MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime
  • ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡತಿ ಬೇಕಿಲ್ಲ; ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ನಡೆದೇ ಹೋಯ್ತು ದುರಂತ!

ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡತಿ ಬೇಕಿಲ್ಲ; ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ನಡೆದೇ ಹೋಯ್ತು ದುರಂತ!

ಬೆಂಗಳೂರಿನಲ್ಲಿ ದಾರುಣ ಘಟನೆ! ನಡತೆಯ ಮೇಲಿನ ಅನುಮಾನದಿಂದ ಲಿವ್-ಇನ್ ಸಂಗಾತಿಯನ್ನು ಕೊಲೆಗೈದು, ಪ್ರಿಯಕರ ಆತ್ಮಹ*ತ್ಯೆಗೆ ಶರಣಾಗಿದ್ದಾನೆ. ಘಟನೆಯ ಸಂಪೂರ್ಣ ವಿವರ ತಿಳಿಯಲು ಓದಿ.

1 Min read
Sathish Kumar KH
Published : Dec 02 2025, 03:43 PM IST
Share this Photo Gallery
  • FB
  • TW
  • Linkdin
  • Whatsapp
15
ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡ್ತಿ ಬೇಕಿಲ್ಲ
Image Credit : Asianet News

ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡ್ತಿ ಬೇಕಿಲ್ಲ

ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆಕೆಯ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯು ತಾನೂ ಆತ್ಮಹ*ತ್ಯೆಗೆ ಶರಣಾಗಿದ್ದಾನೆ. ಮಹಿಳೆಯ ನಡತೆಯ ಬಗ್ಗೆ ಅನುಮಾನಗೊಂಡು ಇಬ್ಬರ ನಡುವೆ ನಡೆದ ಜಗಳವೇ ಈ ದಾರುಣ ಅಂತ್ಯಕ್ಕೆ ಕಾರಣ ಎನ್ನಲಾಗಿದೆ.

ಕೊಲೆಯಾದ ಮಹಿಳೆಯನ್ನು ಲಲಿತಾ (49) ಎಂದು ಗುರುತಿಸಲಾಗಿದೆ. ಆಕೆಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮಿನಾರಾಯಣ (51) ಎಂದು ಗುರುತಿಸಲಾಗಿದೆ.

25
ಸಂಬಂಧ ಮತ್ತು ಜಗಳದ ಹಿನ್ನೆಲೆ
Image Credit : Asianet News

ಸಂಬಂಧ ಮತ್ತು ಜಗಳದ ಹಿನ್ನೆಲೆ

ಈ ಘಟನೆ ನಡೆದ ನಂತರ ಲಕ್ಷ್ಮಿನಾರಾಯಣ ಮತ್ತು ಲಲಿತಾ ನಡುವಿನ ಸಂಬಂಧದ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಲಕ್ಷ್ಮಿನಾರಾಯಣ ತನ್ನ ಮೊದಲ ಪತ್ನಿಯನ್ನು ತೊರೆದು ಲಲಿತಾಳೊಂದಿಗೆ ವಾಸಿಸುತ್ತಿದ್ದನು.ಲಲಿತಾಳ ಪತಿ ನಿಧನರಾದ ಬಳಿಕ, ಆಕೆ ಲಕ್ಷ್ಮಿನಾರಾಯಣನೊಂದಿಗೆ ಜೀವನ ಸಾಗಿಸುತ್ತಿದ್ದಳು. ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಲಕ್ಷ್ಮಿನಾರಾಯಣನು ಲಲಿತಾಳ ನಡತೆಯ ಬಗ್ಗೆ ಪದೇ ಪದೇ ಸಂಶಯ ವ್ಯಕ್ತಪಡಿಸಿ ಜಗಳವಾಡುತ್ತಿದ್ದನು. ಈ ಜಗಳಗಳು ನಿರಂತರವಾಗಿ ಹೆಚ್ಚಾಗಿದ್ದವು.

Related Articles

Related image1
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ, ಯಾದಗಿರಿ ಮೂಲದ ವ್ಯಕ್ತಿಯನ್ನು ಪ್ರಿಯಕರನೊಂದಿಗೆ ಬೆಂಗಳೂರಲ್ಲಿ ಕೊಂದ ಪತ್ನಿ!
Related image2
Now Playing
9 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
35
ವೇಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ
Image Credit : Asianet News

ವೇಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ

ಭಾನುವಾರ ರಾತ್ರಿ (ಡಿ.01) ಇಬ್ಬರ ನಡುವೆ ಮತ್ತೊಮ್ಮೆ ಜಗಳ ತಾರಕಕ್ಕೇರಿತ್ತು. ಕೋಪದಿಂದ ಲಕ್ಷ್ಮಿನಾರಾಯಣ, ಲಲಿತಾಳ ಕುತ್ತಿಗೆಯನ್ನು ವೇಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಆಕೆ ಸಾವನ್ನಪ್ಪಿದ್ದನ್ನು ಖಚಿತಪಡಿಸಿಕೊಂಡ ನಂತರ, ಲಕ್ಷ್ಮಿನಾರಾಯಣನು ಮನೆಯೊಳಗೆ ತಾನೂ ಸಹ ಆತ್ಮಹ*ತ್ಯೆಗೆ ಶರಣಾಗಿದ್ದಾನೆ.

45
ಬಾಗಿಲು ತೆರೆಯದ ಜೋಡಿ
Image Credit : Asianet News

ಬಾಗಿಲು ತೆರೆಯದ ಜೋಡಿ

ಸೋಮವಾರ (ಡಿ.02) ಬೆಳಗ್ಗೆಯಾದರೂ ಮನೆಯ ಬಾಗಿಲು ತೆಗೆದಿರುವುದನ್ನು ಗಮನಿಸಿದ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಅವರು ಮನೆ ಒಳಗೆ ಹೋಗಿ ನೋಡಿದಾಗ, ಲಲಿತಾ ಕೊಲೆಯಾಗಿರುವುದು ಮತ್ತು ಲಕ್ಷ್ಮಿನಾರಾಯಣ ಆತ್ಮಹ*ತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

55
ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ
Image Credit : Asianet News

ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ

ಸ್ಥಳಕ್ಕೆ ತಕ್ಷಣವೇ ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅನೈತಿಕ ಸಂಬಂಧ, ಅನುಮಾನ ಮತ್ತು ಮನಸ್ತಾಪಗಳು ಒಂದು ಸುಂದರ ಕುಟುಂಬದ ಈ ದಾರುಣ ಅಂತ್ಯಕ್ಕೆ ಕಾರಣವಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಕ್ರೈಮ್ ನ್ಯೂಸ್
ಸಂಬಂಧಗಳು

Latest Videos
Recommended Stories
Recommended image1
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!
Recommended image2
10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
Recommended image3
ದಿವ್ಯಾಂಗ ಯುವತಿ ಮೇಲೆ ಬಲತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!
Related Stories
Recommended image1
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ, ಯಾದಗಿರಿ ಮೂಲದ ವ್ಯಕ್ತಿಯನ್ನು ಪ್ರಿಯಕರನೊಂದಿಗೆ ಬೆಂಗಳೂರಲ್ಲಿ ಕೊಂದ ಪತ್ನಿ!
Recommended image2
Now Playing
9 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved