MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • Crime Round Up 2021 : ಅಪರಾಧ ಜಗತ್ತನ್ನೇ ಬೆಚ್ಚಿ ಬೀಳಿಸಿದ ಪ್ರಕರಣಗಳು.. ಸಿಡಿಯಿಂದ ಕಾಯಿನ್‌ವರೆಗೆ!

Crime Round Up 2021 : ಅಪರಾಧ ಜಗತ್ತನ್ನೇ ಬೆಚ್ಚಿ ಬೀಳಿಸಿದ ಪ್ರಕರಣಗಳು.. ಸಿಡಿಯಿಂದ ಕಾಯಿನ್‌ವರೆಗೆ!

ಬೆಂಗಳೂರು(ಡಿ. 28)  2021 ರ ಅಂತ್ಯಕ್ಕೆ ಬಂದು ನಿಂತಿದ್ದೇವೆ. 2021 ರಲ್ಲಿ ಅಪರಾಧ  ಜಗತ್ತು (Crime Round Up 2021) ಸುಮ್ಮನೆ ಕುಳಿತಿರಲಿಲ್ಲ.  ಅತ್ಯಾಚಾರ(Rape), ಸೆಕ್ಸ್ ಸಿಡಿ (Sex CD Scandal) ಜನಪ್ರತಿನಿಧಿ ಹತ್ಯೆ(Murder), ಘೋರ ಅಪಘಾತಗಳು (Road Accident) ಈ ವರ್ಷವನ್ನು ಕಾಡಿದವು.  ಸಾಮೂಹಿಕ ಆತ್ಮಹತ್ಯೆ (Mass suicide) ಪ್ರಕರಣಗಳು ಕಾಡಿದವು.  ರಾಸಲೀಲೆ ಪ್ರಕರಣ ರಾಜಕಾರಣದ (Karnataka Politics) ವಲಯದ ಮೇಲೂ ಪರಿಣಾಮ ಬೀರಿತು. ಒಂದು ಹಿನ್ನೋಟ ಇಲ್ಲಿದೆ.

3 Min read
Author : Suvarna News
| Updated : Dec 28 2021, 06:36 PM IST
Share this Photo Gallery
  • FB
  • TW
  • Linkdin
  • Whatsapp
110

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ:  ಕರ್ನಾಟಕದ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ ಕೇಳಿ ಬಂದಿತ್ತು. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಆರೋಪ ಮಾಡಿದ್ದರು. ಯುವತೊಂದಿಗೆ ಸಚಿವರು ರಾಸಲೀಲೆಯಲ್ಲಿ ತೊಡಗಿದ್ದಾರೆ ಎಂಬ ವಿಡಿಯೋ ರಿಲೀಸ್ ಆಗಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು.  ಇದಾದ ನಂತರ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ಸಂತ್ರಸ್ತ ಯುವತಿ  ಹೇಳಿಕೆ  ನೀಡಿದ್ದು ಆಯಿತು. ಪ್ರಕರಣ  ಎಸ್‌ಐಟಿಯ ಮೂಲಕ ವಿಚಾರಣೆ ಹಂತದಲ್ಲಿಯೇ ಇದೆ.

210

ಬಿಟ್‌ಕಾಯಿನ್ ಕೇಸ್
ಡ್ರಗ್ಸ್ ಪ್ರಕರಣದಲ್ಲಿ ಸೆರೆಸಿಕ್ಕಿದ್ದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಾಯಿ ಬಿಟ್ಟ  ಒಂದಷ್ಟು ಮಾಹಿತಿಗಳು ಸರ್ಕಾರದ ಮಟ್ಟದಲ್ಲಿಯೇ ಹಲ್ ಚಲ್ ಸೃಷ್ಟಿಸಿದವು.  ಸರ್ಕಾರಿ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಶ್ರೀಕಿ ಅದರಲ್ಲಿನ ಹಣ ಲಪಟಾಯಿಸಿ ಅದನ್ನು ಬಿಟ್ ಕಾಯಿನ್ ಆಗಿ ಪರಿವರ್ತನೆ ಮಾಖಡಿದ್ದಾನೆ. ಇದರಲ್ಲಿ ಕೆಲ ರಾಜಕೀಯ ನಾಯಕರ  ಕೈವಾಡವೂ ಇದೆ.. ಸಹಕಾರವೂ ಇದೆ ಎಂಬ ಆರೋಪಗಳು ಕೇಳಿಬಂದವು. ಬಿಜೆಪಿ ಮತ್ತು ಕಾಂಗ್ರೆಸ್ ಮಡುವಿನ ವಾಕ್ ಸಮರಕ್ಕೆ ದೊಡ್ಡ ವೇದಿಕೆ  ಇದಾಗಿತ್ತು.  ಕೊನೆಯಲ್ಲಿ ಬೆಂಗಳೂರು ಪೊಲೀಸರೆ  ಸ್ಪಷ್ಟನೆಯೊಂದನ್ನು ಬಿಡುಗಡೆ ಮಾಡಿದರು. ಈ ಪ್ರಕರಣ ಸಹ ತಾರ್ಕಿಕ ಅಂತ್ಯ ಕಂಡಿಲ್ಲ.

310

ಸಾಮೂಹಿಕ ಆತ್ಮಹತ್ಯೆ ಪ್ರಕರಣಗಳು:  ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ‌ ಕುಟುಂಬದ‌ ಐವರು ಸಾಮೂಹಿಕ‌ವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು.  ಮನೆ ಮಾಲೀಕ ಶಂಕರ್ ವಿರುದ್ಧವೇ ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬ ನೇಣಿಗೆ ಶರಣಾಗಿತ್ತು. ಪ್ರಕರಣದಲ್ಲಿ ಮಗುವೊಂದು ಸಾವನ್ನಪ್ಪಿದ್ದು ಮಗುವನ್ನು ಹತ್ಯೆ ಮಾಡಲಾಗಿದೆ ಎನ್ನುವುದು ತನಿಖೆ ವೇಳೆ ಬಹಿರಂಗವಾಗಿತ್ತು.  ಇಂಥದ್ಧೆ ಆತ್ಮಹತ್ಯೆ  ಪ್ರಕರಣ ಉಡುಪಿಯಿಂದಲೂ  ವರದಿಯಾಗಿತ್ತು.

20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

410

ರೇಖಾ‌ ಕದಿರೇಶ್  ಮರ್ಡರ್:  ವೈಯಕ್ತಿಕ ಹಗೆತನಕ್ಕೆ ಮೂರು ವರ್ಷಗಳ ಹಿಂದೆ ರೇಖಾ ಅವರ ಪತಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರಾಗಿದ್ದ ಕದಿರೇಶ್‌ ಅವರು ಕೂಡ ಹಾಡಹಗಲೇ ಕೊಲೆಯಾಗಿದ್ದರು.  ಇದಾದ ಮೇಲೆ ಕಳೆದ ಜೂನ್ ನಲ್ಲಿ ರೇಖಾ ಕದಿರೇಶ್‌ ಹತ್ಯೆ ಅವರನ್ನು ಹತ್ಯೆ ಮಾಡಲಾಗಿತ್ತು. ಸಂಬಂಧಿಕರಿಂದಲೇ ಕೃತ್ಯ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಛಲವಾದಿಪಾಳ್ಯದ ಫ್ಲವರ್‌ ಗಾರ್ಡನ್‌ನಲ್ಲಿ ನೆಲೆಸಿದ್ದ ರೇಖಾ ಅವರು, ತಮ್ಮ ಮನೆ ಹತ್ತಿರದ ಗೃಹ ಕಚೇರಿಯಲ್ಲಿ ಬಡವರಿಗೆ ಆಹಾರ ಕಿಟ್‌ ವಿತರಣೆಗೆ ಸಿದ್ಧತೆ ನಡೆಸಿದ್ದರು.  ಎಲ್ಲರ ಎದುರಿನಲ್ಲೇ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದರು. ರೌಡಿಶೀಟರ್ ಮಾಲಾ, ಸೂರ್ಯ, ಪೀಟರ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿ ಕಾಟನ್‌ಪೇಟೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

510

ರೌಡಿಗಳ ಮೇಲೆ ದಾಳಿ: ಅಪರಾಧ ಪ್ರಕರಣಗಳ ತಡೆಗೆ ದಿಟ್ಟ ಕ್ರಮ ತೆಗೆದುಕೊಂಡಿದ್ದ ಬೆಂಗಳೂರು ಪೊಲೀಸರು ನಗರದ 8 ವಿಭಾಗಗಳಲ್ಲಿ ಕಳೆದ ಜುಲೈನಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮೇಲೆ ದಾಳಿ ಮಾಡಿದ್ದರು.  ಮಾರಕಾಸ್ತ್ರಗಳು, ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದರು. 

610

ಬಾಂಗ್ಲಾ ಯುವತಿ ಮೇಲೆ ಆತ್ಯಾಚಾರ:  ಘೋರ ವಿಡಿಯೋವಂದು ವೈರಲ್ ಆದ  ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಬಾಂಗ್ಲಾದೇಶದಿಂದ ಯುವತಿಯರನ್ನು ಕರೆತಂದು ಅವರನ್ನು ವೇಶ್ಯಾವಾಟಿಕೆಗೆ ದೂಡುವ ಜಾಲ ಬಹಿರಂಗವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ರಾಮಮೂರ್ತಿನಗರ ಪೊಲೀಸರು 10ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ರಾಷ್ಟ್ರೀಯ ಮಾಧ್ಯಮಗಳಲ್ಲಿಯೂ ಈ ಸುದ್ದಿ ಪ್ರತಿಧ್ವನಿಸಿತ್ತು. ಯುವತಿ ಮೇಲೆ ದೌರ್ಜನ್ಯ ಎಸಗಿದ್ದು ಅಲ್ಲದೇ ಆಕೆಯ ಗುಪ್ತಾಂಗಕ್ಕೆ ಹಾನಿ ಮಾಡಿದ್ದರು.

710

ಭೀಕರ ಅಪಘಾತಗಳು:  ಗೋವಾ ಪ್ರವಾಸ ಹೋಗಲು ದಾವಣಗೆರೆಯಿಂದ ಹೊರಟಿದ್ದ ಸ್ನೇಹಿತೆಯರು ಸೆಲ್ಪೀ ತೆಗೆದು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಧಾರವಾಡದಲ್ಲಿರುವ ಸ್ನೇಹಿತೆಯ ಮನೆಗೆ ತೆರಳಬೇಕಿದ್ದವರು ತಲುಪಲು ಕೆಲವೇ ಕಿಲೋಮೀಟರ್ ಇರುವಾಗ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಉದ್ಯಮಿಯರು, ಗೃಹಿಣಿಯರು, ವೈದ್ಯರು ಈ ಘೋರ ಅವಘಡದಲ್ಲಿ ಮೃತರಾಗಿದ್ದರು. 

810

ಬೆಂಗಳೂರಿಗೆ ಅಪಘಾತದ ಆಘಾತ: ರಾಜಧಾನಿ ಬೆಂಗಳೂರನ್ನು ಭೀಕರ ಅಪಘಾತಗಳು ಕಾಡಿದವು.   ಐಷಾರಾಮಿ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿತ್ತು.  ಕೋರಮಂಗಲದಲ್ಲಿ ಆಡಿ ಕ್ಯೂ 3 ಕಾರು ಅಪಘಾತದಲ್ಲಿ ಹೊಸೂರು ಶಾಸಕರ ಮಗ ಸೇರಿ 7 ಜನ ಸಾವನ್ನಪ್ಪಿದ್ದರು.  ಇದಾದ ಕೆಲವೇ ದಿನದಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ವೈಟ್ ಫೀಲ್ಡ್  ಮೇತ್ಸೇತುವೆ ಮೇಲೆ ನಿಂತಿದ್ದ ಇಬ್ಬರನ್ನು ಕಾರು ಬಲಿಪಡೆದಿತ್ತು.

 

910

ಸೆಪ್ಟೆಂಬರ್ ಅಗ್ನಿ ಅವಘಡ:  ಬೊಮ್ಮನಹಳ್ಳಿಯ ಅಪಾರ್ಟ್​​ಮೆಂಟ್​​ನಲ್ಲಾದ ಅಗ್ನಿ ಅವಘಡದಲ್ಲಿ  ನೋಡನೋಡುತ್ತಿದ್ದಂತೆ ಮಹಿಳೆಯೊಬ್ಬರು ಭಸ್ಮವಾಗಿದ್ದರು. ಇದಾದ ಮೇಲೆ  ಬಿಬಿಎಂಪಿ ನಿಯಮಗಳನ್ನು ಬಿಗಿ ಮಾಡಿತ್ತು.ವಿದೇಶದಿಂದ ಎರಡು ದಿನದ ಹಿಂದೆ ವಾಪಸ್ ಆಗಿದ್ದ ತಾಯಿ ಲಕ್ಷ್ಮೀದೇವಿ, ಪುತ್ರಿ ಭಾಗ್ಯರೇಖಾ ಪ್ರಾಣ ಕಳೆದುಕೊಂಡಿದ್ದರು. ವಿವಿ ಪುರಂ‌‌ ಬಳಿಯ ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿನಲ್ಲಿ ನಡೆದಿದ್ದ ಪಟಾಕಿ ಸ್ಫೋಟ ಪ್ರಕರಣದಲ್ಲಿ ಐವರು ಮೃತರಾಗಿದ್ದರು. ಹತ್ತಾರು ಮನೆಗಳು ಹಾಗೂ ಬೈಕ್‌ಗಳು ಹಾನಿಗೊಳಗಾಗಿದ್ದವು. ಬ್ಯಾಟರಾಯನಪುರ ವ್ಯಾಪ್ತಿಯ‌‌ ಕಾರ್ಖಾನೆಯೊಂದರಲ್ಲಿ ನಡೆದ‌ ಸಿಲಿಂಡರ್ ಸ್ಫೋಟ ಐವರು ಕಾರ್ಮಿಕರನ್ನು ಬಲಿ ಪಡೆದಿತ್ತು.

1010

ಡ್ರಗ್ಸ್ ಪ್ರಕರಣಗಳು:  ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಮತ್ತು ಸಂಜನಾ  ಜಾಮೀನಿನ ಮೇಲೆ ಬಿಡುಗಡೆಗೊಂಡರು. ಇನ್ನೊಂದು ಕಡೆ ಡ್ರಗ್ಸ್  ಜಾಲದ ಹಿಂದೆ ಬಿದ್ದ ಬೆಂಗಳೂರು ಪೊಲೀಸರು ಕೋಟ್ಯಂತರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು ಅಲ್ಲದೇ ವಿದೇಶಿ ಪೆಡ್ಲರ್ ಗಳನ್ನು ಹೆಡೆಮುರಿ ಕಟ್ಟಿದರು. ವೀರ್ಯ ತಿಮಿಂಗಿಲದ ವಾಂತಿ ಅಂಬರ್ ಗ್ರೀಸ್ ಮಾರಾಟದ ಪ್ರಕರಣಗಳು ಬೆಂಗಳೂರು, ಉತ್ತರ ಕನ್ನಡ, ವಿಜಯನಗರದಿಂದ ವರದಿಯಾದವು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ಬೆಂಗಳೂರು
ಕ್ರೈಮ್ ನ್ಯೂಸ್
ಕೊಲೆ
ಮೈಸೂರು
ರಮೇಶ್ ಜಾರಕಿಹೊಳಿ

Latest Videos
Recommended Stories
Recommended image1
ಬಾರ್‌ಗೆ ಕುಡಿಯಲು ಬಂದ ದಂಪತಿ ಬಳಿ ಗಾಂಜಾ ಕೇಳಿ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ
Recommended image2
ಧಾರವಾಡ: ಮಹಿಳೆ ಅಪಘಾತದಲ್ಲಿ ಸಾವು ಪ್ರಕರಣಕ್ಕೆ ರೋಚಕ ತಿರುವು: ಬಸ್‌ನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
Recommended image3
ಶಿವಮೊಗ್ಗ : ಬುರ್ಖಾ ಧರಿಸಿ ಪ್ರೇಯಸಿಯನ್ನು ನೋಡಲು ಬಂದ ಪ್ರೇಮಿಗೆ ಮಕ್ಕಳ ಕಳ್ಳನೆಂದು ಭಾವಿಸಿ ಕಂಬಕ್ಕೆ ಕಟ್ಟಿ ಗೂಸಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved