ್

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಮ್ಯಾಚ್‌ಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸುವುದು ಬಹುತೇಕ ಖಚಿತವೆನಿಸಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಎಂ ಚಿನ್ನಸ್ವಾಮಿ ಕ್ರೀಡಾಂಗಣ
ಆರ್‌ಸಿಬಿ
Latest Videos
Recommended Stories
Recommended image1
ಮಧ್ಯಪ್ರಾಚ್ಯ ಯುದ್ದದಿಂದಾಗಿ ಐಪಿಎಲ್‌ಗೂ ಸಂಕಷ್ಟ! ಈ ಎರಡು ದೇಶಗಳ ಆಟಗಾರರು ಪಾಲ್ಗೊಳ್ಳೋದು ಮತ್ತಷ್ಟು ತಡ
Recommended image2
ಹಟಮಾರಿ ಗರ್ಲ್‌ಫ್ರೆಂಡ್..! ಟೀಂ ಫೋಟೋಗೆ ಜಾಗ ಬಿಡಿ ಅಂದ್ರೂ ಹಾರ್ದಿಕ್ ಗರ್ಲ್‌ಫ್ರೆಂಡ್ ಕೇಳಲಿಲ್ಲ! ವಿಡಿಯೋ ವೈರಲ್
Recommended image3
ಕಾವ್ಯಾ ಮಾರನ್ ವಿರುದ್ಧ ನೆಟ್ಟಿಗರ ಆಕ್ರೋಶ: ಕೋಟಿ ಕೋಟಿ ಕೊಟ್ಟು ಪಾಕ್‌ ಆಟಗಾರನ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್!
Related Stories
Recommended image1
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೈಶಾಕ್! RCB ಮಾಜಿ ವೇಗಿ ಮದುವೆಗೆ ಬಂದು ಶುಭ ಹಾರೈಸಿದ ಕಿಚ್ಚ ಸುದೀಪ್
Recommended image2
IPL 2026 ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ, ಮಾ.28ಕ್ಕೆ ಹಾಲಿ ಚಾಂಪಿಯನ್‌ ಆರ್‌ಸಿಬಿಗೆ ಇವರೇ ಎದುರಾಳಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved