- Home
- Sports
- Cricket
- ಮುಂಬೈ ಇಂಡಿಯನ್ಸ್ಗೆ ಬರ್ತೀನಿ, ಆದರೆ ಒಂದು ಕಂಡೀಷನ್! ಯಶಸ್ವಿ ಜೈಸ್ವಾಲ್ ಬೇಡಿಕೆಯಿಂದ ನೀತಾ ಅಂಬಾನಿಗೆ ಹೊಸ ತಲೆನೋವು
ಮುಂಬೈ ಇಂಡಿಯನ್ಸ್ಗೆ ಬರ್ತೀನಿ, ಆದರೆ ಒಂದು ಕಂಡೀಷನ್! ಯಶಸ್ವಿ ಜೈಸ್ವಾಲ್ ಬೇಡಿಕೆಯಿಂದ ನೀತಾ ಅಂಬಾನಿಗೆ ಹೊಸ ತಲೆನೋವು
ಬೆಂಗಳೂರು: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಟ್ರೇಡಿಂಗ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮುಂಬೈ ಫ್ರಾಂಚೈಸಿ ಯಶಸ್ವಿ ಜೈಸ್ವಾಲ್ಗೆ ಗಾಳ ಹಾಕಿದೆ ಎಂದು ವರದಿಯಾದ ಬೆನ್ನಲ್ಲೇ ಜೈಸ್ವಾಲ್ ಮುಂಬೈ ಬಳಿಕ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ವರದಿಯಾಗಿದೆ.

ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ನೀರಸ ಪ್ರದರ್ಶನ
19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4 ಗೆಲುವು ಹಾಗೂ 10 ಸೋಲು ಸಹಿತ ಕೇವಲ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ತನ್ನ ಅಭಿಯಾನ ಮುಗಿಸಿತ್ತು.
ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ಗೆ ಗುಡ್ ಬೈ?
ಹಾರ್ದಿಕ್ ಪಾಂಡ್ಯ ಈಗಾಗಲೇ ಮುಂಬೈ ಇಂಡಿಯನ್ಸ್ ತಂಡದಿಂದ ದೂರವಾಗಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ತಂಡ ತೊರೆದರೆ ತಮಗೆ ನಾಯಕತ್ವ ಸಿಗಲಿದೆ ಎಂದು ಕನಸು ಕಾಣುತ್ತಿದ್ದ ಸೂರ್ಯಕುಮಾರ್ ಯಾದವ್ಗೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಶಾಕ್ ನೀಡಲು ರೆಡಿಯಾಗಿದೆ. ಯಾಕೆಂದರೆ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಭಾರತ ಟಿ20 ತಂಡದ ಉಪನಾಯಕ ತಿಲಕ್ ವರ್ಮಾಗೆ ನಾಯಕತ್ವ ಪಟ್ಟ ಕಟ್ಟಲು ಮುಂಬೈ ಇಂಡಿಯನ್ಸ್ ಓನರ್ ನೀತಾ ಅಂಬಾನಿ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಕೂಡಾ ಮುಂಬೈ ಇಂಡಿಯನ್ಸ್ಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಬಾರಿಯೇ ಜೈಸ್ವಾಲ್ಗೆ ಗಾಳ ಹಾಕಿದ್ದ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್
ಇನ್ನು ಇದೆಲ್ಲದರ ನಡುವೆ ಕಳೆದ ವರ್ಷವೇ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್, ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಕರೆತರಲು ಮುಂದಾಗಿತ್ತು. ಆದರೆ ಯಶಸ್ವಿ ಜೈಸ್ವಾಲ್, ಮುಂಬೈ ಇಂಡಿಯನ್ಸ್ ಟ್ರೇಡ್ ಡೀಲ್ ಅನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು ಎನ್ನಲಾಗುತ್ತಿದೆ.
ಕಳೆದ ಬಾರಿ ಜೈಸ್ವಾಲ್ಗೆ ಮುಖಭಂಗ
ಹೌದು, ಯಾಕೆಂದರೆ ಸಂಜು ಸ್ಯಾಮ್ಸನ್, ರಾಜಸ್ಥಾನ ರಾಯಲ್ಸ್ ತಂಡ ತೊರೆಯುವುದು ಬಹುತೇಕ ಕನ್ಫರ್ಮ್ ಆಗಿರುವುದರಿಂದ ಜೈಸ್ವಾಲ್, ತಮಗೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವ ಸಿಗಬಹುದು ಎಂದುಕೊಂಡಿದ್ದರು. ಆದರೆ 19ನೇ ಸೀಸನ್ ಐಪಿಎಲ್ ಟೂರ್ನಿಗೂ ಮುನ್ನ ರಾಜಸ್ಥಾನ ರಾಯಲ್ಸ್ ಮ್ಯಾನೇಜ್ಮೆಂಟ್, ರಿಯಾನ್ ಪರಾಗ್ಗೆ ನಾಯಕತ್ವ ಪಟ್ಟ ಕಟ್ಟಿತು. ಹೀಗಾಗಿ ಜೈಸ್ವಾಲ್ಗೆ ದೊಡ್ಡ ಮುಖಭಂಗವಾಗಿತ್ತು.
ಮುಂಬೈ ಇಂಡಿಯನ್ಸ್ ನಾಯಕತ್ವದ ಡಿಮ್ಯಾಂಡ್ ಇಟ್ಟ ಜೈಸ್ವಾಲ್
ಇದೀಗ ಯಶಸ್ವಿ ಜೈಸ್ವಾಲ್ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಳ್ಳಲು ರೆಡಿಯಿರುವುದಾಗಿ ಹೇಳಿದ್ದಾರೆ. ಆದರೆ ತಾವು ಮುಂಬೈ ಇಂಡಿಯನ್ಸ್ ತಂಡಕ್ಕೆ ಬರಬೇಕಿದ್ದರೇ ನನಗೆ ನಾಯಕತ್ವ ಕೊಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ವರದಿಯಾಗಿದೆ.
ಇಕ್ಕಟ್ಟಿಗೆ ಸಿಲುಕಿದ್ರಾ ನೀತಾ ಅಂಬಾನಿ
ಈಗಾಗಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಭವಿಷ್ಯದ ತಂಡವನ್ನು ಗಮನದಲ್ಲಿಟ್ಟುಕೊಂಡು ತಿಲಕ್ ವರ್ಮಾಗೆ ನಾಯಕತ್ವ ನೀಡಲು ಮುಂದಾಗಿತ್ತು. ಜೈಸ್ವಾಲ್ ಅವರ ಈ ಕಂಡೀಷನ್, ನೀತಾ ಅಂಬಾನಿಯನ್ನು ಇಕ್ಕಟ್ಟಿಗೆ ಸಿಲುಕಿಸಿರುವುದಂತೂ ಸುಳ್ಳಲ್ಲ. ಮುಂಬರುವ ದಿನಗಳಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

