MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • ಇವರೇ ನೋಡಿ ಬೆಂಗಳೂರಿನ ಮಹಾನ್ ಕಳ್ಳರು; ಒಬ್ಬೊಬ್ಬರದ್ದೂ ಒಂದೊಂದು ನಂಬಿಕೆ ದ್ರೋಹದ ಕಥೆ!

ಇವರೇ ನೋಡಿ ಬೆಂಗಳೂರಿನ ಮಹಾನ್ ಕಳ್ಳರು; ಒಬ್ಬೊಬ್ಬರದ್ದೂ ಒಂದೊಂದು ನಂಬಿಕೆ ದ್ರೋಹದ ಕಥೆ!

ಬೆಂಗಳೂರಿನಲ್ಲಿ ಮನೆಕೆಲಸದವರು, ನೌಕರರು ಮನೆ ಮಾಲೀಕರ ನಂಬಿಕೆಗೆ ದುರುಪಯೋಗಪಡಿಸಿಕೊಂಡು ಕಳ್ಳತನ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಹಣವನ್ನು ಕದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತವಾಗಿರುವ 3 ಮಹಿಳೆಯರು ಇಬ್ರು ಪುರುಷರದ್ದು ಒಬ್ಬೊಬ್ಬರದ್ದೂ ಒಂದೊಂದು ನಂಬಿಕೆ ದ್ರೋಹದ ಕಥೆಯಿದೆ.

4 Min read
Author : Sathish Kumar KH
| Updated : May 14 2025, 10:36 AM IST
Share this Photo Gallery
  • FB
  • TW
  • Linkdin
  • Whatsapp
15
113 ಗ್ರಾಂ ಚಿನ್ನ ಕದ್ದ ಮನೆ ಕೆಲಸದ ಕಳ್ಳಿ

113 ಗ್ರಾಂ ಚಿನ್ನ ಕದ್ದ ಮನೆ ಕೆಲಸದ ಕಳ್ಳಿ

ಕೆಲಸ ಕೊಟ್ಟ ಮನೆಗೆ ಕನ್ನ ಹಾಕಿದ ಮಹಿಳೆ ಬಂಧನ: ₹10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ನಂಬಿಕೆಗೆ ಧಕ್ಕೆ ತರುವ ಘಟನೆ ಮತ್ತೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೆಲಸ ಕೊಟ್ಟ ಮನೆಯಲ್ಲಿಯೇ ಕನ್ನ ಹಾಕಿದ ಮಹಿಳಾ ಆರೋಪಿ ಶಾಲಿನಿ (30) ಎಂಬಾಕೆಯನ್ನು  ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆ ಚಿತ್ರದುರ್ಗ ಮೂಲದವಳಾಗಿದ್ದು, ಬೆಂಗಳೂರಿನ ಸೋಮಸುಂದರಪಾಳ್ಯದಲ್ಲಿ ವಾಸವಿದ್ದರು. ಆರೋಪಿ ಶಾಲಿನಿ, ಅಕ್ಷಯ್ ಕೃಷ್ಣ ಎಂಬುವವರ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಮನೆ ಕೆಲಸ ಮಾಡುತ್ತಿದ್ದರು. ವಯಸ್ಕರೊಬ್ಬರ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಹೊತ್ತಿದ್ದ ಈಕೆ, ಮಾಲೀಕರು ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯಲ್ಲಿದ್ದ 113 ಗ್ರಾಂ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದರು.

ಕಳೆದ ಕೆಲವು ದಿನಗಳಿಂದ ಮನೆಯಲ್ಲಿರುವ ಚಿನ್ನಾಭರಣ ಕಾಣೆಯಾಗಿದ್ದು, ಇದರಿಂದ ಆತಂಕಗೊಂಡ ಮನೆ ಮಾಲೀಕರು ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಶಾಲಿನಿ ಮೇಲೆ ಶಂಕೆ ವ್ಯಕ್ತಪಡಿಸಿ ವಿಚಾರಣೆ ನಡೆಸಿದಾಗ, ಅವಳು ಕಳ್ಳತನದ ವಿಷಯವನ್ನು ಒಪ್ಪಿಕೊಂಡಿದ್ದಾಳೆ. ಪೊಲೀಸರು ಆರೋಪಿ ಶಾಲಿನಿಯಿಂದ ₹10 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

25
₹8 ಲಕ್ಷ ಕ್ಯಾಶ್, 40 ಗ್ರಾಂ ಚಿನ್ನ ಕದ್ದ ಕಳ್ಳಿ

₹8 ಲಕ್ಷ ಕ್ಯಾಶ್, 40 ಗ್ರಾಂ ಚಿನ್ನ ಕದ್ದ ಕಳ್ಳಿ

ಇಟ್ಮಡುವಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮನೆಯಲ್ಲೇ ಕಳ್ಳತನ: ₹8.47 ಲಕ್ಷ ಮೌಲ್ಯದ ನಗದು ವಶ

ಬೆಂಗಳೂರು : ಮನೆ ಕೆಲಸದ ಹೆಸರಿನಲ್ಲಿ ನಂಬಿಕೆಗೆ ಧಕ್ಕೆ ತರುವಂತೆ ನಡೆದುಕೊಂಡ ಮಹಿಳೆ ಭಾರೀ ಕಳ್ಳತನ ನಡೆಸಿದ ಘಟನೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಕಮಲಾ (35) ಎಂಬಾತಿಯನ್ನು ಬಂಧಿಸಿ ₹8.47 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಹಿತಿ ಪ್ರಕಾರ, ಕಮಲಾ ಇಟ್ಟಮಡುವಿನ ಮನೆಯೊಂದರಲ್ಲಿ ಸುಮಾರು ಮೂರು ತಿಂಗಳ ಹಿಂದೆ ಮನೆ ಕೆಲಸಕ್ಕೆ ಸೇರಿದ್ದಳು. ಈ ಮನೆ ಮಾಲೀಕರು ತಮ್ಮ ಮನೆಯಲ್ಲಿ ರಿನೋವೇಷನ್ ಕೆಲಸ ಮಾಡಿಸುತ್ತಿದ್ದರು. ಈ ಸಂದರ್ಭದಲ್ಲಿ ಮನೆಯ ಸಾಮಗ್ರಿ ಬಗ್ಗೆ ಗಮನವಿಲ್ಲದ ವೇಳೆ ₹3.85 ಲಕ್ಷ ನಗದು ಮತ್ತು 48 ಗ್ರಾಂ ತೂಕದ ಚಿನ್ನಾಭರಣವನ್ನು ಕದ್ದಿದ್ದಾಳೆ. ಮನೆಯಲ್ಲಿ ಕಳ್ಳತನ ನಡೆದ ನಂತರ ಮಾಲೀಕರು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ತೀವ್ರ ವಿಚಾರಣೆ ಬಳಿಕ ಕಮಲಾಳ ಶಂಕಿತ ಚಟುವಟಿಕೆ ಪತ್ತೆಯಾಗಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ವಿಷಯಕೆ ಒಪ್ಪಿಕೊಂಡಿದ್ದಾಳೆ. ಪೊಲೀಸರು ಆರೋಪಿ ಮಹಿಳೆಯಿಂದ ಕಳವಾದ ಒಟ್ಟು ₹8.47 ಲಕ್ಷ ಮೌಲ್ಯದ ಹಣ ಮತ್ತು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Related Articles

Related image1
ಬೆಂಗಳೂರು ಪಬ್‌ಗೆ ನುಗ್ಗಿದ ಮುಸುಕುಧಾರಿ, ಪಿಸ್ತೂಲ್ ತೋರಿಸಿ 50 ಸಾವಿರ ಕದ್ದ! ಕಾರಣ ಮಾಲೀಕರೇ?
Related image2
10 ವರ್ಷದಿಂದ ನಂಬಿಕೆ ಇಟ್ಟು ಕೆಲಸ ನೀಡಿದ್ದ ಮಾಲೀಕನ 1.51 ಕೋಟಿ ಹಣ ಎಗರಿಸಿದ ಡ್ರೈವರ್ ರಾಜೇಶ್
35
ಮನೆಗೆ ಡೂಬ್ಲಿಕೇಟ್ ಕೀ ಮಾಡಿಸಿ 128 ಗ್ರಾಂ ಚಿನ್ನ ಕದ್ದ ಕಳ್ಳಿ

ಮನೆಗೆ ಡೂಬ್ಲಿಕೇಟ್ ಕೀ ಮಾಡಿಸಿ 128 ಗ್ರಾಂ ಚಿನ್ನ ಕದ್ದ ಕಳ್ಳಿ

ಕೆಲಸ ಮಾಡುತ್ತಿದ್ದ ಮನೆಯನ್ನೇ ದೋಚಿದ ಮಹಿಳಾ ಕಳ್ಳಿ; ₹12 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಕೆಲಸ ಕೊಟ್ಟ ಮನೆಯಲ್ಲಿಯೇ ಕನ್ನ ಹಾಕಿ ಪರಾರಿಯಾಗಿದ್ದ ಮಹಿಳಾ ಕಳ್ಳಿಯನ್ನು ಹೆಚ್ ಎ ಎಲ್ ಪೊಲೀಸ್ ಠಾಣೆಯ ಪೊಲೀಸರು ನಾಟಕೀಯವಾಗಿ ಬಂಧಿಸಿದ್ದಾರೆ. ಬಂಧಿತ ಮಹಿಳೆ ವರಲಕ್ಷ್ಮೀ ಮನೆ ಕೆಲಸದ ವೇಳೆ ಕಳ್ಳತನ ಮಾಡಿ ಶ್ರೀಮಂತೆಯಾಗುವ ಕನಸು ಕಂಡಿದ್ದಳು. ಪೊಲೀಸರ ಪ್ರಕಾರ, ವರಲಕ್ಷ್ಮೀ ಕಳೆದ 2 ತಿಂಗಳಿಂದ ವಿಭೂತಿಪುರದ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದರು. ಈ ಅವಧಿಯಲ್ಲಿ ಮನೆಯಲ್ಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣು ಹಾಕಿದ್ದ ಆರೋಪಿಗೆ, ಕಳ್ಳತನ ಮಾಡುವ ಯೋಚನೆ ಮೂಡಿತ್ತು.

ಚಾಲಾಕಿತನದಿಂದ ಮನೆಯ 2 ಕೀಗಳಲ್ಲಿ ಒಂದನ್ನು ಕದ್ದುಕೊಂಡು ಹೋಗಿದ್ದಳು. ಮನೆ ಮಾಲೀಕರು ಕೀ ಮನೆಯಲ್ಲಿ ಎಲ್ಲಿಯೋ ಕಳೆದು ಹೋಗಿದೆ ಎಂದು ಸುಮ್ಮನಾಗಿದ್ದರು. ಆದರೆ, ಕೆಲಸಕ್ಕಿದ್ದ ಮಹಿಳೆ, ಮನೆಯ ಮಾಲೀಕರು ಊರಿಗೆ ಹೋಗಿದ್ದ ವೇಳೆ ಮನೆ ಬಾಗಿಲು ತೆರೆದು, ಬೀರುವಿನಲ್ಲಿ ಇಟ್ಟಿದ್ದ 128 ಗ್ರಾಂ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದರು. ಮನೆಯ ಚಿನ್ನಾಭರಣ ನಾಪತ್ತೆಯಾದ ಬಳಿಕ ಹೆಚ್ ಎ ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ನಡೆಸಿ, ವರಲಕ್ಷ್ಮಿಯನ್ನು ಬಂಧಿಸಿ ₹12 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

45
ಕೆಲಸ ಮಾಡೋ ಜ್ಯೂವೆಲ್ಲರಿ ಶಾಪಿನ 3 ಕೆಜಿ ಬೆಳ್ಳಿ ಕದ್ದ ನೌಕರ

ಕೆಲಸ ಮಾಡೋ ಜ್ಯೂವೆಲ್ಲರಿ ಶಾಪಿನ 3 ಕೆಜಿ ಬೆಳ್ಳಿ ಕದ್ದ ನೌಕರ

ಬೆಳ್ಳಿಯ ಆಭರಣ ಕಳವು ಮಾಡಿದ ನೌಕರ ಗೋಪಾಲ್ ನಾಯ್ಕ್ ಬಂಧನ; 3 ಕೆಜಿ ಬೆಳ್ಳಿ ವಶ

ಬೆಂಗಳೂರು: ಕೆಲಸ ಕೊಟ್ಟ ಮಾಲೀಕನ ನಂಬಿಕೆ ಧಕ್ಕೆ ತರುವ ಕೆಲಸವನ್ನು ಮಾಡಿ ಬರೋಬ್ಬರಿ 3 ಕೆಜಿ ಬೆಳ್ಳಿಯನ್ನು ಕದ್ದು ಪರಾರಿ ಆಗಿದ್ದ ಕಳ್ಳನನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಿತ್ರದುರ್ಗ ಜಿಲ್ಲೆ ಮೂಲದ ಗೋಪಾಲ್ ನಾಯ್ಕ್ (32) ಎಂಬಾತನಾಗಿದ್ದು, ಎಂಪಿ ಜ್ಯುವೆಲ್ಲರ್ಸ್ ಎಂಬ ಖ್ಯಾತ ಆಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಪೊಲೀಸರ ಮಾಹಿತಿ ಪ್ರಕಾರ, ಗೋಪಾಲ್ ನಾಯ್ಕ್‌ಗೆ ಅಂಗಡಿಯ ಬೆಳ್ಳಿ ವಸ್ತುಗಳನ್ನು ಪಾಲಿಶ್ ಮಾಡಲು ಹೊರಗೆ ಕೊಂಡೊಯ್ಯುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ಜವಾಬ್ದಾರಿಯನ್ನು ದುರ್ಬಳಕೆ ಮಾಡಿಕೊಂಡು, ಮಾಲೀಕರಿಗೆ ಯಾಮಾರಿಸಿ ಸುಮಾರು 3 ಕೆಜಿ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾದನು.

ಅಂಗಡಿಯ ಮಾಲೀಕರು ಬೆಳ್ಳಿ ನಾಪತ್ತೆಯಾದ ವಿಷಯವನ್ನು ಗಮನಿಸಿ ತಕ್ಷಣವೇ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು. ದೂರು ಮೇರೆಗೆ ತಕ್ಷಣವೇ ತನಿಖೆ ಆರಂಭಿಸಿದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧನಕ್ಕೊಳಪಡಿಸಿದರು. ಬಂಧಿತನಿಂದ ₹3 ಲಕ್ಷ ಮೌಲ್ಯದ 3 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

55
ಇಂಜಿನಿಯರಿಂಗ್ ಮನೆಗಳ್ಳ; 90 ಕೇಸಿನ ಆರೋಪಿ ಲಾಕ್!

ಇಂಜಿನಿಯರಿಂಗ್ ಮನೆಗಳ್ಳ; 90 ಕೇಸಿನ ಆರೋಪಿ ಲಾಕ್!

ಓದಿಕೊಂಡಿದ್ದು, ಇಂಜಿನಿಯರಿಂಗ್ ಮಾಡೋದು ಮನೆ ಕಳ್ಳತನ: ಒಂದೇ ದಿನ 3 ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದ

ಬೆಂಗಳೂರು: ಚಿನ್ನಾಭರಣ ಕಳ್ಳತನ ಮಾಡುವುದನ್ನೇ ಖಯಾಲಿ ಮಾಡಿಕೊಂಡಿದ್ದ ಆಂಧ್ರ ಪ್ರದೇಶದ ಕೆಂಪಲ್ಲಿ ಮೂಲದ ಶ್ರೀನಿವಾಸ್ (35) ಎಂಬಾತ, ಒಂದೇ ದಿನದಲ್ಲಿ ಕೊಡಿಗೆಹಳ್ಳಿ ವ್ಯಾಪ್ತಿಯ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದಾನೆ. ಈತನ ವಿರುದ್ಧ ಈಗಾಗಲೇ 90ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ. ಕೇವಲ ಕಳ್ಳತನವಲ್ಲ, ಸೈಬರ್ ವಂಚನೆಗೂ ಈತನ ಕೈವಾಡವಿದೆ. ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಾಗಿರುವ ಶ್ರೀನಿವಾಸ್, ಪದವಿ ಪೂರ್ಣಗೊಳಿಸಿದ ಬಳಿಕ ಒಂದು ಕಾಲದಲ್ಲಿ ಆಂಧ್ರದ ಸಿನೆಮಾ ಇಂಡಸ್ಟ್ರಿಯಲ್ಲಿ ಸೆಟ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, 2008 ರಲ್ಲಿ ಸೆಟ್‌ನಲ್ಲಿ ಲ್ಯಾಪ್ಟಾಪ್ ಕಳವು ಮಾಡಿದ್ದಕ್ಕಾಗಿ ಮೊದಲ ಬಾರಿಗೆ ಜೈಲು ಸೇರಿದ್ದನು. ನಂತರದ ದಿನಗಳಲ್ಲಿ ಕಳ್ಳತನದ ಮಾರ್ಗವನ್ನೇ ಆತನ ಜೀವನಶೈಲಿ ಮಾಡಿಕೊಂಡಿದ್ದನು.

ಆನ್ಲೈನ್ ಗೇಮ್ ಹುಚ್ಚು ಈತನನ್ನು ತೀವ್ರ ಹಣದ ಬೇಡಿಕೆಗೆ ದೂಡಿದೆ. ಅದೆ ಕಾರಣದಿಂದ ಶ್ರೀನಿವಾಸ್ ವಿವಿಧ ರಾಜ್ಯಗಳಲ್ಲೂ ಕಳ್ಳತನಕ್ಕೆ ಇಳಿದಿದ್ದ. ಆಂಧ್ರಪ್ರದೇಶದಲ್ಲಿ ಈತನ ವಿರುದ್ಧ 87ಕ್ಕೂ ಹೆಚ್ಚು ಪ್ರಕರಣಗಳು, ಮತ್ತು ಕರ್ನಾಟಕದ ಧಾರವಾಡ, ಬೀದರ್, ಜೆ. ಬಿ. ನಗರ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಇನ್ನೂ ನಾಲ್ಕು ಪ್ರಕರಣಗಳು ದಾಖಲಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ, ಕೊಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಾಜಿ ಲೇಔಟ್‌ನಲ್ಲಿ ಎರಡು ಮನೆಗಳು, ಮತ್ತು ಪಾರ್ವತಮ್ಮ ಲೇಔಟ್‌ನಲ್ಲಿ ಒಂದು ಮನೆಗಳ್ಳತನವಾಗಿದೆ. ಮನೆ ಮಾಲೀಕರು ಮನೆಯಲ್ಲಿ ಇಲ್ಲದಿರುವ ಸಮಯವನ್ನು ಬಳಸಿಕೊಂಡು, ಶ್ರೀನಿವಾಸ್ ಮನೆಯಲ್ಲಿ ಬೀಗ ಮುರಿದು ನುಗ್ಗಿ ಚಿನ್ನಾಭರಣ ದೋಚಿದ್ದ. ಪೊಲೀಸರು ತನಿಖೆ ನಡೆಸಿ ಮೈಸೂರಿನಲ್ಲಿ ಖಾಸಗಿ ಪಿಜಿಯೊಂದರಲ್ಲಿ ತಂಗಿದ್ದ ಶ್ರೀನಿವಾಸನನ್ನು ಬಂಧಿಸಿದ್ದಾರೆ. ಬಂಧಿತನಿಂದ 145 ಗ್ರಾಂ ಚಿನ್ನಾಭರಣಗಳು, ಅಂದಾಜು ₹9 ಲಕ್ಷ ಮೌಲ್ಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬೆಂಗಳೂರು ನಗರ
ಕ್ರೈಮ್ ನ್ಯೂಸ್
ಸಂಬಂಧಗಳು

Latest Videos
Recommended Stories
Recommended image1
ಚಿಕ್ಕಮಗಳೂರು: ನನ್ ಹೆಂಡ್ತಿಗೆ ಕಂಡ್ ಕಂಡೋನು ಮೆಸೇಜ್ ಮಾಡ್ತಾನೆಂದು ಆತ್ಮ*ಹತ್ಯೆ ಮಾಡಿಕೊಂಡ ಗಂಡ!
Recommended image2
ಮುಂಡಗೋಡ ಅರಣ್ಯದಲ್ಲಿ ತಲೆ ಕತ್ತರಿಸಿದ ಮಹಿಳೆಯ ಬೆ*ತ್ತಲೆ ಶವ ಪತ್ತೆ; ಗುರುತು ಪತ್ತೆಗೆ ಪೊಲೀಸರ ಪರದಾಟ!
Recommended image3
ದೃಶ್ಯ ಸಿನಿಮಾ ಮೀರಿಸುವಂತೆ ಕಥೆ ಕಟ್ಟಿದ್ದ ಕಿರಾತಕ! ಹೆಂಡತಿಯನ್ನು ಬಡಿದು ಕೊಂ*ದ ಆಸಾಮಿ ಸಿಕ್ಕಿಬಿದ್ದಿದ್ದೇ ಇಂಟ್ರೆಸ್ಟಿಂಗ್ ಕಹಾನಿ!
Related Stories
Recommended image1
ಬೆಂಗಳೂರು ಪಬ್‌ಗೆ ನುಗ್ಗಿದ ಮುಸುಕುಧಾರಿ, ಪಿಸ್ತೂಲ್ ತೋರಿಸಿ 50 ಸಾವಿರ ಕದ್ದ! ಕಾರಣ ಮಾಲೀಕರೇ?
Recommended image2
10 ವರ್ಷದಿಂದ ನಂಬಿಕೆ ಇಟ್ಟು ಕೆಲಸ ನೀಡಿದ್ದ ಮಾಲೀಕನ 1.51 ಕೋಟಿ ಹಣ ಎಗರಿಸಿದ ಡ್ರೈವರ್ ರಾಜೇಶ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved