MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • ಕನಕಪುರದ ಕಾಂಗ್ರೆಸ್‌ ಮುಖಂಡನ ಪುತ್ರಿ, ಭೀಮನ ಅಮವಾಸ್ಯೆಯಂದು ಗಂಡನ ಪಾದಪೂಜೆ ಬೆನ್ನಲ್ಲೇ ಶಂಕಾಸ್ಪದ ಸಾವು!

ಕನಕಪುರದ ಕಾಂಗ್ರೆಸ್‌ ಮುಖಂಡನ ಪುತ್ರಿ, ಭೀಮನ ಅಮವಾಸ್ಯೆಯಂದು ಗಂಡನ ಪಾದಪೂಜೆ ಬೆನ್ನಲ್ಲೇ ಶಂಕಾಸ್ಪದ ಸಾವು!

ಭೀಮನ ಅಮವಾಸ್ಯೆಯಂದು ಗಂಡನ ಪಾದಪೂಜೆ ಮಾಡಿ ಫೋಟೋ ಹಂಚಿಕೊಂಡಿದ್ದ ಸ್ಪಂದನಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಗಂಡನನ್ನು ಬಂಧಿಸಲಾಗಿದೆ. ಸಾವಿಗೆ ಮುನ್ನ ಸ್ಪಂದನಾ ಕಳುಹಿಸಿದ್ದ ಸಂದೇಶದಲ್ಲಿ ಗಂಡ ಮತ್ತು ಆತನ ಕುಟುಂಬದವರೇ ಕಾರಣ ಎಂದು ಆರೋಪಿಸಿದ್ದಾರೆ.

1 Min read
Author : Santosh Naik
| Updated : Jul 25 2025, 01:15 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಭೀಮನ ಅಮವಾಸ್ಯೆಯಂದು ಖುಷಿಯಿಂದ ಗಂಡ ಪಾದ ತೊಳೆದು ಅದರ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಮಹಿಳೆ, ಅದಾದ ಕೆಲವೇ ಹೊತ್ತಿನಲ್ಲಿ ಅನುಮಾನಸ್ಪದವಾಗಿ ಸಾವು ಕಂಡಿದ್ದಾಳೆ.

28
Image Credit : Asianet News

ಬೆಂಗಳೂರು ಹೊರವಲಯದಲ್ಲಿನ ದಾಸನಪುರದ ಅಂಚೆಪಾಳ್ಯದಲ್ಲಿ ಘಟನೆ ನಡೆದಿದ್ದು, 24 ವರ್ಷದ ಸ್ಪಂದನಾ ಮೃತ ಮಹಿಳೆ. ಇನ್ಸ್‌ಟಾಗ್ರಾಮ್‌ ಮೂಲಕ ಪರಿಚಯವಾಗಿದ್ದ ಅಭಿಷೇಕ್‌ ಎಂಬಾತನನ್ನು 2024ರಲ್ಲಿ ಸ್ಪಂದನಾ ಮದುವೆಯಾಗಿದ್ದರು.

Related Articles

Related image1
ಭೀಮನ ಅಮವಾಸ್ಯೆ: ಪತ್ನಿಯೊಂದಿಗೆ ದೇಗುಲಕ್ಕೆ ಆಗಮನಿಸಿ ಮಂಡ್ಯ ಎಸ್‌ಪಿ ವಿಶೇಷ ಪೂಜೆ
Related image2
ಭೀಮನ ಅಮವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡಿದ ಹೆಂಡತಿ, ಕೆಲವೇ ಕ್ಷಣದಲ್ಲಿ ಶಿವನ ಪಾದ ಸೇರಿದಳು!
38
Image Credit : Asianet News

ಕನಕಪುರ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಮದುವೆ ನಡೆದಿತ್ತು. ಇನ್ನು ಅಭಿಷೇಕ್‌ ಕನಕಪುರದ ಕರಿಕಲ್ಲದೊಡ್ಡಿ ನಿವಾಸಿ. ಬೆಂಗಳೂರಿನ ಕಾಲೇಜಿನಲ್ಲಿ ಪಿಜಿ ಓದುವಾಗ ಅಭಿಷೇಕ್ ಮತ್ತು ಸ್ಪಂದನಾ ಭೇಟಿಯಾಗಿದ್ದರೂ, ಇನ್ಸ್‌ಟಾಗ್ರಾಮ್‌ ಮೂಲಕ ಆಪ್ತರಾಗಿದ್ದರು.

48
Image Credit : Asianet News

ಮದುವೆಯ ನಂತರ ವರದಕ್ಷಿಣೆಗಾಗಿ ಗಂಡನಿಂದ ಕಿರುಕುಳ ಶುರುವಾಗಿದೆ. ಅಂಚೆಪಾಳ್ಯದಲ್ಲಿ ವಾಸವಿದ್ದ ಸ್ಪಂದನಾ, ಬೆಂಗಳೂರಿನ ಬೃಂದಾವನ ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದರು. ಮದುವೆಯ ನಂತರವೂ ಆಕೆಯನ್ನು ತಾಯಿಯೇ ಓದಿಸುತ್ತಿದ್ದರು ಎನ್ನುವುದು ಗೊತ್ತಾಗಿದೆ.

58
Image Credit : Asianet News

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸ್ಪಂದನ ಮೃತದೇಹ ಪತ್ತೆಯಾಗಿದ್ದು, ಕೂಡಲೇ ಗಂಡ ಆಸ್ಪತ್ರೆಗೆ ಸಾಗಿಸಿದ್ದಾನೆ. ಆದ್ರೆ ಅಷ್ಟರಲ್ಲಿ ಸ್ಪಂದನಾ ಮೃತಪಟ್ಟಿದ್ದಳು ಎನ್ನಲಾಗಿದೆ.

68
Image Credit : Asianet News

ಸಾಯುವುದಕ್ಕೂ ಮುನ್ನ ತಂಗಿಗೆ ಮೆಸೇಜ್ ಕಳುಹಿಸಿರುವ ಸ್ಪಂದನಾ, ನನ್ನ ಸಾವಿಗೆ ಅಭಿ ಹಾಗೂ ಅವರ ಕುಟುಂಬಸ್ಥರು ಹಾಗೂ ಕೆಲಸ ಮಾಡುತ್ತಿರುವ ಜಾಗದಲ್ಲಿರುವವರು ಕಾರಣ ಎಂದು ಬರೆದಿದ್ದಾರೆ.

78
Image Credit : Asianet News

ಸದ್ಯ ಅಭಿಷೇಕ್‌ನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸ್ಪಂದನಾ ಕನಕಪುರ ಕಾಂಗ್ರೆಸ್ ಮುಖಂಡನ ಮಗಳು. ಕನಕಪುರ ಗ್ರಾಮಪಂಚಾಯ್ತಿ ಸದಸ್ಯ ಚಂದ್ರು ಎನ್ನುವವರ ಪುತ್ರಿ.

88
Image Credit : Asianet News

ಸ್ಪಂದನಾ ಸಾವಿನ ಬಳಿಕ ಪೋಷಕರಿಗೆ ಸ್ಥಳೀಯರು ವಿಚಾರ ಮುಟ್ಟಿಸಿದ್ದಾರೆ. ಮಹಿಳೆ ಸಾವಿನ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಗಂಡ ಅಭಿಷೇಕ್ ಆತನ ತಾಯಿ ಲಕ್ಷ್ಮಮ್ಮ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕ್ರೈಮ್ ನ್ಯೂಸ್
ಬೆಂಗಳೂರು
ಬೆಂಗಳೂರು ನಗರ

Latest Videos
Recommended Stories
Recommended image1
ಬೆಂಗಳೂರು: ವಂಚಕರಿಗೆ ಸ್ನೇಹಿತನ ಖಾತೆ ಮಾರಾಟ, ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ₹7 ಕೋಟಿ ವರ್ಗಾಹಿಸಿ ಮೋಸ! ಕೋಟಿಗಟ್ಟಲೇ ಹಣ ಎಲ್ಲಿಂದ?
Recommended image2
ಕಟಾಂಜನದ ಒಳಗಿರೋ ದರ್ಶನ್ ಸ್ಥಿತಿಗೆ ದೇವರೇ ಗತಿ; ಟಿವಿ ಕೊಟ್ಟಿದ್ದಕ್ಕೆ ಥ್ಯಾಕ್ಸ್ ಎಂದ ನಟನಿಗೆ ನ್ಯಾಯಾಧೀಶರ ಕೌಂಟರ್ ಏನು?
Recommended image3
ಈಕೆ ಅಮ್ಮನಲ್ಲ, ಹೆಣ್ಣಿನ ಕುಲಕ್ಕೆ ಅವಮಾನ.. ಬಾಯ್‌ಫ್ರೆಂಡ್‌ ಮೂಲಕ ಸ್ವಂತ ಮಗಳನ್ನೇ ರೇ*ಪ್‌ ಮಾಡಿಸಿದ ತಾಯಿ!
Related Stories
Recommended image1
ಭೀಮನ ಅಮವಾಸ್ಯೆ: ಪತ್ನಿಯೊಂದಿಗೆ ದೇಗುಲಕ್ಕೆ ಆಗಮನಿಸಿ ಮಂಡ್ಯ ಎಸ್‌ಪಿ ವಿಶೇಷ ಪೂಜೆ
Recommended image2
ಭೀಮನ ಅಮವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡಿದ ಹೆಂಡತಿ, ಕೆಲವೇ ಕ್ಷಣದಲ್ಲಿ ಶಿವನ ಪಾದ ಸೇರಿದಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved