Dr Soundarya Suicide: ಶೋಕ ಸಾಗರದಲ್ಲಿ BSY ಕುಟುಂಬ, ನೀರವ ಮೌನ
ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ (BS Yediyurappa) ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ (Suicide ) ಶರಣಾಗಿದ್ದಾರೆ. ಪದ್ಮಾವತಿ ಪುತ್ರಿ ವೈದ್ಯೆ ಸೌಂದರ್ಯ(30) ಆತ್ಮಹತ್ಯೆ (Suicide) ಮಾಡಿಕೊಂಡಿದ್ದು ಅಂತ್ಯಕ್ರಿಯೆ ನೆರವೇರಲಿದೆ.

ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರರ ಪರೀಕ್ಷೆ ನಡೆಸಲಾಗಿದೆ.
ಸೋಲದೇವನಹಳ್ಳಿಯ ಅಬ್ಬಿಗೆರೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಶುಕ್ರವಾರ ಸೂರ್ಯಾಸ್ತದ ಮುನ್ನ ಅಂತ್ಯಕ್ರಿಯೆ ನೆರವೇರಲಿದ್ದು ಬಿಎಸ್ವೈ ಕುಟುಂಬ ಆಘಾತದಲ್ಲಿದೆ.
ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಮೂರು ತಿಂಗಳ ಹಿಂದಷ್ಟೆ ಮಗುವಿಗೆ ನಾಮಕರಣ ಮಾಡಲಾಗಿತ್ತು. ತಾತ ಯಡಿಯೂರಪ್ಪ ಮನೆಯಲ್ಲಿಯೇ ಬಾಣಂತನಕ್ಕೆ ಸೌಂದರ್ಯ ಇದ್ದರು.
Dr Soundarya Suicide
ಕಳೆದ ಒಂಭತ್ತು ತಿಂಗಳ ಹಿಂದೆ ಸೌಂದರ್ಯ ಮಗುವಿಗೆ ಜನ್ಮ ನೀಡಿದ್ದರು. ಕೆಲಸದವರು ತಿಂಡಿ ಕೊಡಲು ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸೌಂದರ್ಯ ಪತಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ