ಮಂಗಳೂರು: ಡಿಸಿಪಿ ಕಾರಿನ ಮೇಲೆಯೇ ಲಾರಿ ಹತ್ತಿಸಲು ಮರಳು ಕಳ್ಳರ ಯತ್ನ..!
ಮಂಗಳೂರು(ಅ.21): ಮಂಗಳೂರು(ಅ.21): ಅಕ್ರಮ ಮರಳುಗಾರಿಕೆ ತಪಾಸಣೆ ವೇಳೆ ದಂಧೆಕೋರರು ಡಿಸಿಪಿ ಹರಿರಾಂ ಶಂಕರ್ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಈ ಸಂಬಂಧ ಇಬ್ಬರನ್ನು ಟಿಪ್ಪರ್ ಚಾಲಕ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಅಕ್ರಮ ಮರಳುಗಾರಿಕೆ ಕುರಿತ ಮಾಹಿತಿ ಮೇರೆಗೆ ಬುಧವಾರ ನಸುಕಿನ ಜಾವ ಅಡ್ಯಾರ್ ಸಮೀಪದ ಕಾಲೇಜು ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು.
2.30ರ ಸುಮಾರಿಗೆ ಅಡ್ಯಾರ್ ನೇತ್ರಾವತಿ ನದಿ ಹಾಗೂ ಮರಳು ಧಕ್ಕೆ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ-73 ಕಡೆಗೆ ಟಿಪ್ಪರ್ ಲಾರಿಯೊಂದು ಬರುತ್ತಿತ್ತು. ಈ ವೇಳೆ ವಾಹನ ನಿಲ್ಲಿಸುವಂತೆ ಸೂಚಿಸಿದ್ದ ಪೊಲೀಸರು.
ಈ ವೇಳೆಗೆ ಟಿಪ್ಪರ್ ಲಾರಿಯ ಹಿಂದಿನಿಂದ ಮುಂದೆ ಬಂದ ಆಲ್ಟೋ ಕಾರೊಂದರಲ್ಲಿ ಬಂದು ಲಾರಿ ನಿಲ್ಲಿಸದಂತೆ ಚಾಲಕನಿಗೆ ಸೂಚಿಸಿದ ದುಷ್ಕರ್ಮಿಗಳು. ಈ ವೇಳೆ ಪೊಲೀಸರು ತಡೆಯಲು ಬಂದಾಗ ಅವರ ಮೇಲೆಯೇ ವಾಹನ ಹತ್ತಿಸುವ ರೀತಿಯಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಪರಾರಿಯಾದ ಖದೀಮರು.
ಈ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರ ಸಹಕಾರದೊಂದಿಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್, ಆಲ್ಟೋ ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ