MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime
  • ಸ್ನೇಹಿತನೊಂದಿಗೆ ಲಾಡ್ಜ್‌ಗೆ ಹೋಗಿದ್ದ ಮೈಸೂರಿನ ಬಿಸಿಎ ವಿದ್ಯಾರ್ಥಿನಿ ದುರಂತ ಅಂತ್ಯ

ಸ್ನೇಹಿತನೊಂದಿಗೆ ಲಾಡ್ಜ್‌ಗೆ ಹೋಗಿದ್ದ ಮೈಸೂರಿನ ಬಿಸಿಎ ವಿದ್ಯಾರ್ಥಿನಿ ದುರಂತ ಅಂತ್ಯ

ವರದಿ: ಮಧು.ಎಂ.ಚಿನಕುರಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಮೈಸೂರುಆಕೆ ಬಿಸಿಎ ವಿದ್ಯಾರ್ಥಿನಿ. 15 ದಿನ ಕಳೆದಿದ್ರೆ ಪದವೀ ಮುಗಿಸಿ ತಂದೆ ತಾಯಿಗೆ ಆಶ್ರಯ ಆಗಬೇಕಿದ್ದವಳು. ಆದ್ರೆ ವಿಧಿಯ ಆಟವೇ ಬೇರೆಯಾಗಿತ್ತು. ಸ್ನೇಹಿತನ ಜೊತೆ ಹೋಟೆಲ್ ಗೆ ಬಂದ ವಿದ್ಯಾರ್ಥಿನಿ ಹೆಣವಾಗಿದ್ದಾಳೆ. ಆಕೆಯ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟುಕೊಂಡಿದೆ. ಈ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ. 

2 Min read
Suvarna News
Published : Sep 02 2022, 05:42 PM IST
Share this Photo Gallery
  • FB
  • TW
  • Linkdin
  • Whatsapp
17

ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ  ಸ್ನೇಹಿತನ ಜತೆ ಹೋಟೆಲ್‌ಗೆ  ಬಂದ ವಿದ್ಯಾರ್ಥಿನಿ ಹೆಣವಾಗಿದ್ದಾಳೆ. ಇದೀಗ ಆಕೆಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

27

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ರವಿ ಎಂಬುವವರ ಪುತ್ರಿ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಾಂಗ ಮಾಡುತ್ತಿದ್ದಳು. ಇನ್ನೂ 15 ದಿನ ಕಳೆದಿದ್ರೆ ಈಕೆ ಪದವಿ ಮುಗಿಸಿ ತನ್ನ ಊರಿಗೆ ಹೋಗುತ್ತಿದ್ದಳು. ಆದ್ರೆ ವಿಧಿಯ ಆಟವೇ ಬೇರೆ ಇತ್ತು. ಐಷಾರಾಮಿ ಹೋಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ.

37

ಅಪೂರ್ವ ಶೆಟ್ಟಿ ಕಳೆದ ಹಲವು ವರ್ಷಗಳಿಂದ ಆಶಿಕ್ ಎಂಬ ಯುವಕನ ಜೊತೆ ಓಡಾಡುತ್ತಿದ್ದಳು. ಕಳೆದ ಎರೆಡು ದಿನಗಳ ಹಿಂದೆ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಆಶಿಕ್ ಜೊತೆಗೆ ಬಂದು ರೂಂ ಬಾಡಿಗೆ ಪಡೆದು ವಾಸ್ತಾವ್ಯ ಹೂಡಿದ್ದಾರೆ. ಆಶಿಕ್ ಆಗಾಗ ಹೊರಗಡೆ ಹೋಗಿ ಮತ್ತೆ ಹೋಟೆಲ್ ಗೆ ವಾಪಸ್ ಬರುತ್ತಿದ್ದ

47

ನಿನ್ನೆ (ಗುರುವಾರ) ಬೆಳಗ್ಗೆ ಹೋಟೆಲ್ ನಿಂದ ಹೊರಟ ಆಶಿಕ್ ಮತ್ತೆ ವಾಪಸ್ ಹೋಟೆಲ್ ಗೆ ಬಂದಿರುವುದಿಲ್ಲ. ಆಕೆಯೂ ಸಹ ಬೆಳಗ್ಗೆಯಿಂದ ಸಂಜೆಯವರೆಗೂ ಹೋಟೆಲ್ ನಿಂದ ಹೊರ ಬರದ ಕಾರಣ ಅನುಮಾನಗೊಂಡು ಹೋಟೆಲ್ ಸಿಬ್ಬಂದಿ  ರೂಂನಲ್ಲಿದ್ದ ಇಂಟರ್ ಕಾಂಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ್ದಾಗ ಅನುಮಾನಗೊಂಡ ಸಿಬ್ಬಂದಿ ದೇವರಾಜ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವರಾಜ ಪೊಲೀಸರು ಬಂದು ರೂಂ ತೆರೆದು ನೋಡಿದಾಗ ಅಪೂರ್ವ ಶೆಟ್ಟಿ ರೂಂನಲ್ಲಿ ಹೆಣವಾಗಿ ಬಿದಿದ್ದಾಳೆ.

57

ಇನ್ನೂ ಅಪೂರ್ವ ಶೆಟ್ಟಿ ಸ್ನೇಹಿತರ ಮಾಹಿತಿ ಪ್ರಕಾರ ಆಶಿಕ್ ಮತ್ತು ಅಪೂರ್ವಶೆಟ್ಟಿ ಕಳೆದ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಕಳೆದ ಒಂದುವರೆ ವರ್ಷದ ಹಿಂದೆ ಮನೆಯವರಿಗೆ ವಿಚಾರ ತಿಳಿದು ಜಗಳ ಸಹ ಆಗಿದೆ. ಇಬ್ಬರಿಗೂ ಬುದ್ಧಿ ಮಾತು ಹೇಳಿ ದೂರ ಆಗುವಂತೆ ಹೇಳಿದ್ದಾರೆ. ಇದಾದ ಬಳಿಕವೂ ಆಕೆ ಆ ಹುಡುಗನ ಜೊತೆ ಸ್ನೇಹವನ್ನ ಮುಂದುವರೆಸಿದ್ದಾಳೆ. ಆಗಾಗ ಆತನ ಜೊತೆ ಸುತ್ತಾಡುತ್ತಿದ್ದಳು. 

67

ಹೋಟೆಲ್ ನಲ್ಲಿ ಒಟ್ಟಿಗೆ ಇದ್ದ ವೇಳೆ ಜಗಳ ನಡೆದು ಮಗಳು ಕೊಲೆಯಾಗಿರಬಹುದೆಂದು ಅಪೂರ್ವ ಶೆಟ್ಟಿ ತಂದೆ ದೇವರಾಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ನೇಹಿತ ಆಶಿಕ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆತ ಸಹ ಘಟನೆ ನಡೆದ ನಂತರ ಆತ್ಮಹತ್ಯೆಗೆ ಯತ್ನಸಿದ್ದ ಎಂಬ ಮಾಹಿತಿಗಳು ಲಭ್ಯವಾಗಿದೆ.

77

ಒಟ್ಟಾರೆ ಪೊಲೀಸರ ತನಿಖೆಯ ನಂತವಷ್ಟೇ ಅಪೂರ್ವಶೆಟ್ಟಿಯ ಸಾವಿನ ರಹಸ್ಯ ಗೊತ್ತಾಗಲಿದೆ. ಇದೆಲ್ಲಾ ಏನೇ ಇರಲಿ ತಂದೆ ತಾಯಿ ಓದು ಅಂತ ಕಳಿಸಿದ್ರೆ ಈ ರೀತಿ ಪ್ರೀತಿ ಪ್ರೇಮ ಅನ್ನೂ ಹುಚ್ಚಿಗೆ ಬಿದ್ದು ಈ ರೀತಿ ಬಲಿಯಾಗಿದ್ದು ಮಾತ್ರ ದುರಂತ. 

About the Author

SN
Suvarna News
ಮೈಸೂರು
ಪ್ರೀತಿ
ವಿದ್ಯಾರ್ಥಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved