MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime
  • ನಿರ್ಭಯಾ ಹತ್ಯೆಗಿಂತ ಕ್ರೂರ; ಚಿತ್ರದುರ್ಗ ಕಾಲೇಜು ವಿದ್ಯಾರ್ಥಿನಿ ರೇಪ್ ಮಾಡಿ, ಬೆಂಕಿ ಹಚ್ಚಿ ಸುಟ್ಟರಾ ಕ್ರಿಮಿಗಳು!

ನಿರ್ಭಯಾ ಹತ್ಯೆಗಿಂತ ಕ್ರೂರ; ಚಿತ್ರದುರ್ಗ ಕಾಲೇಜು ವಿದ್ಯಾರ್ಥಿನಿ ರೇಪ್ ಮಾಡಿ, ಬೆಂಕಿ ಹಚ್ಚಿ ಸುಟ್ಟರಾ ಕ್ರಿಮಿಗಳು!

ಚಿತ್ರದುರ್ಗದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅರೆಬೆಂದ ಶವ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾ*ರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

2 Min read
Sathish Kumar KH
Published : Aug 20 2025, 11:27 AM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಚಿತ್ರದುರ್ಗ (ಆ.19): ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಅರೆಬೆಂದ ಸ್ಥಿತಿಯಲ್ಲಿ ನಗ್ನವಾಗಿರುವ 19 ವರ್ಷದ ಕಾಲೇಜು ಯುವತಿಯ ಶವ ಪತ್ತೆಯಾಗಿದೆ.ಈ ಘಟನೆಯಲ್ಲಿ ಆರೋಪಿಗಳ ಕೃತ್ಯವು ದೆಹಲಿಯಲ್ಲಿ ನಡೆ ನಿರ್ಭಯಾ ಪ್ರಕರಣವನ್ನು ಮೀರಿಸುವಂತಿದೆ ಎಂಬ ಆರೋಪಗಳು ಸ್ಥಳೀಯ ಸಂಘಟನೆಗಳಿಂದ ವ್ಯಕ್ತವಾಗಿದೆ. ಇಡೀ ಜಿಲ್ಲೆಯಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

28
Image Credit : Asianet News

ಘಟನೆ ಹಿನ್ನೆಲೆ

ಈ ಘಟನೆಯು ಹಿರಿಯೂರು ತಾಲ್ಲೂಕಿನ ಕೋವೇರಹಟ್ಟಿ ಗ್ರಾಮದ 19 ವರ್ಷದ ಪದವಿ ವಿದ್ಯಾರ್ಥಿನಿ ವರ್ಷಿತಾ ಎಂಬ ಯುವತಿಯ ಬರ್ಬರ ಹತ್ಯೆ ಎಂದು ಗುರುತಿಸಲಾಗಿದೆ. ಕೋವೇರಹಟ್ಟಿಯ ನಿವಾಸಿಯಾದ ವರ್ಷಿತಾ, ಚಿತ್ರದುರ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು ಮತ್ತು ನಗರದ ಬಾಲಕಿಯರ ವಸತಿ ಶಾಲೆಯಲ್ಲಿ ತಂಗಿದ್ದಳು. ಕಳೆದ 4 ದಿನಗಳಿಂದಲೂ ವರ್ಷಿತಾ ಹಾಸ್ಟೆಲ್ ಅಥವಾ ಮನೆಗೆ ಹೋಗಿರಲಿಲ್ಲ.

Related Articles

Related image1
ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ*ರ!
Related image2
ರೈಲು ಕೋಚ್‌ನಲ್ಲಿ ಸಾಮೂಹಿಕ ಅತ್ಯಾಚಾ*ರ ಮಾಡಿ, ಹಳಿಯಲ್ಲಿ ಬೀಸಾಡಿ ಹೋದ ಕಾಮುಕರು!
38
Image Credit : Asianet News

ರಜೆ ಪತ್ರ ಬರೆದುಕೊಟ್ಟಿದ್ದ ವರ್ಷಿತಾ:

ಆಗಸ್ಟ್ 14ರಂದು, ತನ್ನ ಊರಿಗೆ ಹೋಗಲು ರಜೆ ಕೋರಿ ಹಾಸ್ಟೆಲ್ ವಾರ್ಡನ್ ಅವರಿಗೆ ಲಿವ್ ಲೆಟರ್ ನೀಡಿ ಹಾಸ್ಟೆಲ್ ತೊರೆದಿದ್ದಳು. ಹಾಸ್ಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವಳು ಮೊಬೈಲ್‌ನಲ್ಲಿ ಮಾತನಾಡುತ್ತಾ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು ಎಂದು ತಿಳಿದುಬಂದಿದೆ.

48
Image Credit : Asianet News

ಬರ್ಬರ ಕೊಲೆ

ಆಗಸ್ಟ್ 19 ರಂದು, ಗೋನೂರು ಗ್ರಾಮದ ಬಳಿ ಇರುವ ಹೆದ್ದಾರಿ 48ರ ಅಂಚಿನಲ್ಲಿ ವರ್ಷಿತಾಳ ಸುಟ್ಟ ದೇಹ ಪತ್ತೆಯಾಗಿದೆ. ಈ ಘಟನೆ ಆಕೆಯ ಕುಟುಂಬ ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಅತ್ಯಾಚಾ*ರ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿ, ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ರೀತಿಯ ಘಟನೆಗಳು ಉತ್ತರ ಭಾರತದಲ್ಲಿ ಮಾತ್ರ ನಡೆಯುತ್ತಿದ್ದವು, ಈಗ ನಮ್ಮ ರಾಜ್ಯದಲ್ಲಿಯೂ ನಡೆದಿರುವುದು ವಿಷಾದನೀಯ ಎಂದು ಮೃತರ ಸಂಬಂಧಿ ಪ್ರವೀಣ್ ಕಳವಳ ವ್ಯಕ್ತಪಡಿಸಿದ್ದಾರೆ. ಇದೊಂದು ಪೂರ್ವಯೋಜಿತ ಕೃತ್ಯ ಎಂದು ಆರೋಪಿಸಿದ್ದಾರೆ.

58
Image Credit : Asianet News

ತನಿಖೆ ಮತ್ತು ಪ್ರತಿಭಟನೆ

ಈ ಪ್ರಕರಣ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ವರ್ಷಿತಾ ಜೊತೆ ಸಂಪರ್ಕದಲ್ಲಿದ್ದ ಚೇತನ್ ಎಂಬ ಯುವಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಆತ ಕ್ಯಾನ್ಸರ್‌ನ ಮೂರನೇ ಹಂತದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

68
Image Credit : Asianet News

ಇನ್ನು ವರ್ಷಿತಾಳ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಇಂದು ಎಬಿವಿಪಿ, ದಲಿತ ಮತ್ತು ಕನ್ನಡಪರ ಸಂಘಟನೆಗಳು ಒನಕೆ ಓಬವ್ವ ವೃತ್ತ ಮತ್ತು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿವೆ. ದಲಿತ ಸಂಘಟನೆ ಮುಖಂಡ ಬೀರಾವರ ಪ್ರಕಾಶ್ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

78
Image Credit : Asianet News

ತಾಯಿಯ ಕರುಣಾಜನಕ ನೋವು

ವರ್ಷಿತಾಳ ಸಾವಿನ ಸುದ್ದಿ ಕೇಳಿ ಆಕೆಯ ತಾಯಿ ಜ್ಯೋತಿ ತಿಪ್ಪೇಸ್ವಾಮಿ ಕಣ್ಣೀರಿಟ್ಟಿದ್ದಾರೆ. 'ಗಂಡು ಮಕ್ಕಳಿಲ್ಲದ ನಮಗೆ, ಮಗಳು ಓದಿ ದೊಡ್ಡ ವ್ಯಕ್ತಿಯಾಗಲಿ ಎಂದು ನಗರಕ್ಕೆ ಕಳುಹಿಸಿದ್ದೆವು. ನಮ್ಮ ಮಗಳಿಗೆ ಆದ ಪರಿಸ್ಥಿತಿ ಬೇರೆ ಯಾವುದೇ ಮಕ್ಕಳಿಗೂ ಬರಬಾರದು.

88
Image Credit : Asianet News

ಹಾಸ್ಟೆಲ್ ಮತ್ತು ಕಾಲೇಜು ಸಿಬ್ಬಂದಿ ನಿಮ್ಮ ಮಕ್ಕಳಂತೆ ವಿದ್ಯಾರ್ಥಿನಿಯರನ್ನು ನೋಡಿಕೊಳ್ಳಿ' ಎಂದು ಕೈಮುಗಿದು ಬೇಡಿಕೊಂಡಿದ್ದಾರೆ. ಆಕೆಯ ಅಂತಿಮ ಸಂಸ್ಕಾರದ ಸಮಯದಲ್ಲಿ, ಸಂಬಂಧಿಕರು ಮತ್ತು ಸ್ಥಳೀಯರು ಜಿಲ್ಲಾಸ್ಪತ್ರೆಯ ಶವಾಗಾರದ ಬಳಿ ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

ಈ ಕರುಣಾಜನಕ ಘಟನೆ ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಪೊಲೀಸರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಚಿತ್ರದುರ್ಗ
ಕ್ರೈಮ್ ನ್ಯೂಸ್
ಕೊಲೆ
ವಿದ್ಯಾರ್ಥಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved