MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime
  • ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆ; ಪ್ರಶ್ನೆ ಮಾಡಿದ ಹೆಂಡತಿಯ ಉಸಿರನ್ನೇ ನಿಲ್ಲಿಸಿದ ಗಂಡ!

ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆ; ಪ್ರಶ್ನೆ ಮಾಡಿದ ಹೆಂಡತಿಯ ಉಸಿರನ್ನೇ ನಿಲ್ಲಿಸಿದ ಗಂಡ!

ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವಿಚಾರದಲ್ಲಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡಿದೆ. ಗಂಡನಿಗೆ ಹೆಂಡತಿ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಮಾಡಿ ಪರಾರಿ ಆಗಿದ್ದನು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

1 Min read
Sathish Kumar KH
Published : Sep 11 2025, 04:18 PM IST
Share this Photo Gallery
  • FB
  • TW
  • Linkdin
  • Whatsapp
15
ಸುಂದರ ಹೆಂಡತಿ ಕೊಂದ ಗಂಡ
Image Credit : Asianet News

ಸುಂದರ ಹೆಂಡತಿ ಕೊಂದ ಗಂಡ

ಬೆಂಗಳೂರು (ಸೆ.11): ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಹಿಂದೆ ಗಂಡನೇ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಅಮೀನಾ (35) ಎಂಬ ಮಹಿಳೆಯನ್ನು ಆಕೆಯ ಗಂಡನೇ ಮರದ ಪಟ್ಟಿಯಿಂದ ಹೊಡೆದು ಕೊಲೆ ಮಾಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

25
ಮೊದಲ ಮದುವೆ ಮುಚ್ಚಿಟ್ಟಿದ್ದ ಗಂಡ
Image Credit : Asianet News

ಮೊದಲ ಮದುವೆ ಮುಚ್ಚಿಟ್ಟಿದ್ದ ಗಂಡ

ಈಶಾನ್ಯ ವಿಭಾಗದ ಡಿಸಿಪಿ ಸಜೀತ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಆರೋಪಿ ಮೊದಲ ಮದುವೆಯ ವಿಷಯವನ್ನು ಮುಚ್ಚಿಟ್ಟು ಅಮೀನಾಳನ್ನು ಮದುವೆಯಾಗಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ನಿರಂತರವಾಗಿ ಜಗಳ ನಡೆಯುತ್ತಿತ್ತು. ಜಗಳ ತಾರಕಕ್ಕೇರಿದಾಗ, ಆರೋಪಿ ಮರದ ರಿಪೀಸ್ ಪಟ್ಟಿಯಿಂದ ಅಮೀನಾಳ ತಲೆಗೆ ಮತ್ತು ದೇಹಕ್ಕೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

Related Articles

Related image1
ಗಂಡ, ಹೆಂಡತಿ ಮಕ್ಕಳು ಸೇರಿ ಕಾಲುವೆಗೆ ಹಾರಿದ ಒಂದೇ ಕುಟುಂಬದ 6 ಜನ; ಇಬ್ಬರು ಸೇಫ್, ನಾಲ್ವರು ಸಾವು
Related image2
Now Playing
ಸೀನಿಯರ್ ಲಾಯರ್ ಮದುವೆಯಾಗಲು ಹೆಂಡತಿಯನ್ನೇ ಮುಗಿಸಿದ ಗಂಡ; 2 ಬಾರಿ ಜಸ್ಟ್ ಮಿಸ್, 3ನೇ ಸಲ ಮಟಾಶ್!
35
ಕೂಲಿ ಕೆಲಸಕ್ಕೆ ಬಂದು ಮಸಣ ಸೇರಿದಳು
Image Credit : Asianet News

ಕೂಲಿ ಕೆಲಸಕ್ಕೆ ಬಂದು ಮಸಣ ಸೇರಿದಳು

ಪೊಲೀಸ್ ಮೂಲಗಳ ಪ್ರಕಾರ, ಕೊಲೆಯಾದ ಅಮೀನಾ ಮತ್ತು ಆರೋಪಿ ಇಬ್ಬರೂ ಪಶ್ಚಿಮ ಬಂಗಾಳ ಮೂಲದವರು. ಸುಮಾರು ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸ ಮಾಡುವ ಸಲುವಾಗಿ ಬೆಂಗಳೂರಿಗೆ ಬಂದು ಯಲಹಂಕದಲ್ಲಿ ಬಾಡಿಗೆ ಮನೆ ಪಡೆದಿದ್ದರು. ಆರೋಪಿಯು ತನ್ನ ಮೊದಲ ಮದುವೆಯ ವಿಷಯ ಬಹಿರಂಗವಾದ ನಂತರ, ಅದನ್ನು ಒಪ್ಪಿಕೊಳ್ಳುವಂತೆ ಅಮೀನಾಳನ್ನು ಒತ್ತಾಯಿಸುತ್ತಿದ್ದ ಎಂದು ತಿಳಿದುಬಂದಿದೆ.

45
ಬೆಂಗಳೂರಲ್ಲಿ ಕೊಲೆ ಮಾಡಿ, ಆಂಧ್ರಕ್ಕೆ ಪರಾರಿ
Image Credit : Asianet News

ಬೆಂಗಳೂರಲ್ಲಿ ಕೊಲೆ ಮಾಡಿ, ಆಂಧ್ರಕ್ಕೆ ಪರಾರಿ

ಕೊಲೆ ಮಾಡಿದ ನಂತರ ಆರೋಪಿ ತಕ್ಷಣವೇ ರಾಜಮಂಡ್ರಿಗೆ ಪರಾರಿಯಾಗಿದ್ದ. ಈಶಾನ್ಯ ವಿಭಾಗದ ಪೊಲೀಸರು ತಂತ್ರಜ್ಞಾನ ಮತ್ತು ಮಾಹಿತಿ ಸಂಗ್ರಹದ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

55
ಆರೋಪಿ ನ್ಯಾಯಾಂಗ ಬಂಧನ
Image Credit : Asianet News

ಆರೋಪಿ ನ್ಯಾಯಾಂಗ ಬಂಧನ

ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಈ ಘಟನೆ ಯಲಹಂಕ ಉಪನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಸಂಬಂಧಗಳು
ಕ್ರೈಮ್ ನ್ಯೂಸ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved