MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಪ್ರತಿದಿನ 2 ಗಂಟೆ ಅಳುತ್ತಿದ್ದೆ. ಒಂದು ಹಂತದಲ್ಲಿ ಆ ಕೆಟ್ಟ ಯೋಚನೆ ಮಾಡಿದ್ದೆ! ಡಿವೋರ್ಸ್ ಬೆನ್ನಲ್ಲೇ ಮೌನ ಮುರಿದ ಚಹಲ್

ಪ್ರತಿದಿನ 2 ಗಂಟೆ ಅಳುತ್ತಿದ್ದೆ. ಒಂದು ಹಂತದಲ್ಲಿ ಆ ಕೆಟ್ಟ ಯೋಚನೆ ಮಾಡಿದ್ದೆ! ಡಿವೋರ್ಸ್ ಬೆನ್ನಲ್ಲೇ ಮೌನ ಮುರಿದ ಚಹಲ್

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ತಾವೆದುರಿಸಿದ ಕ್ಲಿಷ್ಟಕರ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ. ಇದಷ್ಟೇ ಅಲ್ಲದೇ ಒಂದು ಹಂತದಲ್ಲಿ ತಾವು ಕೆಟ್ಟ ಯೋಚನೆಯೊಂದನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

1 Min read
Author : Naveen Kodase
Published : Aug 02 2025, 01:30 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : yuzvendra chahal dhanashree verma Instagrama

ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್‌ ತಮ್ಮ ಮಾಜಿ ಪತ್ನಿ ಧನಶ್ರೀ ವರ್ಮಾ ಜೊತೆಗಿನ ವಿಚ್ಛೇದನದ ಬಗ್ಗೆ ಮೊದಲ ಬಾರಿ ಮುಕ್ತವಾಗಿ ಮಾತನಾಡಿದ್ದಾರೆ. ನನಗೆ ಜೀವನವೇ ಸಾಕೆನಿಸಿತ್ತು. ಆ*ತ್ಮಹ*ತ್ಯೆ ಬಗ್ಗೆ ಯೋಚಿಸಿದ್ದೆ ಎಂದಿದ್ದಾರೆ.

27
Image Credit : Social Media

ಈ ಬಗ್ಗೆ ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿರುವ ಅವರು, ‘ದಾಂಪತ್ಯದಲ್ಲಿ ಇಬ್ಬರೂ ಬ್ಯುಸಿಯಾದಾಗ ಸಮಸ್ಯೆಯಾಗುತ್ತದೆ. ನಮ್ಮ ದಾಂಪತ್ಯದಲ್ಲಿ ಬಿರುಕು ಬಿಟ್ಟಾಗ ಅದನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳಲಿಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ನಟಿಸಬೇಕಾಯಿತು.

Related Articles

Related image1
ಚಾಹಲ್ ಜೊತೆ ಡಿವೋರ್ಸ್ ಬಳಿಕ ಐಟಂ ಸಾಂಗ್ ಮೂಲಕ ಕಿಚ್ಚು ಹಚ್ಚಿದ ಧನಶ್ರೀ ವರ್ಮಾ
Related image2
ಧೋನಿ ಪಡೆ ಮೇಲೆ ಸೇಡು ತೀರಿಸಿಕೊಂಡ ಚಹಲ್; ಹ್ಯಾಟ್ರಿಕ್ ಬಲಿ ಪಡೆದ ಯುಜಿ!
37
Image Credit : our own

ವಿಚ್ಛೇದನ ಪಡೆದಾಗ ಜನರು ನನ್ನನ್ನು ಮೋಸಗಾರ ಎಂದರು. ಆದರೆ ನಾನು ಮೋಸ ಮಾಡಲಿಲ್ಲ. ನನ್ನ ಪ್ರೀತಿಪಾತ್ರರಿಗೆ ನಾನು ತುಂಬಾ ನಿಷ್ಠಾವಂತನಾಗಿದ್ದೆ’ ಎಂದಿದ್ದಾರೆ.

47
Image Credit : social media

ನಾವು ಯಾವುದಾದರೂ ಹುಡುಗಿಯೊಂದಿಗೆ ಕಾಣಿಸಿಕೊಂಡರೆ ಅದಕ್ಕೆ ಸಂಬಂಧ ಕಲ್ಪಿಸಿಬಿಡುತ್ತಾರೆ. ನನಗೂ ಇಬ್ಬರು ಸಹೋದರಿಯರಿದ್ದಾರೆ. ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕೆನ್ನುವುದು ನನಗೆ ಗೊತ್ತಿದೆ ಎಂದು ಚಹಲ್ ಹೇಳಿದ್ದಾರೆ.

57
Image Credit : Insta

ವಿಚ್ಛೇದನ ಸಮಯ ಬಹಳ ಕಷ್ಟವಾಗಿತ್ತು. ಪ್ರತಿದಿನ 2 ಗಂಟೆ ಅಳುವುದು, 2-3 ಗಂಟೆ ನಿದ್ರೆ. ಹೀಗಿರುವುದಕ್ಕಿಂತ ಸಾಯುವುದೇ ಮೇಲು ಎಂದು ಅನಿಸಿತ್ತು’ ಎಂದಿದ್ದಾರೆ.

67
Image Credit : Instagram

ನಾನು ಒಂದು ಹಂತದಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಲು ತೀರ್ಮಾನಿಸಿದ್ದೆ. ನನ್ನ ಈ ಮಾನಸಿಕ ಕಿರಿಕಿರಿಯಿಂದಾಗಿ ಕ್ರಿಕೆಟ್‌ನತ್ತ ಗಮನ ಕೇಂದ್ರಿಕರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಚಹಲ್ ಹೇಳಿದ್ದಾರೆ.

77
Image Credit : Instagram

2020ರ ಡಿಸೆಂಬರ್‌ನಲ್ಲಿ ಇಬ್ಬರ ವಿವಾಹವಾಗಿತ್ತು. ಆದರೆ 2022ರಿಂದಲೇ ಪ್ರತ್ಯೇಕವಾಗಿ ಬದುಕುತ್ತಿದ್ದರು. ಇತ್ತೀಚೆಗೆ ವಿಚ್ಛೇದನ ಪಡೆದುಕೊಂಡಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ವಿಚ್ಛೇದನ

Latest Videos
Recommended Stories
Recommended image1
ರಣಜಿಯಲ್ಲಿ ಅಮೋಘ ಪ್ರದರ್ಶನ, ಕನ್ನಡಿಗರಿಗೆ ಕದ ತೆರೆಯುತ್ತಾ ಟೀಮ್‌ ಇಂಡಿಯಾ?
Recommended image2
'ಇದು ಸೋಲಲ್ಲ, ಭಾರತಕ್ಕೆ ಆದ ಅವಮಾನ': ಟೀಮ್ ಇಂಡಿಯಾ ಹೀನಾಯ ಸೋಲಿಗೆ ಪಾಕ್ ಮಾಜಿ ಆಟಗಾರರ ಕುಚೋದ್ಯ!
Recommended image3
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
Related Stories
Recommended image1
ಚಾಹಲ್ ಜೊತೆ ಡಿವೋರ್ಸ್ ಬಳಿಕ ಐಟಂ ಸಾಂಗ್ ಮೂಲಕ ಕಿಚ್ಚು ಹಚ್ಚಿದ ಧನಶ್ರೀ ವರ್ಮಾ
Recommended image2
ಧೋನಿ ಪಡೆ ಮೇಲೆ ಸೇಡು ತೀರಿಸಿಕೊಂಡ ಚಹಲ್; ಹ್ಯಾಟ್ರಿಕ್ ಬಲಿ ಪಡೆದ ಯುಜಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved