MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆರ್‌ಸಿಬಿ ನನ್ನನ್ನು ರೀಟೈನ್‌ ಮಾಡಿದ್ದು ಕೇಳಿ ಭಾವುಕಳಾದೆ: ಶ್ರೇಯಾಂಕಾ ಪಾಟೀಲ್

ಆರ್‌ಸಿಬಿ ನನ್ನನ್ನು ರೀಟೈನ್‌ ಮಾಡಿದ್ದು ಕೇಳಿ ಭಾವುಕಳಾದೆ: ಶ್ರೇಯಾಂಕಾ ಪಾಟೀಲ್

ಬೆಂಗಳೂರು: ನಾಲ್ಕನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ರೀಟೈನ್ ಮಾಡಿಕೊಂಡ ಕ್ಷಣವನ್ನು ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ನೆನಪು ಮಾಡಿಕೊಂಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

1 Min read
Author : Naveen Kodase
Published : Jan 08 2026, 09:11 AM IST
Share this Photo Gallery
  • FB
  • TW
  • Linkdin
  • Whatsapp
16
ನಾಲ್ಕನೇ ಸೀಸನ್ WPL ಎದುರು ನೋಡುತ್ತಿರುವ ಶ್ರೇಯಾಂಕಾ
Image Credit : Twitter

ನಾಲ್ಕನೇ ಸೀಸನ್ WPL ಎದುರು ನೋಡುತ್ತಿರುವ ಶ್ರೇಯಾಂಕಾ

ಶುಕ್ರವಾರದಿಂದ ಆರಂಭಗೊಳ್ಳಲಿರುವ 4ನೇ ಆವೃತ್ತಿಯ ಡಬ್ಲ್ಯುಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಲಿರುವ ಕನ್ನಡತಿ ಶ್ರೇಯಾಂಕಾ ಪಾಟೀಲ್, ಈ ಋತುವಿಗಾಗಿ ಬಹಳ ಕಾತರದಿಂದ ಕಾಯುತ್ತಿರುವುದಾಗಿ ಹೇಳಿದರು.

26
ಟೀಂ ಇಂಡಿಯಾ ಕಮ್‌ಬ್ಯಾಕ್ ಮೇಲೆ ಕಣ್ಣಿಟ್ಟ ಶ್ರೇಯಾಂಕಾ
Image Credit : Instagram

ಟೀಂ ಇಂಡಿಯಾ ಕಮ್‌ಬ್ಯಾಕ್ ಮೇಲೆ ಕಣ್ಣಿಟ್ಟ ಶ್ರೇಯಾಂಕಾ

ಗುರುವಾರ ಆಯ್ದ ಮಾಧ್ಯಮಗಳ ಜೊತೆ ಮಾತುಕತೆ ನಡೆಸಿದ ಶ್ರೇಯಾಂಕಾ ಡಬ್ಲ್ಯುಪಿಎಲ್‌ಗೆ ಸಿದ್ಧತೆ, ಭಾರತ ತಂಡಕ್ಕೆ ಕಮ್‌ಬ್ಯಾಕ್‌, ಪದೇ ಪದೇ ಗಾಯಗೊಂಡಿದ್ದರಿಂದ ಅನುಭವಿಸಿದ ಮಾನಸಿಕ ಯಾತನೆ ಸೇರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು.

Related Articles

Related image1
ಆರ್‌ಸಿಬಿ ಕ್ರಿಕೆಟಿಗ ಜೇಕಬ್ ಬೆಥೆಲ್ ಶತಕದ ಹೊರತಾಗಿಯೂ ಸಂಕಷ್ಟದಲ್ಲಿ ಇಂಗ್ಲೆಂಡ್! ಸಿಡ್ನಿ ಟೆಸ್ಟ್‌ನ ನಾಲ್ಕನೇ ದಿನದಾಟ ಹೀಗಿತ್ತು
Related image2
ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!
36
ಆರ್‌ಸಿಬಿ ರೀಟೈನ್ ಮಾಡಿಕೊಳ್ಳುತ್ತೆ ಅಂದುಕೊಂಡಿರಲಿಲ್ಲ
Image Credit : Instagram

ಆರ್‌ಸಿಬಿ ರೀಟೈನ್ ಮಾಡಿಕೊಳ್ಳುತ್ತೆ ಅಂದುಕೊಂಡಿರಲಿಲ್ಲ

‘ಆರ್‌ಸಿಬಿ ನನ್ನನ್ನು ರೀಟೈನ್‌ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ರೀಟೈನ್‌ ಆಗಿದ್ದೇನೆ ಎಂದು ವಿಷಯ ತಿಳಿದಾಗ ನಾನು ಭಾವುಕಳಾದೆ. ನನಗೆ ಕೆಲ ಹೊತ್ತು ಮಾತೇ ಹೊರಡಲಿಲ್ಲ’ ಎಂದರು.

46
ಬುಮ್ರಾ ನೆರವು ಸ್ಮರಿಸಿದ ಶ್ರೇಯಾಂಕಾ
Image Credit : Instagram

ಬುಮ್ರಾ ನೆರವು ಸ್ಮರಿಸಿದ ಶ್ರೇಯಾಂಕಾ

2025ರಲ್ಲಿ ಬಹುತೇಕ ಸಮಯವನ್ನು ಗಾಯಾಳುವಾಗೇ ಕಳೆದ ಶ್ರೇಯಾಂಕಾ ಆರಂಭದಲ್ಲಿ ತಮ್ಮ ಕೊಠಡಿಯೊಳಗೇ ಬಂಧಿಯಾಗಿದ್ದರಂತೆ. ಆ ಬಳಿಕ ನಿಧಾನಕ್ಕೆ ಪುನಶ್ಚೇತನ ಶಿಬಿರಕ್ಕೆ ಕಾಲಿಟ್ಟ ಬಳಿಕ ಜಸ್ಪ್ರೀತ್ ಬುಮ್ರಾ ನೀಡಿದ ಸಲಹೆಗಳು ನೆರವಿಗೆ ಬಂದವು ಎಂದು ಶ್ರೇಯಾಂಕಾ ಹೇಳಿದ್ದಾರೆ.

56
ಒತ್ತಡ ನಿಭಾಯಿಸುವುದನ್ನು ಹೇಳಿಕೊಟ್ಟ ಬುಮ್ರಾ
Image Credit : Instagram

ಒತ್ತಡ ನಿಭಾಯಿಸುವುದನ್ನು ಹೇಳಿಕೊಟ್ಟ ಬುಮ್ರಾ

ಬಿಸಿಸಿಐ ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ನಲ್ಲಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಭಾರತ ತಂಡದ ವೇಗಿ ಜಸ್‌ಪ್ರೀತ್‌ ಬುಮ್ರಾ ಹಲವು ಸಲಹೆಗಳನ್ನು ನೀಡಿದರಂತೆ. ‘ಒತ್ತಡ, ಗಾಯದ ಸಮಸ್ಯೆಯನ್ನು ನಿಭಾಯಿಸುವುದನ್ನು ಬೂಮ್ರಾ ಬಹಳ ಚೆನ್ನಾಗಿ ವಿವರಿಸಿದರು’ ಎಂದು ಶ್ರೇಯಾಂಕ ಹೇಳಿದರು.

66
ಡಬ್ಯುಪಿಎಲ್‌ ಸಮರ್ಥವಾಗಿ ಬಳಸಿಕೊಳ್ಳಲು ರೆಡಿಯಾದ ಶ್ರೇಯಾಂಕಾ
Image Credit : Instagram

ಡಬ್ಯುಪಿಎಲ್‌ ಸಮರ್ಥವಾಗಿ ಬಳಸಿಕೊಳ್ಳಲು ರೆಡಿಯಾದ ಶ್ರೇಯಾಂಕಾ

ಇನ್ನು, ಈ ವರ್ಷ ಡಬ್ಯುಪಿಎಲ್‌ ಅವನ್ನು ಉತ್ತಮವಾಗಿ ಬಳಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ ಶ್ರೇಯಾಂಕಾ, ಭಾರತ ತಂಡಕ್ಕೆ ವಾಪಸಾಗುವ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಮಹಿಳಾ ಪ್ರೀಮಿಯರ್ ಲೀಗ್
ಟೀಮ್ ಇಂಡಿಯಾ
ಆರ್‌ಸಿಬಿ

Latest Videos
Recommended Stories
Recommended image1
ಭಾರತಕ್ಕೆ ಬರದೆ ಬಾಂಗ್ಲಾಗೆ ಬೇರೆ ಆಯ್ಕೆಯಿಲ್ಲ? ನಾಡಿದ್ದು ಐಸಿಸಿಯಿಂದ ಅಧಿಕೃತ ಘೋಷಣೆ?
Recommended image2
ಅರ್ಜುನ್ ತೆಂಡೂಲ್ಕರ್ ಮದುವೆ ಡೇಟ್ ಫಿಕ್ಸ್; ಹಸೆಮಣೆ ಏರಲು ರೆಡಿಯಾದ ಸಚಿನ್ ಪುತ್ರ!
Recommended image3
ಮತ್ತೊಮ್ಮೆ ಸ್ಪೋಟಕ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ; ಹರಿಣಗಳೆದುರು ಬೃಹತ್ ಮೊತ್ತ ದಾಖಲಿಸಿದ ಭಾರತ ಯುವ ಪಡೆ
Related Stories
Recommended image1
ಆರ್‌ಸಿಬಿ ಕ್ರಿಕೆಟಿಗ ಜೇಕಬ್ ಬೆಥೆಲ್ ಶತಕದ ಹೊರತಾಗಿಯೂ ಸಂಕಷ್ಟದಲ್ಲಿ ಇಂಗ್ಲೆಂಡ್! ಸಿಡ್ನಿ ಟೆಸ್ಟ್‌ನ ನಾಲ್ಕನೇ ದಿನದಾಟ ಹೀಗಿತ್ತು
Recommended image2
ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved