MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ತನ್ನ ಫೇವರೇಟ್‌ ಕ್ಯಾಪ್ಟನ್ ಆರಿಸಿದ ಯುವರಾಜ್ ಸಿಂಗ್! ಆದ್ರೆ ಕೊಹ್ಲಿ, ಧೋನಿ, ರೋಹಿತ್ ಇವರ್ಯಾರು ಅಲ್ಲ!

ತನ್ನ ಫೇವರೇಟ್‌ ಕ್ಯಾಪ್ಟನ್ ಆರಿಸಿದ ಯುವರಾಜ್ ಸಿಂಗ್! ಆದ್ರೆ ಕೊಹ್ಲಿ, ಧೋನಿ, ರೋಹಿತ್ ಇವರ್ಯಾರು ಅಲ್ಲ!

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತಕ್ಕೆ ಏಕಾಂಗಿಯಾಗಿ ಹಲವು ಅದ್ಭುತ ಗೆಲುವುಗಳನ್ನು ತಂದುಕೊಟ್ಟ ಯುವರಾಜ್ ಸಿಂಗ್, ತಮ್ಮ ನೆಚ್ಚಿನ ನಾಯಕನ ಬಗ್ಗೆ ಬಹಿರಂಗಪಡಿಸಿದ್ದಾರೆ. ಧೋನಿ, ದ್ರಾವಿಡ್, ಗಂಗೂಲಿ ಇವರಲ್ಲಿ ಯಾರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಕುತೂಹಲ ಎಲ್ಲೆಡೆ ಇತ್ತು.

3 Min read
Author : Naveen Kodase
Published : Sep 14 2024, 02:48 PM IST
Share this Photo Gallery
  • FB
  • TW
  • Linkdin
  • Whatsapp
114

ಭಾರತ ಕ್ರಿಕೆಟ್ ಕಂಡ ಅದ್ಭುತ ಆಲ್ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಏಕಾಂಗಿಯಾಗಿ ಭಾರತಕ್ಕೆ ಹಲವು ಅದ್ಭುತ ಗೆಲುವುಗಳನ್ನು ತಂದುಕೊಟ್ಟಿದ್ದಾರೆ.  ಯುವಿ ಹಲವು ಯುವ ಕ್ರಿಕೆಟಿಗರ ಪಾಲಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ 

214

ಕ್ರಿಕೆಟ್ ತಾರೆಯಾಗಿ ಬೆಳೆದದ್ದು ಮಾತ್ರವಲ್ಲದೆ, ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯ ವಿರುದ್ಧ ಹೋರಾಡಿ ಜಯ ಸಾಧಿಸಿದವರು ಯುವಿ. ಈ ಮೂಲಕ ಅನೇಕರಿಗೆ ಸ್ಫೂರ್ತಿಯಾದರು.

314

ಕ್ಯಾನ್ಸರ್ ಬಾಧಿಸುತ್ತಿದ್ದರೂ, ಟೀಂ ಇಂಡಿಯಾಗೆ 2011ರ ಏಕದಿನ ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ಯುವಿ ಪಾತ್ರವನ್ನು ಯಾರೂ ಮರೆಯಲು ಸಾಧ್ಯವಿಲ್ಲ.

414

ಭಾರತ ತಂಡ ಹಲವು ಬಾರಿ ಐಸಿಸಿ ಟ್ರೋಫಿಗಳನ್ನು ಗೆಲ್ಲುವಲ್ಲಿ ಯುವರಾಜ್ ಸಿಂಗ್ ಅವರ ಪಾತ್ರವನ್ನು ಭಾರತೀಯ ಕ್ರಿಕೆಟ್ ಎಂದಿಗೂ ಮರೆಯುವುದಿಲ್ಲ. ಇದೀಗ ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ತಮ್ಮ ನೆಚ್ಚಿನ, ಅತ್ಯುತ್ತಮ ನಾಯಕನನ್ನು ಹೆಸರಿಸಿದ್ದಾರೆ  ಭಾರತ ಕ್ರಿಕೆಟ್ ತಂಡಕ್ಕಾಗಿ ತಮ್ಮ ವರ್ಣರಂಜಿತ ವೃತ್ತಿಜೀವನದಲ್ಲಿ ಯುವರಾಜ್ ಸಿಂಗ್ ಹಲವಾರು ಶ್ರೇಷ್ಠ ನಾಯಕರೊಂದಿಗೆ ಆಡಿದ್ದಾರೆ.

514

ಅವರಲ್ಲಿ ಮೂರು ಸ್ವರೂಪಗಳಲ್ಲಿ ಭಾರತ ಕ್ರಿಕೆಟ್ ತಂಡವನ್ನು ನಂ. 1 ಸ್ಥಾನಕ್ಕೆ ಕೊಂಡೊಯ್ದ ಮಹೇಂದ್ರ ಸಿಂಗ್ ಧೋನಿ ಮತ್ತು ದಿಗ್ಗಜ ಆಟಗಾರರಾದ ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಸೇರಿದ್ದಾರೆ. ರನ್ ಮೆಷಿನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಯುವರಾಜ್ ಸಿಂಗ್ ಭಾರತಕ್ಕಾಗಿ ಕ್ರಿಕೆಟ್ ಆಡಿದ್ದಾರೆ.

614

ಆದಾಗ್ಯೂ, ಅವರು ವಿರಾಟ್ ಕೊಹ್ಲಿ ಅಥವಾ ಎಂ ಎಸ್ ಧೋನಿಯನ್ನು ತಮ್ಮ ಅತ್ಯುತ್ತಮ ನಾಯಕ ಎಂದು ಪರಿಗಣಿಸಿಲ್ಲ. ಅದೇ ರೀತಿ ರಾಹುಲ್ ದ್ರಾವಿಡ್ ಅವರನ್ನೂ ಅವರು ತಮ್ಮ ನೆಚ್ಚಿನ ನಾಯಕ ಎಂದು ಗುರುತಿಸಿಲ್ಲ. ಹಾಗಾದರೆ ಯುವರಾಜ್ ಸಿಂಗ್ ಅವರ ಅತ್ಯುತ್ತಮ ನಾಯಕ ಯಾರು?

714

ಒಂದು ಸಂದರ್ಶನದಲ್ಲಿ, ಯುವರಾಜ್ ಸಿಂಗ್ ತಮ್ಮ ನೆಚ್ಚಿನ ನಾಯಕನ ಬಗ್ಗೆ ಬಹಿರಂಗಪಡಿಸಿದ್ದಾರೆ. ಆ ಸಂದರ್ಶನದಲ್ಲಿ, ಗಂಗೂಲಿ, ಧೋನಿ, ದ್ರಾವಿಡ್ ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಂಡು ಅವರಲ್ಲಿ 'ಅತ್ಯುತ್ತಮ ನಾಯಕ' ಎಂದು ಹೆಸರಿಸುವಂತೆ ಕೇಳಲಾಯಿತು.

814

2011 ರ ವಿಶ್ವಕಪ್ ವಿಜೇತ ಯುವರಾಜ್, ಧೋನಿ ನಾಯಕತ್ವದಲ್ಲಿ ಹಲವು ವರ್ಷಗಳ ಕಾಲ ಆಡಿದ್ದಾಗಿ ಹೇಳಿದರು. ಧೋನಿ ಒಬ್ಬ ಉತ್ತಮ ನಾಯಕ ಎಂದು ಹೇಳಿದರು. ಆದರೆ, ಬಂಗಾಳ ಹುಲಿ, ದಾದಾ ಎಂದು ಪ್ರೀತಿಯಿಂದ ಕರೆಯಲ್ಪಡುವ ಗಂಗೂಲಿಯನ್ನು ತಮ್ಮ ನೆಚ್ಚಿನ ನಾಯಕನಾಗಿ ಆಯ್ಕೆ ಮಾಡಿಕೊಳ್ಳುವುದಾಗಿ ಯುವಿ ಹೇಳಿದರು.

914

ಯುವರಾಜ್ ಮುಂದೆ ಮಾತನಾಡಿ, 'ಅವರೆಲ್ಲರೂ ನಾಯಕರಾಗಿದ್ದರು. ಧೋನಿ, ಗಂಗೂಲಿ ನಾಯಕತ್ವದಲ್ಲಿ ದೀರ್ಘಕಾಲ ಆಡಿದ್ದೇನೆ. ಗಂಗೂಲಿ ನಾಯಕತ್ವದಲ್ಲಿ ನನ್ನ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದೆ, ಅದಕ್ಕಾಗಿಯೇ ನಾನು ಸೌರವ್ ಗಂಗೂಲಿ ನನ್ನ ಪಾಲಿನ ನೆಚ್ಚಿನ ನಾಯಕರಾಗಿದ್ದಾರೆ ಎಂದು ಯುವಿ ಹೇಳಿದ್ದಾರೆ.

1014

ಭಾರತ ಅಂಡರ್-19 ವಿಶ್ವಕಪ್ ಗೆಲುವಿನಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರವಹಿಸಿದ್ದರು ಇದರ ಜತೆಗೆ  ಸರಣಿ ಶ್ರೇಷ್ಠ ಆಟಗಾರನಾಗಿ ಹೊರಹೊಮ್ಮಿದ್ದರು. ಇನ್ನು  ಭಾರತೀಯ ಸೀನಿಯರ್ ತಂಡಕ್ಕೆ ಸ್ಥಾನ ಪಡೆದ ಯುವಿ. 2000 ರ ಐಸಿಸಿ ನಾಕೌಟ್ ಟ್ರೋಫಿಗೆ (ನಂತರ ಚಾಂಪಿಯನ್ಸ್ ಟ್ರೋಫಿ ಎಂದು ಮರುನಾಮಕರಣ ಮಾಡಲಾಯಿತು) ಭಾರತ ತಂಡದಲ್ಲಿ ಯುವರಾಜ್ ಸ್ಥಾನ ಪಡೆದರು.

1114

ಗಂಗೂಲಿ ನಾಯಕತ್ವದಲ್ಲಿ ಕೀನ್ಯಾ ವಿರುದ್ಧದ 16ನೇ ಸುತ್ತಿನ ಪಂದ್ಯದಲ್ಲಿ ಯುವರಾಜ್ ಪಾದಾರ್ಪಣೆ ಮಾಡಿದರು. ಆದರೆ ಆ ಪಂದ್ಯದಲ್ಲಿ ಅವರಿಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ ಯುವರಾಜ್ ಬ್ಯಾಟ್ಸ್‌ಮನ್ ಆಗಿ ಮಿಂಚಿದರು. 80 ಎಸೆತಗಳಲ್ಲಿ 84 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿ ತಂಡಕ್ಕೆ ಎಷ್ಟು ಮುಖ್ಯ ಆಟಗಾರ ಎಂಬುದನ್ನು ಸಾಬೀತುಪಡಿಸಿದರು.

1214

ಅಂದಿನಿಂದ ಹಿಂದೆ ತಿರುಗಿ ನೋಡಲಿಲ್ಲ. ಭಾರತ ತಂಡಕ್ಕೆ ಹಲವು ಅದ್ಭುತ ಗೆಲುವುಗಳನ್ನು ತಂದುಕೊಟ್ಟಿದ್ದಲ್ಲದೆ, ಐಸಿಸಿ ಟ್ರೋಫಿಗಳನ್ನು ಗೆಲ್ಲುವಲ್ಲಿ ಯುವರಾಜ್ ಸಿಂಗ್ ಅವರ ಬ್ಯಾಟ್ ಮತ್ತು ಬಾಲ್ ಪ್ರಮುಖ ಪಾತ್ರ ವಹಿಸಿದೆ. ಎಂ ಎಸ್ ಧೋನಿ ನಾಯಕತ್ವದಲ್ಲಿ 2007 ರ ಟಿ20 ವಿಶ್ವಕಪ್ ಅನ್ನು ಭಾರತ ಅದ್ಭುತವಾಗಿ ಗೆಲ್ಲಲು ಯುವರಾಜ್ ಪ್ರಮುಖ ಪಾತ್ರ ವಹಿಸಿದ್ದರು.

1314

ಇಂಗ್ಲೆಂಡ್‌ನ ಸ್ಟಾರ್ ಬೌಲರ್ ಸ್ಟುವರ್ಟ್ ಬ್ರಾಡ್ ಅವರ ಒಂದು ಓವರ್‌ನ ಆರು ಎಸೆತಗಳಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ್ದರು. ಈ ಪಂದ್ಯದಲ್ಲಿ 30 ಎಸೆತಗಳಲ್ಲಿ 70 ರನ್ ಗಳಿಸಿ ಮರೆಯಲಾಗದ ಇನ್ನಿಂಗ್ಸ್ ಆಡಿದರು. ಇಂಗ್ಲೆಂಡ್ ವಿರುದ್ಧದ ಅವರ ಅದ್ಭುತ ಆಟದ ಮೂಲಕ 2007 ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಯುವಿ ಭಾರತದ ತಾರೆಯಾಗಿ ಹೊರಹೊಮ್ಮಿದರು.

1414

2011 ರ ವಿಶ್ವಕಪ್‌ನಲ್ಲಿಯೂ ಯುವರಾಜ್ ಅದ್ಭುತ ಪ್ರದರ್ಶನ ನೀಡಿ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಗೆಲ್ಲಲು ಪ್ರಮುಖ ಪಾತ್ರ ವಹಿಸಿದರು. ಟೂರ್ನಿಯಲ್ಲಿ ಬ್ಯಾಟ್ ಮೂಲಕ 362 ರನ್ ಗಳಿಸಿದರು. ಅಲ್ಲದೆ, 15 ವಿಕೆಟ್‌ಗಳನ್ನು ಪಡೆದರು. ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಯುವರಾಜ್ ಸಿಂಗ್
ಸೌರವ್ ಗಂಗೂಲಿ
ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ

Latest Videos
Recommended Stories
Recommended image1
T20 World Cup 2026: ಇಂಗ್ಲೆಂಡ್‌ನ ಬಗ್ಗುಬಡಿದು ಫೈನಲ್‌ಗೇರುತ್ತಾ ಟೀಂ ಇಂಡಿಯಾ?
Recommended image2
ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾಗೆ ಕಂಟಕವಾಗಬಲ್ಲ ಇಂಗ್ಲೆಂಡ್‌ನ ಈ ನಾಲ್ವರು ಆಟಗಾರರಿವರು!
Recommended image3
ಟಿ20 ವಿಶ್ವಕಪ್‌ ಸೆಮಿಫೈನಲ್: ನಿನ್ನೆಯ ನ್ಯೂಜಿಲೆಂಡ್ - ದಕ್ಷಿಣ ಆಫ್ರಿಕಾ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved