MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime
  • Bengaluru: ವಾಣಿ ವಿಲಾಸ ಆಸ್ಪತ್ರೆಯಿಂದ ಶಿಶು ಅಪಹರಣ ಸುಖಾಂತ್ಯ: ಮಹಿಳೆ ಸೆರೆ

Bengaluru: ವಾಣಿ ವಿಲಾಸ ಆಸ್ಪತ್ರೆಯಿಂದ ಶಿಶು ಅಪಹರಣ ಸುಖಾಂತ್ಯ: ಮಹಿಳೆ ಸೆರೆ

ವಾಣಿ ವಿಲಾಸ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದ್ದ ಏಳು ದಿನಗಳ ನವಜಾತ ಗಂಡು ಶಿಶು ಅಪಹರಣ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ವಿ.ವಿ.ಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

2 Min read
Govindaraj S
Published : Apr 19 2023, 12:06 PM IST| Updated : Apr 19 2023, 12:16 PM IST
Share this Photo Gallery
  • FB
  • TW
  • Linkdin
  • Whatsapp
15

ಬೆಂಗಳೂರು (ಏ.19): ಮೂರು ದಿನಗಳ ಹಿಂದೆ ವಾಣಿ ವಿಲಾಸ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದ್ದ ಏಳು ದಿನಗಳ ನವಜಾತ ಗಂಡು ಶಿಶು ಅಪಹರಣ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶ್ಸಸು ಕಂಡಿರುವ ವಿ.ವಿ.ಪುರ ಠಾಣೆ ಪೊಲೀಸರು, ಅಪಹೃತ ಮಗುವನ್ನು ಸುರಕ್ಷಿತವಾಗಿ ತಾಯಿ ಮಡಿಲಿಗೆ ಸೇರಿಸಿದ್ದಾರೆ. 

25

ಮಂಡ್ಯ ಜಿಲ್ಲೆಯ ದಿವ್ಯ ರಶ್ಮಿ(29)  ಬಂಧಿತಳಾಗಿದ್ದು, ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ವಾಣಿ ವಿಲಾಸ ಮಕ್ಕಳ ಆಸ್ಪತ್ರೆಯಲ್ಲಿ ಏಳು ದಿನಗಳ ನವಜಾತ ಗಂಡು ಮಗುವನ್ನು ಅಪಹರಿಸಿ ಶನಿವಾರ ಮುಂಜಾನೆ ಆರೋಪಿ ಪರಾರಿಯಾಗಿದ್ದಳು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಇನ್‌ಸ್ಪೆಕ್ಟರ್‌ ಮಿರ್ಜಾ ಆಲಿ ನೇತೃತ್ವದ ತಂಡವು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಮಗುವನ್ನು ರಕ್ಷಿಸಿ ಸುರಕ್ಷಿತವಾಗಿ ಸೋಮವಾರ ರಾತ್ರಿ ತಾಯಿ ಮಡಿಲಿಗೆ ಸೇರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

35

ಮಗು ಇಲ್ಲದ ಕಾರಣಕ್ಕೆ ಅಪಹರಣ: ಮಂಡ್ಯ ಜಿಲ್ಲೆಯ ರಶ್ಮಿ, ಬೆಂಗಳೂರಿನ ಕಲ್ಯಾಣ ಮಂಟಪಗಳಲ್ಲಿ ಕೆಲಸ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಕಾರ್ಮಿಕ ಸುನೀಲ್‌ ಜತೆ ಎರಡೇ ವಿವಾಹವಾಗಿದ್ದ ಆಕೆಗೆ ಸಂತಾನ ಭಾಗ್ಯವಿರಲಿಲ್ಲ. ಇದರಿಂದ ರಶ್ಮಿ ಖಿನ್ನತೆಗೆ ಒಳಗಾಗಿದ್ದಳು. ಕಳೆದ ತಿಂಗಳು ಗರ್ಭಪಾತವಾಗಿದ್ದರಿಂದ ಆಕೆಯ ನೋವು ಮತ್ತಷ್ಟು ಭಾದಿಸಿತು. 

45

ಈ ನೋವಿನ ಹಿನ್ನೆಲೆಯಲ್ಲಿ ವಾಣಿ ವಿಲಾಸ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿಕೊಂಡು ಹೋಗಿ ತಾನು ಸಾಕಲು ಆಕೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ತಿಪಟೂರು ತಾಲೂಕಿನ ರೈತ ಪ್ರಸನ್ನ ಹಾಗೂ ಸುಮಾ ಅವರ ಮಗುವನ್ನು ಆಕೆ ಅಪಹರಿಸಿದ್ದಳು. ಆಸ್ಪತ್ರೆಯ ಜನರಲ್‌ ವಾರ್ಡ್‌ನಲ್ಲಿ ಬಾಣಂತಿ ಹಾಗೂ ಮಗು ವೈದ್ಯಕೀಯ ಆರೈಕೆಯಲ್ಲಿದ್ದರು. 

55

ಶನಿವಾರ ಮುಂಜಾನೆ 5 ಗಂಟೆಗೆ ಆಸ್ಪತ್ರೆ ಪ್ರವೇಶಿಸಿದ್ದ ಆರೋಪಿ, ಜನರಲ್‌ ವಾರ್ಡ್‌ನಲ್ಲಿ ತಾಯಿ, ಶುಶ್ರೂಷಕಿ ಹಾಗೂ ಭದ್ರತಾ ಕಾವಲುಗಾರ ನಿದ್ರೆಯಲ್ಲಿರುವುದನ್ನು ಗಮನಿಸಿ ಮಗುವನ್ನು ಅಪಹರಿಸಿಕೊಂಡು ಮಂಡ್ಯಕ್ಕೆ ಹೋಗಿದ್ದಳು. ಪೊಲೀಸರಿಗೆ ವಾಣಿ ವಿಲಾಸ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಮಗು ಎತ್ತಿಕೊಂಡು ಮಹಿಳೆ ಹೋಗುವ ದೃಶ್ಯ ಪತ್ತೆಯಾಯಿತು. ಈ ಸುಳಿವು ಆಧರಿಸಿ ಸುಮಾರು 500ಕ್ಕೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೊನೆಗೆ ಮಂಡ್ಯ ಜಿಲ್ಲೆಯಲ್ಲಿ ರಶ್ಮಿ ಮನೆ ಬಾಗಿಲಿಗೆ ಪೊಲೀಸರನ್ನು ಕರೆದೊಯ್ದು ನಿಲ್ಲಿಸಿತು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬೆಂಗಳೂರು
ಪೊಲೀಸ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved